AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ

IPL 2026 playoff qualification scenario: ಐಪಿಎಲ್​ ಟೂರ್ನಿಯ ಲೀಗ್​ ಹಂತದ 14 ಪಂದ್ಯಗಳಲ್ಲಿ 8 ಗೆಲುವು ದಾಖಲಿಸಿದ  ಎಲ್ಲಾ ತಂಡಗಳು ಪ್ಲೇ-ಆಫ್‌ಗೆ ಅರ್ಹತೆ ಪಡೆದಿವೆ. ಅಂದರೆ ಪ್ಲೇಆಫ್ ಖಚಿತಪಡಿಸಿಕೊಳ್ಳಲು 16 ಅಂಕಗಳು ಅನಿವಾರ್ಯ. ಈ ಲೆಕ್ಕಾಚಾರದಂತೆ ಪ್ಲೇಆಫ್​ಗೆ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: May 06, 2026 | 8:52 AM

Share
IPL 2026: ಐಪಿಎಲ್ 2026ರ ಲೀಗ್ ಹಂತವು ಈಗ ರೋಚಕ ಘಟ್ಟಕ್ಕೆ ತಲುಪಿದ್ದು, ಪ್ಲೇ-ಆಫ್ ತಲುಪಲು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯದ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್ ರೈಸರ್ಸ್ ಹೈದರಾಬಾದ್ (SRH) ಮತ್ತು ಗುಜರಾತ್ ಟೈಟಾನ್ಸ್ (GT) ಹಾಗೂ ಪಂಜಾಬ್ ಕಿಂಗ್ಸ್ (PBKS)​  ತಂಡಗಳು ಟಾಪ್-4 ನಲ್ಲಿವೆ. ಇನ್ನುಳಿದ 4 ತಂಡಗಳೂ ಕೂಡ ಪ್ಲೇಆಫ್ ರೇಸ್​ನಲ್ಲಿವೆ. ಅದರಂತೆ ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ... (PC: BCCI)

IPL 2026: ಐಪಿಎಲ್ 2026ರ ಲೀಗ್ ಹಂತವು ಈಗ ರೋಚಕ ಘಟ್ಟಕ್ಕೆ ತಲುಪಿದ್ದು, ಪ್ಲೇ-ಆಫ್ ತಲುಪಲು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯದ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್ ರೈಸರ್ಸ್ ಹೈದರಾಬಾದ್ (SRH) ಮತ್ತು ಗುಜರಾತ್ ಟೈಟಾನ್ಸ್ (GT) ಹಾಗೂ ಪಂಜಾಬ್ ಕಿಂಗ್ಸ್ (PBKS)​  ತಂಡಗಳು ಟಾಪ್-4 ನಲ್ಲಿವೆ. ಇನ್ನುಳಿದ 4 ತಂಡಗಳೂ ಕೂಡ ಪ್ಲೇಆಫ್ ರೇಸ್​ನಲ್ಲಿವೆ. ಅದರಂತೆ ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ... (PC: BCCI)

1 / 11
ಪಂಜಾಬ್ ಕಿಂಗ್ಸ್​: ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ  6 ಗೆಲುವು ದಾಖಲಿಸಿರುವ ಪಂಜಾಬ್ ಪಡೆ ಒಟ್ಟು 13 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಮುಂದಿನ 3 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್​ ಕೇವಲ 2 ಮ್ಯಾಚ್ ಗೆದ್ದರೆ 17 ಅಂಕಗಳೊಂದಿಗೆ ಪ್ಲೇಆಫ್​ಗೇರಲಿದೆ. (PC: BCCI)

ಪಂಜಾಬ್ ಕಿಂಗ್ಸ್​: ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ  6 ಗೆಲುವು ದಾಖಲಿಸಿರುವ ಪಂಜಾಬ್ ಪಡೆ ಒಟ್ಟು 13 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಮುಂದಿನ 3 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್​ ಕೇವಲ 2 ಮ್ಯಾಚ್ ಗೆದ್ದರೆ 17 ಅಂಕಗಳೊಂದಿಗೆ ಪ್ಲೇಆಫ್​ಗೇರಲಿದೆ. (PC: BCCI)

2 / 11
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದ ಆರ್​ಸಿಬಿ ತಂಡವು ಈವರೆಗೆ 11 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ 14 ಅಂಕಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ 3 ಪಂದ್ಯಗಳಲ್ಲಿ 1 ಗೆಲುವು ದಾಖಲಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ. (PC: BCCI)

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದ ಆರ್​ಸಿಬಿ ತಂಡವು ಈವರೆಗೆ 11 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ 14 ಅಂಕಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ 3 ಪಂದ್ಯಗಳಲ್ಲಿ 1 ಗೆಲುವು ದಾಖಲಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ. (PC: BCCI)

3 / 11
ಸನ್​​ರೈಸರ್ಸ್ ಹೈದರಾಬಾದ್​: ಪ್ಯಾಟ್ ಕಮಿನ್ಸ್ ಮುಂದಾಳತ್ವದ ಸನ್​ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ವೇಳೆ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ 12 ಅಂಕಗಳನ್ನು ಹೊಂದಿರುವ ಎಸ್​ಆರ್​​ಹೆಚ್ ಮುಂದಿನ 4 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ ಪ್ಲೇಆಫ್​ಗೇರಬಹುದು. (PC: BCCI)

ಸನ್​​ರೈಸರ್ಸ್ ಹೈದರಾಬಾದ್​: ಪ್ಯಾಟ್ ಕಮಿನ್ಸ್ ಮುಂದಾಳತ್ವದ ಸನ್​ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ವೇಳೆ 7 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ 14 ಅಂಕಗಳನ್ನು ಹೊಂದಿರುವ ಎಸ್​ಆರ್​​ಹೆಚ್ ಮುಂದಿನ 2 ಪಂದ್ಯಗಳಲ್ಲಿ 1 ಗೆಲುವು ಸಾಧಿಸಿ ಪ್ಲೇಆಫ್​ಗೇರಬಹುದು. (PC: BCCI)

4 / 11
ರಾಜಸ್ಥಾನ್ ರಾಯಲ್ಸ್​: ರಿಯಾನ್ ಪರಾಗ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ 11 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿ 12 ಅಂಕಗಳನ್ನು ಪಡೆದಿರುವ ಆರ್​ಆರ್ ಪಡೆ ಮುಂದಿನ 3 ಮ್ಯಾಚ್​ಗಳಲ್ಲಿ 2 ಜಯ ಸಾಧಿಸಿದರೆ ಒಟ್ಟು ಅಂಕಗಳನ್ನು 16 ಕ್ಕೇರಿಸಬಹುದು. ಈ ಮೂಲಕ ಪ್ಲೇಆಫ್​ಗೆ ಅರ್ಹತೆ ಪಡೆಯಬಹುದು. (PC: BCCI)

ರಾಜಸ್ಥಾನ್ ರಾಯಲ್ಸ್​: ರಿಯಾನ್ ಪರಾಗ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ 11 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿ 12 ಅಂಕಗಳನ್ನು ಪಡೆದಿರುವ ಆರ್​ಆರ್ ಪಡೆ ಮುಂದಿನ 3 ಮ್ಯಾಚ್​ಗಳಲ್ಲಿ 2 ಜಯ ಸಾಧಿಸಿದರೆ ಒಟ್ಟು ಅಂಕಗಳನ್ನು 16 ಕ್ಕೇರಿಸಬಹುದು. ಈ ಮೂಲಕ ಪ್ಲೇಆಫ್​ಗೆ ಅರ್ಹತೆ ಪಡೆಯಬಹುದು. (PC: BCCI)

5 / 11
ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಕೂಡ 12 ಪಂದ್ಯಗಳನ್ನಾಡಿದೆ. ಈ ವೇಳೆ 4 ಮ್ಯಾಚ್​ಗಳಲ್ಲಿ ಸೋತರೆ, 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಅದರಂತೆ ಇದೀಗ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಿದೆ. ಇನ್ನು ಮುಂದಿನ 2 ಪಂದ್ಯಗಳಲ್ಲಿ 1 ಜಯ ಸಾಧಿಸಿದರೆ 18 ಅಂಕಗಳ ಮೂಲಕ ಅಧಿಕೃತವಾಗಿ ಪ್ಲೇಆಫ್​ಗೇರಲಿದೆ. (PC: BCCI)

ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಕೂಡ 12 ಪಂದ್ಯಗಳನ್ನಾಡಿದೆ. ಈ ವೇಳೆ 4 ಮ್ಯಾಚ್​ಗಳಲ್ಲಿ ಸೋತರೆ, 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಅದರಂತೆ ಇದೀಗ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಿದೆ. ಇನ್ನು ಮುಂದಿನ 2 ಪಂದ್ಯಗಳಲ್ಲಿ 1 ಜಯ ಸಾಧಿಸಿದರೆ 18 ಅಂಕಗಳ ಮೂಲಕ ಅಧಿಕೃತವಾಗಿ ಪ್ಲೇಆಫ್​ಗೇರಲಿದೆ. (PC: BCCI)

6 / 11
ಚೆನ್ನೈ ಸೂಪರ್ ಕಿಂಗ್ಸ್​​: ರುತುರಾಜ್ ಗಾಯಕ್ವಾಡ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ 6 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 2 ಜಯ ಸಾಧಿಸಿದರೆ ಸಿಎಸ್​ಕೆ ತಂಡ ಕೂಡ ಪ್ಲೇಆಫ್​ಗೆ ಅರ್ಹತೆ ಪಡೆದುಕೊಳ್ಳಬಹುದು. (PC: BCCI)

ಚೆನ್ನೈ ಸೂಪರ್ ಕಿಂಗ್ಸ್​​: ರುತುರಾಜ್ ಗಾಯಕ್ವಾಡ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ 6 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 2 ಜಯ ಸಾಧಿಸಿದರೆ ಸಿಎಸ್​ಕೆ ತಂಡ ಕೂಡ ಪ್ಲೇಆಫ್​ಗೆ ಅರ್ಹತೆ ಪಡೆದುಕೊಳ್ಳಬಹುದು. (PC: BCCI)

7 / 11
ಡೆಲ್ಲಿ ಕ್ಯಾಪಿಟಲ್ಸ್​: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ 12 ಪಂದ್ಯಗಳನ್ನಾಡಿದ್ದು, ಈ ವೇಳೆ 5 ಮ್ಯಾಚ್​ಗಳಲ್ಲಿ ಗೆದ್ದರೆ 7 ಪಂದ್ಯಗಳಲ್ಲಿ ಸೋತಿದೆ. ಈ ಮೂಲಕ 10 ಅಂಕಗಳನ್ನು ಮಾತ್ರ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 2 ಪಂದ್ಯಗಳಲ್ಲೂ ಗೆಲುವು ದಾಖಲಿಸಿದರೆ 14 ಅಂಕಗಳನ್ನು ಪಡೆಯಬಹುದು. ಅದರಂತೆ ಲೀಗ್ ಹಂತದ ಮುಕ್ತಾಯದ ವೇಳೆಗೆ ಟಾಪ್-4 ನಲ್ಲಿರುವ ಯಾವುದಾದರೂ ತಂಡ 14 ಅಂಕ ಹೊಂದಿದ್ದರೆ ಮಾತರ ನೆಟ್ ರನ್ ರೇಟ್ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್​ಗೆ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶ ದೊರೆಯಲಿದೆ. (PC: BCCI)

ಡೆಲ್ಲಿ ಕ್ಯಾಪಿಟಲ್ಸ್​: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ 12 ಪಂದ್ಯಗಳನ್ನಾಡಿದ್ದು, ಈ ವೇಳೆ 5 ಮ್ಯಾಚ್​ಗಳಲ್ಲಿ ಗೆದ್ದರೆ 7 ಪಂದ್ಯಗಳಲ್ಲಿ ಸೋತಿದೆ. ಈ ಮೂಲಕ 10 ಅಂಕಗಳನ್ನು ಮಾತ್ರ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 2 ಪಂದ್ಯಗಳಲ್ಲೂ ಗೆಲುವು ದಾಖಲಿಸಿದರೆ 14 ಅಂಕಗಳನ್ನು ಪಡೆಯಬಹುದು. ಅದರಂತೆ ಲೀಗ್ ಹಂತದ ಮುಕ್ತಾಯದ ವೇಳೆಗೆ ಟಾಪ್-4 ನಲ್ಲಿರುವ ಯಾವುದಾದರೂ ತಂಡ 14 ಅಂಕ ಹೊಂದಿದ್ದರೆ ಮಾತರ ನೆಟ್ ರನ್ ರೇಟ್ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್​ಗೆ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶ ದೊರೆಯಲಿದೆ. (PC: BCCI)

8 / 11
ಕೊಲ್ಕತ್ತಾ ನೈಟ್ ರೈಡರ್ಸ್​: ಅಜಿಂಕ್ಯ ರಹಾನೆ ನಾಯಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ವೇಳೆ ಕೆಕೆಆರ್ ಗೆದ್ದಿರುವುದು 4 ಪಂದ್ಯಗಳಲ್ಲಿ ಮಾತ್ರ. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾದ ಕಾರಣ 1 ಅಂಕ ಗಿಟ್ಟಿಸಿಕೊಂಡಿದೆ. ಅದರಂತೆ ಇದೀಗ 9 ಅಂಕಗಳನ್ನು ಹೊಂದಿರುವ ಕೆಕೆಆರ್ ಮುಂದಿನ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ 17 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಲಿದೆ. (PC: BCCI)

ಕೊಲ್ಕತ್ತಾ ನೈಟ್ ರೈಡರ್ಸ್​: ಅಜಿಂಕ್ಯ ರಹಾನೆ ನಾಯಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ವೇಳೆ ಕೆಕೆಆರ್ ಗೆದ್ದಿರುವುದು 4 ಪಂದ್ಯಗಳಲ್ಲಿ ಮಾತ್ರ. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾದ ಕಾರಣ 1 ಅಂಕ ಗಿಟ್ಟಿಸಿಕೊಂಡಿದೆ. ಅದರಂತೆ ಇದೀಗ 9 ಅಂಕಗಳನ್ನು ಹೊಂದಿರುವ ಕೆಕೆಆರ್ ಮುಂದಿನ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ 17 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಲಿದೆ. (PC: BCCI)

9 / 11
ಮುಂಬೈ ಇಂಡಿಯನ್ಸ್​​: ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 12 ಅಂಕಗಳನ್ನು ಮಾತ್ರ ಪಡೆಯಬಹುದು. ಇತ್ತ ಟಾಪ್-4 ನಲ್ಲಿರುವ ನಾಲ್ಕು ತಂಡಗಳು 13 ಕ್ಕಿಂತ ಹೆಚ್ಚಿನ ಅಂಕಗಳನ್ನು ಹೊಂದಿದೆ. ಹೀಗಾಗಿ ಮುಂಬೈ ಇಂಡಿಯನ್ಸ್  ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. (PC: BCCI)

ಮುಂಬೈ ಇಂಡಿಯನ್ಸ್​​: ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 12 ಅಂಕಗಳನ್ನು ಮಾತ್ರ ಪಡೆಯಬಹುದು. ಇತ್ತ ಟಾಪ್-4 ನಲ್ಲಿರುವ ನಾಲ್ಕು ತಂಡಗಳು 13 ಕ್ಕಿಂತ ಹೆಚ್ಚಿನ ಅಂಕಗಳನ್ನು ಹೊಂದಿದೆ. ಹೀಗಾಗಿ ಮುಂಬೈ ಇಂಡಿಯನ್ಸ್  ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. (PC: BCCI)

10 / 11
ಲಕ್ನೋ ಸೂಪರ್ ಜೈಂಟ್ಸ್​: ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಆಡಿದ 11 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಇದೀಗ ಕೇವಲ 6 ಅಂಕಗಳನ್ನು ಮಾತ್ರ ಹೊಂದಿರುವ ಎಸ್​ಎಸ್​ಜಿ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 12 ಅಂಕಗಳನ್ನು ಮಾತ್ರ ಪಡೆಯಬಹುದು. 12 ಅಂಕಗಳೊಂದಿಗೆ ಪ್ಲೇಆಫ್​ ಪ್ರವೇಶಿಸಲು ಅವಕಾಶ ಇಲ್ಲದಿರುವುದರಿಂದ ಎಲ್​ಎಸ್​​ಜಿ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. (PC: BCCI)

ಲಕ್ನೋ ಸೂಪರ್ ಜೈಂಟ್ಸ್​: ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಆಡಿದ 11 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಇದೀಗ ಕೇವಲ 6 ಅಂಕಗಳನ್ನು ಮಾತ್ರ ಹೊಂದಿರುವ ಎಸ್​ಎಸ್​ಜಿ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 12 ಅಂಕಗಳನ್ನು ಮಾತ್ರ ಪಡೆಯಬಹುದು. 12 ಅಂಕಗಳೊಂದಿಗೆ ಪ್ಲೇಆಫ್​ ಪ್ರವೇಶಿಸಲು ಅವಕಾಶ ಇಲ್ಲದಿರುವುದರಿಂದ ಎಲ್​ಎಸ್​​ಜಿ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. (PC: BCCI)

11 / 11
Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು