AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 4+2… ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

IPL 2025 RCB Playoffs Scenarios: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್​ಗಳಲ್ಲಿ 5 ಗೆಲುವು ದಾಖಲಿಸಿದೆ. ಇನ್ನುಳಿದಿರುವುದು ಕೇವಲ 6 ಪಂದ್ಯಗಳು ಮಾತ್ರ. ಈ ಆರು ಮ್ಯಾಚ್​ಗಳಲ್ಲಿ 4 ಪಂದ್ಯಗಳನ್ನು ತವರಿನಲ್ಲಿ ಆಡಿದರೆ, ಇನ್ನೆರಡು ಪಂದ್ಯಗಳನ್ನು ದೆಹಲಿ ಮತ್ತು ಲಕ್ನೋದಲ್ಲಿ ಆಡಲಿದೆ.

ಝಾಹಿರ್ ಯೂಸುಫ್
|

Updated on:Apr 22, 2025 | 11:54 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18ರ ಮೊದಲಾರ್ಧ ಮುಗಿದು ದ್ವಿತೀಯಾರ್ಧದ ಪಂದ್ಯಗಳು ಶುರುವಾಗಿದೆ. ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18ರ ಮೊದಲಾರ್ಧ ಮುಗಿದು ದ್ವಿತೀಯಾರ್ಧದ ಪಂದ್ಯಗಳು ಶುರುವಾಗಿದೆ. ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ.

1 / 6
ಸದ್ಯ ಮೂರನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಂದಿನ 6 ಪಂದ್ಯಗಳು ಬಹಳ ಮುಖ್ಯ. ಏಕೆಂದರೆ ಈ ಆರು ಮ್ಯಾಚ್​ಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಆರ್​ಸಿಬಿ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಸಾಮಾನ್ಯವಾಗಿ ಪ್ಲೇಆಫ್​ ಪ್ರವೇಶಿಸಲು 16 ಅಂಕಗಳನ್ನು ಪಡೆದರೆ ಸಾಕು.

ಸದ್ಯ ಮೂರನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಂದಿನ 6 ಪಂದ್ಯಗಳು ಬಹಳ ಮುಖ್ಯ. ಏಕೆಂದರೆ ಈ ಆರು ಮ್ಯಾಚ್​ಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಆರ್​ಸಿಬಿ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಸಾಮಾನ್ಯವಾಗಿ ಪ್ಲೇಆಫ್​ ಪ್ರವೇಶಿಸಲು 16 ಅಂಕಗಳನ್ನು ಪಡೆದರೆ ಸಾಕು.

2 / 6
ಇದೀಗ ಆರ್​ಸಿಬಿ ತಂಡವು ಒಟ್ಟು 10 ಅಂಕಗಳನ್ನು ಹೊಂದಿದೆ. ಇನ್ನುಳಿದ 6 ಮ್ಯಾಚ್​ಗಳಲ್ಲಿ 3 ರಲ್ಲಿ ಗೆದ್ದರೆ 16 ಅಂಕಗಳು ಆಗಲಿದೆ. ಆದರೆ ಆರ್​ಸಿಬಿ ತಂಡವು ಮುಂದಿನ 6 ಪಂದ್ಯಗಳಲ್ಲಿ 4 ಮ್ಯಾಚ್​ಗಳನ್ನು ತವರಿನಲ್ಲಿ ಆಡಬೇಕಿದೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ಈವರೆಗೆ ಒಂದೇ ಒಂದು ಪಂದ್ಯ ಗೆದ್ದಿಲ್ಲ ಎಂಬುದು.

ಇದೀಗ ಆರ್​ಸಿಬಿ ತಂಡವು ಒಟ್ಟು 10 ಅಂಕಗಳನ್ನು ಹೊಂದಿದೆ. ಇನ್ನುಳಿದ 6 ಮ್ಯಾಚ್​ಗಳಲ್ಲಿ 3 ರಲ್ಲಿ ಗೆದ್ದರೆ 16 ಅಂಕಗಳು ಆಗಲಿದೆ. ಆದರೆ ಆರ್​ಸಿಬಿ ತಂಡವು ಮುಂದಿನ 6 ಪಂದ್ಯಗಳಲ್ಲಿ 4 ಮ್ಯಾಚ್​ಗಳನ್ನು ತವರಿನಲ್ಲಿ ಆಡಬೇಕಿದೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ಈವರೆಗೆ ಒಂದೇ ಒಂದು ಪಂದ್ಯ ಗೆದ್ದಿಲ್ಲ ಎಂಬುದು.

3 / 6
ಈ ಬಾರಿ ತವರಿನಲ್ಲಿ ಆಡಿದ 3 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಸೋಲನುಭವಿಸಿದೆ. ಇದಾಗ್ಯೂ ಎದುರಾಳಿಗಳ ತವರು ಮೈದಾನದಲ್ಲಿ 5 ಗೆಲುವು ದಾಖಲಿಸಿ 10 ಪಾಯಿಂಟ್ಸ್​ಗಳನ್ನು ಕೆಲೆಹಾಕಿರುವುದು ವಿಶೇಷ. ಇದೀಗ 4+2 ಪಂದ್ಯಗಳನ್ನು ಆಡಬೇಕಿರುವ ಆರ್​ಸಿಬಿಗೆ ತವರಿನಲ್ಲಿ ನಡೆಯಲಿರುವ ಪಂದ್ಯಗಳೇ ನಿರ್ಣಾಯಕ.

ಈ ಬಾರಿ ತವರಿನಲ್ಲಿ ಆಡಿದ 3 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಸೋಲನುಭವಿಸಿದೆ. ಇದಾಗ್ಯೂ ಎದುರಾಳಿಗಳ ತವರು ಮೈದಾನದಲ್ಲಿ 5 ಗೆಲುವು ದಾಖಲಿಸಿ 10 ಪಾಯಿಂಟ್ಸ್​ಗಳನ್ನು ಕೆಲೆಹಾಕಿರುವುದು ವಿಶೇಷ. ಇದೀಗ 4+2 ಪಂದ್ಯಗಳನ್ನು ಆಡಬೇಕಿರುವ ಆರ್​ಸಿಬಿಗೆ ತವರಿನಲ್ಲಿ ನಡೆಯಲಿರುವ ಪಂದ್ಯಗಳೇ ನಿರ್ಣಾಯಕ.

4 / 6
ಅಂದರೆ ತವರು ಮೈದಾನದಲ್ಲಿ ಆರ್​ಸಿಬಿ ಆಡಲಿರುವ 4 ಮ್ಯಾಚ್​ಗಳಲ್ಲಿ ಕನಿಷ್ಠ 2 ಗೆಲುವು ಅತ್ಯವಶ್ಯಕ. ಇನ್ನುಳಿದ 2 ಪಂದ್ಯಗಳಲ್ಲಿ 1 ಗೆಲುವು ದಾಖಲಿಸಿದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 16 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಆರ್​ಸಿಬಿ ಪ್ಲೇಆಫ್ ಹಂತಕ್ಕೇರಬಹುದು.

ಅಂದರೆ ತವರು ಮೈದಾನದಲ್ಲಿ ಆರ್​ಸಿಬಿ ಆಡಲಿರುವ 4 ಮ್ಯಾಚ್​ಗಳಲ್ಲಿ ಕನಿಷ್ಠ 2 ಗೆಲುವು ಅತ್ಯವಶ್ಯಕ. ಇನ್ನುಳಿದ 2 ಪಂದ್ಯಗಳಲ್ಲಿ 1 ಗೆಲುವು ದಾಖಲಿಸಿದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 16 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಆರ್​ಸಿಬಿ ಪ್ಲೇಆಫ್ ಹಂತಕ್ಕೇರಬಹುದು.

5 / 6
ಇನ್ನು ಆರ್​ಸಿಬಿ ತಂಡದ ಮುಂದಿನ ಎದುರಾಳಿಗಳು ಯಾರೆಂದು ನೋಡುವುದಾದರೆ.... ರಾಜಸ್ಥಾನ್ ರಾಯಲ್ಸ್ (ಬೆಂಗಳೂರಿನಲ್ಲಿ ಪಂದ್ಯ), ಡೆಲ್ಲಿ ಕ್ಯಾಪಿಟಲ್ಸ್ (ದೆಹಲಿಯಲ್ಲಿ ಪಂದ್ಯ), ಚೆನ್ನೈ ಸೂಪರ್ ಕಿಂಗ್ಸ್ (ಬೆಂಗಳೂರಿನಲ್ಲಿ ಪಂದ್ಯ), ಲಕ್ನೋ ಸೂಪರ್ ಜೈಂಟ್ಸ್ (ಲಕ್ನೋನಲ್ಲಿ ಪಂದ್ಯ), ಸನ್​ರೈಸರ್ಸ್ ಹೈದರಾಬಾದ್ (ಬೆಂಗಳೂರಿನಲ್ಲಿ ಪಂದ್ಯ), ಕೊಲ್ಕತ್ತಾ ನೈಟ್ ರೈಡರ್ಸ್ (ಬೆಂಗಳೂರಿನಲ್ಲಿ ಪಂದ್ಯ). ಈ ಮ್ಯಾಚ್​ಗಳ ಮೂಲಕ ಆರ್​ಸಿಬಿ ತಂಡದ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ.

ಇನ್ನು ಆರ್​ಸಿಬಿ ತಂಡದ ಮುಂದಿನ ಎದುರಾಳಿಗಳು ಯಾರೆಂದು ನೋಡುವುದಾದರೆ.... ರಾಜಸ್ಥಾನ್ ರಾಯಲ್ಸ್ (ಬೆಂಗಳೂರಿನಲ್ಲಿ ಪಂದ್ಯ), ಡೆಲ್ಲಿ ಕ್ಯಾಪಿಟಲ್ಸ್ (ದೆಹಲಿಯಲ್ಲಿ ಪಂದ್ಯ), ಚೆನ್ನೈ ಸೂಪರ್ ಕಿಂಗ್ಸ್ (ಬೆಂಗಳೂರಿನಲ್ಲಿ ಪಂದ್ಯ), ಲಕ್ನೋ ಸೂಪರ್ ಜೈಂಟ್ಸ್ (ಲಕ್ನೋನಲ್ಲಿ ಪಂದ್ಯ), ಸನ್​ರೈಸರ್ಸ್ ಹೈದರಾಬಾದ್ (ಬೆಂಗಳೂರಿನಲ್ಲಿ ಪಂದ್ಯ), ಕೊಲ್ಕತ್ತಾ ನೈಟ್ ರೈಡರ್ಸ್ (ಬೆಂಗಳೂರಿನಲ್ಲಿ ಪಂದ್ಯ). ಈ ಮ್ಯಾಚ್​ಗಳ ಮೂಲಕ ಆರ್​ಸಿಬಿ ತಂಡದ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ.

6 / 6

Published On - 11:54 am, Tue, 22 April 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ