AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನ 100ನೇ ಶತಕ ಸಿಡಿಸಿದ ಸಾಯಿ ಸುದರ್ಶನ್

IPL 2025 DC vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 60ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 199 ರನ್ ಕಲೆಹಾಕಿದರೆ, ಗುಜರಾತ್ ಟೈಟಾನ್ಸ್ ತಂಡವು ಈ ಗುರಿಯನ್ನು 19 ಓವರ್​ಗಳಲ್ಲಿ ಚೇಸ್ ಮಾಡಿದೆ.

ಝಾಹಿರ್ ಯೂಸುಫ್
|

Updated on: May 19, 2025 | 7:58 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡದ ಯುವ ದಾಂಡಿಗ ಸಾಯಿ ಸುದರ್ಶನ್ (Sai Sudharsan) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಐಪಿಎಲ್​ ನೂರು ಶತಕಗಳನ್ನು ಪೂರೈಸಿದೆ. ಅಂದರೆ 2008 ರಲ್ಲಿ ಶುರುವಾದ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 100 ಶತಕಗಳು ಮೂಡಿಬಂದಿವೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡದ ಯುವ ದಾಂಡಿಗ ಸಾಯಿ ಸುದರ್ಶನ್ (Sai Sudharsan) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಐಪಿಎಲ್​ ನೂರು ಶತಕಗಳನ್ನು ಪೂರೈಸಿದೆ. ಅಂದರೆ 2008 ರಲ್ಲಿ ಶುರುವಾದ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 100 ಶತಕಗಳು ಮೂಡಿಬಂದಿವೆ.

1 / 5
ಈ ಟೂರ್ನಿಯಲ್ಲಿ ಮೊದಲ ಶತಕ ಬಾರಿಸಿದ್ದು ನ್ಯೂಝಿಲೆಂಡ್​ನ ಬ್ರೆಂಡನ್ ಮೆಕಲಂ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2008ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕೆಕೆಆರ್ ಪರ ಆರಂಭಿಕನಾಗಿ ಕಣಕ್ಕಿಳಿದ ಮೆಕಲಂ 73 ಎಸೆತಗಳಲ್ಲಿ ಅಜೇಯ 158 ರನ್ ಬಾರಿಸಿ ಐಪಿಎಲ್​ ಶತಕಕ್ಕೆ ಮುನ್ನುಡಿ ಬರೆದಿದ್ದರು.

ಈ ಟೂರ್ನಿಯಲ್ಲಿ ಮೊದಲ ಶತಕ ಬಾರಿಸಿದ್ದು ನ್ಯೂಝಿಲೆಂಡ್​ನ ಬ್ರೆಂಡನ್ ಮೆಕಲಂ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2008ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕೆಕೆಆರ್ ಪರ ಆರಂಭಿಕನಾಗಿ ಕಣಕ್ಕಿಳಿದ ಮೆಕಲಂ 73 ಎಸೆತಗಳಲ್ಲಿ ಅಜೇಯ 158 ರನ್ ಬಾರಿಸಿ ಐಪಿಎಲ್​ ಶತಕಕ್ಕೆ ಮುನ್ನುಡಿ ಬರೆದಿದ್ದರು.

2 / 5
ಇನ್ನು ಐಪಿಎಲ್​ನ 50ನೇ ಶತಕ ಬಾರಿಸಿದ್ದು ರಿಷಭ್ ಪಂತ್. 2018 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಡೇರ್ ಡೆವಿಲ್ಸ್ (ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿದ ರಿಷಭ್ ಪಂತ್ 63 ಎಸೆತಗಳಲ್ಲಿ 128 ರನ್ ಬಾರಿಸಿದ್ದರು. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮೂಡಿಬಂದಿದ್ದ ಈ ಶತಕವು ಐಪಿಎಲ್​ನ 50ನೇ ಸೆಂಚುರಿಯಾಗಿತ್ತು.

ಇನ್ನು ಐಪಿಎಲ್​ನ 50ನೇ ಶತಕ ಬಾರಿಸಿದ್ದು ರಿಷಭ್ ಪಂತ್. 2018 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಡೇರ್ ಡೆವಿಲ್ಸ್ (ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿದ ರಿಷಭ್ ಪಂತ್ 63 ಎಸೆತಗಳಲ್ಲಿ 128 ರನ್ ಬಾರಿಸಿದ್ದರು. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮೂಡಿಬಂದಿದ್ದ ಈ ಶತಕವು ಐಪಿಎಲ್​ನ 50ನೇ ಸೆಂಚುರಿಯಾಗಿತ್ತು.

3 / 5
ಇದೀಗ ಐಪಿಎಲ್​ನ 99ನೇ ಶತಕದ ಬೆನ್ನಲ್ಲೇ 100ನೇ ಸೆಂಚುರಿ ಕೂಡ ಮೂಡಿಬಂದಿದೆ. ಅಂದರೆ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 60ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ಪರ ಕೆಎಲ್ ರಾಹುಲ್ 65 ಎಸೆತಗಳಲ್ಲಿ ಅಜೇಯ 112 ರನ್ ಬಾರಿಸಿದ್ದರು. ಇದು ಐಪಿಎಲ್​ನ 99ನೇ ಶತಕವಾಗಿದೆ.

ಇದೀಗ ಐಪಿಎಲ್​ನ 99ನೇ ಶತಕದ ಬೆನ್ನಲ್ಲೇ 100ನೇ ಸೆಂಚುರಿ ಕೂಡ ಮೂಡಿಬಂದಿದೆ. ಅಂದರೆ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 60ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ಪರ ಕೆಎಲ್ ರಾಹುಲ್ 65 ಎಸೆತಗಳಲ್ಲಿ ಅಜೇಯ 112 ರನ್ ಬಾರಿಸಿದ್ದರು. ಇದು ಐಪಿಎಲ್​ನ 99ನೇ ಶತಕವಾಗಿದೆ.

4 / 5
ಇದರ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 200 ರನ್​ಗಳ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ಪರ ಯುವ ಎಡಗೈ ದಾಂಡಿಗ ಸಾಯಿ ಸುದರ್ಶನ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ 61 ಎಸೆತಗಳನ್ನು ಎದುರಿಸಿದ ಸಾಯಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 108 ರನ್ ಬಾರಿಸಿದರು. ಈ ಮೂಲಕ ಐಪಿಎಲ್​ನ 100ನೇ ಶತಕ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡರು.

ಇದರ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 200 ರನ್​ಗಳ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ಪರ ಯುವ ಎಡಗೈ ದಾಂಡಿಗ ಸಾಯಿ ಸುದರ್ಶನ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ 61 ಎಸೆತಗಳನ್ನು ಎದುರಿಸಿದ ಸಾಯಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 108 ರನ್ ಬಾರಿಸಿದರು. ಈ ಮೂಲಕ ಐಪಿಎಲ್​ನ 100ನೇ ಶತಕ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡರು.

5 / 5
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ