AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB ಅಭಿಮಾನಿಗಳ ಅಭಿಮಾನ ನೋಡಿ ಭಾವುಕರಾದ ವಿರಾಟ್ ಕೊಹ್ಲಿ

IPL 2025 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ ( ಐಪಿಎಲ್ 2025) 58ನೇ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಈ ರದ್ದಾಗುವಿಕೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ( ಆರ್​ಸಿಬಿ ) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್​ ) ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ.

ಝಾಹಿರ್ ಯೂಸುಫ್
|

Updated on:May 18, 2025 | 9:39 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕೆಂಪು ಕೋಟೆ ಶನಿವಾರ ಸಂಪೂರ್ಣ ಶ್ವೇತಮಯವಾಗಿತ್ತು. ಹೀಗೆ  ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಶ್ವೇತಮಯವಾಗಿಸಿದ್ದು ವಿರಾಟ್ ಕೊಹ್ಲಿಯ (Virat Kohli) ಅಭಿಮಾನಿಗಳು. ತಮ್ಮ ನೆಚ್ಚಿನ ಆಟಗಾರನಿಗೆ ಟೆಸ್ಟ್ ಕ್ರಿಕೆಟ್​​ನಲ್ಲಿ ಗೌರವಯುತ ವಿದಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ, ಅಭಿಮಾನಿಗಳು ವೈಟ್ ಜೆರ್ಸಿ ಧರಿಸಿ ಆಗಮಿಸಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕೆಂಪು ಕೋಟೆ ಶನಿವಾರ ಸಂಪೂರ್ಣ ಶ್ವೇತಮಯವಾಗಿತ್ತು. ಹೀಗೆ  ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಶ್ವೇತಮಯವಾಗಿಸಿದ್ದು ವಿರಾಟ್ ಕೊಹ್ಲಿಯ (Virat Kohli) ಅಭಿಮಾನಿಗಳು. ತಮ್ಮ ನೆಚ್ಚಿನ ಆಟಗಾರನಿಗೆ ಟೆಸ್ಟ್ ಕ್ರಿಕೆಟ್​​ನಲ್ಲಿ ಗೌರವಯುತ ವಿದಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ, ಅಭಿಮಾನಿಗಳು ವೈಟ್ ಜೆರ್ಸಿ ಧರಿಸಿ ಆಗಮಿಸಿದ್ದರು.

1 / 5
ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಕಿಂಗ್ ಕೊಹ್ಲಿಯನ್ನು ತಾವೆಷ್ಟು ಪ್ರೀತಿಸುತ್ತಿದ್ದೇವು ಎಂಬುದನ್ನು ಅಭಿಮಾನಿಗಳು ಸಾರಿ ಹೇಳಿದ್ದರು. ಇತ್ತ ಇಂತಹದೊಂದು ಅಭಿಮಾನವನ್ನು ನೋಡಿದ ವಿರಾಟ್ ಕೊಹ್ಲಿ ಭಾವುಕರಾಗಿ ಕಂಡು ಬಂದರು. ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ ರಾರಾಜಿಸುತ್ತಿರುವುದು ಬಿಗ್ ಸ್ಕ್ರೀನ್​ನಲ್ಲಿ ತೋರಿಸುತ್ತಿದ್ದಂತೆ, ಇತ್ತ ಕೊಹ್ಲಿ ಏಕಾಂತವಾಗಿ ಭಾವುಕತೆಯಿಂದ ನೋಡುತ್ತಾ ಕೂತಿದ್ದರು.

ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಕಿಂಗ್ ಕೊಹ್ಲಿಯನ್ನು ತಾವೆಷ್ಟು ಪ್ರೀತಿಸುತ್ತಿದ್ದೇವು ಎಂಬುದನ್ನು ಅಭಿಮಾನಿಗಳು ಸಾರಿ ಹೇಳಿದ್ದರು. ಇತ್ತ ಇಂತಹದೊಂದು ಅಭಿಮಾನವನ್ನು ನೋಡಿದ ವಿರಾಟ್ ಕೊಹ್ಲಿ ಭಾವುಕರಾಗಿ ಕಂಡು ಬಂದರು. ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ ರಾರಾಜಿಸುತ್ತಿರುವುದು ಬಿಗ್ ಸ್ಕ್ರೀನ್​ನಲ್ಲಿ ತೋರಿಸುತ್ತಿದ್ದಂತೆ, ಇತ್ತ ಕೊಹ್ಲಿ ಏಕಾಂತವಾಗಿ ಭಾವುಕತೆಯಿಂದ ನೋಡುತ್ತಾ ಕೂತಿದ್ದರು.

2 / 5
ಆದರೆ ವಿಧಿಯಾಟ, ಮಳೆಯ ಕಾರಣ  ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಡುವಣ ಪಂದ್ಯವು ರದ್ದಾಯಿತು. ಇಲ್ಲದಿದ್ದರೆ, ಕಿಂಗ್ ಕೊಹ್ಲಿ ಬ್ಯಾಟಿಂಗ್​ಗೆ ಬರುತ್ತಿದ್ದಂತೆ ವಿಶೇಷ ಗೌರವ ಸಲ್ಲಿಸಲು ಆರ್​ಸಿಬಿ ಫ್ಯಾನ್ಸ್ ನಿರ್ಧರಿಸಿದ್ದರು.

ಆದರೆ ವಿಧಿಯಾಟ, ಮಳೆಯ ಕಾರಣ  ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಡುವಣ ಪಂದ್ಯವು ರದ್ದಾಯಿತು. ಇಲ್ಲದಿದ್ದರೆ, ಕಿಂಗ್ ಕೊಹ್ಲಿ ಬ್ಯಾಟಿಂಗ್​ಗೆ ಬರುತ್ತಿದ್ದಂತೆ ವಿಶೇಷ ಗೌರವ ಸಲ್ಲಿಸಲು ಆರ್​ಸಿಬಿ ಫ್ಯಾನ್ಸ್ ನಿರ್ಧರಿಸಿದ್ದರು.

3 / 5
ಇತ್ತ ಆರ್​ಸಿಬಿ ಫ್ರಾಂಚೈಸಿ ಕೂಡ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತರಾಗಿರುವ ವಿರಾಟ್ ಕೊಹ್ಲಿಗೆ ವಿಶೇಷ ಗೌರವ ಸಲ್ಲಿಸಲು ಯೋಜನೆ ಹಾಕಿಕೊಂಡಿದ್ದರು. ಆದರೆ ಮಳೆಯಿಂದಾಗಿ ಎಲ್ಲವೂ ಹಾಳಾಯಿತು ಎನ್ನಬಹುದು. ಇದಾಗ್ಯೂ ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಸಹ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ.

ಇತ್ತ ಆರ್​ಸಿಬಿ ಫ್ರಾಂಚೈಸಿ ಕೂಡ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತರಾಗಿರುವ ವಿರಾಟ್ ಕೊಹ್ಲಿಗೆ ವಿಶೇಷ ಗೌರವ ಸಲ್ಲಿಸಲು ಯೋಜನೆ ಹಾಕಿಕೊಂಡಿದ್ದರು. ಆದರೆ ಮಳೆಯಿಂದಾಗಿ ಎಲ್ಲವೂ ಹಾಳಾಯಿತು ಎನ್ನಬಹುದು. ಇದಾಗ್ಯೂ ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಸಹ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ.

4 / 5
ಮೇ 23 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ವೇಳೆ ಆರ್​ಸಿಬಿ ಅಭಿಮಾನಿಗಳು ಕಿಂಗ್ ಕೊಹ್ಲಿಗೆ ಟೆಸ್ಟ್ ಬೀಳ್ಕೊಡುಗೆ ನೀಡಲು ಮತ್ತೆ ವೈಟ್ ಜೆರ್ಸಿಯಲ್ಲಿ ಆಗಮಿಸುವ ಸಾಧ್ಯತೆಯಿದೆ. ಅಲ್ಲದೆ ಆರ್​ಸಿಬಿ ಕಡೆಯಿಂದಲೂ ವಿರಾಟ್ ಕೊಹ್ಲಿಗೆ ವಿಶೇಷ ಗೌರವ ಸಿಗಲಿದೆ.

ಮೇ 23 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ವೇಳೆ ಆರ್​ಸಿಬಿ ಅಭಿಮಾನಿಗಳು ಕಿಂಗ್ ಕೊಹ್ಲಿಗೆ ಟೆಸ್ಟ್ ಬೀಳ್ಕೊಡುಗೆ ನೀಡಲು ಮತ್ತೆ ವೈಟ್ ಜೆರ್ಸಿಯಲ್ಲಿ ಆಗಮಿಸುವ ಸಾಧ್ಯತೆಯಿದೆ. ಅಲ್ಲದೆ ಆರ್​ಸಿಬಿ ಕಡೆಯಿಂದಲೂ ವಿರಾಟ್ ಕೊಹ್ಲಿಗೆ ವಿಶೇಷ ಗೌರವ ಸಿಗಲಿದೆ.

5 / 5

Published On - 7:36 am, Sun, 18 May 25

Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ