Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಎಲ್ ಕ್ಲಾಸಿಕೊ ಪಂದ್ಯಕ್ಕೆ ದಿನಾಂಕ ನಿಗದಿ

IPL 2025 Schedule: ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ತಾತ್ಕಾಲಿಕ ವೇಳಾಪಟ್ಟಿ ಸಿದ್ಧವಾಗಿದೆ. ಈ ವೇಳಾಪಟ್ಟಿಯಂತೆ ಐಪಿಎಲ್​ನ ಎಲ್​ ಕ್ಲಾಸಿಕೊ ಪಂದ್ಯವು ಮಾರ್ಚ್ 23 ರಂದು ನಡೆಯಲಿದೆ. ಇಲ್ಲಿ ಎಲ್​ ಕ್ಲಾಸಿಕೊ ಎಂದರೆ ಕ್ಲಾಸಿಕ್ ಪಂದ್ಯ. ಅಂದರೆ ಟೂರ್ನಿಯ ಪ್ರಬಲ ಪ್ರತಿಸ್ಪರ್ಧಿಗಳ ನಡುವಣ ಕದನವನ್ನು ಎಲ್​ ಕ್ಲಾಸಿಕೊ ಎಂದು ವರ್ಣಿಸಲಾಗುತ್ತದೆ. ಅದರಂತೆ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಮ್ಯಾಚ್ ಅನ್ನು ಎಲ್​ ಕ್ಲಾಸಿಕೊ ಕದನವಾಗಿ ಪರಿಗಣಿಸಲಾಗುತ್ತದೆ.

ಝಾಹಿರ್ ಯೂಸುಫ್
|

Updated on:Feb 16, 2025 | 1:41 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಮಾರ್ಚ್ 22 ರಿಂದ ಶುರುವಾಗುವುದು ಬಹುತೇಕ ಖಚಿತವಾಗಿದೆ. ಈ ಬಾರಿಯ ಟೂರ್ನಿಯು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಶುರುವಾಗಲಿದ್ದು, ಫೈನಲ್ ಪಂದ್ಯವನ್ನು ಸಹ ಇದೇ ಸ್ಟೇಡಿಯಂನಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಮಾರ್ಚ್ 22 ರಿಂದ ಶುರುವಾಗುವುದು ಬಹುತೇಕ ಖಚಿತವಾಗಿದೆ. ಈ ಬಾರಿಯ ಟೂರ್ನಿಯು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಶುರುವಾಗಲಿದ್ದು, ಫೈನಲ್ ಪಂದ್ಯವನ್ನು ಸಹ ಇದೇ ಸ್ಟೇಡಿಯಂನಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ.

1 / 5
ಮಾರ್ಚ್ 22 ರಂದು ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್ ಅಭಿಯಾನ ಆರಂಭವಾಗಲಿದೆ.

ಮಾರ್ಚ್ 22 ರಂದು ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್ ಅಭಿಯಾನ ಆರಂಭವಾಗಲಿದೆ.

2 / 5
ಇನ್ನು ಕಳೆದ ಬಾರಿಯ ರನ್ನರ್ ಅಪ್ ತಂಡವು ಮಾರ್ಚ್ 23 ರಂದು ಕಣಕ್ಕಿಳಿಯಲು ನಿರ್ಧರಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ.

ಇನ್ನು ಕಳೆದ ಬಾರಿಯ ರನ್ನರ್ ಅಪ್ ತಂಡವು ಮಾರ್ಚ್ 23 ರಂದು ಕಣಕ್ಕಿಳಿಯಲು ನಿರ್ಧರಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ.

3 / 5
ಇನ್ನು ಐಪಿಎಲ್​ನ ಎಲ್​ ಕ್ಲಾಸಿಕೊ ಕದನವಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಮಾರ್ಚ್ 23 ರಂದೇ ನಡೆಯಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವನ್ನು ರಾತ್ರಿ 7.30 ಕ್ಕೆ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

ಇನ್ನು ಐಪಿಎಲ್​ನ ಎಲ್​ ಕ್ಲಾಸಿಕೊ ಕದನವಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಮಾರ್ಚ್ 23 ರಂದೇ ನಡೆಯಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವನ್ನು ರಾತ್ರಿ 7.30 ಕ್ಕೆ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

4 / 5
ಅದರಂತೆ ಐಪಿಎಲ್​ನ ಮೊದಲೆರಡು ದಿನದಲ್ಲೇ ಆರು ಬಲಿಷ್ಠ ತಂಡಗಳು ಕಣಕ್ಕಿಳಿಯುವುದು ಖಚಿತ. ಅದರಲ್ಲೂ ಇಂಡಿಯನ್ ಪ್ರೀಮಿಯರ್ ಲೀಗ್​ನ ಶ್ರೇಷ್ಠ ತಂಡಗಳೆನಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಕದನವನ್ನು 2ನೇ ದಿನವೇ ವೀಕ್ಷಿಸುವ ಅವಕಾಶ ಐಪಿಎಲ್​ ಪ್ರೇಮಿಗಳಿಗೆ ದೊರೆಯಲಿದೆ.

ಅದರಂತೆ ಐಪಿಎಲ್​ನ ಮೊದಲೆರಡು ದಿನದಲ್ಲೇ ಆರು ಬಲಿಷ್ಠ ತಂಡಗಳು ಕಣಕ್ಕಿಳಿಯುವುದು ಖಚಿತ. ಅದರಲ್ಲೂ ಇಂಡಿಯನ್ ಪ್ರೀಮಿಯರ್ ಲೀಗ್​ನ ಶ್ರೇಷ್ಠ ತಂಡಗಳೆನಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಕದನವನ್ನು 2ನೇ ದಿನವೇ ವೀಕ್ಷಿಸುವ ಅವಕಾಶ ಐಪಿಎಲ್​ ಪ್ರೇಮಿಗಳಿಗೆ ದೊರೆಯಲಿದೆ.

5 / 5

Published On - 8:04 am, Sun, 16 February 25

Follow us
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!