AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಆರ್​ಸಿಬಿಗೆ ಬಂತು ಆನೆ ಬಲ; ಬೆಂಗಳೂರಿಗೆ ಬಂದ ಜೋಶ್ ಹೇಜಲ್​ವುಡ್

Josh Hazlewood Joins RCB Squad: 2026ರ ಐಪಿಎಲ್ ವೇಳಾಪಟ್ಟಿ ಪ್ರಕಟಗೊಂಡಿದ್ದು, ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ಬೆಂಗಳೂರಿನಲ್ಲಿ ನಡೆಯಲಿದೆ. ಗಾಯದಿಂದ ಚೇತರಿಸಿಕೊಂಡು ಆರ್​ಸಿಬಿ ಸೇರಿರುವ ಜೋಶ್ ಹೇಜಲ್​ವುಡ್ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದು ಆರ್​ಸಿಬಿ ಬೌಲಿಂಗ್ ವಿಭಾಗಕ್ಕೆ ಸವಾಲಾಗಿ ಪರಿಣಮಿಸಿದ್ದು, ಹೇಜಲ್​ವುಡ್ ಸ್ಥಾನದಲ್ಲಿ ನ್ಯೂಜಿಲೆಂಡ್ ವೇಗಿ ಜಾಕೋಬ್ ಡಫಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಪೃಥ್ವಿಶಂಕರ
|

Updated on: Mar 26, 2026 | 10:05 PM

Share
2026 ರ ಐಪಿಎಲ್​ನ ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಅದರಂತೆ ಲೀಗ್​ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಮಾರ್ಚ್​ 28 ರಂದು ನಡೆಯುವ ಈ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧವಾಗಿದ್ದು, ಇದರ ನಡುವೆ ಆರ್​ಸಿಬಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.

2026 ರ ಐಪಿಎಲ್​ನ ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಅದರಂತೆ ಲೀಗ್​ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಮಾರ್ಚ್​ 28 ರಂದು ನಡೆಯುವ ಈ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧವಾಗಿದ್ದು, ಇದರ ನಡುವೆ ಆರ್​ಸಿಬಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.

1 / 6
ಎಲ್ಲರಿಗೂ ತಿಳಿದಿರುವಂತೆ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಟ್ರೋಫಿ ಎತ್ತಿಹಿಡಿಯಲು ಪ್ರಮುಖ ಕಾರಣ, ತಂಡದ ಬಲಿಷ್ಠ ಬೌಲಿಂಗ್. ಅನುಭವಿಗಳಿಂದ ಕೂಡಿದ್ದ ಈ ವಿಭಾಗ ಆರ್​ಸಿಬಿ ಗೆಲುವಿನ ಪ್ರಮುಖ ಪಾತ್ರವಹಿಸಿತ್ತು. ಆದಾಗ್ಯೂ 2026 ರ ಸೀಸನ್ ಆರಂಭಕ್ಕೂ ಮುನ್ನ ಪ್ರಮುಖ ವೇಗಿಯ ಅಲಭ್ಯತೆ ತಂಡದ ತಲೆನೋವು ಹೆಚ್ಚಿಸಿತ್ತು.

ಎಲ್ಲರಿಗೂ ತಿಳಿದಿರುವಂತೆ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಟ್ರೋಫಿ ಎತ್ತಿಹಿಡಿಯಲು ಪ್ರಮುಖ ಕಾರಣ, ತಂಡದ ಬಲಿಷ್ಠ ಬೌಲಿಂಗ್. ಅನುಭವಿಗಳಿಂದ ಕೂಡಿದ್ದ ಈ ವಿಭಾಗ ಆರ್​ಸಿಬಿ ಗೆಲುವಿನ ಪ್ರಮುಖ ಪಾತ್ರವಹಿಸಿತ್ತು. ಆದಾಗ್ಯೂ 2026 ರ ಸೀಸನ್ ಆರಂಭಕ್ಕೂ ಮುನ್ನ ಪ್ರಮುಖ ವೇಗಿಯ ಅಲಭ್ಯತೆ ತಂಡದ ತಲೆನೋವು ಹೆಚ್ಚಿಸಿತ್ತು.

2 / 6
ವಾಸ್ತವವಾಗಿ ಆಸ್ಟ್ರೇಲಿಯಾದ ಅನುಭವಿ ವೇಗದ ಬೌಲರ್ ಜೋಶ್ ಹೇಜಲ್​ವುಡ್, ಇಂಜುರಿಯಿಂದ ಚೇತರಿಸಿಕೊಳ್ಳದ ಕಾರಣ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಂಡಿರಲಿಲ್ಲ. ಈ ಮೊದಲು ವರದಿಯಾದಂತೆ ಹೇಜಲ್​ವುಡ್, ಐಪಿಎಲ್​ನ ಆರಂಭಿಕ ಪಂದ್ಯಗಳನ್ನು ಆಡುವುದು ಅನುಮಾನ ಎನ್ನಲಾಗಿತ್ತು. ಆದರೀಗ ಮೊದಲ ಪಂದ್ಯಕ್ಕೂ ಮುನ್ನ ಹೇಜಲ್​ವುಡ್ ತಂಡವನ್ನು ಸೇರಿಕೊಂಡಿದ್ದಾರೆ.

ವಾಸ್ತವವಾಗಿ ಆಸ್ಟ್ರೇಲಿಯಾದ ಅನುಭವಿ ವೇಗದ ಬೌಲರ್ ಜೋಶ್ ಹೇಜಲ್​ವುಡ್, ಇಂಜುರಿಯಿಂದ ಚೇತರಿಸಿಕೊಳ್ಳದ ಕಾರಣ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಂಡಿರಲಿಲ್ಲ. ಈ ಮೊದಲು ವರದಿಯಾದಂತೆ ಹೇಜಲ್​ವುಡ್, ಐಪಿಎಲ್​ನ ಆರಂಭಿಕ ಪಂದ್ಯಗಳನ್ನು ಆಡುವುದು ಅನುಮಾನ ಎನ್ನಲಾಗಿತ್ತು. ಆದರೀಗ ಮೊದಲ ಪಂದ್ಯಕ್ಕೂ ಮುನ್ನ ಹೇಜಲ್​ವುಡ್ ತಂಡವನ್ನು ಸೇರಿಕೊಂಡಿದ್ದಾರೆ.

3 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ, ಹೇಜಲ್​ವುಡ್ ಆಗಮನವನ್ನು ಖಚಿತಪಡಿಸಿದೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹೇಜಲ್​ವುಡ್ ತಂಡ ಕೂಡಿಕೊಂಡಿರುವ ಬಗ್ಗೆ ಫ್ರಾಂಚೈಸಿ ಸುಳಿವು ನೀಡಿದೆ. ಆದಾಗ್ಯೂ ಇದೀಗ ತಂಡವನ್ನು ಕೂಡಿಕೊಂಡಿರುವ ಹೇಜಲ್​ವುಡ್ ಮೊದಲ ಎರಡು ಪಂದ್ಯಗಳಲ್ಲಿ ಆಡುವುದು ಕಷ್ಟಕರವಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ, ಹೇಜಲ್​ವುಡ್ ಆಗಮನವನ್ನು ಖಚಿತಪಡಿಸಿದೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹೇಜಲ್​ವುಡ್ ತಂಡ ಕೂಡಿಕೊಂಡಿರುವ ಬಗ್ಗೆ ಫ್ರಾಂಚೈಸಿ ಸುಳಿವು ನೀಡಿದೆ. ಆದಾಗ್ಯೂ ಇದೀಗ ತಂಡವನ್ನು ಕೂಡಿಕೊಂಡಿರುವ ಹೇಜಲ್​ವುಡ್ ಮೊದಲ ಎರಡು ಪಂದ್ಯಗಳಲ್ಲಿ ಆಡುವುದು ಕಷ್ಟಕರವಾಗಿದೆ.

4 / 6
ಗಾಯದಿಂದಾಗಿ ಬಹಳ ದಿನಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿರುವ ಹೇಜಲ್​ವುಡ್, ಆಶಸ್ ಟೆಸ್ಟ್ ಸರಣಿ ಮತ್ತು ಟಿ20 ವಿಶ್ವಕಪ್​ನಿಂದಲೂ ಹೊರಗುಳಿದಿದ್ದರು. ಆದರೀಗ ಚೇತರಿಸಿಕೊಂಡಿರುವ ಹೇಜಲ್​ವುಡ್ ಐಪಿಎಲ್​ನ ಮುಂದಿನ ಪಂದ್ಯಗಳಲ್ಲಿ ಆಡುವುದು ಖಚಿತ. ಆದರೆ ಮೊದಲೆರಡು ಪಂದ್ಯಗಳಲ್ಲಿ ಹೇಜಲ್​ವುಡ್ ಸ್ಥಾನವನ್ನು ತುಂಬುವವರು ಯಾರು ಎಂಬ ಪ್ರಶ್ನೆ ಮೂಡಿದೆ.

ಗಾಯದಿಂದಾಗಿ ಬಹಳ ದಿನಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿರುವ ಹೇಜಲ್​ವುಡ್, ಆಶಸ್ ಟೆಸ್ಟ್ ಸರಣಿ ಮತ್ತು ಟಿ20 ವಿಶ್ವಕಪ್​ನಿಂದಲೂ ಹೊರಗುಳಿದಿದ್ದರು. ಆದರೀಗ ಚೇತರಿಸಿಕೊಂಡಿರುವ ಹೇಜಲ್​ವುಡ್ ಐಪಿಎಲ್​ನ ಮುಂದಿನ ಪಂದ್ಯಗಳಲ್ಲಿ ಆಡುವುದು ಖಚಿತ. ಆದರೆ ಮೊದಲೆರಡು ಪಂದ್ಯಗಳಲ್ಲಿ ಹೇಜಲ್​ವುಡ್ ಸ್ಥಾನವನ್ನು ತುಂಬುವವರು ಯಾರು ಎಂಬ ಪ್ರಶ್ನೆ ಮೂಡಿದೆ.

5 / 6
ಪ್ರಸ್ತುತ ತಂಡದಲ್ಲಿ ಹೇಜಲ್​ವುಡ್ ಬದಲಿಗೆ ನ್ಯೂಜಿಲೆಂಡ್ ವೇಗಿ ಜಾಕೋಬ್ ಡಫಿ ಇದ್ದಾರೆ. ಹೀಗಾಗಿ ಹೇಜಲ್​ವುಡ್ ಪ್ಲೇಯಿಂಗ್​ 11ನಲ್ಲಿ ಸ್ಥಾನ ಪಡೆಯುವವರೆಗೆ ಡಫಿ ತಂಡದಲ್ಲಿ ಆಡುವ ಸಾಧ್ಯತೆಗಳಿವೆ. ಆದಾಗ್ಯೂ ಹೇಜಲ್​ವುಡ್ ಜೊತೆಗೆ ಯಶ್ ದಯಾಳ್ ಕೂಡ ತಂಡದಲ್ಲಿ ಇಲ್ಲದಿರುವುದು ಆರ್​ಸಿಬಿಯ ಬೌಲಿಂಗ್ ವಿಭಾಗದ ಶಕ್ತಿಯನ್ನು ಕೊಂಚ ತಗ್ಗಿಸಿದೆ ಎನ್ನಬಹುದು. ಹೀಗಿರುವಾಗ ಮೊದಲ ಪಂದ್ಯದಲ್ಲಿ ತಂಡ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಪ್ರಸ್ತುತ ತಂಡದಲ್ಲಿ ಹೇಜಲ್​ವುಡ್ ಬದಲಿಗೆ ನ್ಯೂಜಿಲೆಂಡ್ ವೇಗಿ ಜಾಕೋಬ್ ಡಫಿ ಇದ್ದಾರೆ. ಹೀಗಾಗಿ ಹೇಜಲ್​ವುಡ್ ಪ್ಲೇಯಿಂಗ್​ 11ನಲ್ಲಿ ಸ್ಥಾನ ಪಡೆಯುವವರೆಗೆ ಡಫಿ ತಂಡದಲ್ಲಿ ಆಡುವ ಸಾಧ್ಯತೆಗಳಿವೆ. ಆದಾಗ್ಯೂ ಹೇಜಲ್​ವುಡ್ ಜೊತೆಗೆ ಯಶ್ ದಯಾಳ್ ಕೂಡ ತಂಡದಲ್ಲಿ ಇಲ್ಲದಿರುವುದು ಆರ್​ಸಿಬಿಯ ಬೌಲಿಂಗ್ ವಿಭಾಗದ ಶಕ್ತಿಯನ್ನು ಕೊಂಚ ತಗ್ಗಿಸಿದೆ ಎನ್ನಬಹುದು. ಹೀಗಿರುವಾಗ ಮೊದಲ ಪಂದ್ಯದಲ್ಲಿ ತಂಡ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ