AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸಿಕ್ಸ್ ಹೊಡೆಸಿಕೊಳ್ಳದೇ ಒಂದೇ ಎಸೆತದಲ್ಲಿ ರನ್ ನೀಡಿದ ಶಾರ್ದೂಲ್ ಠಾಕೂರ್

IPL 2025 KKR vs LSG: ಕೊಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 238 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಕೆಕೆಆರ್ 234 ರನ್​ಗಳಿಸಿತು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು 4 ರನ್​ಗಳ ರೋಚಕ ಜಯ ಸಾಧಿಸಿತು.

ಝಾಹಿರ್ ಯೂಸುಫ್
|

Updated on: Apr 09, 2025 | 1:54 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 21ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಲ್​ರೌಂಡರ್ ಶಾರ್ದೂಲ್ ಠಾಕೂರ್ (Shardul Thakur) ಅನಪೇಕ್ಷಿತ ದಾಖಲೆ ಬರೆದಿದ್ದಾರೆ. ಅದು ಕೂಡ ಒಂದೇ ಎಸೆತದಲ್ಲಿ 6 ರನ್​ಗಳನ್ನು ನೀಡುವ ಮೂಲಕ. ವಿಶೇಷ ಎಂದರೆ ಈ ಆರು ರನ್​ಗಳಲ್ಲಿ ಸಿಕ್ಸ್​ ಮೂಡಿಬಂದಿಲ್ಲ. ಫೋರ್​ ಅನ್ನು ಸಹ ನೀಡಿಲ್ಲ. ಇದಾಗ್ಯೂ ಒಂದೇ ಎಸೆತದಲ್ಲಿ 6 ರನ್ ನೀಡಲು ಹೇಗೆ ಸಾಧ್ಯ? ಎಂಬ ಪ್ರಶ್ನೆ ಮೂಡುವುದು ಸಹಜ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 21ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಲ್​ರೌಂಡರ್ ಶಾರ್ದೂಲ್ ಠಾಕೂರ್ (Shardul Thakur) ಅನಪೇಕ್ಷಿತ ದಾಖಲೆ ಬರೆದಿದ್ದಾರೆ. ಅದು ಕೂಡ ಒಂದೇ ಎಸೆತದಲ್ಲಿ 6 ರನ್​ಗಳನ್ನು ನೀಡುವ ಮೂಲಕ. ವಿಶೇಷ ಎಂದರೆ ಈ ಆರು ರನ್​ಗಳಲ್ಲಿ ಸಿಕ್ಸ್​ ಮೂಡಿಬಂದಿಲ್ಲ. ಫೋರ್​ ಅನ್ನು ಸಹ ನೀಡಿಲ್ಲ. ಇದಾಗ್ಯೂ ಒಂದೇ ಎಸೆತದಲ್ಲಿ 6 ರನ್ ನೀಡಲು ಹೇಗೆ ಸಾಧ್ಯ? ಎಂಬ ಪ್ರಶ್ನೆ ಮೂಡುವುದು ಸಹಜ.

1 / 5
ಈ ಪ್ರಶ್ನೆಗೆ ಉತ್ತರ 5 ವೈಡ್​ಗಳು. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇನಿಂಗ್ಸ್​ನ 13ನೇ ಓವರ್​ ಎಸೆಯಲು ಬಂದ ಶಾರ್ದೂಲ್ ಠಾಕೂರ್ ಬ್ಯಾಕ್ ಟು ಬ್ಯಾಕ್ 5 ವೈಡ್​ಗಳನ್ನು ಎಸೆದಿದ್ದಾರೆ. ಅಂದರೆ 5 ಎಸೆತಗಳಲ್ಲಿ 5 ರನ್ ನೀಡಿದರೂ ಶಾರ್ದೂಲ್ ಅವರ ಓವರ್ ಕೌಂಟ್ ಶುರುವಾಗಿರಲಿಲ್ಲ. ಇನ್ನು ಆರನೇ ಎಸೆತದಲ್ಲಿ ಒಂದು ರನ್​ ನೀಡುವ ಮೂಲಕ ಮೊದಲ ಎಸೆತವನ್ನು ಪೂರೈಸಿದರು. 

ಈ ಪ್ರಶ್ನೆಗೆ ಉತ್ತರ 5 ವೈಡ್​ಗಳು. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇನಿಂಗ್ಸ್​ನ 13ನೇ ಓವರ್​ ಎಸೆಯಲು ಬಂದ ಶಾರ್ದೂಲ್ ಠಾಕೂರ್ ಬ್ಯಾಕ್ ಟು ಬ್ಯಾಕ್ 5 ವೈಡ್​ಗಳನ್ನು ಎಸೆದಿದ್ದಾರೆ. ಅಂದರೆ 5 ಎಸೆತಗಳಲ್ಲಿ 5 ರನ್ ನೀಡಿದರೂ ಶಾರ್ದೂಲ್ ಅವರ ಓವರ್ ಕೌಂಟ್ ಶುರುವಾಗಿರಲಿಲ್ಲ. ಇನ್ನು ಆರನೇ ಎಸೆತದಲ್ಲಿ ಒಂದು ರನ್​ ನೀಡುವ ಮೂಲಕ ಮೊದಲ ಎಸೆತವನ್ನು ಪೂರೈಸಿದರು. 

2 / 5
ಈ ಮೂಲಕ ಶಾರ್ದೂಲ್ ಠಾಕೂರ್ ಒಂದೇ ಎಸೆತದಲ್ಲಿ 6 ರನ್​ಗಳನ್ನು ನೀಡಿ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಒಂದೇ ಓವರ್​ನಲ್ಲಿ ಅತೀ ಹೆಚ್ಚು ಎಸೆತಗಳನ್ನು ಎಸೆದ ಮೂರನೇ ಬೌಲರ್​ ಎಂಬ ಹೀನಾಯ ದಾಖಲೆಯೊಂದನ್ನು ಸಹ ಬರೆದರು.

ಈ ಮೂಲಕ ಶಾರ್ದೂಲ್ ಠಾಕೂರ್ ಒಂದೇ ಎಸೆತದಲ್ಲಿ 6 ರನ್​ಗಳನ್ನು ನೀಡಿ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಒಂದೇ ಓವರ್​ನಲ್ಲಿ ಅತೀ ಹೆಚ್ಚು ಎಸೆತಗಳನ್ನು ಎಸೆದ ಮೂರನೇ ಬೌಲರ್​ ಎಂಬ ಹೀನಾಯ ದಾಖಲೆಯೊಂದನ್ನು ಸಹ ಬರೆದರು.

3 / 5
ಇದಕ್ಕೂ ಮುನ್ನ ಇಂತಹದೊಂದು ದಾಖಲೆ ಮೊಹಮ್ಮದ್ ಸಿರಾಜ್ ಹಾಗೂ ತುಷಾರ್ ದೇಶಪಾಂಡೆ ಹೆಸರಿನಲ್ಲಿತ್ತು. 2023 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಸಿರಾಜ್ ಒಂದೇ ಓವರ್​ನಲ್ಲಿ 11 ಎಸೆತಗಳನ್ನು ಎಸೆದಿದ್ದರು. ಇದೇ ವರ್ಷ ಸಿಎಸ್​ಕೆ ಪರ ಆಡಿದ್ದ ತುಷಾರ್ ದೇಶಪಾಂಡೆ ಕೂಡ 11 ಎಸೆತಗಳೊಂದಿಗೆ ಓವರ್​ ಪೂರ್ಣಗೊಳಿಸಿದ್ದರು.

ಇದಕ್ಕೂ ಮುನ್ನ ಇಂತಹದೊಂದು ದಾಖಲೆ ಮೊಹಮ್ಮದ್ ಸಿರಾಜ್ ಹಾಗೂ ತುಷಾರ್ ದೇಶಪಾಂಡೆ ಹೆಸರಿನಲ್ಲಿತ್ತು. 2023 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಸಿರಾಜ್ ಒಂದೇ ಓವರ್​ನಲ್ಲಿ 11 ಎಸೆತಗಳನ್ನು ಎಸೆದಿದ್ದರು. ಇದೇ ವರ್ಷ ಸಿಎಸ್​ಕೆ ಪರ ಆಡಿದ್ದ ತುಷಾರ್ ದೇಶಪಾಂಡೆ ಕೂಡ 11 ಎಸೆತಗಳೊಂದಿಗೆ ಓವರ್​ ಪೂರ್ಣಗೊಳಿಸಿದ್ದರು.

4 / 5
ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 11 ಎಸೆತಗಳನ್ನು (wd,wd,wd,wd,wd,1,1,0,4,2,W) ಎಸೆಯುವ ಮೂಲಕ ಶಾರ್ದೂಲ್ ಠಾಕೂರ್ ಕೂಡ ಐಪಿಎಲ್​ನಲ್ಲಿ ದೀರ್ಘಾವಧಿ ಬೌಲಿಂಗ್ ಮಾಡಿದ ಬೌಲರ್​ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಐಪಿಎಲ್​ನ ಅನಗತ್ಯ ದಾಖಲೆ ಶೂರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆಗೊಳಿಸಿದ್ದಾರೆ.

ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 11 ಎಸೆತಗಳನ್ನು (wd,wd,wd,wd,wd,1,1,0,4,2,W) ಎಸೆಯುವ ಮೂಲಕ ಶಾರ್ದೂಲ್ ಠಾಕೂರ್ ಕೂಡ ಐಪಿಎಲ್​ನಲ್ಲಿ ದೀರ್ಘಾವಧಿ ಬೌಲಿಂಗ್ ಮಾಡಿದ ಬೌಲರ್​ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಐಪಿಎಲ್​ನ ಅನಗತ್ಯ ದಾಖಲೆ ಶೂರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆಗೊಳಿಸಿದ್ದಾರೆ.

5 / 5
Follow us
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ