AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಬುಮ್ರಾಗೆ ಇಂಜುರಿ? ತಂಡ ತೊರೆದು ಬೆಂಗಳೂರಿಗೆ ಬಂದ ಯಾರ್ಕರ್ ಕಿಂಗ್

Jasprit Bumrah's Sudden COE Visit: ಟಿ20 ವಿಶ್ವಕಪ್ ಗೆಲುವಿನಲ್ಲಿ ಮಿಂಚಿದ ಜಸ್ಪ್ರೀತ್ ಬುಮ್ರಾ ಐಪಿಎಲ್ ಮೊದಲು ಬಿಸಿಸಿಐ ಸಿಒಇಗೆ ಹಠಾತ್ ಭೇಟಿ ನೀಡಿರುವುದು ಗಾಯದ ಆತಂಕ ಹೆಚ್ಚಿಸಿದೆ. ಇದು ಅವರ ಫಿಟ್‌ನೆಸ್ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಹಿಂದಿನ ಗಾಯದ ಇತಿಹಾಸ ಗಮನಿಸಿದರೆ ಮುಂಬೈ ಇಂಡಿಯನ್ಸ್ ಅಭಿಮಾನಿಗಳಲ್ಲಿ ಕಳವಳ ಮೂಡಿಸಿದೆ. ಬುಮ್ರಾ ಐಪಿಎಲ್‌ನಲ್ಲಿ ಆಡುತ್ತಾರೆಯೇ ಅಥವಾ ಇಲ್ಲವೇ ಎಂಬುದು ಮುಂಬೈ ಇಂಡಿಯನ್ಸ್ ಮೊದಲ ಪಂದ್ಯಕ್ಕೂ ಮುನ್ನ ಸ್ಪಷ್ಟವಾಗಲಿದೆ.

ಪೃಥ್ವಿಶಂಕರ
|

Updated on: Mar 23, 2026 | 10:28 PM

Share
ಟೀಂ ಇಂಡಿಯಾದ ಸತತ ಎರಡನೇ ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಈಗ ಐಪಿಎಲ್‌ನತ್ತ ಮುಖಾಮಾಡಿದ್ದಾರೆ. ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಅವರನ್ನು ಮತ್ತೆ ಮೈದಾನಕ್ಕೆ ನೋಡಲು ಉತ್ಸುಕರಾಗಿದ್ದಾರೆ. ಆದಾಗ್ಯೂ, ಸೀಸನ್ ಪ್ರಾರಂಭವಾಗುವ ಮೊದಲೇ ಬುಮ್ರಾ ಎಲ್ಲರ ಕಳವಳಕ್ಕೆ ಕಾರಣರಾಗಿದ್ದಾರೆ.

ಟೀಂ ಇಂಡಿಯಾದ ಸತತ ಎರಡನೇ ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಈಗ ಐಪಿಎಲ್‌ನತ್ತ ಮುಖಾಮಾಡಿದ್ದಾರೆ. ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಅವರನ್ನು ಮತ್ತೆ ಮೈದಾನಕ್ಕೆ ನೋಡಲು ಉತ್ಸುಕರಾಗಿದ್ದಾರೆ. ಆದಾಗ್ಯೂ, ಸೀಸನ್ ಪ್ರಾರಂಭವಾಗುವ ಮೊದಲೇ ಬುಮ್ರಾ ಎಲ್ಲರ ಕಳವಳಕ್ಕೆ ಕಾರಣರಾಗಿದ್ದಾರೆ.

1 / 5
ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಐಪಿಎಲ್ ಆರಂಭವಾಗುವ ಒಂದು ವಾರಕ್ಕೂ ಮೊದಲು ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಇದ್ದಕ್ಕಿದ್ದಂತೆ ಆಗಮಿಸಿದ್ದಾರೆ. ಇದು ಬುಮ್ರಾ ಮತ್ತೆ ಗಾಯಗೊಂಡಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದರ ಜೊತೆಗೆ ಮುಂಬೈ ಇಂಡಿಯನ್ಸ್ ತಂಡ ಬುಮ್ರಾ ಇಲ್ಲದೆ ಸೀಸನ್ ಪ್ರಾರಂಭಿಸಬೇಕೇ? ಎಂಬ ಪ್ರಶ್ನೆಗಳನ್ನು ಮೂಡಿಸಿವೆ. ಏಕೆಂದರೆ ಭಾರತೀಯ ಆಟಗಾರರು ಸಾಮಾನ್ಯವಾಗಿ ಫಿಟ್ನೆಸ್ ಸಮಸ್ಯೆಗಳಿದ್ದಾಗ ಮಾತ್ರ ಸಿಒಇಗೆ ಹೋಗುತ್ತಾರೆ.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಐಪಿಎಲ್ ಆರಂಭವಾಗುವ ಒಂದು ವಾರಕ್ಕೂ ಮೊದಲು ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಇದ್ದಕ್ಕಿದ್ದಂತೆ ಆಗಮಿಸಿದ್ದಾರೆ. ಇದು ಬುಮ್ರಾ ಮತ್ತೆ ಗಾಯಗೊಂಡಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದರ ಜೊತೆಗೆ ಮುಂಬೈ ಇಂಡಿಯನ್ಸ್ ತಂಡ ಬುಮ್ರಾ ಇಲ್ಲದೆ ಸೀಸನ್ ಪ್ರಾರಂಭಿಸಬೇಕೇ? ಎಂಬ ಪ್ರಶ್ನೆಗಳನ್ನು ಮೂಡಿಸಿವೆ. ಏಕೆಂದರೆ ಭಾರತೀಯ ಆಟಗಾರರು ಸಾಮಾನ್ಯವಾಗಿ ಫಿಟ್ನೆಸ್ ಸಮಸ್ಯೆಗಳಿದ್ದಾಗ ಮಾತ್ರ ಸಿಒಇಗೆ ಹೋಗುತ್ತಾರೆ.

2 / 5
ಮುಂಬೈ ಇಂಡಿಯನ್ಸ್ ತಂಡದ ಎಲ್ಲಾ ಆಟಗಾರರು ತಯಾರಿಯಲ್ಲಿ ನಿರತರಾಗಿದ್ದರೂ, ಬುಮ್ರಾ ಇದುವರೆಗೂ ತಂಡವನ್ನು ಸೇರಿಕೊಂಡಿಲ್ಲದ ಕಾರಣ ಬುಮ್ರಾ ಅವರ ಫಿಟ್ನೆಸ್ ಬಗ್ಗೆ ಪ್ರಶ್ನೆಗಳು ಏಳುತ್ತಿವೆ. ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಿದ ಬುಮ್ರಾ ಸೇರಿದಂತೆ ಎಲ್ಲಾ ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೆಚ್ಚುವರಿ ವಿರಾಮ ನೀಡಲಾಗಿದ್ದು, ಇದನ್ನು ಕೋಚ್ ಮಹೇಲಾ ಜಯವರ್ಧನೆ ಸ್ವತಃ ಘೋಷಿಸಿದ್ದಾರೆ. ಆದಾಗ್ಯೂ, ನಾಯಕ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ತಂಡವನ್ನು ಸೇರಿದ್ದರೂ, ಬುಮ್ರಾ ಪ್ರಸ್ತುತ ತಂಡದಲ್ಲಿಲ್ಲ.

ಮುಂಬೈ ಇಂಡಿಯನ್ಸ್ ತಂಡದ ಎಲ್ಲಾ ಆಟಗಾರರು ತಯಾರಿಯಲ್ಲಿ ನಿರತರಾಗಿದ್ದರೂ, ಬುಮ್ರಾ ಇದುವರೆಗೂ ತಂಡವನ್ನು ಸೇರಿಕೊಂಡಿಲ್ಲದ ಕಾರಣ ಬುಮ್ರಾ ಅವರ ಫಿಟ್ನೆಸ್ ಬಗ್ಗೆ ಪ್ರಶ್ನೆಗಳು ಏಳುತ್ತಿವೆ. ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಿದ ಬುಮ್ರಾ ಸೇರಿದಂತೆ ಎಲ್ಲಾ ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೆಚ್ಚುವರಿ ವಿರಾಮ ನೀಡಲಾಗಿದ್ದು, ಇದನ್ನು ಕೋಚ್ ಮಹೇಲಾ ಜಯವರ್ಧನೆ ಸ್ವತಃ ಘೋಷಿಸಿದ್ದಾರೆ. ಆದಾಗ್ಯೂ, ನಾಯಕ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ತಂಡವನ್ನು ಸೇರಿದ್ದರೂ, ಬುಮ್ರಾ ಪ್ರಸ್ತುತ ತಂಡದಲ್ಲಿಲ್ಲ.

3 / 5
32 ವರ್ಷದ ಅನುಭವಿ ವೇಗದ ಬೌಲರ್ ಬುಮ್ರಾ, ಈ ಹಿಂದೆ ಫಿಟ್ನೆಸ್ ಸಮಸ್ಯೆಗಳಿಂದ ಬಳಲುತ್ತಿದ್ದರು. ಇದರಿಂದ ಬುಮ್ರಾ 2023 ರ ಐಪಿಎಲ್‌ನಲ್ಲಿ ಆಡಿರಲಿಲ್ಲ. ಅದಕ್ಕೂ ಮೊದಲು, ಅವರು 2022 ರ ಟಿ20 ವಿಶ್ವಕಪ್‌ಗೂ ತಂಡದ ಭಾಗವಾಗಿರಲಿಲ್ಲ.

32 ವರ್ಷದ ಅನುಭವಿ ವೇಗದ ಬೌಲರ್ ಬುಮ್ರಾ, ಈ ಹಿಂದೆ ಫಿಟ್ನೆಸ್ ಸಮಸ್ಯೆಗಳಿಂದ ಬಳಲುತ್ತಿದ್ದರು. ಇದರಿಂದ ಬುಮ್ರಾ 2023 ರ ಐಪಿಎಲ್‌ನಲ್ಲಿ ಆಡಿರಲಿಲ್ಲ. ಅದಕ್ಕೂ ಮೊದಲು, ಅವರು 2022 ರ ಟಿ20 ವಿಶ್ವಕಪ್‌ಗೂ ತಂಡದ ಭಾಗವಾಗಿರಲಿಲ್ಲ.

4 / 5
ಇದಲ್ಲದೆ, ಕಳೆದ ವರ್ಷ ಇಂಗ್ಲೆಂಡ್ ಪ್ರವಾಸದ ಟೆಸ್ಟ್ ಸರಣಿಯ ಸಮಯದಲ್ಲಿ ಗಾಯಗೊಂಡಿದ್ದ ಬುಮ್ರಾ ಹಲವಾರು ವಾರಗಳ ಕಾಲ ತಂಡದಿಂದ ಹೊರಗಿದ್ದರು. ಇದೀಗ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಬುಮ್ರಾ ಅವರ ಹಠಾತ್ ಆಗಮನವು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂಬೈ ಇಂಡಿಯನ್ಸ್ ಮಾರ್ಚ್ 29 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಆಡಲಿದೆ. ಅದಕ್ಕೂ ಮೊದಲು ಬುಮ್ರಾ ತಂಡದಲ್ಲಿ ಆಡುತ್ತಾರಾ? ಇಲ್ಲವಾ ಎಂಬುದು ಖಚಿತವಾಗಲಿದೆ.

ಇದಲ್ಲದೆ, ಕಳೆದ ವರ್ಷ ಇಂಗ್ಲೆಂಡ್ ಪ್ರವಾಸದ ಟೆಸ್ಟ್ ಸರಣಿಯ ಸಮಯದಲ್ಲಿ ಗಾಯಗೊಂಡಿದ್ದ ಬುಮ್ರಾ ಹಲವಾರು ವಾರಗಳ ಕಾಲ ತಂಡದಿಂದ ಹೊರಗಿದ್ದರು. ಇದೀಗ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಬುಮ್ರಾ ಅವರ ಹಠಾತ್ ಆಗಮನವು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂಬೈ ಇಂಡಿಯನ್ಸ್ ಮಾರ್ಚ್ 29 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಆಡಲಿದೆ. ಅದಕ್ಕೂ ಮೊದಲು ಬುಮ್ರಾ ತಂಡದಲ್ಲಿ ಆಡುತ್ತಾರಾ? ಇಲ್ಲವಾ ಎಂಬುದು ಖಚಿತವಾಗಲಿದೆ.

5 / 5
Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್