AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಹೀಗೆ ಮಾಡಿದ್ರೆ CSK ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆಯಲ್ಲ..!

IPL 2025 CSK: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 13 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ ಮೂರು ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 10 ಪಂದ್ಯಗಳಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲನುಭವಿಸಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ಸಿಎಸ್​ಕೆ ತಂಡವು ಮುಂದಿನ ಪಂದ್ಯದಲ್ಲಿ ಅಮೋಘ ಗೆಲುವು ದಾಖಲಿಸಿದರೆ, ಅಂಕ ಪಟ್ಟಿಯಲ್ಲಿ ಮೇಲೇರಬಹುದು.

ಝಾಹಿರ್ ಯೂಸುಫ್
|

Updated on: May 21, 2025 | 7:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಬಹುತೇಕ ತಂಡಗಳು 12 ಪಂದ್ಯಗಳನ್ನಾಡಿದ್ದು, ಲೀಗ್​ ಹಂತದಲ್ಲಿ ಇನ್ನುಳಿದಿರುವುದು ಕೇವಲ 8 ಮ್ಯಾಚ್​ಗಳು ಮಾತ್ರ. ಈ ಎಂಟು ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಕೂಡ ಒಂದು ಪಂದ್ಯವಾಡಲಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಬಹುತೇಕ ತಂಡಗಳು 12 ಪಂದ್ಯಗಳನ್ನಾಡಿದ್ದು, ಲೀಗ್​ ಹಂತದಲ್ಲಿ ಇನ್ನುಳಿದಿರುವುದು ಕೇವಲ 8 ಮ್ಯಾಚ್​ಗಳು ಮಾತ್ರ. ಈ ಎಂಟು ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಕೂಡ ಒಂದು ಪಂದ್ಯವಾಡಲಿದೆ.

1 / 5
ಪ್ರಸ್ತುತ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ ಪಂದ್ಯದಲ್ಲಿ ಗೆದ್ದರೆ ಒಟ್ಟು 8 ಅಂಕಗಳನ್ನು ಪಡೆಯಲಿದೆ. ಇದಾಗ್ಯೂ 9ನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಿಂದಿಕ್ಕಲು ಸಾಧ್ಯವಾಗುವುದಿಲ್ಲ. ಅಂದರೆ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನ ತಪ್ಪಿಸಿಕೊಳ್ಳಲು ಸಿಎಸ್​ಕೆ ಅಮೋಘ ಗೆಲುವು ದಾಖಲಿಸಲೇಬೇಕು.

ಪ್ರಸ್ತುತ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ ಪಂದ್ಯದಲ್ಲಿ ಗೆದ್ದರೆ ಒಟ್ಟು 8 ಅಂಕಗಳನ್ನು ಪಡೆಯಲಿದೆ. ಇದಾಗ್ಯೂ 9ನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಿಂದಿಕ್ಕಲು ಸಾಧ್ಯವಾಗುವುದಿಲ್ಲ. ಅಂದರೆ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನ ತಪ್ಪಿಸಿಕೊಳ್ಳಲು ಸಿಎಸ್​ಕೆ ಅಮೋಘ ಗೆಲುವು ದಾಖಲಿಸಲೇಬೇಕು.

2 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಮೇ 25 ರಂದು ಅಮಹಾಬಾದ್​​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸಿಎಸ್​ಕೆ ತಂಡವು ಭರ್ಜರಿ ಜಯ ಸಾಧಿಸಿದರೆ ಮಾತ್ರ 9ನೇ ಸ್ಥಾನಕ್ಕೇರಬಹುದು. ಅಂದರೆ ಇಲ್ಲಿ ಸಿಎಸ್​ಕೆ ಮೊದಲು ಬ್ಯಾಟಿಂಗ್ ಮಾಡಿ 200 ರನ್ ಕಲೆಹಾಕಿದರೆ, ಕನಿಷ್ಠ 107 ರನ್​ಗಳ ಅಂತರದಿಂದ ಗೆಲ್ಲಬೇಕಾಗುತ್ತದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಮೇ 25 ರಂದು ಅಮಹಾಬಾದ್​​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸಿಎಸ್​ಕೆ ತಂಡವು ಭರ್ಜರಿ ಜಯ ಸಾಧಿಸಿದರೆ ಮಾತ್ರ 9ನೇ ಸ್ಥಾನಕ್ಕೇರಬಹುದು. ಅಂದರೆ ಇಲ್ಲಿ ಸಿಎಸ್​ಕೆ ಮೊದಲು ಬ್ಯಾಟಿಂಗ್ ಮಾಡಿ 200 ರನ್ ಕಲೆಹಾಕಿದರೆ, ಕನಿಷ್ಠ 107 ರನ್​ಗಳ ಅಂತರದಿಂದ ಗೆಲ್ಲಬೇಕಾಗುತ್ತದೆ.

3 / 5
ಇನ್ನು ಗುಜರಾತ್ ಟೈಟಾನ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 180 ರನ್​ಗಳನ್ನು ಕಲೆಹಾಕಿದರೆ, ಈ ಗುರಿಯನ್ನು ಸಿಎಸ್​ಕೆ ತಂಡವು ಕೇವಲ 8 ಓವರ್​ಗಳಲ್ಲಿ ಚೇಸ್ ಮಾಡಬೇಕು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಬಹುದು.

ಇನ್ನು ಗುಜರಾತ್ ಟೈಟಾನ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 180 ರನ್​ಗಳನ್ನು ಕಲೆಹಾಕಿದರೆ, ಈ ಗುರಿಯನ್ನು ಸಿಎಸ್​ಕೆ ತಂಡವು ಕೇವಲ 8 ಓವರ್​ಗಳಲ್ಲಿ ಚೇಸ್ ಮಾಡಬೇಕು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಬಹುದು.

4 / 5
ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಫಾರ್ಮ್​ ಗಮನಿಸಿದರೆ, ಇದು ಕಷ್ಟಸಾಧ್ಯ ಎಂದೇ ಹೇಳಬಹುದು. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಸಿಎಸ್​ಕೆ ಪಡೆಯು ಕೊನೆಯ ಸ್ಥಾನದೊಂದಿಗೆ ಟೂರ್ನಿಯನ್ನು ಅಂತ್ಯಗೊಳಿಸಲಿದೆ. ಅದು ಕೂಡ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ. ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕಳೆದ 15 ಸೀಸನ್​ಗಳಲ್ಲಿ ಒಮ್ಮೆಯೂ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿಲ್ಲ. ಆದರೆ ಈ ಬಾರಿ ಅಂತಿಮ ಸ್ಥಾನದೊಂದಿಗೆ ಹೊಸ ಇತಿಹಾಸ ಬರೆಯುವ ನಿರೀಕ್ಷೆಯಿದೆ.

ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಫಾರ್ಮ್​ ಗಮನಿಸಿದರೆ, ಇದು ಕಷ್ಟಸಾಧ್ಯ ಎಂದೇ ಹೇಳಬಹುದು. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಸಿಎಸ್​ಕೆ ಪಡೆಯು ಕೊನೆಯ ಸ್ಥಾನದೊಂದಿಗೆ ಟೂರ್ನಿಯನ್ನು ಅಂತ್ಯಗೊಳಿಸಲಿದೆ. ಅದು ಕೂಡ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ. ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕಳೆದ 15 ಸೀಸನ್​ಗಳಲ್ಲಿ ಒಮ್ಮೆಯೂ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿಲ್ಲ. ಆದರೆ ಈ ಬಾರಿ ಅಂತಿಮ ಸ್ಥಾನದೊಂದಿಗೆ ಹೊಸ ಇತಿಹಾಸ ಬರೆಯುವ ನಿರೀಕ್ಷೆಯಿದೆ.

5 / 5
Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!