AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಚಿನ್ನಸ್ವಾಮಿ ಸ್ಟೇಡಿಯಂ ನಿಷೇಧ: RCB ಕಣಕ್ಕಿಳಿಯುವುದು ಎಲ್ಲಿ?

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ​ಸಿ ಬಿ) ತಂಡವು ಮುಂದಿನ ಸೀಸನ್​ನಲ್ಲಿ ಹೊಸ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ 2ನೇ ತವರು ಮೈದಾನವನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Nov 12, 2025 | 2:33 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸುವುದು ಅನುಮಾನ. ಹೀಗಾಗಿಯೇ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದೆಲ್ಲಿ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸುವುದು ಅನುಮಾನ. ಹೀಗಾಗಿಯೇ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದೆಲ್ಲಿ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 5
ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಎಂಸಿಎ. ಮಹಾರಾಷ್ಟ್ರ ಕ್ರಿಕೆಟ್  ಅಸೋಸಿಯೇಷನ್​ನ ​​(ಎಂಸಿಎ) ಅಧೀನದಲ್ಲಿರುವ ಪುಣೆಯ MCA ಸ್ಟೇಡಿಯಂನಲ್ಲಿ ಆರ್​ಸಿಬಿ ತನ್ನ ಪಂದ್ಯಗಳನ್ನು ಆಯೋಜಿಸಲು ಮಾತುಕತೆ ನಡೆಸಿದೆ. ಹೀಗಾಗಿ ಐಪಿಎಲ್ 2026 ರಲ್ಲಿ ಆರ್​ಸಿಬಿ ಪುಣೆಯಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ.

ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಎಂಸಿಎ. ಮಹಾರಾಷ್ಟ್ರ ಕ್ರಿಕೆಟ್  ಅಸೋಸಿಯೇಷನ್​ನ ​​(ಎಂಸಿಎ) ಅಧೀನದಲ್ಲಿರುವ ಪುಣೆಯ MCA ಸ್ಟೇಡಿಯಂನಲ್ಲಿ ಆರ್​ಸಿಬಿ ತನ್ನ ಪಂದ್ಯಗಳನ್ನು ಆಯೋಜಿಸಲು ಮಾತುಕತೆ ನಡೆಸಿದೆ. ಹೀಗಾಗಿ ಐಪಿಎಲ್ 2026 ರಲ್ಲಿ ಆರ್​ಸಿಬಿ ಪುಣೆಯಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ.

2 / 5
ಆರ್​ಸಿಬಿ ತಂಡಕ್ಕೆ ತವರಿನಲ್ಲಿ ಪಂದ್ಯ ಆಯೋಜಿಸಲು ಸಮಸ್ಯೆಗಳಿವೆ. ಹೀಗಾಗಿ ಅವರು ಪರ್ಯಾಯ ಸ್ಥಳಗಳನ್ನು ಹುಡುಕುತ್ತಿದ್ದಾರೆ. ಈ ಬಗ್ಗೆ ನಮ್ಮೊಂದಿಗೆ ಚರ್ಚಿಸಿದ್ದಾರೆ. ಐಪಿಎಲ್ ವೇಳೆ ನಮ್ಮ ಕ್ರೀಡಾಂಗಣ ಫ್ರೀ ಇರುವುದರಿಂದ ಇಲ್ಲಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಎಂಸಿಎ ಕಾರ್ಯದರ್ಶಿ ಕಮಲೇಶ್ ಪಿಸಾಲ್ ತಿಳಿಸಿದ್ದಾರೆ.

ಆರ್​ಸಿಬಿ ತಂಡಕ್ಕೆ ತವರಿನಲ್ಲಿ ಪಂದ್ಯ ಆಯೋಜಿಸಲು ಸಮಸ್ಯೆಗಳಿವೆ. ಹೀಗಾಗಿ ಅವರು ಪರ್ಯಾಯ ಸ್ಥಳಗಳನ್ನು ಹುಡುಕುತ್ತಿದ್ದಾರೆ. ಈ ಬಗ್ಗೆ ನಮ್ಮೊಂದಿಗೆ ಚರ್ಚಿಸಿದ್ದಾರೆ. ಐಪಿಎಲ್ ವೇಳೆ ನಮ್ಮ ಕ್ರೀಡಾಂಗಣ ಫ್ರೀ ಇರುವುದರಿಂದ ಇಲ್ಲಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಎಂಸಿಎ ಕಾರ್ಯದರ್ಶಿ ಕಮಲೇಶ್ ಪಿಸಾಲ್ ತಿಳಿಸಿದ್ದಾರೆ.

3 / 5
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ಕಾಲ್ತುಳಿತ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.

ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ಕಾಲ್ತುಳಿತ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.

4 / 5
ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಲೋಪದೋಷಗಳು ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಈ ದುರಂತದ ಬಳಿಕ ಬಿಸಿಸಿಐ ಬೆಂಗಳೂರಿನಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿಲ್ಲ. ಅಲ್ಲದೆ ಮುಂಬರುವ ಐಪಿಎಲ್​ ಪಂದ್ಯಗಳಿಗೂ ಎನ್​ಒಸಿ ಸಿಗುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪುಣೆಯ ಸ್ಟೇಡಿಯಂ ಅನ್ನು ತನ್ನ 2ನೇ ತವರು ಮೈದಾನವಾಗಿ ಆಯ್ಕೆ ಮಾಡಲು ಮುಂದಾಗಿದೆ.

ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಲೋಪದೋಷಗಳು ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಈ ದುರಂತದ ಬಳಿಕ ಬಿಸಿಸಿಐ ಬೆಂಗಳೂರಿನಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿಲ್ಲ. ಅಲ್ಲದೆ ಮುಂಬರುವ ಐಪಿಎಲ್​ ಪಂದ್ಯಗಳಿಗೂ ಎನ್​ಒಸಿ ಸಿಗುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪುಣೆಯ ಸ್ಟೇಡಿಯಂ ಅನ್ನು ತನ್ನ 2ನೇ ತವರು ಮೈದಾನವಾಗಿ ಆಯ್ಕೆ ಮಾಡಲು ಮುಂದಾಗಿದೆ.

5 / 5

Published On - 2:09 pm, Wed, 12 November 25

Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ