AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಭರ್ಜರಿ ದಾಖಲೆ… ಈ ರೀತಿಯಾಗಿ ಟ್ರೋಫಿ ಎತ್ತಿಹಿಡಿದ ಏಕೈಕ ತಂಡ RCB

IPL 2025 Final RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಯಲ್ಲಾಗಿ ಟ್ರೋಫಿ ಎತ್ತಿ ಹಿಡಿದಿದೆ. ಅದು ಕೂಡ ಭರ್ಜರಿ ದಾಖಲೆಯೊಂಧಿಗೆ ಎಂಬುದು ವಿಶೇಷ. ಅಂದರೆ ಐಪಿಎಲ್​ ಇತಿಹಾಸದಲ್ಲಿ ಯಾವುದೇ ತಂಡಕ್ಕೂ ಸಾಧ್ಯವಾಗದ ರೀತಿಯಲ್ಲಿ ಆರ್​ಸಿಬಿ ಚೊಚ್ಚಲ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: Jun 04, 2025 | 8:24 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಈ ಚಾಂಪಿಯನ್ ಪಟ್ಟವು ಅಂತಿಂಥ ಗೆಲುವಿನಿಂದ ದಕ್ಕಿದ್ದಲ್ಲ. ಬದಲಾಗಿ ದಾಖಲೆಯ ವಿಜಯದೊಂದಿಗೆ ಮೂಡಿಬಂದಿದೆ. ಅಂದರೆ ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ರೀತಿ ಯಾವುದೇ ತಂಡ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಈ ಚಾಂಪಿಯನ್ ಪಟ್ಟವು ಅಂತಿಂಥ ಗೆಲುವಿನಿಂದ ದಕ್ಕಿದ್ದಲ್ಲ. ಬದಲಾಗಿ ದಾಖಲೆಯ ವಿಜಯದೊಂದಿಗೆ ಮೂಡಿಬಂದಿದೆ. ಅಂದರೆ ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ರೀತಿ ಯಾವುದೇ ತಂಡ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿಲ್ಲ.

1 / 5
ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 16 ಪಂದ್ಯಗಳನ್ನಾಡಿದೆ. ಈ 16 ಮ್ಯಾಚ್​ಗಳಲ್ಲಿ ಸೋತಿರುವುದು ಕೇವಲ 4 ಪಂದ್ಯಗಳನ್ನು ಮಾತ್ರ. ಅದರಲ್ಲಿ 9 ಪಂದ್ಯಗಳನ್ನು ಅವೇ ಮೈದಾನದಲ್ಲಿ ಗೆದುಕೊಂಡಿದೆ. ಅಂದರೆ ಬೆಂಗಳೂರಿನ ಹೊರಗೆ ಆರ್​ಸಿಬಿ ಸತತ 9 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 16 ಪಂದ್ಯಗಳನ್ನಾಡಿದೆ. ಈ 16 ಮ್ಯಾಚ್​ಗಳಲ್ಲಿ ಸೋತಿರುವುದು ಕೇವಲ 4 ಪಂದ್ಯಗಳನ್ನು ಮಾತ್ರ. ಅದರಲ್ಲಿ 9 ಪಂದ್ಯಗಳನ್ನು ಅವೇ ಮೈದಾನದಲ್ಲಿ ಗೆದುಕೊಂಡಿದೆ. ಅಂದರೆ ಬೆಂಗಳೂರಿನ ಹೊರಗೆ ಆರ್​ಸಿಬಿ ಸತತ 9 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

2 / 5
ಐಪಿಎಲ್ ಸೀಸನ್​ವೊಂದರಲ್ಲಿ ತವರಿನ ಹೊರಗೆ ಸತತ 9 ಪಂದ್ಯಗಳನ್ನು ಗೆದ್ದು ಟ್ರೋಫಿ ಎತ್ತಿ ಹಿಡಿದ ಮತ್ತೊಂದು ತಂಡವಿಲ್ಲ. ಅಂದರೆ ಆರ್​ಸಿಬಿ ತಂಡವು ಐಪಿಎಲ್​ನಲ್ಲಿ ಈವರೆಗೆ ಯಾರಿಂದಲೂ ಕೂಡ ಸಾಧ್ಯವಾಗದ ಗೆಲುವಿನ ನಾಗಾಲೋಟದೊಂದಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

ಐಪಿಎಲ್ ಸೀಸನ್​ವೊಂದರಲ್ಲಿ ತವರಿನ ಹೊರಗೆ ಸತತ 9 ಪಂದ್ಯಗಳನ್ನು ಗೆದ್ದು ಟ್ರೋಫಿ ಎತ್ತಿ ಹಿಡಿದ ಮತ್ತೊಂದು ತಂಡವಿಲ್ಲ. ಅಂದರೆ ಆರ್​ಸಿಬಿ ತಂಡವು ಐಪಿಎಲ್​ನಲ್ಲಿ ಈವರೆಗೆ ಯಾರಿಂದಲೂ ಕೂಡ ಸಾಧ್ಯವಾಗದ ಗೆಲುವಿನ ನಾಗಾಲೋಟದೊಂದಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

3 / 5
ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಎದುರಾಳಿ ತಂಡಗಳ ತವರು ಮೈದಾನದಲ್ಲಿ 7 ಜಯ ಹಾಗೂ ತವರಿನ ಹೊರಗೆ ನಡೆದ ಪ್ಲೇಆಫ್ ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಐಪಿಎಲ್ ಟ್ರೋಫಿ ಗೆದ್ದ ಏಕೈಕ ತಂಡವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊರಹೊಮ್ಮಿದೆ. ಅದು ಕೂಡ 17 ವರ್ಷಗಳ ಕಾಯುವಿಕೆಯ ಬಳಿಕ ಎಂಬುದು ವಿಶೇಷ.

ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಎದುರಾಳಿ ತಂಡಗಳ ತವರು ಮೈದಾನದಲ್ಲಿ 7 ಜಯ ಹಾಗೂ ತವರಿನ ಹೊರಗೆ ನಡೆದ ಪ್ಲೇಆಫ್ ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಐಪಿಎಲ್ ಟ್ರೋಫಿ ಗೆದ್ದ ಏಕೈಕ ತಂಡವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊರಹೊಮ್ಮಿದೆ. ಅದು ಕೂಡ 17 ವರ್ಷಗಳ ಕಾಯುವಿಕೆಯ ಬಳಿಕ ಎಂಬುದು ವಿಶೇಷ.

4 / 5
ಇನ್ನು ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 190 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 184 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 6 ರನ್​ಗಳ ರೋಚಕ ಜಯ ಸಾಧಿಸಿ ಆರ್​ಸಿಬಿ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿದಿದೆ.

ಇನ್ನು ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 190 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 184 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 6 ರನ್​ಗಳ ರೋಚಕ ಜಯ ಸಾಧಿಸಿ ಆರ್​ಸಿಬಿ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿದಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ