AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಗಿಯದ ಓವರ್: ಕಳಪೆ ದಾಖಲೆ ಬರೆದ ಸಂದೀಪ್ ಶರ್ಮಾ

IPL 2025 DC vs RR: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್ 18ರ 32ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 188 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ 188 ರನ್​ ಬಾರಿಸಿ ಪಂದ್ಯವನ್ನು ಟೈ ಮಾಡಿದ್ದರು. ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ರಾಜಸ್ಥಾನ್ ರಾಯಲ್ಸ್ 11 ರನ್ ಗಳಿಸಿದರೆ, ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 4 ಎಸೆತಗಳಲ್ಲಿ 13 ರನ್ ಬಾರಿಸಿ ಗೆಲುವು ದಾಖಲಿಸಿತು.

ಝಾಹಿರ್ ಯೂಸುಫ್
|

Updated on: Apr 17, 2025 | 10:25 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಒಂದೇ ಓವರ್​ನಲ್ಲಿ ಅತ್ಯಧಿಕ ಎಸೆತಗಳನ್ನು ಎಸೆದ ಬೌಲರ್​ಗಳ ಪಟ್ಟಿಗೆ ಸಂದೀಪ್ ಶರ್ಮಾ (Sandeep Sharma) ಹೆಸರು ಕೂಡ ಸೇರ್ಪಡೆಯಾಗಿದೆ. ಅದು ನಿರ್ಣಾಯಕ ಹಂತದಲ್ಲಿ ದೀರ್ಘಾವಧಿ ಬೌಲಿಂಗ್ ಮಾಡುವ ಮೂಲಕ ಎಂಬುದು ವಿಶೇಷ. ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಒಂದೇ ಓವರ್​ನಲ್ಲಿ ಅತ್ಯಧಿಕ ಎಸೆತಗಳನ್ನು ಎಸೆದ ಬೌಲರ್​ಗಳ ಪಟ್ಟಿಗೆ ಸಂದೀಪ್ ಶರ್ಮಾ (Sandeep Sharma) ಹೆಸರು ಕೂಡ ಸೇರ್ಪಡೆಯಾಗಿದೆ. ಅದು ನಿರ್ಣಾಯಕ ಹಂತದಲ್ಲಿ ದೀರ್ಘಾವಧಿ ಬೌಲಿಂಗ್ ಮಾಡುವ ಮೂಲಕ ಎಂಬುದು ವಿಶೇಷ. ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್​ಗಳಲ್ಲಿ 169 ರನ್ ಕಲೆಹಾಕಿತು. ಇನ್ನು ಕೊನೆಯ ಓವರ್ ಎಸೆಯಲು ಸ್ಯಾಮ್ಸನ್ ಚೆಂಡನ್ನು ಸಂದೀಪ್ ಶರ್ಮಾ ಅವರ ಕೈಗಿಟ್ಟರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್​ಗಳಲ್ಲಿ 169 ರನ್ ಕಲೆಹಾಕಿತು. ಇನ್ನು ಕೊನೆಯ ಓವರ್ ಎಸೆಯಲು ಸ್ಯಾಮ್ಸನ್ ಚೆಂಡನ್ನು ಸಂದೀಪ್ ಶರ್ಮಾ ಅವರ ಕೈಗಿಟ್ಟರು.

2 / 6
ಅದರಂತೆ 20ನೇ ಓವರ್ ಶುರು ಮಾಡಿದ ಸಂದೀಪ್ ಶರ್ಮಾ 4 ವೈಡ್​ಗಳನ್ನು ಎಸೆದರು. ಮೊದಲ ಎಸೆತ ವೈಡ್ ಆದರೆ, ಮರು ಎಸೆದಲ್ಲಿ ಯಾವುದೇ ರನ್ ನೀಡಿರಲಿಲ್ಲ. ಇದಾದ ಬಳಿಕ ಬ್ಯಾಕ್ ಟು ಬ್ಯಾಕ್ 3 ವೈಡ್ ಎಸೆದರು. ಇನ್ನು ಮರು ಎಸೆತ ನೋ ಬಾಲ್. ಆ ಬಳಿಕ ಫೋರ್ ನೀಡಿದರು. ಮೂರನೇ ಎಸೆತದಲ್ಲಿ ಸಿಕ್ಸ್ ಚಚ್ಚಿಸಿಕೊಂಡರು. ಇದಾದ ಬಳಿಕ ಮೂರು ಎಸೆತಗಳಲ್ಲಿ ಕೇವಲ 3 ರನ್ ಮಾತ್ರ ನೀಡಿದರು.

ಅದರಂತೆ 20ನೇ ಓವರ್ ಶುರು ಮಾಡಿದ ಸಂದೀಪ್ ಶರ್ಮಾ 4 ವೈಡ್​ಗಳನ್ನು ಎಸೆದರು. ಮೊದಲ ಎಸೆತ ವೈಡ್ ಆದರೆ, ಮರು ಎಸೆದಲ್ಲಿ ಯಾವುದೇ ರನ್ ನೀಡಿರಲಿಲ್ಲ. ಇದಾದ ಬಳಿಕ ಬ್ಯಾಕ್ ಟು ಬ್ಯಾಕ್ 3 ವೈಡ್ ಎಸೆದರು. ಇನ್ನು ಮರು ಎಸೆತ ನೋ ಬಾಲ್. ಆ ಬಳಿಕ ಫೋರ್ ನೀಡಿದರು. ಮೂರನೇ ಎಸೆತದಲ್ಲಿ ಸಿಕ್ಸ್ ಚಚ್ಚಿಸಿಕೊಂಡರು. ಇದಾದ ಬಳಿಕ ಮೂರು ಎಸೆತಗಳಲ್ಲಿ ಕೇವಲ 3 ರನ್ ಮಾತ್ರ ನೀಡಿದರು.

3 / 6
ಹೀಗೆ ಸಂದೀಪ್ ಶರ್ಮಾ 20ನೇ ಓವರ್​ನಲ್ಲಿ ಬರೋಬ್ಬರಿ 11 ಎಸೆತಗಳನ್ನು ಎಸೆದರು. ಇದು ಐಪಿಎಲ್​ ಇತಿಹಾಸದ ದೀರ್ಘಾವಧಿಯ ಓವರ್​ಗಳಲ್ಲಿ ಒಂದು ಎಂಬುದು ವಿಶೇಷ. ಅಂದರೆ ಐಪಿಎಲ್​ನಲ್ಲಿ ಈವರೆಗೆ ನಾಲ್ವರು ಬೌಲರ್​ಗಳು ಮಾತ್ರ ಒಂದೇ ಓವರ್​ನಲ್ಲಿ 11 ಎಸೆತಗಳನ್ನು ಎಸೆದಿದ್ದಾರೆ. 

ಹೀಗೆ ಸಂದೀಪ್ ಶರ್ಮಾ 20ನೇ ಓವರ್​ನಲ್ಲಿ ಬರೋಬ್ಬರಿ 11 ಎಸೆತಗಳನ್ನು ಎಸೆದರು. ಇದು ಐಪಿಎಲ್​ ಇತಿಹಾಸದ ದೀರ್ಘಾವಧಿಯ ಓವರ್​ಗಳಲ್ಲಿ ಒಂದು ಎಂಬುದು ವಿಶೇಷ. ಅಂದರೆ ಐಪಿಎಲ್​ನಲ್ಲಿ ಈವರೆಗೆ ನಾಲ್ವರು ಬೌಲರ್​ಗಳು ಮಾತ್ರ ಒಂದೇ ಓವರ್​ನಲ್ಲಿ 11 ಎಸೆತಗಳನ್ನು ಎಸೆದಿದ್ದಾರೆ. 

4 / 6
ಇದಕ್ಕೂ ಮುನ್ನ 2023 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮೊಹಮ್ಮದ್ ಸಿರಾಜ್ ಒಂದೇ ಓವರ್​ನಲ್ಲಿ 11 ಎಸೆತಗಳನ್ನು ಎಸೆದಿದ್ದರು. ಇದಾದ ಬಳಿಕ 2023 ರಲ್ಲೇ ತುಷಾರ್ ದೇಶಪಾಂಡೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಒಂದು ಓವರ್​ನಲ್ಲಿ 11 ಎಸೆತಗಳನ್ನು ಬೌಲ್ ಮಾಡಿದ್ದರು. ಇನ್ನು 2025 ರಲ್ಲಿ ಕೆಕೆಆರ್ ವಿರುದ್ಧ ಒಂದೇ ಓವರ್​ನಲ್ಲಿ 11 ಎಸೆತ ಎಸೆದು ಶಾರ್ದೂಲ್ ಠಾಕೂರ್ ಈ ಹೀನಾಯ ದಾಖಲೆ ಸರಿಗಟ್ಟಿದ್ದರು.

ಇದಕ್ಕೂ ಮುನ್ನ 2023 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮೊಹಮ್ಮದ್ ಸಿರಾಜ್ ಒಂದೇ ಓವರ್​ನಲ್ಲಿ 11 ಎಸೆತಗಳನ್ನು ಎಸೆದಿದ್ದರು. ಇದಾದ ಬಳಿಕ 2023 ರಲ್ಲೇ ತುಷಾರ್ ದೇಶಪಾಂಡೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಒಂದು ಓವರ್​ನಲ್ಲಿ 11 ಎಸೆತಗಳನ್ನು ಬೌಲ್ ಮಾಡಿದ್ದರು. ಇನ್ನು 2025 ರಲ್ಲಿ ಕೆಕೆಆರ್ ವಿರುದ್ಧ ಒಂದೇ ಓವರ್​ನಲ್ಲಿ 11 ಎಸೆತ ಎಸೆದು ಶಾರ್ದೂಲ್ ಠಾಕೂರ್ ಈ ಹೀನಾಯ ದಾಖಲೆ ಸರಿಗಟ್ಟಿದ್ದರು.

5 / 6
ಇದೀಗ ಸಂದೀಪ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಒಂದು ಓವರ್​ನಲ್ಲಿ Wd, 0, Wd, Wd, Wd, N1, 4, 6, 1, 1, 1 ರನ್ ನೀಡುವ ಮೂಲಕ ಒಟ್ಟು 11 ಎಸೆತಗಳನ್ನು ಎಸೆದಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಒಂದೇ ಓವರ್​ನಲ್ಲಿ ಅತ್ಯಧಿಕ ಎಸೆತಗಳನ್ನು ಎಸೆದ ನಾಲ್ಕನೇ ಬೌಲರ್ ಎನಿಸಿಕೊಂಡಿದ್ದಾರೆ.

ಇದೀಗ ಸಂದೀಪ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಒಂದು ಓವರ್​ನಲ್ಲಿ Wd, 0, Wd, Wd, Wd, N1, 4, 6, 1, 1, 1 ರನ್ ನೀಡುವ ಮೂಲಕ ಒಟ್ಟು 11 ಎಸೆತಗಳನ್ನು ಎಸೆದಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಒಂದೇ ಓವರ್​ನಲ್ಲಿ ಅತ್ಯಧಿಕ ಎಸೆತಗಳನ್ನು ಎಸೆದ ನಾಲ್ಕನೇ ಬೌಲರ್ ಎನಿಸಿಕೊಂಡಿದ್ದಾರೆ.

6 / 6
Follow us
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ