AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡಕ್ಕೆ ಬಿಗ್ ಶಾಕ್: ಇಂಗ್ಲೆಂಡ್​ಗೆ ತೆರಳಿದ ಫಿಲ್ ಸಾಲ್ಟ್!

IPL 2026 RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈವರೆಗೆ 9 ಪಂದ್ಯಗಳನ್ನಾಡಿದೆ. ಈ 9 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಆರ್​ಸಿಬಿ ತಂಡಕ್ಕೆ 5 ಪಂದ್ಯಗಳಿವೆ. ಈ ಪಂದ್ಯಗಳಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ತವರಿಗೆ ಮರಳಿದ್ದಾರೆ.

ಝಾಹಿರ್ ಯೂಸುಫ್
|

Updated on: May 04, 2026 | 1:06 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಫಿಲ್ ಸಾಲ್ಟ್ (Phil Salt) ಇಂಗ್ಲೆಂಡ್​ಗೆ ಮರಳಿದ್ದಾರೆ. ಹೀಗೆ ಇಂಗ್ಲೆಂಡ್​ಗೆ ವಾಪಾಸ್ ಆಗಲು ಮುಖ್ಯ ಕಾರಣ ಇಸಿಬಿ ಸೂಚನೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಫಿಲ್ ಸಾಲ್ಟ್ (Phil Salt) ಇಂಗ್ಲೆಂಡ್​ಗೆ ಮರಳಿದ್ದಾರೆ. ಹೀಗೆ ಇಂಗ್ಲೆಂಡ್​ಗೆ ವಾಪಾಸ್ ಆಗಲು ಮುಖ್ಯ ಕಾರಣ ಇಸಿಬಿ ಸೂಚನೆ.

1 / 6
ಏಪ್ರಿಲ್ 18ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಸಾಲ್ಟ್ ಅವರ ಎಡಗೈ ಬೆರಳಿಗೆ ಗಂಭೀರ ಗಾಯವಾಗಿತ್ತು. ಆರಂಭದಲ್ಲಿ ಇದು ಸಣ್ಣ ಗಾಯ ಎಂದು ಭಾವಿಸಲಾಗಿದ್ದರೂ, ಕಳೆದ ಮೂರು ಪಂದ್ಯಗಳಿಂದ ಅವರು ಕಣಕ್ಕಿಳಿಯಲು ಸಾಧ್ಯವಾಗಿರಲಿಲ್ಲ.

ಏಪ್ರಿಲ್ 18ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಸಾಲ್ಟ್ ಅವರ ಎಡಗೈ ಬೆರಳಿಗೆ ಗಂಭೀರ ಗಾಯವಾಗಿತ್ತು. ಆರಂಭದಲ್ಲಿ ಇದು ಸಣ್ಣ ಗಾಯ ಎಂದು ಭಾವಿಸಲಾಗಿದ್ದರೂ, ಕಳೆದ ಮೂರು ಪಂದ್ಯಗಳಿಂದ ಅವರು ಕಣಕ್ಕಿಳಿಯಲು ಸಾಧ್ಯವಾಗಿರಲಿಲ್ಲ.

2 / 6
ಇತ್ತ ಫಿಲ್ ಸಾಲ್ಟ್ ಗಾಯಗೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ (ECB) ತವರಿಗೆ ಮರಳುವಂತೆ ಸೂಚಿಸಿದ್ದಾರೆ. ಅಲ್ಲದೆ ಇಂಗ್ಲೆಂಡ್​ನಲ್ಲೇ ವೈದ್ಯಕೀಯ ಸ್ಕ್ಯಾನಿಂಗ್​ ಹಾಗೂ ಹೆಚ್ಚಿನ ಚಿಕಿತ್ಸೆ ಪಡೆಯುವಂತೆ ಆದೇಶಿಸಿದ್ದಾರೆ.

ಇತ್ತ ಫಿಲ್ ಸಾಲ್ಟ್ ಗಾಯಗೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ (ECB) ತವರಿಗೆ ಮರಳುವಂತೆ ಸೂಚಿಸಿದ್ದಾರೆ. ಅಲ್ಲದೆ ಇಂಗ್ಲೆಂಡ್​ನಲ್ಲೇ ವೈದ್ಯಕೀಯ ಸ್ಕ್ಯಾನಿಂಗ್​ ಹಾಗೂ ಹೆಚ್ಚಿನ ಚಿಕಿತ್ಸೆ ಪಡೆಯುವಂತೆ ಆದೇಶಿಸಿದ್ದಾರೆ.

3 / 6
ಹೀಗಾಗಿ ಫಿಲ್ ಸಾಲ್ಟ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ತೊರೆದು ಇಂಗ್ಲೆಂಡ್​ಗೆ ಪ್ರಯಾಣಿಸಿದ್ದಾರೆ. ಅದರಂತೆ ಇನ್ನು ಕೆಲ ದಿನಗಳ ಕಾಲ ಸಾಲ್ಟ್ ಇಂಗ್ಲೆಂಡ್​ನಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಇದಾದ ಬಳಿಕ ವೈದ್ಯಕೀಯ ವರದಿ ಆಧರಿಸಿ ಮಾತ್ರ ಅವರಿಗೆ ಐಪಿಎಲ್​ನಲ್ಲಿ ಆಡಲು ಅವಕಾಶ ಸಿಗಲಿದೆ.

ಹೀಗಾಗಿ ಫಿಲ್ ಸಾಲ್ಟ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ತೊರೆದು ಇಂಗ್ಲೆಂಡ್​ಗೆ ಪ್ರಯಾಣಿಸಿದ್ದಾರೆ. ಅದರಂತೆ ಇನ್ನು ಕೆಲ ದಿನಗಳ ಕಾಲ ಸಾಲ್ಟ್ ಇಂಗ್ಲೆಂಡ್​ನಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಇದಾದ ಬಳಿಕ ವೈದ್ಯಕೀಯ ವರದಿ ಆಧರಿಸಿ ಮಾತ್ರ ಅವರಿಗೆ ಐಪಿಎಲ್​ನಲ್ಲಿ ಆಡಲು ಅವಕಾಶ ಸಿಗಲಿದೆ.

4 / 6
ಅಂದರೆ ಫಿಲ್ ಸಾಲ್ಟ್ ಸಂಪೂರ್ಣ ಗುಣಮುಖರಾಗುವವರೆಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಅವರಿಗೆ ಐಪಿಎಲ್ ಆಡಲು ಗ್ರೀನ್​ ಸಿಗ್ನಲ್ ನೀಡುವುದಿಲ್ಲ. ಹೀಗಾಗಿ ಆರ್​ಸಿಬಿ ತಂಡದ ಮುಂಬರುವ ಪಂದ್ಯಗಳಲ್ಲಿ ಸಾಲ್ಟ್ ಕಾಣಿಸಿಕೊಳ್ಳಲಿದ್ದಾರಾ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ. 

ಅಂದರೆ ಫಿಲ್ ಸಾಲ್ಟ್ ಸಂಪೂರ್ಣ ಗುಣಮುಖರಾಗುವವರೆಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಅವರಿಗೆ ಐಪಿಎಲ್ ಆಡಲು ಗ್ರೀನ್​ ಸಿಗ್ನಲ್ ನೀಡುವುದಿಲ್ಲ. ಹೀಗಾಗಿ ಆರ್​ಸಿಬಿ ತಂಡದ ಮುಂಬರುವ ಪಂದ್ಯಗಳಲ್ಲಿ ಸಾಲ್ಟ್ ಕಾಣಿಸಿಕೊಳ್ಳಲಿದ್ದಾರಾ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ. 

5 / 6
ಪ್ರಸಕ್ತ ಐಪಿಎಲ್ ಸೀಸನ್​ನಲ್ಲಿ ಸಾಲ್ಟ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದರು. ಆಡಿದ 6 ಪಂದ್ಯಗಳಲ್ಲಿ 168.33 ರ ಸ್ಟ್ರೈಕ್ ರೇಟ್‌ನಲ್ಲಿ 202 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಜೊತೆಗೆ ಆರ್​ಸಿಬಿ ತಂಡಕ್ಕೆ ಭರ್ಜರಿ ಆರಂಭ ನೀಡಿದ್ದರು. ಇದೀಗ ಅವರ ಅನುಪಸ್ಥಿತಿಯು ಆರ್​ಸಿಬಿ ತಂಡದ ಪಾಲಿಗೆ ಹಿನ್ನಡೆಯಾಗಿ ಪರಿಣಮಿಸಲಿದೆ.

ಪ್ರಸಕ್ತ ಐಪಿಎಲ್ ಸೀಸನ್​ನಲ್ಲಿ ಸಾಲ್ಟ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದರು. ಆಡಿದ 6 ಪಂದ್ಯಗಳಲ್ಲಿ 168.33 ರ ಸ್ಟ್ರೈಕ್ ರೇಟ್‌ನಲ್ಲಿ 202 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಜೊತೆಗೆ ಆರ್​ಸಿಬಿ ತಂಡಕ್ಕೆ ಭರ್ಜರಿ ಆರಂಭ ನೀಡಿದ್ದರು. ಇದೀಗ ಅವರ ಅನುಪಸ್ಥಿತಿಯು ಆರ್​ಸಿಬಿ ತಂಡದ ಪಾಲಿಗೆ ಹಿನ್ನಡೆಯಾಗಿ ಪರಿಣಮಿಸಲಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ