IPL 2025: ಅಣ್ಣಾ ಬಿಟ್ ಬಿಡಣ್ಣ… RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

Updated on: Apr 26, 2025 | 9:04 AM

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 9 ಪಂದ್ಯಗಳನ್ನಾಡಿದೆ. ಈ 9 ಮ್ಯಾಚ್​ಗಳಲ್ಲಿ 6 ಗೆಲುವು ದಾಖಲಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನುಳಿದ 5 ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸಿದರೆ, ಆರ್​ಸಿಬಿ ಪ್ಲೇಆಫ್​ಗೇರಲಿದೆ.

1 / 6
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರೋಚಕ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಆರ್​ಸಿಬಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 205 ರನ್ ಕಲೆಹಾಕಿತ್ತು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರೋಚಕ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಆರ್​ಸಿಬಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 205 ರನ್ ಕಲೆಹಾಕಿತ್ತು.

2 / 6
ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವನ್ನು 194 ರನ್​ಗಳಿಗೆ ನಿಯಂತ್ರಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಈ ಮೂಲಕ ಆರ್​ಸಿಬಿ ಪಡೆ 11 ರನ್​ಗಳ ರೋಚಕ ಗೆಲುವು ದಾಖಲಿಸಿದೆ. ಈ ಗೆಲುವಿನ ಹೊರತಾಗಿಯೂ ಆರ್​ಸಿಬಿ ತಂಡದಲ್ಲಿ ಎಲ್ಲವೂ ಸರಿಯಿಲ್ವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವನ್ನು 194 ರನ್​ಗಳಿಗೆ ನಿಯಂತ್ರಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಈ ಮೂಲಕ ಆರ್​ಸಿಬಿ ಪಡೆ 11 ರನ್​ಗಳ ರೋಚಕ ಗೆಲುವು ದಾಖಲಿಸಿದೆ. ಈ ಗೆಲುವಿನ ಹೊರತಾಗಿಯೂ ಆರ್​ಸಿಬಿ ತಂಡದಲ್ಲಿ ಎಲ್ಲವೂ ಸರಿಯಿಲ್ವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

3 / 6
ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಂದ್ಯದ ನಡುವೆ ವಿರಾಟ್ ಕೊಹ್ಲಿ ನೀಡಿದ ರಿಯಾಕ್ಷನ್. ಅತ್ಯುತ್ತಮ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದ ನಡುವೆ ಆರ್​ಸಿಬಿ ತಂಡದ ಮೆಂಟರ್ ದಿನೇಶ್ ಕಾರ್ತಿಕ್ ಹಾಗೂ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ವಿರಾಟ್ ಕೊಹ್ಲಿಯೊಂದಿಗೆ ಬೌಂಡರಿ ಲೈನ್​ನಲ್ಲಿ ನಿಂತು ಚರ್ಚಿಸಿದ್ದರು.

ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಂದ್ಯದ ನಡುವೆ ವಿರಾಟ್ ಕೊಹ್ಲಿ ನೀಡಿದ ರಿಯಾಕ್ಷನ್. ಅತ್ಯುತ್ತಮ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದ ನಡುವೆ ಆರ್​ಸಿಬಿ ತಂಡದ ಮೆಂಟರ್ ದಿನೇಶ್ ಕಾರ್ತಿಕ್ ಹಾಗೂ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ವಿರಾಟ್ ಕೊಹ್ಲಿಯೊಂದಿಗೆ ಬೌಂಡರಿ ಲೈನ್​ನಲ್ಲಿ ನಿಂತು ಚರ್ಚಿಸಿದ್ದರು.

4 / 6
ಈ ವೇಳೆ ದಿನೇಶ್ ಕಾರ್ತಿಕ್ ಕೆಲ ಸಲಹೆಗಳನ್ನು ಸಹ ನೀಡಿದ್ದಾರೆ. ಆದರೆ ಈ ಸಲಹೆಗಳ ವೇಳೆ ವಿರಾಟ್ ಕೊಹ್ಲಿ ಕೈ ಮುಗಿಯುತ್ತಿರುವುದು ಕಾಣಬಹುದು. ಮೇಲ್ನೋಟಕ್ಕೆ ನನ್ನನ್ನು ಬಿಟ್ಟು ಬಿಡು ಎಂಬಾರ್ಥದಲ್ಲಿ ಕೈ ಮುಗಿಯುತ್ತಿರುವ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವೇಳೆ ದಿನೇಶ್ ಕಾರ್ತಿಕ್ ಕೆಲ ಸಲಹೆಗಳನ್ನು ಸಹ ನೀಡಿದ್ದಾರೆ. ಆದರೆ ಈ ಸಲಹೆಗಳ ವೇಳೆ ವಿರಾಟ್ ಕೊಹ್ಲಿ ಕೈ ಮುಗಿಯುತ್ತಿರುವುದು ಕಾಣಬಹುದು. ಮೇಲ್ನೋಟಕ್ಕೆ ನನ್ನನ್ನು ಬಿಟ್ಟು ಬಿಡು ಎಂಬಾರ್ಥದಲ್ಲಿ ಕೈ ಮುಗಿಯುತ್ತಿರುವ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

5 / 6
ಇದರ ಬೆನ್ನಲ್ಲೇ ಆರ್​ಸಿಬಿ ತಂಡದಲ್ಲಿ ಎಲ್ಲವೂ ಸರಿಯಿಲ್ವಾ ಎಂಬ ಪ್ರಶ್ನೆಯೊಂದು ಮೂಡಿದೆ. ಏಕೆಂದರೆ ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ನಾಯಕ ರಜತ್ ಪಾಟಿದಾರ್ ತನ್ನ ಸಲಹೆಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂಬಾರ್ಥದಲ್ಲಿ ವಿರಾಟ್ ಕೊಹ್ಲಿ ದಿನೇಶ್ ಕಾರ್ತಿಕ್ ಬಳಿ ದೂರುತ್ತಿರುವುದು ಕಂಡು ಬಂದಿತ್ತು.

ಇದರ ಬೆನ್ನಲ್ಲೇ ಆರ್​ಸಿಬಿ ತಂಡದಲ್ಲಿ ಎಲ್ಲವೂ ಸರಿಯಿಲ್ವಾ ಎಂಬ ಪ್ರಶ್ನೆಯೊಂದು ಮೂಡಿದೆ. ಏಕೆಂದರೆ ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ನಾಯಕ ರಜತ್ ಪಾಟಿದಾರ್ ತನ್ನ ಸಲಹೆಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂಬಾರ್ಥದಲ್ಲಿ ವಿರಾಟ್ ಕೊಹ್ಲಿ ದಿನೇಶ್ ಕಾರ್ತಿಕ್ ಬಳಿ ದೂರುತ್ತಿರುವುದು ಕಂಡು ಬಂದಿತ್ತು.

6 / 6
ಇದೀಗ ಮತ್ತೊಮ್ಮೆ ಬೌಂಡರಿ ಲೈನ್​ನಲ್ಲಿ ದಿನೇಶ್ ಕಾರ್ತಿಕ್ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾಗ, ವಿರಾಟ್ ಕೊಹ್ಲಿ ಕೈ ಮುಗಿಯುತ್ತಿರುವ ಫೋಟೋಗಳು ವೈರಲ್ ಆಗಿದೆ. ಇದರ ಬೆನ್ನಲ್ಲೇ ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಹೊಂದಾಣಿಕೆ ಇಲ್ವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇದೀಗ ಮತ್ತೊಮ್ಮೆ ಬೌಂಡರಿ ಲೈನ್​ನಲ್ಲಿ ದಿನೇಶ್ ಕಾರ್ತಿಕ್ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾಗ, ವಿರಾಟ್ ಕೊಹ್ಲಿ ಕೈ ಮುಗಿಯುತ್ತಿರುವ ಫೋಟೋಗಳು ವೈರಲ್ ಆಗಿದೆ. ಇದರ ಬೆನ್ನಲ್ಲೇ ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಹೊಂದಾಣಿಕೆ ಇಲ್ವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us