AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB ಅಭಿಮಾನಿಗಳ ಅಭಿಮಾನ ನೋಡಿ ಭಾವುಕರಾದ ವಿರಾಟ್ ಕೊಹ್ಲಿ

IPL 2025 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ ( ಐಪಿಎಲ್ 2025) 58ನೇ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಈ ರದ್ದಾಗುವಿಕೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ( ಆರ್​ಸಿಬಿ ) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್​ ) ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ.

ಝಾಹಿರ್ ಯೂಸುಫ್
|

Updated on:May 18, 2025 | 9:39 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕೆಂಪು ಕೋಟೆ ಶನಿವಾರ ಸಂಪೂರ್ಣ ಶ್ವೇತಮಯವಾಗಿತ್ತು. ಹೀಗೆ  ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಶ್ವೇತಮಯವಾಗಿಸಿದ್ದು ವಿರಾಟ್ ಕೊಹ್ಲಿಯ (Virat Kohli) ಅಭಿಮಾನಿಗಳು. ತಮ್ಮ ನೆಚ್ಚಿನ ಆಟಗಾರನಿಗೆ ಟೆಸ್ಟ್ ಕ್ರಿಕೆಟ್​​ನಲ್ಲಿ ಗೌರವಯುತ ವಿದಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ, ಅಭಿಮಾನಿಗಳು ವೈಟ್ ಜೆರ್ಸಿ ಧರಿಸಿ ಆಗಮಿಸಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕೆಂಪು ಕೋಟೆ ಶನಿವಾರ ಸಂಪೂರ್ಣ ಶ್ವೇತಮಯವಾಗಿತ್ತು. ಹೀಗೆ  ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಶ್ವೇತಮಯವಾಗಿಸಿದ್ದು ವಿರಾಟ್ ಕೊಹ್ಲಿಯ (Virat Kohli) ಅಭಿಮಾನಿಗಳು. ತಮ್ಮ ನೆಚ್ಚಿನ ಆಟಗಾರನಿಗೆ ಟೆಸ್ಟ್ ಕ್ರಿಕೆಟ್​​ನಲ್ಲಿ ಗೌರವಯುತ ವಿದಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ, ಅಭಿಮಾನಿಗಳು ವೈಟ್ ಜೆರ್ಸಿ ಧರಿಸಿ ಆಗಮಿಸಿದ್ದರು.

1 / 5
ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಕಿಂಗ್ ಕೊಹ್ಲಿಯನ್ನು ತಾವೆಷ್ಟು ಪ್ರೀತಿಸುತ್ತಿದ್ದೇವು ಎಂಬುದನ್ನು ಅಭಿಮಾನಿಗಳು ಸಾರಿ ಹೇಳಿದ್ದರು. ಇತ್ತ ಇಂತಹದೊಂದು ಅಭಿಮಾನವನ್ನು ನೋಡಿದ ವಿರಾಟ್ ಕೊಹ್ಲಿ ಭಾವುಕರಾಗಿ ಕಂಡು ಬಂದರು. ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ ರಾರಾಜಿಸುತ್ತಿರುವುದು ಬಿಗ್ ಸ್ಕ್ರೀನ್​ನಲ್ಲಿ ತೋರಿಸುತ್ತಿದ್ದಂತೆ, ಇತ್ತ ಕೊಹ್ಲಿ ಏಕಾಂತವಾಗಿ ಭಾವುಕತೆಯಿಂದ ನೋಡುತ್ತಾ ಕೂತಿದ್ದರು.

ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಕಿಂಗ್ ಕೊಹ್ಲಿಯನ್ನು ತಾವೆಷ್ಟು ಪ್ರೀತಿಸುತ್ತಿದ್ದೇವು ಎಂಬುದನ್ನು ಅಭಿಮಾನಿಗಳು ಸಾರಿ ಹೇಳಿದ್ದರು. ಇತ್ತ ಇಂತಹದೊಂದು ಅಭಿಮಾನವನ್ನು ನೋಡಿದ ವಿರಾಟ್ ಕೊಹ್ಲಿ ಭಾವುಕರಾಗಿ ಕಂಡು ಬಂದರು. ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ ರಾರಾಜಿಸುತ್ತಿರುವುದು ಬಿಗ್ ಸ್ಕ್ರೀನ್​ನಲ್ಲಿ ತೋರಿಸುತ್ತಿದ್ದಂತೆ, ಇತ್ತ ಕೊಹ್ಲಿ ಏಕಾಂತವಾಗಿ ಭಾವುಕತೆಯಿಂದ ನೋಡುತ್ತಾ ಕೂತಿದ್ದರು.

2 / 5
ಆದರೆ ವಿಧಿಯಾಟ, ಮಳೆಯ ಕಾರಣ  ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಡುವಣ ಪಂದ್ಯವು ರದ್ದಾಯಿತು. ಇಲ್ಲದಿದ್ದರೆ, ಕಿಂಗ್ ಕೊಹ್ಲಿ ಬ್ಯಾಟಿಂಗ್​ಗೆ ಬರುತ್ತಿದ್ದಂತೆ ವಿಶೇಷ ಗೌರವ ಸಲ್ಲಿಸಲು ಆರ್​ಸಿಬಿ ಫ್ಯಾನ್ಸ್ ನಿರ್ಧರಿಸಿದ್ದರು.

ಆದರೆ ವಿಧಿಯಾಟ, ಮಳೆಯ ಕಾರಣ  ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಡುವಣ ಪಂದ್ಯವು ರದ್ದಾಯಿತು. ಇಲ್ಲದಿದ್ದರೆ, ಕಿಂಗ್ ಕೊಹ್ಲಿ ಬ್ಯಾಟಿಂಗ್​ಗೆ ಬರುತ್ತಿದ್ದಂತೆ ವಿಶೇಷ ಗೌರವ ಸಲ್ಲಿಸಲು ಆರ್​ಸಿಬಿ ಫ್ಯಾನ್ಸ್ ನಿರ್ಧರಿಸಿದ್ದರು.

3 / 5
ಇತ್ತ ಆರ್​ಸಿಬಿ ಫ್ರಾಂಚೈಸಿ ಕೂಡ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತರಾಗಿರುವ ವಿರಾಟ್ ಕೊಹ್ಲಿಗೆ ವಿಶೇಷ ಗೌರವ ಸಲ್ಲಿಸಲು ಯೋಜನೆ ಹಾಕಿಕೊಂಡಿದ್ದರು. ಆದರೆ ಮಳೆಯಿಂದಾಗಿ ಎಲ್ಲವೂ ಹಾಳಾಯಿತು ಎನ್ನಬಹುದು. ಇದಾಗ್ಯೂ ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಸಹ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ.

ಇತ್ತ ಆರ್​ಸಿಬಿ ಫ್ರಾಂಚೈಸಿ ಕೂಡ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತರಾಗಿರುವ ವಿರಾಟ್ ಕೊಹ್ಲಿಗೆ ವಿಶೇಷ ಗೌರವ ಸಲ್ಲಿಸಲು ಯೋಜನೆ ಹಾಕಿಕೊಂಡಿದ್ದರು. ಆದರೆ ಮಳೆಯಿಂದಾಗಿ ಎಲ್ಲವೂ ಹಾಳಾಯಿತು ಎನ್ನಬಹುದು. ಇದಾಗ್ಯೂ ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಸಹ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ.

4 / 5
ಮೇ 23 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ವೇಳೆ ಆರ್​ಸಿಬಿ ಅಭಿಮಾನಿಗಳು ಕಿಂಗ್ ಕೊಹ್ಲಿಗೆ ಟೆಸ್ಟ್ ಬೀಳ್ಕೊಡುಗೆ ನೀಡಲು ಮತ್ತೆ ವೈಟ್ ಜೆರ್ಸಿಯಲ್ಲಿ ಆಗಮಿಸುವ ಸಾಧ್ಯತೆಯಿದೆ. ಅಲ್ಲದೆ ಆರ್​ಸಿಬಿ ಕಡೆಯಿಂದಲೂ ವಿರಾಟ್ ಕೊಹ್ಲಿಗೆ ವಿಶೇಷ ಗೌರವ ಸಿಗಲಿದೆ.

ಮೇ 23 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ವೇಳೆ ಆರ್​ಸಿಬಿ ಅಭಿಮಾನಿಗಳು ಕಿಂಗ್ ಕೊಹ್ಲಿಗೆ ಟೆಸ್ಟ್ ಬೀಳ್ಕೊಡುಗೆ ನೀಡಲು ಮತ್ತೆ ವೈಟ್ ಜೆರ್ಸಿಯಲ್ಲಿ ಆಗಮಿಸುವ ಸಾಧ್ಯತೆಯಿದೆ. ಅಲ್ಲದೆ ಆರ್​ಸಿಬಿ ಕಡೆಯಿಂದಲೂ ವಿರಾಟ್ ಕೊಹ್ಲಿಗೆ ವಿಶೇಷ ಗೌರವ ಸಿಗಲಿದೆ.

5 / 5

Published On - 7:36 am, Sun, 18 May 25

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ