Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸಿಎಸ್​ಕೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಯಾನ್ ಪರಾಗ್​ಗೆ ಶಾಕ್ ನೀಡಿದ ಬಿಸಿಸಿಐ

Riyan Parag Fined: ಐಪಿಎಲ್ 2025ರ 11ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದರೂ, ನಾಯಕ ರೈಯಾನ್ ಪರಾಗ್ ಅವರಿಗೆ ನಿಧಾನ ಓವರ್ ರೇಟ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದೇ ನಿಯಮ ಉಲ್ಲಂಘನೆಗೆ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಕೂಡ ದಂಡ ಪಾವತಿಸಿದ್ದಾರೆ.

ಪೃಥ್ವಿಶಂಕರ
|

Updated on: Mar 31, 2025 | 2:40 PM

ಐಪಿಎಲ್ 2025 ರ11ನೇ ಪಂದ್ಯ ಸಿಎಸ್​ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯವನ್ನು ಆತಿಥೇಯ ರಾಜಸ್ಥಾನ ತಂಡ 6 ರನ್​ಗಳಿಂದ ಗೆದ್ದುಕೊಳ್ಳುವಲ್ಲೂ ಯಶಸ್ವಿಯಾಯಿತು. ಆದರೆ ಈ ಗೆಲುವಿನ ಸಂಭ್ರಮದ ನಡುವೆ ರಾಜಸ್ಥಾನ್ ತಂಡದ ನಾಯಕ ರಿಯಾನ್ ಪರಾಗ್​ಗೆ ಬಿಸಿಸಿಐ ದಂಡದ ಬರೆ ಎಳೆದಿದೆ.

ಐಪಿಎಲ್ 2025 ರ11ನೇ ಪಂದ್ಯ ಸಿಎಸ್​ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯವನ್ನು ಆತಿಥೇಯ ರಾಜಸ್ಥಾನ ತಂಡ 6 ರನ್​ಗಳಿಂದ ಗೆದ್ದುಕೊಳ್ಳುವಲ್ಲೂ ಯಶಸ್ವಿಯಾಯಿತು. ಆದರೆ ಈ ಗೆಲುವಿನ ಸಂಭ್ರಮದ ನಡುವೆ ರಾಜಸ್ಥಾನ್ ತಂಡದ ನಾಯಕ ರಿಯಾನ್ ಪರಾಗ್​ಗೆ ಬಿಸಿಸಿಐ ದಂಡದ ಬರೆ ಎಳೆದಿದೆ.

1 / 6
ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯಕ್ಕೆ ಓವರ್​ಗಳನ್ನು ಮುಗಿಸದ ರಾಜಸ್ಥಾನ್ ನಾಯಕ ಪರಾಗ್​ಗೆ ಬಿಸಿಸಿಐ ಬರೋಬ್ಬರಿ 12 ಲಕ್ಷ ರೂ.ಗಳನ್ನು ದಂಡವಾಗಿ ವಿಧಿಸಿದೆ. ಇದೀಗ ಪರಾಗ್ ಅವರ ಪಂದ್ಯ ಶುಲ್ಕದಲ್ಲಿ ಈ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ.

ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯಕ್ಕೆ ಓವರ್​ಗಳನ್ನು ಮುಗಿಸದ ರಾಜಸ್ಥಾನ್ ನಾಯಕ ಪರಾಗ್​ಗೆ ಬಿಸಿಸಿಐ ಬರೋಬ್ಬರಿ 12 ಲಕ್ಷ ರೂ.ಗಳನ್ನು ದಂಡವಾಗಿ ವಿಧಿಸಿದೆ. ಇದೀಗ ಪರಾಗ್ ಅವರ ಪಂದ್ಯ ಶುಲ್ಕದಲ್ಲಿ ಈ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ.

2 / 6
ಈ ಆವೃತ್ತಿಯಲ್ಲಿ ಸ್ಲೋ ಓವರ್ ರೇಟ್ ತಪ್ಪಿತಸ್ಥನೆಂದು ಸಾಭೀತಾದ ಎರಡನೇ ನಾಯಕ ರಿಯಾನ್ ಪರಾಗ್. ಅವರಿಗಿಂತ ಮೊದಲು, ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಈ ನಿಯಮವನ್ನು ಉಲ್ಲಂಘಿಸಿದಕ್ಕಾಗಿ 12 ಲಕ್ಷ ರೂಗಳನ್ನು ದಂಡ ಕಟ್ಟಿದ್ದಾರೆ. ನಿಧಾನಗತಿಯ ಓವರ್ ದರದಲ್ಲಿ ತಪ್ಪಿತಸ್ಥರೆಂದು ಕಂಡುಬಂದರೆ ಐಪಿಎಲ್ ತಂಡದ ನಾಯಕರು ಪಾವತಿಸಬೇಕಾದ ಮೊತ್ತ ಇದು.

ಈ ಆವೃತ್ತಿಯಲ್ಲಿ ಸ್ಲೋ ಓವರ್ ರೇಟ್ ತಪ್ಪಿತಸ್ಥನೆಂದು ಸಾಭೀತಾದ ಎರಡನೇ ನಾಯಕ ರಿಯಾನ್ ಪರಾಗ್. ಅವರಿಗಿಂತ ಮೊದಲು, ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಈ ನಿಯಮವನ್ನು ಉಲ್ಲಂಘಿಸಿದಕ್ಕಾಗಿ 12 ಲಕ್ಷ ರೂಗಳನ್ನು ದಂಡ ಕಟ್ಟಿದ್ದಾರೆ. ನಿಧಾನಗತಿಯ ಓವರ್ ದರದಲ್ಲಿ ತಪ್ಪಿತಸ್ಥರೆಂದು ಕಂಡುಬಂದರೆ ಐಪಿಎಲ್ ತಂಡದ ನಾಯಕರು ಪಾವತಿಸಬೇಕಾದ ಮೊತ್ತ ಇದು.

3 / 6
ಐಪಿಎಲ್ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ನಿಧಾನಗತಿಯ ಓವರ್ ದರಕ್ಕೆ ಸಂಬಂಧಿಸಿದಂತೆ ರಿಯಾನ್ ಪರಾಗ್ ತಂಡದ ಮೊದಲ ತಪ್ಪು ಇದಾಗಿರುವುದರಿಂದ, ಐಪಿಎಲ್ ನೀತಿ ಸಂಹಿತೆಯ ಸೆಕ್ಷನ್ 2.22 ರ ಅಡಿಯಲ್ಲಿ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಹೇಳಲಾಗಿದೆ.

ಐಪಿಎಲ್ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ನಿಧಾನಗತಿಯ ಓವರ್ ದರಕ್ಕೆ ಸಂಬಂಧಿಸಿದಂತೆ ರಿಯಾನ್ ಪರಾಗ್ ತಂಡದ ಮೊದಲ ತಪ್ಪು ಇದಾಗಿರುವುದರಿಂದ, ಐಪಿಎಲ್ ನೀತಿ ಸಂಹಿತೆಯ ಸೆಕ್ಷನ್ 2.22 ರ ಅಡಿಯಲ್ಲಿ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಹೇಳಲಾಗಿದೆ.

4 / 6
ರಿಯಾನ್ ಪರಾಗ್‌ಗಿಂತ ಮೊದಲು, ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ 2025 ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ದರಕ್ಕಾಗಿ ದಂಡ ವಿಧಿಸಲ್ಪಟ್ಟಿದ್ದರು. ಆ ಪಂದ್ಯದಲ್ಲಿ, ಒಂದು ಪಂದ್ಯದ ನಿಷೇಧವನ್ನು ಎದುರಿಸಿದ ನಂತರ ಅವರು ತಂಡಕ್ಕೆ ಮರಳಿದರು. ನಿಧಾನಗತಿಯ ಓವರ್ ರೇಟ್ ನಿಯಮವನ್ನು 3 ಬಾರಿ ಮುರಿದಕ್ಕಾಗಿ ಅವರ ಮೇಲೆ ಆ ನಿಷೇಧವನ್ನು ಹೇರಲಾಗಿತ್ತು. ಆದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಆ ನಿಯಮವನ್ನು ರದ್ದುಗೊಳಿಸಲಾಗಿದೆ.

ರಿಯಾನ್ ಪರಾಗ್‌ಗಿಂತ ಮೊದಲು, ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ 2025 ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ದರಕ್ಕಾಗಿ ದಂಡ ವಿಧಿಸಲ್ಪಟ್ಟಿದ್ದರು. ಆ ಪಂದ್ಯದಲ್ಲಿ, ಒಂದು ಪಂದ್ಯದ ನಿಷೇಧವನ್ನು ಎದುರಿಸಿದ ನಂತರ ಅವರು ತಂಡಕ್ಕೆ ಮರಳಿದರು. ನಿಧಾನಗತಿಯ ಓವರ್ ರೇಟ್ ನಿಯಮವನ್ನು 3 ಬಾರಿ ಮುರಿದಕ್ಕಾಗಿ ಅವರ ಮೇಲೆ ಆ ನಿಷೇಧವನ್ನು ಹೇರಲಾಗಿತ್ತು. ಆದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಆ ನಿಯಮವನ್ನು ರದ್ದುಗೊಳಿಸಲಾಗಿದೆ.

5 / 6
ಪಂದ್ಯದ ಬಗ್ಗೆ ಹೇಳುವುದಾದರೆ.. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 182 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 176 ರನ್‌ಗಳನ್ನು ಮಾತ್ರ ಗಳಿಸಿತು. ಕೊನೆಯ ಓವರ್‌ನಲ್ಲಿ ಸಿಎಸ್‌ಕೆ ಗೆಲುವಿಗೆ 19 ರನ್‌ಗಳು ಬೇಕಾಗಿದ್ದವು. ಆದರೆ ಈ ಗುರಿ ಬೆನ್ನಟ್ಟುವಲ್ಲಿ ಸಿಎಸ್​ಕೆ ತಂಡ ವಿಫಲವಾಯಿತು.

ಪಂದ್ಯದ ಬಗ್ಗೆ ಹೇಳುವುದಾದರೆ.. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 182 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 176 ರನ್‌ಗಳನ್ನು ಮಾತ್ರ ಗಳಿಸಿತು. ಕೊನೆಯ ಓವರ್‌ನಲ್ಲಿ ಸಿಎಸ್‌ಕೆ ಗೆಲುವಿಗೆ 19 ರನ್‌ಗಳು ಬೇಕಾಗಿದ್ದವು. ಆದರೆ ಈ ಗುರಿ ಬೆನ್ನಟ್ಟುವಲ್ಲಿ ಸಿಎಸ್​ಕೆ ತಂಡ ವಿಫಲವಾಯಿತು.

6 / 6
Follow us
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ