AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಶ್ರೇಯಸ್ ಅಯ್ಯರ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ (ಐಪಿಎಲ್ 2025) ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ವೇಳೆ 8 ಗೆಲುವು ದಾಖಲಿಸಿರುವ ಪಂಜಾಬ್ ಪಡೆ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಮೂಲಕ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ ಆಡಲು ಸಜ್ಜಾಗಿ ನಿಂತಿದೆ.

ಝಾಹಿರ್ ಯೂಸುಫ್
|

Updated on: May 20, 2025 | 1:30 PM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬರೋಬ್ಬರಿ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ಪ್ಲೇಆಫ್ ಪ್ರವೇಶಿಸಿದೆ. ಇದಕ್ಕೂ ಮುನ್ನ ಪಂಜಾಬ್ ಪಡೆ ಪ್ಲೇಆಫ್ ಆಡಿದ್ದು 2014 ರಲ್ಲಿ. ಇದಾದ ಬಳಿಕ ಒಮ್ಮೆಯೂ ಟಾಪ್-4 ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿರಲಿಲ್ಲ. ಆದರೆ ಈ ಬಾರಿ ಶ್ರೇಯಸ್ ಅಯ್ಯರ್ (Shreyas Iyer) ಮುಂದಾಳತ್ವದಲ್ಲಿ ಕಣಕ್ಕಿಳಿದಿರುವ ಪಂಜಾಬ್ ಕಿಂಗ್ಸ್ ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನವೇ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬರೋಬ್ಬರಿ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ಪ್ಲೇಆಫ್ ಪ್ರವೇಶಿಸಿದೆ. ಇದಕ್ಕೂ ಮುನ್ನ ಪಂಜಾಬ್ ಪಡೆ ಪ್ಲೇಆಫ್ ಆಡಿದ್ದು 2014 ರಲ್ಲಿ. ಇದಾದ ಬಳಿಕ ಒಮ್ಮೆಯೂ ಟಾಪ್-4 ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿರಲಿಲ್ಲ. ಆದರೆ ಈ ಬಾರಿ ಶ್ರೇಯಸ್ ಅಯ್ಯರ್ (Shreyas Iyer) ಮುಂದಾಳತ್ವದಲ್ಲಿ ಕಣಕ್ಕಿಳಿದಿರುವ ಪಂಜಾಬ್ ಕಿಂಗ್ಸ್ ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನವೇ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ.

1 / 5
ಇದರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೂರು ತಂಡಗಳನ್ನು ಪ್ಲೇಆಫ್​ಗೇರಿಸಿದ ಮೊದಲ ನಾಯಕ ಎಂಬ ದಾಖಲೆಯೊಂದು ಶ್ರೇಯಸ್ ಅಯ್ಯರ್ ಪಾಲಾಗಿದೆ. ಐಪಿಎಲ್​ನಲ್ಲಿ ಶ್ರೇಯಸ್ ಅಯ್ಯರ್ ಈವರೆಗೆ ಮೂರು ತಂಡಗಳನ್ನು ಮುನ್ನಡೆಸಿದ್ದಾರೆ. ಈ ಮೂರು ತಂಡಗಳು ಕೂಡ ಪ್ಲೇಆಫ್​ಗೆ ಪ್ರವೇಶಿಸಿದೆ ಎಂಬುದೇ ವಿಶೇಷ.

ಇದರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೂರು ತಂಡಗಳನ್ನು ಪ್ಲೇಆಫ್​ಗೇರಿಸಿದ ಮೊದಲ ನಾಯಕ ಎಂಬ ದಾಖಲೆಯೊಂದು ಶ್ರೇಯಸ್ ಅಯ್ಯರ್ ಪಾಲಾಗಿದೆ. ಐಪಿಎಲ್​ನಲ್ಲಿ ಶ್ರೇಯಸ್ ಅಯ್ಯರ್ ಈವರೆಗೆ ಮೂರು ತಂಡಗಳನ್ನು ಮುನ್ನಡೆಸಿದ್ದಾರೆ. ಈ ಮೂರು ತಂಡಗಳು ಕೂಡ ಪ್ಲೇಆಫ್​ಗೆ ಪ್ರವೇಶಿಸಿದೆ ಎಂಬುದೇ ವಿಶೇಷ.

2 / 5
2019 ಮತ್ತು 2020 ರಲ್ಲಿ ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಡೆಲ್ಲಿ ಪಡೆ ಪ್ಲೇಆಫ್​ಗೇರಿತ್ತು. ಅದರಲ್ಲೂ 2020 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫೈನಲ್​ಗೇರಿಸುವಲ್ಲಿ ಶ್ರೇಯಸ್ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

2019 ಮತ್ತು 2020 ರಲ್ಲಿ ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಡೆಲ್ಲಿ ಪಡೆ ಪ್ಲೇಆಫ್​ಗೇರಿತ್ತು. ಅದರಲ್ಲೂ 2020 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫೈನಲ್​ಗೇರಿಸುವಲ್ಲಿ ಶ್ರೇಯಸ್ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

3 / 5
2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಶ್ರೇಯಸ್ ಅಯ್ಯರ್, ಕೆಕೆಆರ್​ ಪಡೆಗೆ 10 ವರ್ಷಗಳ ಬಳಿಕ ಟ್ರೋಫಿ ಗೆದ್ದು ಕೊಡುವಲ್ಲಿ ಯಶಸ್ವಿಯಾದರು. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್​​ ತಂಡಕ್ಕೆ ಟ್ರೋಫಿ ಗೆದ್ದುಕೊಟ್ಟ 2ನೇ ಕ್ಯಾಪ್ಟನ್ ಎನಿಸಿಕೊಂಡರು.

2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಶ್ರೇಯಸ್ ಅಯ್ಯರ್, ಕೆಕೆಆರ್​ ಪಡೆಗೆ 10 ವರ್ಷಗಳ ಬಳಿಕ ಟ್ರೋಫಿ ಗೆದ್ದು ಕೊಡುವಲ್ಲಿ ಯಶಸ್ವಿಯಾದರು. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್​​ ತಂಡಕ್ಕೆ ಟ್ರೋಫಿ ಗೆದ್ದುಕೊಟ್ಟ 2ನೇ ಕ್ಯಾಪ್ಟನ್ ಎನಿಸಿಕೊಂಡರು.

4 / 5
ಇದೀಗ ಶ್ರೇಯಸ್ ಅಯ್ಯರ್ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಲ್ಲದೆ ಚೊಚ್ಚಲ ಸೀಸನ್​ನಲ್ಲೇ ಪಂಜಾಬ್ ಪಡೆಯನ್ನು ಪ್ಲೇಆಫ್​ಗೆ ತಲುಪಿಸಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಮೂರು ತಂಡಗಳನ್ನು ಪ್ಲೇಆಫ್​ಗೇರಿಸಿದ ಏಕೈಕ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಹೊರಹೊಮ್ಮಿದ್ದಾರೆ.

ಇದೀಗ ಶ್ರೇಯಸ್ ಅಯ್ಯರ್ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಲ್ಲದೆ ಚೊಚ್ಚಲ ಸೀಸನ್​ನಲ್ಲೇ ಪಂಜಾಬ್ ಪಡೆಯನ್ನು ಪ್ಲೇಆಫ್​ಗೆ ತಲುಪಿಸಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಮೂರು ತಂಡಗಳನ್ನು ಪ್ಲೇಆಫ್​ಗೇರಿಸಿದ ಏಕೈಕ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಹೊರಹೊಮ್ಮಿದ್ದಾರೆ.

5 / 5
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ