AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 64.30 ಕೋಟಿ ರೂ.​ ಮೊತ್ತ… ಪತಿರಾಣ ಮೇಲೆ 2 ಫ್ರಾಂಚೈಸಿಗಳ ಕಣ್ಣು

Matheesha Pathirana: ಮತೀಶ ಪತಿರಾಣ 2022 ರಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್​​ಗೆ ಎಂಟ್ರಿ ಕೊಟ್ಟಿದ್ದರು. ಅಲ್ಲದೆ ಕಳೆದ ಮೂರು ಸೀಸನ್​ಗಳಿಂದ ಸಿಎಸ್​ಕೆ ತಂಡದ ಭಾಗವಾಗಿದ್ದ ಪತಿರಾಣ ಈ ಬಾರಿಯ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿಯೇ ಲಂಕಾ ವೇಗಿಯ ಖರೀದಿಗೆ ಕೆಲ ಫ್ರಾಂಚೈಸಿಗಳು ಪ್ಲ್ಯಾನ್ ರೂಪಿಸುತ್ತಿದೆ.

ಝಾಹಿರ್ ಯೂಸುಫ್
|

Updated on: Nov 20, 2025 | 5:30 PM

Share
ಬೇಬಿ ಮಲಿಂಗ ಖ್ಯಾತಿಯ ಮತೀಶ ಪತಿರಾಣ (Matheesha Pathirana) ಐಪಿಎಲ್ ಸೀಸನ್-19ರ ಮಿನಿ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಕೆಲ ವರ್ಷಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದ ಪತಿರಾಣ ಅವರನ್ನು ಇದೇ ಮೊದಲ ಬಾರಿಗೆ ಸಿಎಸ್​ಕೆ ಫ್ರಾಂಚೈಸಿ ಬಿಡುಗಡೆ ಮಾಡಿದೆ.

ಬೇಬಿ ಮಲಿಂಗ ಖ್ಯಾತಿಯ ಮತೀಶ ಪತಿರಾಣ (Matheesha Pathirana) ಐಪಿಎಲ್ ಸೀಸನ್-19ರ ಮಿನಿ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಕೆಲ ವರ್ಷಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದ ಪತಿರಾಣ ಅವರನ್ನು ಇದೇ ಮೊದಲ ಬಾರಿಗೆ ಸಿಎಸ್​ಕೆ ಫ್ರಾಂಚೈಸಿ ಬಿಡುಗಡೆ ಮಾಡಿದೆ.

1 / 6
ಅದರಂತೆ ಐಪಿಎಲ್ 2026 ರ ಮಿನಿ ಹರಾಜಿಗಾಗಿ ಮತೀಶ ಪತಿರಾಣ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ. ಅದು ಕೂಡ 2 ಕೋಟಿ ರೂ. ಮೂಲ ಬೆಲೆಯೊಂದಿಗೆ. ಸ್ಟಾರ್ ಬೌಲರ್ ಎನಿಸಿಕೊಂಡಿರುವ ಶ್ರೀಲಂಕಾ ವೇಗಿ ಗರಿಷ್ಠ ಬೇಸ್ ಪ್ರೈಸ್​ ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅದರಂತೆ ಐಪಿಎಲ್ 2026 ರ ಮಿನಿ ಹರಾಜಿಗಾಗಿ ಮತೀಶ ಪತಿರಾಣ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ. ಅದು ಕೂಡ 2 ಕೋಟಿ ರೂ. ಮೂಲ ಬೆಲೆಯೊಂದಿಗೆ. ಸ್ಟಾರ್ ಬೌಲರ್ ಎನಿಸಿಕೊಂಡಿರುವ ಶ್ರೀಲಂಕಾ ವೇಗಿ ಗರಿಷ್ಠ ಬೇಸ್ ಪ್ರೈಸ್​ ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

2 / 6
ಇದಕ್ಕೆ ಮುಖ್ಯ ಕಾರಣ ಮತೀಶ ಪತಿರಾಣ ಮೇಲೆ ಎರಡು ಐಪಿಎಲ್ ಫ್ರಾಂಚೈಸಿಗಳು ಕಣ್ಣಿಟ್ಟಿರುವುದು. ಸಿಎಸ್​ಕೆ ತಂಡದಲ್ಲಿರುವಾಗಲೇ ಕೆಕೆಆರ್ ಫ್ರಾಂಚೈಸಿಯು ಪತಿರಾಣ ಅವರನ್ನು ಟ್ರೇಡ್ ಮಾಡಿಕೊಳ್ಳಲು ತೆರೆಮರೆಯ ಪ್ರಯತ್ನ ನಡೆಸಿತ್ತು. ಇದಾಗ್ಯೂ ಅದು ಸಫಲವಾಗಿರಲಿಲ್ಲ.

ಇದಕ್ಕೆ ಮುಖ್ಯ ಕಾರಣ ಮತೀಶ ಪತಿರಾಣ ಮೇಲೆ ಎರಡು ಐಪಿಎಲ್ ಫ್ರಾಂಚೈಸಿಗಳು ಕಣ್ಣಿಟ್ಟಿರುವುದು. ಸಿಎಸ್​ಕೆ ತಂಡದಲ್ಲಿರುವಾಗಲೇ ಕೆಕೆಆರ್ ಫ್ರಾಂಚೈಸಿಯು ಪತಿರಾಣ ಅವರನ್ನು ಟ್ರೇಡ್ ಮಾಡಿಕೊಳ್ಳಲು ತೆರೆಮರೆಯ ಪ್ರಯತ್ನ ನಡೆಸಿತ್ತು. ಇದಾಗ್ಯೂ ಅದು ಸಫಲವಾಗಿರಲಿಲ್ಲ.

3 / 6
ಆದರೆ ಅಚ್ಚರಿ ಎಂಬಂತೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಇದೀಗ ಮತೀಶ ಪತಿರಾಣ ಅವರನ್ನು ಬಿಡುಗಡೆ ಮಾಡಿದೆ. ಈ ರಿಲೀಸ್ ಹೊರತಾಗಿಯೂ ಸಿಎಸ್​ಕೆ ಮತ್ತೆ ಪತಿರಾಣ ಅವರನ್ನು ಖರೀದಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಮತೀಶ ಪತಿರಾಣಗೆ ನೀಡಿದ್ದು ಬರೋಬ್ಬರಿ 13 ಕೋಟಿ ರೂ. ಈ ಬೃಹತ್ ಮೊತ್ತದ ಕಾರಣದಿಂದಾಗಿ ರಿಲೀಸ್ ಮಾಡಿದ್ದು, ಕಡಿಮೆ ಮೊತ್ತಕ್ಕೆ ಮತ್ತೆ ಖರೀದಿಸಲು ಸಿಎಸ್​ಕೆ ಮುಂದಾಗಲಿದೆ.

ಆದರೆ ಅಚ್ಚರಿ ಎಂಬಂತೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಇದೀಗ ಮತೀಶ ಪತಿರಾಣ ಅವರನ್ನು ಬಿಡುಗಡೆ ಮಾಡಿದೆ. ಈ ರಿಲೀಸ್ ಹೊರತಾಗಿಯೂ ಸಿಎಸ್​ಕೆ ಮತ್ತೆ ಪತಿರಾಣ ಅವರನ್ನು ಖರೀದಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಮತೀಶ ಪತಿರಾಣಗೆ ನೀಡಿದ್ದು ಬರೋಬ್ಬರಿ 13 ಕೋಟಿ ರೂ. ಈ ಬೃಹತ್ ಮೊತ್ತದ ಕಾರಣದಿಂದಾಗಿ ರಿಲೀಸ್ ಮಾಡಿದ್ದು, ಕಡಿಮೆ ಮೊತ್ತಕ್ಕೆ ಮತ್ತೆ ಖರೀದಿಸಲು ಸಿಎಸ್​ಕೆ ಮುಂದಾಗಲಿದೆ.

4 / 6
ಇತ್ತ ಮತೀಶ ಪತಿರಾಣ ರಿಲೀಸ್ ಆಗುತ್ತಿದ್ದಂತೆ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಯುವ ವೇಗಿಯನ್ನು ಖರೀದಿಸಲು ಪ್ಲ್ಯಾನ್ ರೂಪಿಸುತ್ತಿದೆ ಎಂದು ವರದಿಯಾಗಿದೆ. ಅದರಲ್ಲೂ 64.30 ಕೋಟಿ ರೂ. ಪರ್ಸ್ ಮೊತ್ತ ಹೊಂದಿರುವ ಕೆಕೆಆರ್ ಮತೀಶ ಪತಿರಾಣಗಾಗಿ ಭರ್ಜರಿ ಪೈಪೋಟಿ ನಡೆಸುವುದಂತು ದಿಟ.

ಇತ್ತ ಮತೀಶ ಪತಿರಾಣ ರಿಲೀಸ್ ಆಗುತ್ತಿದ್ದಂತೆ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಯುವ ವೇಗಿಯನ್ನು ಖರೀದಿಸಲು ಪ್ಲ್ಯಾನ್ ರೂಪಿಸುತ್ತಿದೆ ಎಂದು ವರದಿಯಾಗಿದೆ. ಅದರಲ್ಲೂ 64.30 ಕೋಟಿ ರೂ. ಪರ್ಸ್ ಮೊತ್ತ ಹೊಂದಿರುವ ಕೆಕೆಆರ್ ಮತೀಶ ಪತಿರಾಣಗಾಗಿ ಭರ್ಜರಿ ಪೈಪೋಟಿ ನಡೆಸುವುದಂತು ದಿಟ.

5 / 6
ಏಕೆಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ವೇಗದ ಬೌಲರ್​ನ ಅವಶ್ಯಕತೆಯಿದೆ. ಐಪಿಎಲ್​ನಲ್ಲಿ ಈಗಾಗಲೇ ತನ್ನ ಸಾಮರ್ಥ್ಯವನ್ನು ತೆರೆದಿಟ್ಟಿರುವ ಪತಿರಾಣ ಅವರನ್ನು ಖರೀದಿಸುವುದು ಕೆಕೆಆರ್​​​ಗೆ ಕಷ್ಟವೇನಲ್ಲ. ಏಕೆಂದರೆ ಹರಾಜಿನಲ್ಲಿ 64.30 ಕೋಟಿ ರೂ.ನೊಂದಿಗೆ ಕಾಣಿಸಿಕೊಳ್ಳಲಿರುವ ಕೆಕೆಆರ್ ಬೃಹತ್ ಮೊತ್ತದವರೆಗೆ ಬಿಡ್ಡಿಂಗ್ ನಡೆಸುವ ಸಾಧ್ಯತೆಯಿದೆ. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಬೇಬಿ ಮಲಿಂಗನನ್ನು ತನ್ನ ತೆಕ್ಕೆಗೆ ತೆಗೆದುಕೊಂಡರೂ ಅಚ್ಚರಿಪಡಬೇಕಿಲ್ಲ.

ಏಕೆಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ವೇಗದ ಬೌಲರ್​ನ ಅವಶ್ಯಕತೆಯಿದೆ. ಐಪಿಎಲ್​ನಲ್ಲಿ ಈಗಾಗಲೇ ತನ್ನ ಸಾಮರ್ಥ್ಯವನ್ನು ತೆರೆದಿಟ್ಟಿರುವ ಪತಿರಾಣ ಅವರನ್ನು ಖರೀದಿಸುವುದು ಕೆಕೆಆರ್​​​ಗೆ ಕಷ್ಟವೇನಲ್ಲ. ಏಕೆಂದರೆ ಹರಾಜಿನಲ್ಲಿ 64.30 ಕೋಟಿ ರೂ.ನೊಂದಿಗೆ ಕಾಣಿಸಿಕೊಳ್ಳಲಿರುವ ಕೆಕೆಆರ್ ಬೃಹತ್ ಮೊತ್ತದವರೆಗೆ ಬಿಡ್ಡಿಂಗ್ ನಡೆಸುವ ಸಾಧ್ಯತೆಯಿದೆ. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಬೇಬಿ ಮಲಿಂಗನನ್ನು ತನ್ನ ತೆಕ್ಕೆಗೆ ತೆಗೆದುಕೊಂಡರೂ ಅಚ್ಚರಿಪಡಬೇಕಿಲ್ಲ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ