AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH ತಂಡ ಗೆದ್ದರೆ ಎರಡು ತಂಡಗಳು ಪ್ಲೇಆಫ್​ಗೆ ಎಂಟ್ರಿ..!

IPL 2026 CSK vs SRH: ಇಂಡಿಯನ್ ಪ್ರೀಮಿಯರ್ ಲೀಗ್​ನ 63ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ SRH ಗೆದ್ದರೆ ಪ್ಲೇಆಫ್​ಗೇರುವುದು ಖಚಿತ. ಹಾಗೆಯೇ ಮತ್ತೊಂದು ತಂಡ ಕೂಡ ಪ್ಲೇಆಫ್​ಗೆ ಪ್ರವೇಶಿಸಲಿದೆ.

ಝಾಹಿರ್ ಯೂಸುಫ್
|

Updated on:May 18, 2026 | 12:54 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಡಿಫೆಂಡಿಂಗ್ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 18 ಅಂಕಗಳೊಂದಿಗೆ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನುಳಿದ ಮೂರು ಸ್ಥಾನಗಳಿಗಾಗಿ ಸನ್​ರೈಸರ್ಸ್ ಹೈದರಾಬಾದ್, ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ನಡುವೆ ನೇರ ಹಣಾಹಣಿ ಇದೆ. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಡಿಫೆಂಡಿಂಗ್ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 18 ಅಂಕಗಳೊಂದಿಗೆ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನುಳಿದ ಮೂರು ಸ್ಥಾನಗಳಿಗಾಗಿ ಸನ್​ರೈಸರ್ಸ್ ಹೈದರಾಬಾದ್, ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ನಡುವೆ ನೇರ ಹಣಾಹಣಿ ಇದೆ. (PC: IPL)

1 / 5
ಆದರೆ ಇಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಪಂದ್ಯವು ಇಡೀ ಟೂರ್ನಿಯ ಚಿತ್ರಣವನ್ನೇ ಬದಲಿಸಲಿದೆ. ಏಕೆಂದರೆ ಈ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡ ಗೆದ್ದರೆ ಅತ್ಯುತ್ತಮ ನೆಟ್ ರನ್ ರೇಟ್​ನೊಂದಿಗೆ ಪ್ಲೇಆಫ್​ಗೇರುವುದು ಕನ್ಫರ್ಮ್ ಆಗಲಿದೆ. (PC: IPL)

ಆದರೆ ಇಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಪಂದ್ಯವು ಇಡೀ ಟೂರ್ನಿಯ ಚಿತ್ರಣವನ್ನೇ ಬದಲಿಸಲಿದೆ. ಏಕೆಂದರೆ ಈ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡ ಗೆದ್ದರೆ ಅತ್ಯುತ್ತಮ ನೆಟ್ ರನ್ ರೇಟ್​ನೊಂದಿಗೆ ಪ್ಲೇಆಫ್​ಗೇರುವುದು ಕನ್ಫರ್ಮ್ ಆಗಲಿದೆ. (PC: IPL)

2 / 5
ಸನ್‌ರೈಸರ್ಸ್ ಹೈದರಾಬಾದ್ ಎಂಟ್ರಿ: CSK ವಿರುದ್ಧ SRH ಗೆದ್ದರೆ ಅದರ ಒಟ್ಟು ಅಂಕಗಳು 16ಕ್ಕೆ ಏರುತ್ತವೆ. ಪ್ರಸ್ತುತ ಸನ್​ರೈಸರ್ಸ್​ ಹೈದರಾಬಾದ್​ ತಂಡವು +0.331ರಷ್ಟು ಅತ್ಯುತ್ತಮ ನೆಟ್ ರನ್ ರೇಟ್ (NRR) ಹೊಂದಿದೆ. ಹೀಗಾಗಿ 16 ಅಂಕ ತಲುಪುತ್ತಿದ್ದಂತೆ, SRH ತಂಡಕ್ಕೆ ಪ್ಲೇಆಫ್ ಟಿಕೆಟ್ ಖಚಿತಪಡಿಸುತ್ತದೆ. (PC: IPL)

ಸನ್‌ರೈಸರ್ಸ್ ಹೈದರಾಬಾದ್ ಎಂಟ್ರಿ: CSK ವಿರುದ್ಧ SRH ಗೆದ್ದರೆ ಅದರ ಒಟ್ಟು ಅಂಕಗಳು 16ಕ್ಕೆ ಏರುತ್ತವೆ. ಪ್ರಸ್ತುತ ಸನ್​ರೈಸರ್ಸ್​ ಹೈದರಾಬಾದ್​ ತಂಡವು +0.331ರಷ್ಟು ಅತ್ಯುತ್ತಮ ನೆಟ್ ರನ್ ರೇಟ್ (NRR) ಹೊಂದಿದೆ. ಹೀಗಾಗಿ 16 ಅಂಕ ತಲುಪುತ್ತಿದ್ದಂತೆ, SRH ತಂಡಕ್ಕೆ ಪ್ಲೇಆಫ್ ಟಿಕೆಟ್ ಖಚಿತಪಡಿಸುತ್ತದೆ. (PC: IPL)

3 / 5
 ಗುಜರಾತ್ ಟೈಟಾನ್ಸ್ ನಿರಾಳ: ಗುಜರಾತ್ ಟೈಟಾನ್ಸ್​ ಈಗಾಗಲೇ 16 ಅಂಕಗಳನ್ನು ಗಳಿಸಿದ್ದರೂ ಇನ್ನೂ ಕೂಡ ಅಧಿಕೃತವಾಗಿ ಕ್ವಾಲಿಫೈ ಆಗಿಲ್ಲ. ಆದರೆ ಸಿಎಸ್​ಕೆ ವಿರುದ್ಧ ಎಸ್​ಆರ್​ಹೆಚ್ ಗೆದ್ದರೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಗರಿಷ್ಠ ಅಂಕಗಳ ಮಿತಿ 14 ರಲ್ಲೇ ಉಳಿಯಲಿದೆ. ಇದರಿಂದ ಆ ನಾಲ್ಕು ತಂಡಗಳ ಟೈ ಸಮೀಕರಣ ಧೂಳೀಪಟವಾಗಿ, ಗುಜರಾತ್ ಟೈಟಾನ್ಸ್ 16 ಅಂಕಗಳೊಂದಿಗೆ ಯಾವುದೇ ಆತಂಕವಿಲ್ಲದೆ ನೇರವಾಗಿ ಪ್ಲೇಆಫ್‌ಗೆ ಲಗ್ಗೆ ಇಡಲಿದೆ. (PC: IPL)

 ಗುಜರಾತ್ ಟೈಟಾನ್ಸ್ ನಿರಾಳ: ಗುಜರಾತ್ ಟೈಟಾನ್ಸ್​ ಈಗಾಗಲೇ 16 ಅಂಕಗಳನ್ನು ಗಳಿಸಿದ್ದರೂ ಇನ್ನೂ ಕೂಡ ಅಧಿಕೃತವಾಗಿ ಕ್ವಾಲಿಫೈ ಆಗಿಲ್ಲ. ಆದರೆ ಸಿಎಸ್​ಕೆ ವಿರುದ್ಧ ಎಸ್​ಆರ್​ಹೆಚ್ ಗೆದ್ದರೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಗರಿಷ್ಠ ಅಂಕಗಳ ಮಿತಿ 14 ರಲ್ಲೇ ಉಳಿಯಲಿದೆ. ಇದರಿಂದ ಆ ನಾಲ್ಕು ತಂಡಗಳ ಟೈ ಸಮೀಕರಣ ಧೂಳೀಪಟವಾಗಿ, ಗುಜರಾತ್ ಟೈಟಾನ್ಸ್ 16 ಅಂಕಗಳೊಂದಿಗೆ ಯಾವುದೇ ಆತಂಕವಿಲ್ಲದೆ ನೇರವಾಗಿ ಪ್ಲೇಆಫ್‌ಗೆ ಲಗ್ಗೆ ಇಡಲಿದೆ. (PC: IPL)

4 / 5
ರಾಜಸ್ಥಾನ್ ರಾಯಲ್ಸ್: ಪ್ರಸ್ತುತ ಅಂಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಎರಡು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ 16 ಅಂಕಗಳನ್ನು ಪಡೆಯಲಿದೆ. ಈ ಮೂಲಕ ನಾಲ್ಕನೇ ತಂಡವಾಗಿ ಪ್ಲೇಆಫ್​ಗೇರಲು ಆರ್​ಆರ್ ಪಡೆಗೆ ಅವಕಾಶ ದೊರೆಯಲಿದೆ. ಇತ್ತ ಸಿಎಸ್​ಕೆ ವಿರುದ್ಧ ಎಸ್​ಆರ್​ಹೆಚ್ ಗೆದ್ದ ಬಳಿಕ, ಆರ್​ಆರ್ ತಂಡ ಒಂದು ಮ್ಯಾಚ್​ನಲ್ಲಿ ಸೋತರೆ ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳಿಗೆ 15 ಅಂಕಗಳೊಂದಿಗೆ ಪ್ಲೇಆಫ್​ಗೇರಲು ಅವಕಾಶ ಸಿಗಲಿದೆ. ಹೀಗಾಗಿ ಮುಂಬರುವ ಪಂದ್ಯಗಳ ಫಲಿತಾಂಶಗಳು ಆರ್​ಆರ್​, ಪಂಜಾಬ್ ಕಿಂಗ್ಸ್​ ಹಾಗೂ ಕೆಕೆಆರ್​ಗೆ ನಿರ್ಣಾಯಕ.  (PC: IPL)

ರಾಜಸ್ಥಾನ್ ರಾಯಲ್ಸ್: ಪ್ರಸ್ತುತ ಅಂಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಎರಡು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ 16 ಅಂಕಗಳನ್ನು ಪಡೆಯಲಿದೆ. ಈ ಮೂಲಕ ನಾಲ್ಕನೇ ತಂಡವಾಗಿ ಪ್ಲೇಆಫ್​ಗೇರಲು ಆರ್​ಆರ್ ಪಡೆಗೆ ಅವಕಾಶ ದೊರೆಯಲಿದೆ. ಇತ್ತ ಸಿಎಸ್​ಕೆ ವಿರುದ್ಧ ಎಸ್​ಆರ್​ಹೆಚ್ ಗೆದ್ದ ಬಳಿಕ, ಆರ್​ಆರ್ ತಂಡ ಒಂದು ಮ್ಯಾಚ್​ನಲ್ಲಿ ಸೋತರೆ ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳಿಗೆ 15 ಅಂಕಗಳೊಂದಿಗೆ ಪ್ಲೇಆಫ್​ಗೇರಲು ಅವಕಾಶ ಸಿಗಲಿದೆ. ಹೀಗಾಗಿ ಮುಂಬರುವ ಪಂದ್ಯಗಳ ಫಲಿತಾಂಶಗಳು ಆರ್​ಆರ್​, ಪಂಜಾಬ್ ಕಿಂಗ್ಸ್​ ಹಾಗೂ ಕೆಕೆಆರ್​ಗೆ ನಿರ್ಣಾಯಕ.  (PC: IPL)

5 / 5

Published On - 12:53 pm, Mon, 18 May 26

Follow Us
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ
ಅಡ್ಡ ಮತದಾನ ಬಗ್ಗೆ ವಿಜಯೇಂದ್ರಗೆ ವವರದಿ ಸಲ್ಲಿಸಿ ಸಿ.ಟಿ ರವಿ ಹೇಳಿದ್ದೇನು?
ಅಡ್ಡ ಮತದಾನ ಬಗ್ಗೆ ವಿಜಯೇಂದ್ರಗೆ ವವರದಿ ಸಲ್ಲಿಸಿ ಸಿ.ಟಿ ರವಿ ಹೇಳಿದ್ದೇನು?
ಮಡಿಕೇರಿ: ಎಂಟು ತಿಂಗಳ ಮಗುವಿನ ಗಂಟಲಲ್ಲಿತ್ತು ಎಲ್​ಇಡಿ ಬಲ್ಬ್!
ಮಡಿಕೇರಿ: ಎಂಟು ತಿಂಗಳ ಮಗುವಿನ ಗಂಟಲಲ್ಲಿತ್ತು ಎಲ್​ಇಡಿ ಬಲ್ಬ್!