AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 2 ದಿನಗಳ ಮುಂಚೆ ಆಯ್ಕೆ… RCB ಆಟಗಾರನಿಗೆ ಖುಲಾಯಿಸಲಿದೆಯಾ ಅದೃಷ್ಟ

Mayank Agarwal: ಈ ಬಾರಿ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕೇವಲ 4 ಪಂದ್ಯಗಳನ್ನಾಡಿರುವ ಮಯಾಂಕ್ ಅಗರ್ವಾಲ್ ಒಟ್ಟು 95 ರನ್ ಕಲೆಹಾಕಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಮಯಾಂಕ್ ಅಗರ್ವಾಲ್ ತನ್ನದೇಯಾದ ಕೊಡುಗೆಯನ್ನು ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 13, 2025 | 7:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟ ಪ್ಲೇಯರ್ಸ್​ಗಳಲ್ಲಿ ಮಯಾಂಕ್ ಅಗರ್ವಾಲ್ (Mayank Agarwal) ಕೂಡ ಒಬ್ಬರು. ಈ ಬಾರಿಯ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಗಾಯಗೊಂಡ ಪರಿಣಾಮ ಮಯಾಂಕ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟ ಪ್ಲೇಯರ್ಸ್​ಗಳಲ್ಲಿ ಮಯಾಂಕ್ ಅಗರ್ವಾಲ್ (Mayank Agarwal) ಕೂಡ ಒಬ್ಬರು. ಈ ಬಾರಿಯ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಗಾಯಗೊಂಡ ಪರಿಣಾಮ ಮಯಾಂಕ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದರು.

1 / 5
ಈ ಆಯ್ಕೆಯೊಂದಿಗೆ ಮಯಾಂಕ್ ಅಗರ್ವಾಲ್ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು. ಅದರಲ್ಲೂ ಕೊನೆಯ 4 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕನ್ನಡಿಗ ಆರ್​ಸಿಬಿ ತಂಡ ಟ್ರೋಫಿ ಗೆಲ್ಲುವಲ್ಲಿ ತನ್ನದೇಯಾದ ಕೊಡುಗೆಯನ್ನು ಸಹ ನೀಡಿದ್ದರು. ಇದಾಗ್ಯೂ ಮಯಾಂಕ್ ಅವರನ್ನು ಆರ್​ಸಿಬಿ ಮುಂದಿನ ಸೀಸನ್​ಗೆ ಉಳಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

ಈ ಆಯ್ಕೆಯೊಂದಿಗೆ ಮಯಾಂಕ್ ಅಗರ್ವಾಲ್ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು. ಅದರಲ್ಲೂ ಕೊನೆಯ 4 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕನ್ನಡಿಗ ಆರ್​ಸಿಬಿ ತಂಡ ಟ್ರೋಫಿ ಗೆಲ್ಲುವಲ್ಲಿ ತನ್ನದೇಯಾದ ಕೊಡುಗೆಯನ್ನು ಸಹ ನೀಡಿದ್ದರು. ಇದಾಗ್ಯೂ ಮಯಾಂಕ್ ಅವರನ್ನು ಆರ್​ಸಿಬಿ ಮುಂದಿನ ಸೀಸನ್​ಗೆ ಉಳಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

2 / 5
ಏಕೆಂದರೆ ಐಪಿಎಲ್​ ನಿಯಮದ ಪ್ರಕಾರ, ಕೊನೆಯ ಪಂದ್ಯಗಳ ವೇಳೆ ಅಂದರೆ ಐಪಿಎಲ್ ಸ್ಥಗಿತಗೊಂಡು ಮರು ಆಯೋಜನೆಗೊಂಡಾಗ ಬದಲಿ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡವರನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳುವಂತಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದು, ಐಪಿಎಲ್ ಸ್ಥಗಿತಗೊಳ್ಳುವ 48 ಗಂಟೆಗಳ ಮುಂಚೆ.

ಏಕೆಂದರೆ ಐಪಿಎಲ್​ ನಿಯಮದ ಪ್ರಕಾರ, ಕೊನೆಯ ಪಂದ್ಯಗಳ ವೇಳೆ ಅಂದರೆ ಐಪಿಎಲ್ ಸ್ಥಗಿತಗೊಂಡು ಮರು ಆಯೋಜನೆಗೊಂಡಾಗ ಬದಲಿ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡವರನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳುವಂತಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದು, ಐಪಿಎಲ್ ಸ್ಥಗಿತಗೊಳ್ಳುವ 48 ಗಂಟೆಗಳ ಮುಂಚೆ.

3 / 5
ಅಂದರೆ ಭಾರತ-ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ಐಪಿಎಲ್ ಸ್ಥಗಿತಗೊಳ್ಳುವ 2 ದಿನಗಳ ಮೊದಲೇ ಮಯಾಂಕ್ ಅಗರ್ವಾಲ್ ಆರ್​​ಸಿಬಿ ತಂಡವನ್ನು ಸೇರಿಕೊಂಡಿದ್ದರು. ಹೀಗಾಗಿ ಅವರನ್ನು ರಿಟೈನ್​​ ಮಾಡಿಕೊಳ್ಳಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಅವಕಾಶವಿದೆ. ಅದರಂತೆ ಐಪಿಎಲ್ 2026 ರಲ್ಲೂ ಕನ್ನಡಿಗ ಆರ್​ಸಿಬಿ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಅಂದರೆ ಭಾರತ-ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ಐಪಿಎಲ್ ಸ್ಥಗಿತಗೊಳ್ಳುವ 2 ದಿನಗಳ ಮೊದಲೇ ಮಯಾಂಕ್ ಅಗರ್ವಾಲ್ ಆರ್​​ಸಿಬಿ ತಂಡವನ್ನು ಸೇರಿಕೊಂಡಿದ್ದರು. ಹೀಗಾಗಿ ಅವರನ್ನು ರಿಟೈನ್​​ ಮಾಡಿಕೊಳ್ಳಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಅವಕಾಶವಿದೆ. ಅದರಂತೆ ಐಪಿಎಲ್ 2026 ರಲ್ಲೂ ಕನ್ನಡಿಗ ಆರ್​ಸಿಬಿ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

4 / 5
ಇದಾಗ್ಯೂ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಟಿಮ್ ಸೈಫರ್ಟ್ ಹಾಗೂ ಬ್ಲೆಸಿಂಗ್ ಮುಝರಬಾನಿಯನ್ನು ಉಳಿಸಿಕೊಳ್ಳುವಂತಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಐಪಿಎಲ್​ನ ಕೊನೆಯ ಹಂತದಲ್ಲಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾದ ಮೂವರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಆರ್​ಸಿಬಿ ಬಳಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಇದಾಗ್ಯೂ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಟಿಮ್ ಸೈಫರ್ಟ್ ಹಾಗೂ ಬ್ಲೆಸಿಂಗ್ ಮುಝರಬಾನಿಯನ್ನು ಉಳಿಸಿಕೊಳ್ಳುವಂತಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಐಪಿಎಲ್​ನ ಕೊನೆಯ ಹಂತದಲ್ಲಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾದ ಮೂವರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಆರ್​ಸಿಬಿ ಬಳಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್