AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕನ್ನಡಿಗನ ಕನಸು ಭಗ್ನ: ಐಪಿಎಲ್​ನಿಂದ ಔಟ್

IPL 2025: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ಕರ್ನಾಟಕದ 14 ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಮೊದಲು ಹರಾಜಿನ ಮೂಲಕ 13 ಆಟಗಾರರು ಆಯ್ಕೆಯಾಗಿದ್ದರೆ, ಇದೀಗ ಬದಲಿ ಆಟಗಾರನಾಗಿ ಕನ್ನಡಿಗ ಸ್ಮರಣ್ ರವಿಚಂದ್ರನ್ ಎಸ್​ಆರ್​ಹೆಚ್ ತಂಡದಲ್ಲಿ ಸ್ಥಾನ ಪಡೆದಿದ್ದರು.

ಝಾಹಿರ್ ಯೂಸುಫ್
|

Updated on: May 05, 2025 | 11:30 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದ ಕರ್ನಾಟಕದ ಸ್ಪೋಟಕ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ (Smaran Ravichandran) ಇದೀಗ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಎಸ್​ಆರ್​ಹೆಚ್​ ತಂಡಕ್ಕೆ ಆಯ್ಕೆಯಾಗಿದ್ದ ಸ್ಮರಣ್ ಅವರು ಗಾಯಗೊಂಡಿದ್ದು, ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದ ಕರ್ನಾಟಕದ ಸ್ಪೋಟಕ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ (Smaran Ravichandran) ಇದೀಗ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಎಸ್​ಆರ್​ಹೆಚ್​ ತಂಡಕ್ಕೆ ಆಯ್ಕೆಯಾಗಿದ್ದ ಸ್ಮರಣ್ ಅವರು ಗಾಯಗೊಂಡಿದ್ದು, ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

1 / 5
ಇದಕ್ಕೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಆಸ್ಟ್ರೇಲಿಯಾ ಸ್ಪಿನ್ನರ್ ಆ್ಯಡಂ ಝಂಪಾ ಗಾಯಗೊಂಡಿದ್ದರು. ಹೀಗಾಗಿ ಅವರ ಬದಲಿಗೆ ಕರ್ನಾಟಕದ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಆಯ್ಕೆ ಮಾಡಿಕೊಂಡಿತ್ತು.

ಇದಕ್ಕೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಆಸ್ಟ್ರೇಲಿಯಾ ಸ್ಪಿನ್ನರ್ ಆ್ಯಡಂ ಝಂಪಾ ಗಾಯಗೊಂಡಿದ್ದರು. ಹೀಗಾಗಿ ಅವರ ಬದಲಿಗೆ ಕರ್ನಾಟಕದ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಆಯ್ಕೆ ಮಾಡಿಕೊಂಡಿತ್ತು.

2 / 5
ಅದರಂತೆ ಏಪ್ರಿಲ್ 14 ರಂದು ಸನ್​ರೈಸರ್ಸ್ ಹೈದರಾಬಾದ್ ಬಳಗವನ್ನು ಸೇರಿಕೊಂಡಿದ್ದ ಸ್ಮರಣ್ ರವಿಚಂದ್ರನ್ ಅಭ್ಯಾಸ ವೇಳೆ ಗಾಯಗೊಂಡಿದ್ದಾರೆ. ಹೀಗಾಗಿ ಅವರನ್ನು ಎಸ್​ಆರ್​​ಹೆಚ್ ತಂಡದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ವಿದರ್ಭದ ಆಲ್​ರೌಂಡರ್ ಹರ್ಷ್ ದುಬೆಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಿಳಿಸಿದೆ. ಇದರೊಂದಿಗೆ ಚೊಚ್ಚಲ ಐಪಿಎಲ್ ಪಂದ್ಯವಾಡುವ ಸ್ಮರಣ್ ರವಿಚಂದ್ರನ್ ಅವರ ಕನಸು ಕೂಡ ಕಮರಿದೆ.

ಅದರಂತೆ ಏಪ್ರಿಲ್ 14 ರಂದು ಸನ್​ರೈಸರ್ಸ್ ಹೈದರಾಬಾದ್ ಬಳಗವನ್ನು ಸೇರಿಕೊಂಡಿದ್ದ ಸ್ಮರಣ್ ರವಿಚಂದ್ರನ್ ಅಭ್ಯಾಸ ವೇಳೆ ಗಾಯಗೊಂಡಿದ್ದಾರೆ. ಹೀಗಾಗಿ ಅವರನ್ನು ಎಸ್​ಆರ್​​ಹೆಚ್ ತಂಡದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ವಿದರ್ಭದ ಆಲ್​ರೌಂಡರ್ ಹರ್ಷ್ ದುಬೆಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಿಳಿಸಿದೆ. ಇದರೊಂದಿಗೆ ಚೊಚ್ಚಲ ಐಪಿಎಲ್ ಪಂದ್ಯವಾಡುವ ಸ್ಮರಣ್ ರವಿಚಂದ್ರನ್ ಅವರ ಕನಸು ಕೂಡ ಕಮರಿದೆ.

3 / 5
21 ವರ್ಷದ ಸ್ಮರಣ್ ರವಿಚಂದ್ರನ್ ಕಳೆದ ವರ್ಷ ನಡೆದ ಮಹಾರಾಜ ಟಿ20 ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಗುಲ್ಬರ್ಗ ಮಿಸ್ಟಿಕ್ಸ್ ಪರ ಕಣಕ್ಕಿಳಿದಿದ್ದ ಸ್ಮರಣ್ ಕೇವಲ 9 ಇನ್ನಿಂಗ್ಸ್‌ಗಳಿಂದ 43.14 ರ ಸರಾಸರಿಯಲ್ಲಿ 302 ರನ್ ಬಾರಿಸಿದ್ದರು. ಅದು ಸಹ  145.19 ರ ಅದ್ಭುತ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

21 ವರ್ಷದ ಸ್ಮರಣ್ ರವಿಚಂದ್ರನ್ ಕಳೆದ ವರ್ಷ ನಡೆದ ಮಹಾರಾಜ ಟಿ20 ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಗುಲ್ಬರ್ಗ ಮಿಸ್ಟಿಕ್ಸ್ ಪರ ಕಣಕ್ಕಿಳಿದಿದ್ದ ಸ್ಮರಣ್ ಕೇವಲ 9 ಇನ್ನಿಂಗ್ಸ್‌ಗಳಿಂದ 43.14 ರ ಸರಾಸರಿಯಲ್ಲಿ 302 ರನ್ ಬಾರಿಸಿದ್ದರು. ಅದು ಸಹ  145.19 ರ ಅದ್ಭುತ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

4 / 5
ಅಲ್ಲದೆ 2024ರ ಮಹಾರಾಜ ಟಿ20 ಟೂರ್ನಿಯಲ್ಲಿ ಒಂದು ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿ ಅಬ್ಬರಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಸ್ಮರಣ್ ರವಿಚಂದ್ರನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಿಕೊಂಡಿತ್ತು. ಆದರೀಗ ಗಾಯಗೊಂಡು ಅರ್ಧದಲ್ಲೇ ಐಪಿಎಲ್​ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ.

ಅಲ್ಲದೆ 2024ರ ಮಹಾರಾಜ ಟಿ20 ಟೂರ್ನಿಯಲ್ಲಿ ಒಂದು ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿ ಅಬ್ಬರಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಸ್ಮರಣ್ ರವಿಚಂದ್ರನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಿಕೊಂಡಿತ್ತು. ಆದರೀಗ ಗಾಯಗೊಂಡು ಅರ್ಧದಲ್ಲೇ ಐಪಿಎಲ್​ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್