AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಇಬ್ಬರ ಡೀಲ್… ಸಂಜು ಸ್ಯಾಮ್ಸನ್ ಮೇಲೆ KKR ಕಣ್ಣು

IPL 2026: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಮುಂದಿನ ಸೀಸನ್​ಗಾಗಿ ಹೊಸ ನಾಯಕ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನ್ನು ಎದುರು ನೋಡುತ್ತಿದೆ. ಇತ್ತ ರಾಜಸ್ಥಾನ್ ರಾಯಲ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಆರ್​ಆರ್​ ಬಳಗದಿಂದ ಹೊರಬರಲು ಬಯಸಿದ್ದಾರೆ. ಹೀಗಾಗಿಯೇ ಇದೀಗ ಸ್ಯಾಮ್ಸನ್ ಮೇಲೆ ಕೆಕೆಆರ್ ಕಣ್ಣಿಟ್ಟಿದೆ.

ಝಾಹಿರ್ ಯೂಸುಫ್
|

Updated on: Aug 16, 2025 | 1:56 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸಂಜು ಸ್ಯಾಮ್ಸನ್ (Sanju Samson) ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ? ಎಂಬುದೇ ಈಗ ಕುತೂಹಲ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡದಿಂದ ಹೊರಬರಲು ಸಂಜು ನಿರ್ಧರಿಸಿದ್ದಾರೆ. ಈ ನಿರ್ಧಾರದ ಬೆನ್ನಲ್ಲೇ ಆರ್​ಆರ್ ತಂಡದ ನಾಯಕನನ್ನು ಖರೀದಿಸಲು ಸಿಎಸ್​ಕೆ ಫ್ರಾಂಚೈಸಿ ಮುಂದಾಗಿತ್ತು. 

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸಂಜು ಸ್ಯಾಮ್ಸನ್ (Sanju Samson) ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ? ಎಂಬುದೇ ಈಗ ಕುತೂಹಲ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡದಿಂದ ಹೊರಬರಲು ಸಂಜು ನಿರ್ಧರಿಸಿದ್ದಾರೆ. ಈ ನಿರ್ಧಾರದ ಬೆನ್ನಲ್ಲೇ ಆರ್​ಆರ್ ತಂಡದ ನಾಯಕನನ್ನು ಖರೀದಿಸಲು ಸಿಎಸ್​ಕೆ ಫ್ರಾಂಚೈಸಿ ಮುಂದಾಗಿತ್ತು. 

1 / 5
ಆದರೆ ಸಂಜು ಸ್ಯಾಮ್ಸನ್ ಟ್ರೇಡ್​ಗಾಗಿ ರಾಜಸ್ಥಾನ್ ರಾಯಲ್ಸ್​ ಸ್ಟಾರ್ ಆಟಗಾರರ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಅಂದರೆ ಸಿಎಸ್​ಕೆ ತಂಡದಲ್ಲಿರುವ ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್ ಮತ್ತು ಶಿವಂ ದುಬೆ, ಈ ಮೂವರಲ್ಲಿ ಒಬ್ಬರನ್ನು ನೀಡಿದರೆ ಸಂಜು ಸ್ಯಾಮ್ಸನ್ ಅವರನ್ನು ನೀಡುವುದಾಗಿ ಸಿಎಸ್​ಕೆಗೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತಿಳಿಸಿದೆ.

ಆದರೆ ಸಂಜು ಸ್ಯಾಮ್ಸನ್ ಟ್ರೇಡ್​ಗಾಗಿ ರಾಜಸ್ಥಾನ್ ರಾಯಲ್ಸ್​ ಸ್ಟಾರ್ ಆಟಗಾರರ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಅಂದರೆ ಸಿಎಸ್​ಕೆ ತಂಡದಲ್ಲಿರುವ ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್ ಮತ್ತು ಶಿವಂ ದುಬೆ, ಈ ಮೂವರಲ್ಲಿ ಒಬ್ಬರನ್ನು ನೀಡಿದರೆ ಸಂಜು ಸ್ಯಾಮ್ಸನ್ ಅವರನ್ನು ನೀಡುವುದಾಗಿ ಸಿಎಸ್​ಕೆಗೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತಿಳಿಸಿದೆ.

2 / 5
ಆದರೆ ಇತ್ತ ಸಿಎಸ್​ಕೆ ಫ್ರಾಂಚೈಸಿ ಸ್ಟಾರ್ ಆಟಗಾರರನ್ನು ಕಳೆದುಕೊಳ್ಳಲು ಬಯಸುತ್ತಿಲ್ಲ. ಹೀಗಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ನಡುವಣ ಟ್ರೇಡ್ ಪ್ರಕ್ರಿಯೆಯು ವಿಫಲವಾಗಿದೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ರಂಗಕ್ಕೆ ಇಳಿದಿದೆ.

ಆದರೆ ಇತ್ತ ಸಿಎಸ್​ಕೆ ಫ್ರಾಂಚೈಸಿ ಸ್ಟಾರ್ ಆಟಗಾರರನ್ನು ಕಳೆದುಕೊಳ್ಳಲು ಬಯಸುತ್ತಿಲ್ಲ. ಹೀಗಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ನಡುವಣ ಟ್ರೇಡ್ ಪ್ರಕ್ರಿಯೆಯು ವಿಫಲವಾಗಿದೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ರಂಗಕ್ಕೆ ಇಳಿದಿದೆ.

3 / 5
ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್​ಗಾಗಿ ಇಬ್ಬರು ಆಟಗಾರರನ್ನು ನೀಡಲು ಮುಂದಾಗಿದೆ. ಆ ಇಬ್ಬರು ಆಟಗಾರರೆಂದು ರಮಣ್​ದೀಪ್ ಸಿಂಗ್ ಹಾಗೂ ಅಂಗ್​ಕ್ರಿಶ್ ರಘುವಂಶಿ. ಕಳೆದ ಕೆಲ ವರ್ಷಗಳಿಂದ ಕೆಕೆಆರ್ ತಂಡದ ಭಾಗವಾಗಿರುವ ರಮಣ್​ದೀಪ್ ಹಾಗೂ ಅಂಗ್​ಕ್ರಿಶ್ ಅವರನ್ನು ನೀಡುವ ಮೂಲಕ ಸ್ಯಾಮ್ಸನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ಕೆಕೆಆರ್ ಆಸಕ್ತಿ ತೋರಿದೆ.

ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್​ಗಾಗಿ ಇಬ್ಬರು ಆಟಗಾರರನ್ನು ನೀಡಲು ಮುಂದಾಗಿದೆ. ಆ ಇಬ್ಬರು ಆಟಗಾರರೆಂದು ರಮಣ್​ದೀಪ್ ಸಿಂಗ್ ಹಾಗೂ ಅಂಗ್​ಕ್ರಿಶ್ ರಘುವಂಶಿ. ಕಳೆದ ಕೆಲ ವರ್ಷಗಳಿಂದ ಕೆಕೆಆರ್ ತಂಡದ ಭಾಗವಾಗಿರುವ ರಮಣ್​ದೀಪ್ ಹಾಗೂ ಅಂಗ್​ಕ್ರಿಶ್ ಅವರನ್ನು ನೀಡುವ ಮೂಲಕ ಸ್ಯಾಮ್ಸನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ಕೆಕೆಆರ್ ಆಸಕ್ತಿ ತೋರಿದೆ.

4 / 5
ಕೆಕೆಆರ್ ನೀಡಿದ ಈ ಆಫರ್​ ಅನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಇನ್ನೂ ಸಹ ತಿರಸ್ಕರಿಸಿಲ್ಲ. ಹೀಗಾಗಿ ಇಬ್ಬರು ಆಟಗಾರರೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಟ್ರೇಡ್ ಕುದುರಿಕೊಳ್ಳುವ ಸಾಧ್ಯತೆಯಿದೆ. ಹೀಗೆ ಟ್ರೇಡ್ ಪ್ರಕ್ರಿಯೆ ಯಶಸ್ವಿಯಾದರೆ ಸಂಜು ಸ್ಯಾಮ್ಸನ್ ಮುಂದಿನ ಸೀಸನ್​ನಲ್ಲಿ ಕೆಕೆಆರ್ ಪರ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಕೆಕೆಆರ್ ನೀಡಿದ ಈ ಆಫರ್​ ಅನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಇನ್ನೂ ಸಹ ತಿರಸ್ಕರಿಸಿಲ್ಲ. ಹೀಗಾಗಿ ಇಬ್ಬರು ಆಟಗಾರರೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಟ್ರೇಡ್ ಕುದುರಿಕೊಳ್ಳುವ ಸಾಧ್ಯತೆಯಿದೆ. ಹೀಗೆ ಟ್ರೇಡ್ ಪ್ರಕ್ರಿಯೆ ಯಶಸ್ವಿಯಾದರೆ ಸಂಜು ಸ್ಯಾಮ್ಸನ್ ಮುಂದಿನ ಸೀಸನ್​ನಲ್ಲಿ ಕೆಕೆಆರ್ ಪರ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ