AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: KKR ತಂಡಕ್ಕೆ ಮೇಜರ್ ಸರ್ಜರಿ: ಇಬ್ಬರು ಔಟ್

Kolkata Knight Riders: ಇಂಡಿಯನ್ ಪ್ರೀಮಿಯರ್ ಲೀಗ್​ನ ಬಲಿಷ್ಠ ತಂಡಗಳಲ್ಲಿ ಒಂದೆನಿಸಿಕೊಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಕಳೆದ ಸೀಸನ್​ನಲ್ಲಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಅಲ್ಲದೆ 8ನೇ ಸ್ಥಾನ ಅಲಂಕರಿಸುವ ಮೂಲಕ ಟೂರ್ನಿಯನ್ನು ಅಂತ್ಯಗೊಳಿಸಿತ್ತು. ಈ ಕಳಪೆ ಪ್ರದರ್ಶನದ ಕಾರಣ ಇದೀಗ ಕೆಕೆಆರ್ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ಫ್ರಾಂಚೈಸಿ ಮುಂದಾಗಿದೆ.

ಝಾಹಿರ್ ಯೂಸುಫ್
|

Updated on: Jul 30, 2025 | 10:24 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಫ್ರಾಂಚೈಸಿಯು ಮುಂದಿನ ಸೀಸನ್​ಗಾಗಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಚಂದ್ರಕಾಂತ್ ಪಂಡಿತ್ ಅವರನ್ನು ಕೆಕೆಆರ್​ ತಂಡದ ಮುಖ್ಯ ಕೋಚ್ ಹುದ್ದೆಯಿಂದ ವಜಾಗೊಳಿಸಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಫ್ರಾಂಚೈಸಿಯು ಮುಂದಿನ ಸೀಸನ್​ಗಾಗಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಚಂದ್ರಕಾಂತ್ ಪಂಡಿತ್ ಅವರನ್ನು ಕೆಕೆಆರ್​ ತಂಡದ ಮುಖ್ಯ ಕೋಚ್ ಹುದ್ದೆಯಿಂದ ವಜಾಗೊಳಿಸಿದೆ.

1 / 5
ಚಂದ್ರಕಾಂತ್ ಪಂಡಿತ್ 2022 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದರು. ಅಲ್ಲದೆ ಅವರ ಮುಂದಾಳತ್ವದಲ್ಲಿ ಕೆಕೆಆರ್ ತಂಡವು 2024 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಆದರೆ ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹೀಗಾಗಿ ಚಂದ್ರಕಾಂತ್ ಪಂಡಿತ್ ಅವರನ್ನು ಕೈ ಬಿಟ್ಟು, ಮುಂದಿನ ಸೀಸನ್​ಗೆ ಹೊಸ ಕೋಚ್ ಅನ್ನು ನೇಮಿಸಲು ಕೆಕೆಆರ್ ಮುಂದಾಗಿದೆ.

ಚಂದ್ರಕಾಂತ್ ಪಂಡಿತ್ 2022 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದರು. ಅಲ್ಲದೆ ಅವರ ಮುಂದಾಳತ್ವದಲ್ಲಿ ಕೆಕೆಆರ್ ತಂಡವು 2024 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಆದರೆ ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹೀಗಾಗಿ ಚಂದ್ರಕಾಂತ್ ಪಂಡಿತ್ ಅವರನ್ನು ಕೈ ಬಿಟ್ಟು, ಮುಂದಿನ ಸೀಸನ್​ಗೆ ಹೊಸ ಕೋಚ್ ಅನ್ನು ನೇಮಿಸಲು ಕೆಕೆಆರ್ ಮುಂದಾಗಿದೆ.

2 / 5
ಇನ್ನು ಚಂದ್ರಕಾಂತ್ ಪಂಡಿತ್ ಅವರ ಬೆನ್ನಲ್ಲೇ ಕಳೆದ ಸೀಸನ್​ನಲ್ಲಿ ಬೌಲಿಂಗ್ ಕೋಚ್ ಆಗಿ ಕಾಣಿಸಿಕೊಂಡಿದ್ದ ಭರತ್ ಅರುಣ್ ಅವರನ್ನು ಸಹ ಕೈ ಬಿಡಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಈ ಹಿಂದೆ ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ಭರತ್ ಅರುಣ್ ಅವರು ಕಳೆದ ಕೆಲ ಸೀಸನ್​ಗಳಿಂದ ಕೆಕೆಆರ್ ತಂಡದ ಬೌಲಿಂಗ್ ತರಬೇತುದಾರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನೂ ಸಹ ಕೈ ಬಿಡಲು ಕೆಕೆಆರ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಇನ್ನು ಚಂದ್ರಕಾಂತ್ ಪಂಡಿತ್ ಅವರ ಬೆನ್ನಲ್ಲೇ ಕಳೆದ ಸೀಸನ್​ನಲ್ಲಿ ಬೌಲಿಂಗ್ ಕೋಚ್ ಆಗಿ ಕಾಣಿಸಿಕೊಂಡಿದ್ದ ಭರತ್ ಅರುಣ್ ಅವರನ್ನು ಸಹ ಕೈ ಬಿಡಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಈ ಹಿಂದೆ ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ಭರತ್ ಅರುಣ್ ಅವರು ಕಳೆದ ಕೆಲ ಸೀಸನ್​ಗಳಿಂದ ಕೆಕೆಆರ್ ತಂಡದ ಬೌಲಿಂಗ್ ತರಬೇತುದಾರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನೂ ಸಹ ಕೈ ಬಿಡಲು ಕೆಕೆಆರ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

3 / 5
ಇತ್ತ ಮುಖ್ಯ ಕೋಚ್ ಹಾಗೂ ಬೌಲಿಂಗ್ ಕೋಚ್ ಬದಲಾವಣೆಯೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಈ ಬಾರಿ ಮಹತ್ವದ ಬದಲಾವಣೆಯಾಗುವುದು ಖಿಚತವಾಗಿದೆ. ಅದರಲ್ಲೂ ಐಪಿಎಲ್ ಮಿನಿ ಹರಾಜಿಗೂ ಮುನ್ನ ಕೆಲ ಹಿರಿಯ ಆಟಗಾರರಿಗೆ ತಂಡದಿಂದ ಗೇಟ್ ಪಾಸ್ ನೀಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಹೀಗಾಗಿ ಐಪಿಎಲ್ 2026 ಕ್ಕೂ ಮುನ್ನ ಕೆಕೆಆರ್ ತಂಡದಿಂದ ಕೆಲ ಸ್ಟಾರ್ ಆಟಗಾರರು ಹೊರಬೀಳುವುದು ಖಚಿತ ಎನ್ನಬಹುದು.

ಇತ್ತ ಮುಖ್ಯ ಕೋಚ್ ಹಾಗೂ ಬೌಲಿಂಗ್ ಕೋಚ್ ಬದಲಾವಣೆಯೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಈ ಬಾರಿ ಮಹತ್ವದ ಬದಲಾವಣೆಯಾಗುವುದು ಖಿಚತವಾಗಿದೆ. ಅದರಲ್ಲೂ ಐಪಿಎಲ್ ಮಿನಿ ಹರಾಜಿಗೂ ಮುನ್ನ ಕೆಲ ಹಿರಿಯ ಆಟಗಾರರಿಗೆ ತಂಡದಿಂದ ಗೇಟ್ ಪಾಸ್ ನೀಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಹೀಗಾಗಿ ಐಪಿಎಲ್ 2026 ಕ್ಕೂ ಮುನ್ನ ಕೆಕೆಆರ್ ತಂಡದಿಂದ ಕೆಲ ಸ್ಟಾರ್ ಆಟಗಾರರು ಹೊರಬೀಳುವುದು ಖಚಿತ ಎನ್ನಬಹುದು.

4 / 5
 ಕೊಲ್ಕತ್ತಾ ನೈಟ್ ರೈಡರ್ಸ್ ತಂಡ: ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಕ್ವಿಂಟನ್ ಡಿ ಕಾಕ್, ರಹಮಾನುಲ್ಲಾ ಗುರ್ಬಾಝ್, ಅಂಗ್‌ಕ್ರಿಶ್ ರಘುವಂಶಿ, ವೆಂಕಟೇಶ್ ಅಯ್ಯರ್, ರಮಣ್​ದೀಪ್ ಸಿಂಗ್, ಆ್ಯಂಡ್ರೆ ರಸೆಲ್, ಅನ್ರಿಕ್ ನೋಕಿಯ, ಹರ್ಷಿತ್ ರಾಣಾ, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರ, ಮಯಾಂಕ್ ಮಾರ್ಕಂಡೆ, ರೋವ್ಮನ್ ಪೊವೆಲ್, ಮನೀಶ್ ಪಾಂಡೆ, ಸ್ಪೆನ್ಸರ್ ಜಾನ್ಸನ್, ಲವ್​ನೀತ್ ಸಿಸೋಡಿಯಾ, ಅನ್ಕೂಲ್ ರಾಯ್, ಮೊಯಿನ್ ಅಲಿ.

 ಕೊಲ್ಕತ್ತಾ ನೈಟ್ ರೈಡರ್ಸ್ ತಂಡ: ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಕ್ವಿಂಟನ್ ಡಿ ಕಾಕ್, ರಹಮಾನುಲ್ಲಾ ಗುರ್ಬಾಝ್, ಅಂಗ್‌ಕ್ರಿಶ್ ರಘುವಂಶಿ, ವೆಂಕಟೇಶ್ ಅಯ್ಯರ್, ರಮಣ್​ದೀಪ್ ಸಿಂಗ್, ಆ್ಯಂಡ್ರೆ ರಸೆಲ್, ಅನ್ರಿಕ್ ನೋಕಿಯ, ಹರ್ಷಿತ್ ರಾಣಾ, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರ, ಮಯಾಂಕ್ ಮಾರ್ಕಂಡೆ, ರೋವ್ಮನ್ ಪೊವೆಲ್, ಮನೀಶ್ ಪಾಂಡೆ, ಸ್ಪೆನ್ಸರ್ ಜಾನ್ಸನ್, ಲವ್​ನೀತ್ ಸಿಸೋಡಿಯಾ, ಅನ್ಕೂಲ್ ರಾಯ್, ಮೊಯಿನ್ ಅಲಿ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!