AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ನಿಂದ ಬಾಂಗ್ಲಾದೇಶ್ ಆಟಗಾರನಿಗೆ ಗೇಟ್ ಪಾಸ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬಲಿಷ್ಠ ಪಡೆಯನ್ನು ರೂಪಿಸಿದೆ. 25 ಆಟಗಾರರನ್ನು ಒಳಗೊಂಡಿದ್ದ ಕೆಕೆಆರ್ ತಂಡದಿಂದ ಬಾಂಗ್ಲಾದೇಶ್ ತಂಡದ ಆಟಗಾರನನ್ನು ಕೈ ಬಿಡುವಂತೆ ಬಿಸಿಸಿಐ ಸೂಚಿಸಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಬಾಂಗ್ಲಾ ವೇಗಿ ಮುಸ್ತಫಿಝುರ್ ರೆಹಮಾನ್ ಕೆಕೆಆರ್ ಪರ ಕಣಕ್ಕಿಳಿಯುವುದಿಲ್ಲ.

ಝಾಹಿರ್ ಯೂಸುಫ್
|

Updated on: Jan 03, 2026 | 1:08 PM

Share
IPL 2026: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ಬಾಂಗ್ಲಾದೇಶ್ ತಂಡದ 7 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದರು. ಈ ಏಳು ಆಟಗಾರರಲ್ಲಿ ಹರಾಜಾಗಿದ್ದು ಎಡಗೈ ವೇಗಿ ಮುಸ್ತಫಿಝುರ್ ರೆಹಮಾನ್ (Mustafizur Rahman) ಮಾತ್ರ.

IPL 2026: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ಬಾಂಗ್ಲಾದೇಶ್ ತಂಡದ 7 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದರು. ಈ ಏಳು ಆಟಗಾರರಲ್ಲಿ ಹರಾಜಾಗಿದ್ದು ಎಡಗೈ ವೇಗಿ ಮುಸ್ತಫಿಝುರ್ ರೆಹಮಾನ್ (Mustafizur Rahman) ಮಾತ್ರ.

1 / 5
2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮುಸ್ತಫಿಝುರ್ ರೆಹಮಾನ್ ಅವರ ಖರೀದಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಪರಿಣಾಮ ಕೆಲವೇ ಕ್ಷಣಗಳಲ್ಲಿ ಅವರ ಮೊತ್ತ 5 ಕೋಟಿಯನ್ನು ದಾಟಿತ್ತು.

2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮುಸ್ತಫಿಝುರ್ ರೆಹಮಾನ್ ಅವರ ಖರೀದಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಪರಿಣಾಮ ಕೆಲವೇ ಕ್ಷಣಗಳಲ್ಲಿ ಅವರ ಮೊತ್ತ 5 ಕೋಟಿಯನ್ನು ದಾಟಿತ್ತು.

2 / 5
ಅಂತಿಮವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು 9.2 ಕೋಟಿ ರೂ. ನೀಡುವ ಮೂಲಕ ಮುಸ್ತಫಿಝುರ್ ರೆಹಮಾನ್ ಅವರನ್ನು ಖರೀದಿಸಿದ್ದರು. ಇದೀಗ ಕೋಟಿ ಮೊತ್ತ ನೀಡಿ ಖರೀದಿಸಿದ ಬಾಂಗ್ಲಾದೇಶ್ ಆಟಗಾರನನ್ನು ತಂಡದಿಂದ ಕೈ ಬಿಡುವಂತೆ ಬಿಸಿಸಿಐ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ಸೂಚಿಸಿದೆ.

ಅಂತಿಮವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು 9.2 ಕೋಟಿ ರೂ. ನೀಡುವ ಮೂಲಕ ಮುಸ್ತಫಿಝುರ್ ರೆಹಮಾನ್ ಅವರನ್ನು ಖರೀದಿಸಿದ್ದರು. ಇದೀಗ ಕೋಟಿ ಮೊತ್ತ ನೀಡಿ ಖರೀದಿಸಿದ ಬಾಂಗ್ಲಾದೇಶ್ ಆಟಗಾರನನ್ನು ತಂಡದಿಂದ ಕೈ ಬಿಡುವಂತೆ ಬಿಸಿಸಿಐ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ಸೂಚಿಸಿದೆ.

3 / 5
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ರಾಜತಾಂತ್ರಿಕ ಸಂಬಂಧಗಳು ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದ್ದು, ಈ ಬಗ್ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ತಿಳಿಸಲಾಗಿದೆ. ಹೀಗಾಗಿ ಮುಂಬರುವ ಐಪಿಎಲ್​ನಲ್ಲಿ ಬಾಂಗ್ಲಾ ವೇಗಿ ಮುಸ್ತಫಿಝುರ್ ರೆಹಮಾನ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ರಾಜತಾಂತ್ರಿಕ ಸಂಬಂಧಗಳು ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದ್ದು, ಈ ಬಗ್ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ತಿಳಿಸಲಾಗಿದೆ. ಹೀಗಾಗಿ ಮುಂಬರುವ ಐಪಿಎಲ್​ನಲ್ಲಿ ಬಾಂಗ್ಲಾ ವೇಗಿ ಮುಸ್ತಫಿಝುರ್ ರೆಹಮಾನ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

4 / 5
ಇತ್ತ ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಟ್ಟು ಬದಲಿ ಆಟಗಾರನನ್ನು ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿಯ ಹರಾಜಿನಲ್ಲಿ ಮಾರಾಟವಾಗದೇ ಉಳಿದಿರುವ ಯಾವುದಾದರೂ ವಿದೇಶಿ ಆಟಗಾರನನ್ನು ಆಯ್ಕೆ ಮಾಡುವ ಅವಕಾಶವನ್ನು ಪಡೆಯಲಿದ್ದಾರೆ.

ಇತ್ತ ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಟ್ಟು ಬದಲಿ ಆಟಗಾರನನ್ನು ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿಯ ಹರಾಜಿನಲ್ಲಿ ಮಾರಾಟವಾಗದೇ ಉಳಿದಿರುವ ಯಾವುದಾದರೂ ವಿದೇಶಿ ಆಟಗಾರನನ್ನು ಆಯ್ಕೆ ಮಾಡುವ ಅವಕಾಶವನ್ನು ಪಡೆಯಲಿದ್ದಾರೆ.

5 / 5
Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ