AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಈ ಆಟಗಾರನನ್ನು ಖರೀದಿಸಿದ್ದೇ ಕೆಎಲ್ ರಾಹುಲ್​ಗಾಗಿ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಜೋಡಿ ಬದಲಾಗುವುದು ಖಚಿತ. ಏಕೆಂದರೆ ಕಳೆದ ಬಾರಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಜೇಕ್ ಫ್ರೇಸರ್ ಮೆಕ್ ಗುರ್ಕ್ ಅವರನ್ನು ಡಿಸಿ ಫ್ರಾಂಚೈಸಿ ತಂಡದಿಂದ ಕೈ ಬಿಟ್ಟಿದೆ. ಹೀಗಾಗಿ ಕೆಎಲ್ ರಾಹುಲ್ ಹಾಗೂ ಬೆನ್ ಡಕೆಟ್ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Dec 22, 2025 | 7:55 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್​ ಬಲಿಷ್ಠ ಪಡೆಯನ್ನು ರೂಪಿಸಿದೆ. ಹರಾಜಿಗೂ ಮುನ್ನ 17 ಆಟಗಾರರನ್ನು ಉಳಿಸಿಕೊಂಡಿದ್ದ ಡೆಲ್ಲಿ ಫ್ರಾಂಚೈಸಿ, ಆಕ್ಷನ್​ ಮೂಲಕ 8 ಆಟಗಾರರನ್ನು ಖರೀದಿಸಿದ್ದಾರೆ. ಈ ಎಂಟು ಆಟಗಾರರಲ್ಲಿ ಐವರು ವಿದೇಶಿ ಪ್ಲೇಯರ್ಸ್ ಎಂಬುದು ವಿಶೇಷ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್​ ಬಲಿಷ್ಠ ಪಡೆಯನ್ನು ರೂಪಿಸಿದೆ. ಹರಾಜಿಗೂ ಮುನ್ನ 17 ಆಟಗಾರರನ್ನು ಉಳಿಸಿಕೊಂಡಿದ್ದ ಡೆಲ್ಲಿ ಫ್ರಾಂಚೈಸಿ, ಆಕ್ಷನ್​ ಮೂಲಕ 8 ಆಟಗಾರರನ್ನು ಖರೀದಿಸಿದ್ದಾರೆ. ಈ ಎಂಟು ಆಟಗಾರರಲ್ಲಿ ಐವರು ವಿದೇಶಿ ಪ್ಲೇಯರ್ಸ್ ಎಂಬುದು ವಿಶೇಷ.

1 / 5
ಈ ಐವರು ವಿದೇಶಿ ಆಟಗಾರರಲ್ಲಿ ಬೆನ್ ಡಕೆಟ್ ಕೂಡ ಒಬ್ಬರು. ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಬೆನ್ ಡಕೆಟ್ ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದರೆ ಕಳೆದ 18 ಸೀಸನ್​ಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನತ್ತ ಮುಖ ಮಾಡದ ಡಕೆಟ್​ನನ್ನು ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಖರೀದಿಸಿದೆ.

ಈ ಐವರು ವಿದೇಶಿ ಆಟಗಾರರಲ್ಲಿ ಬೆನ್ ಡಕೆಟ್ ಕೂಡ ಒಬ್ಬರು. ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಬೆನ್ ಡಕೆಟ್ ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದರೆ ಕಳೆದ 18 ಸೀಸನ್​ಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನತ್ತ ಮುಖ ಮಾಡದ ಡಕೆಟ್​ನನ್ನು ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಖರೀದಿಸಿದೆ.

2 / 5
ವಿಶೇಷ ಎಂದರೆ ಬೆನ್ ಡಕೆಟ್​ನ ಖರೀದಿಸಿರುವುದು ಕೆಎಲ್ ರಾಹುಲ್​ಗಾಗಿ. ಐಪಿಎಲ್ ಹರಾಜಿಗೂ ಮುನ್ನ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮಾಲೀಕ ಪಾರ್ಥ್ ಜಿಂದಾಲ್ ಜೊತೆ ತಂಡಕ್ಕೆ ಡಕೆಟ್​ ಅವರ ಅವಶ್ಯಕತೆಯಿದೆ ಎಂದಿದ್ದರು. ಹೀಗಾಗಿಯೇ ಬೆನ್ ಡಕೆಟ್​ ಅವರಿಗಾಗಿ ನಾವು ಬಿಡ್ ಮಾಡಿದ್ದೇವೆ ಎಂದು ಜಿಂದಾಲ್ ತಿಳಿಸಿದ್ದಾರೆ.

ವಿಶೇಷ ಎಂದರೆ ಬೆನ್ ಡಕೆಟ್​ನ ಖರೀದಿಸಿರುವುದು ಕೆಎಲ್ ರಾಹುಲ್​ಗಾಗಿ. ಐಪಿಎಲ್ ಹರಾಜಿಗೂ ಮುನ್ನ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮಾಲೀಕ ಪಾರ್ಥ್ ಜಿಂದಾಲ್ ಜೊತೆ ತಂಡಕ್ಕೆ ಡಕೆಟ್​ ಅವರ ಅವಶ್ಯಕತೆಯಿದೆ ಎಂದಿದ್ದರು. ಹೀಗಾಗಿಯೇ ಬೆನ್ ಡಕೆಟ್​ ಅವರಿಗಾಗಿ ನಾವು ಬಿಡ್ ಮಾಡಿದ್ದೇವೆ ಎಂದು ಜಿಂದಾಲ್ ತಿಳಿಸಿದ್ದಾರೆ.

3 / 5
ಇತ್ತ ಕೆಎಲ್ ರಾಹುಲ್ ಸೂಚನೆ ಮೇರೆಗೆ ಡಿಸಿ ಫ್ರಾಂಚೈಸಿ ಇಂಗ್ಲೆಂಡ್ ದಾಂಡಿಗನ ಖರೀದಿಸಿರುವ ಕಾರಣ ಈ ಬಾರಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಬೆನ್ ಡಕೆಟ್ ಆರಂಭಿಕನಾಗಿ ಆರಂಭಿಕನಾಗಿ ಕಣಕ್ಕಿಳಿಯಬಹುದು. ಅಂದರೆ ರಾಹುಲ್ ಹಾಗೂ ಡಕೆಟ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ.

ಇತ್ತ ಕೆಎಲ್ ರಾಹುಲ್ ಸೂಚನೆ ಮೇರೆಗೆ ಡಿಸಿ ಫ್ರಾಂಚೈಸಿ ಇಂಗ್ಲೆಂಡ್ ದಾಂಡಿಗನ ಖರೀದಿಸಿರುವ ಕಾರಣ ಈ ಬಾರಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಬೆನ್ ಡಕೆಟ್ ಆರಂಭಿಕನಾಗಿ ಆರಂಭಿಕನಾಗಿ ಕಣಕ್ಕಿಳಿಯಬಹುದು. ಅಂದರೆ ರಾಹುಲ್ ಹಾಗೂ ಡಕೆಟ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ.

4 / 5
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕೆಎಲ್ ರಾಹುಲ್, ಅಭಿಷೇಕ್ ಪೊರೆಲ್, ಟ್ರಿಸ್ಟನ್ ಸ್ಟಬ್ಸ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ವಿಪ್ರಾಜ್ ನಿಗಮ್, ಮಾಧವ್ ತಿವಾರಿ, ತ್ರಿಪುರಾಣ ವಿಜಯ್, ಅಜಯ್ ಮಂಡಲ್, ಕುಲ್ದೀಪ್ ಯಾದವ್, ಮಿಚೆಲ್ ಸ್ಟಾರ್ಕ್, ಟಿ. ನಟರಾಜನ್, ಮುಕೇಶ್ ಕುಮಾರ್, ದುಷ್ಮಂತ ಚಮೀರಾ, ಆಕಿಬ್ ನಬಿ, ಪಾತುಮ್ ನಿಸ್ಸಂಕಾ, ಬೆನ್ ಡಕೆಟ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಸಾಹಿಲ್ ಪರಾಖ್, ಪೃಥ್ವಿ ಶಾ, ಕೈಲ್ ಜೇಮಿಸನ್.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕೆಎಲ್ ರಾಹುಲ್, ಅಭಿಷೇಕ್ ಪೊರೆಲ್, ಟ್ರಿಸ್ಟನ್ ಸ್ಟಬ್ಸ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ವಿಪ್ರಾಜ್ ನಿಗಮ್, ಮಾಧವ್ ತಿವಾರಿ, ತ್ರಿಪುರಾಣ ವಿಜಯ್, ಅಜಯ್ ಮಂಡಲ್, ಕುಲ್ದೀಪ್ ಯಾದವ್, ಮಿಚೆಲ್ ಸ್ಟಾರ್ಕ್, ಟಿ. ನಟರಾಜನ್, ಮುಕೇಶ್ ಕುಮಾರ್, ದುಷ್ಮಂತ ಚಮೀರಾ, ಆಕಿಬ್ ನಬಿ, ಪಾತುಮ್ ನಿಸ್ಸಂಕಾ, ಬೆನ್ ಡಕೆಟ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಸಾಹಿಲ್ ಪರಾಖ್, ಪೃಥ್ವಿ ಶಾ, ಕೈಲ್ ಜೇಮಿಸನ್.

5 / 5
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು