AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡಕ್ಕೆ ಬಿಗ್ ಶಾಕ್: ಇಂಗ್ಲೆಂಡ್​ಗೆ ತೆರಳಿದ ಫಿಲ್ ಸಾಲ್ಟ್!

IPL 2026 RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈವರೆಗೆ 9 ಪಂದ್ಯಗಳನ್ನಾಡಿದೆ. ಈ 9 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಆರ್​ಸಿಬಿ ತಂಡಕ್ಕೆ 5 ಪಂದ್ಯಗಳಿವೆ. ಈ ಪಂದ್ಯಗಳಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ತವರಿಗೆ ಮರಳಿದ್ದಾರೆ.

ಝಾಹಿರ್ ಯೂಸುಫ್
|

Updated on: May 04, 2026 | 1:06 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಫಿಲ್ ಸಾಲ್ಟ್ (Phil Salt) ಇಂಗ್ಲೆಂಡ್​ಗೆ ಮರಳಿದ್ದಾರೆ. ಹೀಗೆ ಇಂಗ್ಲೆಂಡ್​ಗೆ ವಾಪಾಸ್ ಆಗಲು ಮುಖ್ಯ ಕಾರಣ ಇಸಿಬಿ ಸೂಚನೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಫಿಲ್ ಸಾಲ್ಟ್ (Phil Salt) ಇಂಗ್ಲೆಂಡ್​ಗೆ ಮರಳಿದ್ದಾರೆ. ಹೀಗೆ ಇಂಗ್ಲೆಂಡ್​ಗೆ ವಾಪಾಸ್ ಆಗಲು ಮುಖ್ಯ ಕಾರಣ ಇಸಿಬಿ ಸೂಚನೆ.

1 / 6
ಏಪ್ರಿಲ್ 18ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಸಾಲ್ಟ್ ಅವರ ಎಡಗೈ ಬೆರಳಿಗೆ ಗಂಭೀರ ಗಾಯವಾಗಿತ್ತು. ಆರಂಭದಲ್ಲಿ ಇದು ಸಣ್ಣ ಗಾಯ ಎಂದು ಭಾವಿಸಲಾಗಿದ್ದರೂ, ಕಳೆದ ಮೂರು ಪಂದ್ಯಗಳಿಂದ ಅವರು ಕಣಕ್ಕಿಳಿಯಲು ಸಾಧ್ಯವಾಗಿರಲಿಲ್ಲ.

ಏಪ್ರಿಲ್ 18ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಸಾಲ್ಟ್ ಅವರ ಎಡಗೈ ಬೆರಳಿಗೆ ಗಂಭೀರ ಗಾಯವಾಗಿತ್ತು. ಆರಂಭದಲ್ಲಿ ಇದು ಸಣ್ಣ ಗಾಯ ಎಂದು ಭಾವಿಸಲಾಗಿದ್ದರೂ, ಕಳೆದ ಮೂರು ಪಂದ್ಯಗಳಿಂದ ಅವರು ಕಣಕ್ಕಿಳಿಯಲು ಸಾಧ್ಯವಾಗಿರಲಿಲ್ಲ.

2 / 6
ಇತ್ತ ಫಿಲ್ ಸಾಲ್ಟ್ ಗಾಯಗೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ (ECB) ತವರಿಗೆ ಮರಳುವಂತೆ ಸೂಚಿಸಿದ್ದಾರೆ. ಅಲ್ಲದೆ ಇಂಗ್ಲೆಂಡ್​ನಲ್ಲೇ ವೈದ್ಯಕೀಯ ಸ್ಕ್ಯಾನಿಂಗ್​ ಹಾಗೂ ಹೆಚ್ಚಿನ ಚಿಕಿತ್ಸೆ ಪಡೆಯುವಂತೆ ಆದೇಶಿಸಿದ್ದಾರೆ.

ಇತ್ತ ಫಿಲ್ ಸಾಲ್ಟ್ ಗಾಯಗೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ (ECB) ತವರಿಗೆ ಮರಳುವಂತೆ ಸೂಚಿಸಿದ್ದಾರೆ. ಅಲ್ಲದೆ ಇಂಗ್ಲೆಂಡ್​ನಲ್ಲೇ ವೈದ್ಯಕೀಯ ಸ್ಕ್ಯಾನಿಂಗ್​ ಹಾಗೂ ಹೆಚ್ಚಿನ ಚಿಕಿತ್ಸೆ ಪಡೆಯುವಂತೆ ಆದೇಶಿಸಿದ್ದಾರೆ.

3 / 6
ಹೀಗಾಗಿ ಫಿಲ್ ಸಾಲ್ಟ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ತೊರೆದು ಇಂಗ್ಲೆಂಡ್​ಗೆ ಪ್ರಯಾಣಿಸಿದ್ದಾರೆ. ಅದರಂತೆ ಇನ್ನು ಕೆಲ ದಿನಗಳ ಕಾಲ ಸಾಲ್ಟ್ ಇಂಗ್ಲೆಂಡ್​ನಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಇದಾದ ಬಳಿಕ ವೈದ್ಯಕೀಯ ವರದಿ ಆಧರಿಸಿ ಮಾತ್ರ ಅವರಿಗೆ ಐಪಿಎಲ್​ನಲ್ಲಿ ಆಡಲು ಅವಕಾಶ ಸಿಗಲಿದೆ.

ಹೀಗಾಗಿ ಫಿಲ್ ಸಾಲ್ಟ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ತೊರೆದು ಇಂಗ್ಲೆಂಡ್​ಗೆ ಪ್ರಯಾಣಿಸಿದ್ದಾರೆ. ಅದರಂತೆ ಇನ್ನು ಕೆಲ ದಿನಗಳ ಕಾಲ ಸಾಲ್ಟ್ ಇಂಗ್ಲೆಂಡ್​ನಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಇದಾದ ಬಳಿಕ ವೈದ್ಯಕೀಯ ವರದಿ ಆಧರಿಸಿ ಮಾತ್ರ ಅವರಿಗೆ ಐಪಿಎಲ್​ನಲ್ಲಿ ಆಡಲು ಅವಕಾಶ ಸಿಗಲಿದೆ.

4 / 6
ಅಂದರೆ ಫಿಲ್ ಸಾಲ್ಟ್ ಸಂಪೂರ್ಣ ಗುಣಮುಖರಾಗುವವರೆಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಅವರಿಗೆ ಐಪಿಎಲ್ ಆಡಲು ಗ್ರೀನ್​ ಸಿಗ್ನಲ್ ನೀಡುವುದಿಲ್ಲ. ಹೀಗಾಗಿ ಆರ್​ಸಿಬಿ ತಂಡದ ಮುಂಬರುವ ಪಂದ್ಯಗಳಲ್ಲಿ ಸಾಲ್ಟ್ ಕಾಣಿಸಿಕೊಳ್ಳಲಿದ್ದಾರಾ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ. 

ಅಂದರೆ ಫಿಲ್ ಸಾಲ್ಟ್ ಸಂಪೂರ್ಣ ಗುಣಮುಖರಾಗುವವರೆಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಅವರಿಗೆ ಐಪಿಎಲ್ ಆಡಲು ಗ್ರೀನ್​ ಸಿಗ್ನಲ್ ನೀಡುವುದಿಲ್ಲ. ಹೀಗಾಗಿ ಆರ್​ಸಿಬಿ ತಂಡದ ಮುಂಬರುವ ಪಂದ್ಯಗಳಲ್ಲಿ ಸಾಲ್ಟ್ ಕಾಣಿಸಿಕೊಳ್ಳಲಿದ್ದಾರಾ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ. 

5 / 6
ಪ್ರಸಕ್ತ ಐಪಿಎಲ್ ಸೀಸನ್​ನಲ್ಲಿ ಸಾಲ್ಟ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದರು. ಆಡಿದ 6 ಪಂದ್ಯಗಳಲ್ಲಿ 168.33 ರ ಸ್ಟ್ರೈಕ್ ರೇಟ್‌ನಲ್ಲಿ 202 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಜೊತೆಗೆ ಆರ್​ಸಿಬಿ ತಂಡಕ್ಕೆ ಭರ್ಜರಿ ಆರಂಭ ನೀಡಿದ್ದರು. ಇದೀಗ ಅವರ ಅನುಪಸ್ಥಿತಿಯು ಆರ್​ಸಿಬಿ ತಂಡದ ಪಾಲಿಗೆ ಹಿನ್ನಡೆಯಾಗಿ ಪರಿಣಮಿಸಲಿದೆ.

ಪ್ರಸಕ್ತ ಐಪಿಎಲ್ ಸೀಸನ್​ನಲ್ಲಿ ಸಾಲ್ಟ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದರು. ಆಡಿದ 6 ಪಂದ್ಯಗಳಲ್ಲಿ 168.33 ರ ಸ್ಟ್ರೈಕ್ ರೇಟ್‌ನಲ್ಲಿ 202 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಜೊತೆಗೆ ಆರ್​ಸಿಬಿ ತಂಡಕ್ಕೆ ಭರ್ಜರಿ ಆರಂಭ ನೀಡಿದ್ದರು. ಇದೀಗ ಅವರ ಅನುಪಸ್ಥಿತಿಯು ಆರ್​ಸಿಬಿ ತಂಡದ ಪಾಲಿಗೆ ಹಿನ್ನಡೆಯಾಗಿ ಪರಿಣಮಿಸಲಿದೆ.

6 / 6
Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು