AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಭರ್ಜರಿ ದಾಖಲೆ… ಈ ರೀತಿಯಾಗಿ ಟ್ರೋಫಿ ಎತ್ತಿಹಿಡಿದ ಏಕೈಕ ತಂಡ RCB

IPL 2025 Final RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಯಲ್ಲಾಗಿ ಟ್ರೋಫಿ ಎತ್ತಿ ಹಿಡಿದಿದೆ. ಅದು ಕೂಡ ಭರ್ಜರಿ ದಾಖಲೆಯೊಂಧಿಗೆ ಎಂಬುದು ವಿಶೇಷ. ಅಂದರೆ ಐಪಿಎಲ್​ ಇತಿಹಾಸದಲ್ಲಿ ಯಾವುದೇ ತಂಡಕ್ಕೂ ಸಾಧ್ಯವಾಗದ ರೀತಿಯಲ್ಲಿ ಆರ್​ಸಿಬಿ ಚೊಚ್ಚಲ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: Jun 04, 2025 | 8:24 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಈ ಚಾಂಪಿಯನ್ ಪಟ್ಟವು ಅಂತಿಂಥ ಗೆಲುವಿನಿಂದ ದಕ್ಕಿದ್ದಲ್ಲ. ಬದಲಾಗಿ ದಾಖಲೆಯ ವಿಜಯದೊಂದಿಗೆ ಮೂಡಿಬಂದಿದೆ. ಅಂದರೆ ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ರೀತಿ ಯಾವುದೇ ತಂಡ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಈ ಚಾಂಪಿಯನ್ ಪಟ್ಟವು ಅಂತಿಂಥ ಗೆಲುವಿನಿಂದ ದಕ್ಕಿದ್ದಲ್ಲ. ಬದಲಾಗಿ ದಾಖಲೆಯ ವಿಜಯದೊಂದಿಗೆ ಮೂಡಿಬಂದಿದೆ. ಅಂದರೆ ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ರೀತಿ ಯಾವುದೇ ತಂಡ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿಲ್ಲ.

1 / 5
ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 16 ಪಂದ್ಯಗಳನ್ನಾಡಿದೆ. ಈ 16 ಮ್ಯಾಚ್​ಗಳಲ್ಲಿ ಸೋತಿರುವುದು ಕೇವಲ 4 ಪಂದ್ಯಗಳನ್ನು ಮಾತ್ರ. ಅದರಲ್ಲಿ 9 ಪಂದ್ಯಗಳನ್ನು ಅವೇ ಮೈದಾನದಲ್ಲಿ ಗೆದುಕೊಂಡಿದೆ. ಅಂದರೆ ಬೆಂಗಳೂರಿನ ಹೊರಗೆ ಆರ್​ಸಿಬಿ ಸತತ 9 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 16 ಪಂದ್ಯಗಳನ್ನಾಡಿದೆ. ಈ 16 ಮ್ಯಾಚ್​ಗಳಲ್ಲಿ ಸೋತಿರುವುದು ಕೇವಲ 4 ಪಂದ್ಯಗಳನ್ನು ಮಾತ್ರ. ಅದರಲ್ಲಿ 9 ಪಂದ್ಯಗಳನ್ನು ಅವೇ ಮೈದಾನದಲ್ಲಿ ಗೆದುಕೊಂಡಿದೆ. ಅಂದರೆ ಬೆಂಗಳೂರಿನ ಹೊರಗೆ ಆರ್​ಸಿಬಿ ಸತತ 9 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

2 / 5
ಐಪಿಎಲ್ ಸೀಸನ್​ವೊಂದರಲ್ಲಿ ತವರಿನ ಹೊರಗೆ ಸತತ 9 ಪಂದ್ಯಗಳನ್ನು ಗೆದ್ದು ಟ್ರೋಫಿ ಎತ್ತಿ ಹಿಡಿದ ಮತ್ತೊಂದು ತಂಡವಿಲ್ಲ. ಅಂದರೆ ಆರ್​ಸಿಬಿ ತಂಡವು ಐಪಿಎಲ್​ನಲ್ಲಿ ಈವರೆಗೆ ಯಾರಿಂದಲೂ ಕೂಡ ಸಾಧ್ಯವಾಗದ ಗೆಲುವಿನ ನಾಗಾಲೋಟದೊಂದಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

ಐಪಿಎಲ್ ಸೀಸನ್​ವೊಂದರಲ್ಲಿ ತವರಿನ ಹೊರಗೆ ಸತತ 9 ಪಂದ್ಯಗಳನ್ನು ಗೆದ್ದು ಟ್ರೋಫಿ ಎತ್ತಿ ಹಿಡಿದ ಮತ್ತೊಂದು ತಂಡವಿಲ್ಲ. ಅಂದರೆ ಆರ್​ಸಿಬಿ ತಂಡವು ಐಪಿಎಲ್​ನಲ್ಲಿ ಈವರೆಗೆ ಯಾರಿಂದಲೂ ಕೂಡ ಸಾಧ್ಯವಾಗದ ಗೆಲುವಿನ ನಾಗಾಲೋಟದೊಂದಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

3 / 5
ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಎದುರಾಳಿ ತಂಡಗಳ ತವರು ಮೈದಾನದಲ್ಲಿ 7 ಜಯ ಹಾಗೂ ತವರಿನ ಹೊರಗೆ ನಡೆದ ಪ್ಲೇಆಫ್ ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಐಪಿಎಲ್ ಟ್ರೋಫಿ ಗೆದ್ದ ಏಕೈಕ ತಂಡವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊರಹೊಮ್ಮಿದೆ. ಅದು ಕೂಡ 17 ವರ್ಷಗಳ ಕಾಯುವಿಕೆಯ ಬಳಿಕ ಎಂಬುದು ವಿಶೇಷ.

ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಎದುರಾಳಿ ತಂಡಗಳ ತವರು ಮೈದಾನದಲ್ಲಿ 7 ಜಯ ಹಾಗೂ ತವರಿನ ಹೊರಗೆ ನಡೆದ ಪ್ಲೇಆಫ್ ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಐಪಿಎಲ್ ಟ್ರೋಫಿ ಗೆದ್ದ ಏಕೈಕ ತಂಡವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊರಹೊಮ್ಮಿದೆ. ಅದು ಕೂಡ 17 ವರ್ಷಗಳ ಕಾಯುವಿಕೆಯ ಬಳಿಕ ಎಂಬುದು ವಿಶೇಷ.

4 / 5
ಇನ್ನು ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 190 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 184 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 6 ರನ್​ಗಳ ರೋಚಕ ಜಯ ಸಾಧಿಸಿ ಆರ್​ಸಿಬಿ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿದಿದೆ.

ಇನ್ನು ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 190 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 184 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 6 ರನ್​ಗಳ ರೋಚಕ ಜಯ ಸಾಧಿಸಿ ಆರ್​ಸಿಬಿ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿದಿದೆ.

5 / 5
Follow us
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ