AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಹೀಗೆ ಮಾಡಿದ್ರೆ CSK ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆಯಲ್ಲ..!

IPL 2025 CSK: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 13 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ ಮೂರು ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 10 ಪಂದ್ಯಗಳಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲನುಭವಿಸಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ಸಿಎಸ್​ಕೆ ತಂಡವು ಮುಂದಿನ ಪಂದ್ಯದಲ್ಲಿ ಅಮೋಘ ಗೆಲುವು ದಾಖಲಿಸಿದರೆ, ಅಂಕ ಪಟ್ಟಿಯಲ್ಲಿ ಮೇಲೇರಬಹುದು.

ಝಾಹಿರ್ ಯೂಸುಫ್
|

Updated on: May 21, 2025 | 7:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಬಹುತೇಕ ತಂಡಗಳು 12 ಪಂದ್ಯಗಳನ್ನಾಡಿದ್ದು, ಲೀಗ್​ ಹಂತದಲ್ಲಿ ಇನ್ನುಳಿದಿರುವುದು ಕೇವಲ 8 ಮ್ಯಾಚ್​ಗಳು ಮಾತ್ರ. ಈ ಎಂಟು ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಕೂಡ ಒಂದು ಪಂದ್ಯವಾಡಲಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಬಹುತೇಕ ತಂಡಗಳು 12 ಪಂದ್ಯಗಳನ್ನಾಡಿದ್ದು, ಲೀಗ್​ ಹಂತದಲ್ಲಿ ಇನ್ನುಳಿದಿರುವುದು ಕೇವಲ 8 ಮ್ಯಾಚ್​ಗಳು ಮಾತ್ರ. ಈ ಎಂಟು ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಕೂಡ ಒಂದು ಪಂದ್ಯವಾಡಲಿದೆ.

1 / 5
ಪ್ರಸ್ತುತ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ ಪಂದ್ಯದಲ್ಲಿ ಗೆದ್ದರೆ ಒಟ್ಟು 8 ಅಂಕಗಳನ್ನು ಪಡೆಯಲಿದೆ. ಇದಾಗ್ಯೂ 9ನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಿಂದಿಕ್ಕಲು ಸಾಧ್ಯವಾಗುವುದಿಲ್ಲ. ಅಂದರೆ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನ ತಪ್ಪಿಸಿಕೊಳ್ಳಲು ಸಿಎಸ್​ಕೆ ಅಮೋಘ ಗೆಲುವು ದಾಖಲಿಸಲೇಬೇಕು.

ಪ್ರಸ್ತುತ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ ಪಂದ್ಯದಲ್ಲಿ ಗೆದ್ದರೆ ಒಟ್ಟು 8 ಅಂಕಗಳನ್ನು ಪಡೆಯಲಿದೆ. ಇದಾಗ್ಯೂ 9ನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಿಂದಿಕ್ಕಲು ಸಾಧ್ಯವಾಗುವುದಿಲ್ಲ. ಅಂದರೆ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನ ತಪ್ಪಿಸಿಕೊಳ್ಳಲು ಸಿಎಸ್​ಕೆ ಅಮೋಘ ಗೆಲುವು ದಾಖಲಿಸಲೇಬೇಕು.

2 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಮೇ 25 ರಂದು ಅಮಹಾಬಾದ್​​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸಿಎಸ್​ಕೆ ತಂಡವು ಭರ್ಜರಿ ಜಯ ಸಾಧಿಸಿದರೆ ಮಾತ್ರ 9ನೇ ಸ್ಥಾನಕ್ಕೇರಬಹುದು. ಅಂದರೆ ಇಲ್ಲಿ ಸಿಎಸ್​ಕೆ ಮೊದಲು ಬ್ಯಾಟಿಂಗ್ ಮಾಡಿ 200 ರನ್ ಕಲೆಹಾಕಿದರೆ, ಕನಿಷ್ಠ 107 ರನ್​ಗಳ ಅಂತರದಿಂದ ಗೆಲ್ಲಬೇಕಾಗುತ್ತದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಮೇ 25 ರಂದು ಅಮಹಾಬಾದ್​​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸಿಎಸ್​ಕೆ ತಂಡವು ಭರ್ಜರಿ ಜಯ ಸಾಧಿಸಿದರೆ ಮಾತ್ರ 9ನೇ ಸ್ಥಾನಕ್ಕೇರಬಹುದು. ಅಂದರೆ ಇಲ್ಲಿ ಸಿಎಸ್​ಕೆ ಮೊದಲು ಬ್ಯಾಟಿಂಗ್ ಮಾಡಿ 200 ರನ್ ಕಲೆಹಾಕಿದರೆ, ಕನಿಷ್ಠ 107 ರನ್​ಗಳ ಅಂತರದಿಂದ ಗೆಲ್ಲಬೇಕಾಗುತ್ತದೆ.

3 / 5
ಇನ್ನು ಗುಜರಾತ್ ಟೈಟಾನ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 180 ರನ್​ಗಳನ್ನು ಕಲೆಹಾಕಿದರೆ, ಈ ಗುರಿಯನ್ನು ಸಿಎಸ್​ಕೆ ತಂಡವು ಕೇವಲ 8 ಓವರ್​ಗಳಲ್ಲಿ ಚೇಸ್ ಮಾಡಬೇಕು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಬಹುದು.

ಇನ್ನು ಗುಜರಾತ್ ಟೈಟಾನ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 180 ರನ್​ಗಳನ್ನು ಕಲೆಹಾಕಿದರೆ, ಈ ಗುರಿಯನ್ನು ಸಿಎಸ್​ಕೆ ತಂಡವು ಕೇವಲ 8 ಓವರ್​ಗಳಲ್ಲಿ ಚೇಸ್ ಮಾಡಬೇಕು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಬಹುದು.

4 / 5
ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಫಾರ್ಮ್​ ಗಮನಿಸಿದರೆ, ಇದು ಕಷ್ಟಸಾಧ್ಯ ಎಂದೇ ಹೇಳಬಹುದು. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಸಿಎಸ್​ಕೆ ಪಡೆಯು ಕೊನೆಯ ಸ್ಥಾನದೊಂದಿಗೆ ಟೂರ್ನಿಯನ್ನು ಅಂತ್ಯಗೊಳಿಸಲಿದೆ. ಅದು ಕೂಡ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ. ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕಳೆದ 15 ಸೀಸನ್​ಗಳಲ್ಲಿ ಒಮ್ಮೆಯೂ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿಲ್ಲ. ಆದರೆ ಈ ಬಾರಿ ಅಂತಿಮ ಸ್ಥಾನದೊಂದಿಗೆ ಹೊಸ ಇತಿಹಾಸ ಬರೆಯುವ ನಿರೀಕ್ಷೆಯಿದೆ.

ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಫಾರ್ಮ್​ ಗಮನಿಸಿದರೆ, ಇದು ಕಷ್ಟಸಾಧ್ಯ ಎಂದೇ ಹೇಳಬಹುದು. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಸಿಎಸ್​ಕೆ ಪಡೆಯು ಕೊನೆಯ ಸ್ಥಾನದೊಂದಿಗೆ ಟೂರ್ನಿಯನ್ನು ಅಂತ್ಯಗೊಳಿಸಲಿದೆ. ಅದು ಕೂಡ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ. ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕಳೆದ 15 ಸೀಸನ್​ಗಳಲ್ಲಿ ಒಮ್ಮೆಯೂ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿಲ್ಲ. ಆದರೆ ಈ ಬಾರಿ ಅಂತಿಮ ಸ್ಥಾನದೊಂದಿಗೆ ಹೊಸ ಇತಿಹಾಸ ಬರೆಯುವ ನಿರೀಕ್ಷೆಯಿದೆ.

5 / 5
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?