AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿಗೆ ಗಾಯ: ಬಿಗ್ ಅಪ್​ಡೇಟ್ ನೀಡಿದ RCB ಕೋಚ್

IPL 2025 RCB vs GT: ಐಪಿಎಲ್​ನ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 169 ರನ್​ಗಳಿಸಿದರೆ, ಈ ಗುರಿಯನ್ನು ಗುಜರಾತ್ ಟೈಟಾನ್ಸ್ ಕೇವಲ 17.5 ಓವರ್​ಗಳಲ್ಲಿ ಬೆನ್ನತ್ತಿ ಗೆದ್ದಿದೆ. ಇನ್ನು ಈ ಪಂದ್ಯದ ಫೀಲ್ಡಿಂಗ್ ವೇಳೆ ವಿರಾಟ್ ಕೊಹ್ಲಿ ಗಾಯಗೊಂಡಿದ್ದರು. ಇದೀಗ ಕೊಹ್ಲಿಯ ಗಾಯದ ಬಗ್ಗೆ ಬಿಗ್ ಅಪ್​ಡೇಟ್ ಹೊರಬಿದ್ದಿದೆ.

ಝಾಹಿರ್ ಯೂಸುಫ್
|

Updated on: Apr 03, 2025 | 1:54 PM

Share
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಐಪಿಎಲ್​ನ 14ನೇ ಪಂದ್ಯದ ವೇಳೆ ಗಾಯಗೊಂಡಿದ್ದರು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಫೀಲ್ಡಿಂಗ್ ವೇಳೆ ಕೊಹ್ಲಿಯ ಕೈಗೆ ಗಾಯವಾಗಿತ್ತು.

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಐಪಿಎಲ್​ನ 14ನೇ ಪಂದ್ಯದ ವೇಳೆ ಗಾಯಗೊಂಡಿದ್ದರು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಫೀಲ್ಡಿಂಗ್ ವೇಳೆ ಕೊಹ್ಲಿಯ ಕೈಗೆ ಗಾಯವಾಗಿತ್ತು.

1 / 5
ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಡೀಪ್ ಮಿಡ್​ ವಿಕೆಟ್​ನತ್ತ ಬಾರಿಸಿದ ಚೆಂಡನ್ನು ಹಿಡಿಯುವ ಯತ್ನದಲ್ಲಿ ಕೊಹ್ಲಿಯ ಹೆಬ್ಬರಳಿನ ಭಾಗಕ್ಕೆ ಗಾಯವಾಗಿದೆ. ಅತ್ತ ಚೆಂಡು ತಾಗುತ್ತಿದ್ದಂತೆ ಕೊಹ್ಲಿ ನೋವಿನಿಂದ ಕುಸಿದು ಕೂತಿದ್ದರು. ಈ ಗಾಯದ ಕಾರಣ ವಿರಾಟ್ ಕೊಹ್ಲಿ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿತ್ತು.

ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಡೀಪ್ ಮಿಡ್​ ವಿಕೆಟ್​ನತ್ತ ಬಾರಿಸಿದ ಚೆಂಡನ್ನು ಹಿಡಿಯುವ ಯತ್ನದಲ್ಲಿ ಕೊಹ್ಲಿಯ ಹೆಬ್ಬರಳಿನ ಭಾಗಕ್ಕೆ ಗಾಯವಾಗಿದೆ. ಅತ್ತ ಚೆಂಡು ತಾಗುತ್ತಿದ್ದಂತೆ ಕೊಹ್ಲಿ ನೋವಿನಿಂದ ಕುಸಿದು ಕೂತಿದ್ದರು. ಈ ಗಾಯದ ಕಾರಣ ವಿರಾಟ್ ಕೊಹ್ಲಿ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿತ್ತು.

2 / 5
ಇದೀಗ ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಆರ್​ಸಿಬಿ ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಮಾಹಿತಿ ನೀಡಿದ್ದಾರೆ. ಕೊಹ್ಲಿಗೆ ಉಂಟಾಗಿರುವ ಗಾಯವು ಗಂಭೀರವೇನಲ್ಲ. ಅಲ್ಲದೆ ಅವರು ಫೈನ್ ಆಗಿದ್ದು, ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇದೀಗ ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಆರ್​ಸಿಬಿ ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಮಾಹಿತಿ ನೀಡಿದ್ದಾರೆ. ಕೊಹ್ಲಿಗೆ ಉಂಟಾಗಿರುವ ಗಾಯವು ಗಂಭೀರವೇನಲ್ಲ. ಅಲ್ಲದೆ ಅವರು ಫೈನ್ ಆಗಿದ್ದು, ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

3 / 5
ಹೀಗಾಗಿ ಏಪ್ರಿಲ್ 7 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಈ ಪಂದ್ಯಕ್ಕೆ ಇನ್ನೂ ಮೂರು ದಿನಗಳ ಕಾಲಾವಕಾಶವಿದ್ದು, ಅದರೊಳಗೆ ಅವರ ಬೆರಳಿನ ಗಾಯವು ಸಂಪೂರ್ಣ ಗುಣಮುಖವಾಗುವ ನಿರೀಕ್ಷೆಯಿದೆ.

ಹೀಗಾಗಿ ಏಪ್ರಿಲ್ 7 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಈ ಪಂದ್ಯಕ್ಕೆ ಇನ್ನೂ ಮೂರು ದಿನಗಳ ಕಾಲಾವಕಾಶವಿದ್ದು, ಅದರೊಳಗೆ ಅವರ ಬೆರಳಿನ ಗಾಯವು ಸಂಪೂರ್ಣ ಗುಣಮುಖವಾಗುವ ನಿರೀಕ್ಷೆಯಿದೆ.

4 / 5
ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಮೂರು ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು 2 ಜಯ ಹಾಗೂ ಒಂದು ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಬಗ್ಗು ಬಡಿದಿದ್ದ ಆರ್​ಸಿಬಿ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ಗೆ ಮಣ್ಣು ಮುಕ್ಕಿಸಿತ್ತು. ಆದರೆ ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿ ನಿರಾಸೆ ಮೂಡಿಸಿದೆ. ಇದಾಗ್ಯೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಮೂಲಕ ಆರ್​ಸಿಬಿ ಮತ್ತೆ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ.

ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಮೂರು ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು 2 ಜಯ ಹಾಗೂ ಒಂದು ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಬಗ್ಗು ಬಡಿದಿದ್ದ ಆರ್​ಸಿಬಿ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ಗೆ ಮಣ್ಣು ಮುಕ್ಕಿಸಿತ್ತು. ಆದರೆ ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿ ನಿರಾಸೆ ಮೂಡಿಸಿದೆ. ಇದಾಗ್ಯೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಮೂಲಕ ಆರ್​ಸಿಬಿ ಮತ್ತೆ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ.

5 / 5
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ