AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕನ್ನಡಿಗನ ಕನಸು ಭಗ್ನ: ಐಪಿಎಲ್​ನಿಂದ ಔಟ್

IPL 2025: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ಕರ್ನಾಟಕದ 14 ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಮೊದಲು ಹರಾಜಿನ ಮೂಲಕ 13 ಆಟಗಾರರು ಆಯ್ಕೆಯಾಗಿದ್ದರೆ, ಇದೀಗ ಬದಲಿ ಆಟಗಾರನಾಗಿ ಕನ್ನಡಿಗ ಸ್ಮರಣ್ ರವಿಚಂದ್ರನ್ ಎಸ್​ಆರ್​ಹೆಚ್ ತಂಡದಲ್ಲಿ ಸ್ಥಾನ ಪಡೆದಿದ್ದರು.

ಝಾಹಿರ್ ಯೂಸುಫ್
|

Updated on: May 05, 2025 | 11:30 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದ ಕರ್ನಾಟಕದ ಸ್ಪೋಟಕ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ (Smaran Ravichandran) ಇದೀಗ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಎಸ್​ಆರ್​ಹೆಚ್​ ತಂಡಕ್ಕೆ ಆಯ್ಕೆಯಾಗಿದ್ದ ಸ್ಮರಣ್ ಅವರು ಗಾಯಗೊಂಡಿದ್ದು, ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದ ಕರ್ನಾಟಕದ ಸ್ಪೋಟಕ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ (Smaran Ravichandran) ಇದೀಗ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಎಸ್​ಆರ್​ಹೆಚ್​ ತಂಡಕ್ಕೆ ಆಯ್ಕೆಯಾಗಿದ್ದ ಸ್ಮರಣ್ ಅವರು ಗಾಯಗೊಂಡಿದ್ದು, ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

1 / 5
ಇದಕ್ಕೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಆಸ್ಟ್ರೇಲಿಯಾ ಸ್ಪಿನ್ನರ್ ಆ್ಯಡಂ ಝಂಪಾ ಗಾಯಗೊಂಡಿದ್ದರು. ಹೀಗಾಗಿ ಅವರ ಬದಲಿಗೆ ಕರ್ನಾಟಕದ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಆಯ್ಕೆ ಮಾಡಿಕೊಂಡಿತ್ತು.

ಇದಕ್ಕೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಆಸ್ಟ್ರೇಲಿಯಾ ಸ್ಪಿನ್ನರ್ ಆ್ಯಡಂ ಝಂಪಾ ಗಾಯಗೊಂಡಿದ್ದರು. ಹೀಗಾಗಿ ಅವರ ಬದಲಿಗೆ ಕರ್ನಾಟಕದ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಆಯ್ಕೆ ಮಾಡಿಕೊಂಡಿತ್ತು.

2 / 5
ಅದರಂತೆ ಏಪ್ರಿಲ್ 14 ರಂದು ಸನ್​ರೈಸರ್ಸ್ ಹೈದರಾಬಾದ್ ಬಳಗವನ್ನು ಸೇರಿಕೊಂಡಿದ್ದ ಸ್ಮರಣ್ ರವಿಚಂದ್ರನ್ ಅಭ್ಯಾಸ ವೇಳೆ ಗಾಯಗೊಂಡಿದ್ದಾರೆ. ಹೀಗಾಗಿ ಅವರನ್ನು ಎಸ್​ಆರ್​​ಹೆಚ್ ತಂಡದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ವಿದರ್ಭದ ಆಲ್​ರೌಂಡರ್ ಹರ್ಷ್ ದುಬೆಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಿಳಿಸಿದೆ. ಇದರೊಂದಿಗೆ ಚೊಚ್ಚಲ ಐಪಿಎಲ್ ಪಂದ್ಯವಾಡುವ ಸ್ಮರಣ್ ರವಿಚಂದ್ರನ್ ಅವರ ಕನಸು ಕೂಡ ಕಮರಿದೆ.

ಅದರಂತೆ ಏಪ್ರಿಲ್ 14 ರಂದು ಸನ್​ರೈಸರ್ಸ್ ಹೈದರಾಬಾದ್ ಬಳಗವನ್ನು ಸೇರಿಕೊಂಡಿದ್ದ ಸ್ಮರಣ್ ರವಿಚಂದ್ರನ್ ಅಭ್ಯಾಸ ವೇಳೆ ಗಾಯಗೊಂಡಿದ್ದಾರೆ. ಹೀಗಾಗಿ ಅವರನ್ನು ಎಸ್​ಆರ್​​ಹೆಚ್ ತಂಡದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ವಿದರ್ಭದ ಆಲ್​ರೌಂಡರ್ ಹರ್ಷ್ ದುಬೆಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಿಳಿಸಿದೆ. ಇದರೊಂದಿಗೆ ಚೊಚ್ಚಲ ಐಪಿಎಲ್ ಪಂದ್ಯವಾಡುವ ಸ್ಮರಣ್ ರವಿಚಂದ್ರನ್ ಅವರ ಕನಸು ಕೂಡ ಕಮರಿದೆ.

3 / 5
21 ವರ್ಷದ ಸ್ಮರಣ್ ರವಿಚಂದ್ರನ್ ಕಳೆದ ವರ್ಷ ನಡೆದ ಮಹಾರಾಜ ಟಿ20 ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಗುಲ್ಬರ್ಗ ಮಿಸ್ಟಿಕ್ಸ್ ಪರ ಕಣಕ್ಕಿಳಿದಿದ್ದ ಸ್ಮರಣ್ ಕೇವಲ 9 ಇನ್ನಿಂಗ್ಸ್‌ಗಳಿಂದ 43.14 ರ ಸರಾಸರಿಯಲ್ಲಿ 302 ರನ್ ಬಾರಿಸಿದ್ದರು. ಅದು ಸಹ  145.19 ರ ಅದ್ಭುತ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

21 ವರ್ಷದ ಸ್ಮರಣ್ ರವಿಚಂದ್ರನ್ ಕಳೆದ ವರ್ಷ ನಡೆದ ಮಹಾರಾಜ ಟಿ20 ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಗುಲ್ಬರ್ಗ ಮಿಸ್ಟಿಕ್ಸ್ ಪರ ಕಣಕ್ಕಿಳಿದಿದ್ದ ಸ್ಮರಣ್ ಕೇವಲ 9 ಇನ್ನಿಂಗ್ಸ್‌ಗಳಿಂದ 43.14 ರ ಸರಾಸರಿಯಲ್ಲಿ 302 ರನ್ ಬಾರಿಸಿದ್ದರು. ಅದು ಸಹ  145.19 ರ ಅದ್ಭುತ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

4 / 5
ಅಲ್ಲದೆ 2024ರ ಮಹಾರಾಜ ಟಿ20 ಟೂರ್ನಿಯಲ್ಲಿ ಒಂದು ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿ ಅಬ್ಬರಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಸ್ಮರಣ್ ರವಿಚಂದ್ರನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಿಕೊಂಡಿತ್ತು. ಆದರೀಗ ಗಾಯಗೊಂಡು ಅರ್ಧದಲ್ಲೇ ಐಪಿಎಲ್​ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ.

ಅಲ್ಲದೆ 2024ರ ಮಹಾರಾಜ ಟಿ20 ಟೂರ್ನಿಯಲ್ಲಿ ಒಂದು ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿ ಅಬ್ಬರಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಸ್ಮರಣ್ ರವಿಚಂದ್ರನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಿಕೊಂಡಿತ್ತು. ಆದರೀಗ ಗಾಯಗೊಂಡು ಅರ್ಧದಲ್ಲೇ ಐಪಿಎಲ್​ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ.

5 / 5
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?