AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಒಂದು ತಂಡ ಗೆದ್ದರೆ 4 ತಂಡಗಳು ಐಪಿಎಲ್​ನಿಂದ ಔಟ್..!

IPL 2026 playoffs scenario: ಐಪಿಎಲ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್ ಆಡುವುದು ಖಚಿತವಾಗಿದೆ. ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇದಾಗ್ಯೂ ಒಂದು ಸ್ಥಾನಕ್ಕಾಗಿ 5 ತಂಡಗಳ ಪೈಪೋಟಿ ಮುಂದುವರೆದಿದೆ.

ಝಾಹಿರ್ ಯೂಸುಫ್
|

Updated on:May 20, 2026 | 8:52 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ರೇಸ್ ಇದೀಗ ರೋಚಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್‌ಗೆ ಲಗ್ಗೆ ಇಟ್ಟಿದ್ದರೆ, ಕೊನೆಯ ಒಂದು ಸ್ಥಾನಕ್ಕಾಗಿ ಬರೋಬ್ಬರಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಾಗ್ಯೂ ಮೇ 24 ರಂದು ನಡೆಯಲಿರುವ ಪಂದ್ಯದ ಫಲಿತಾಂಶ 4 ತಂಡಗಳ ಭವಿಷ್ಯ ನಿರ್ಧರಿಸಲಿದೆ.  (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ರೇಸ್ ಇದೀಗ ರೋಚಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್‌ಗೆ ಲಗ್ಗೆ ಇಟ್ಟಿದ್ದರೆ, ಕೊನೆಯ ಒಂದು ಸ್ಥಾನಕ್ಕಾಗಿ ಬರೋಬ್ಬರಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಾಗ್ಯೂ ಮೇ 24 ರಂದು ನಡೆಯಲಿರುವ ಪಂದ್ಯದ ಫಲಿತಾಂಶ 4 ತಂಡಗಳ ಭವಿಷ್ಯ ನಿರ್ಧರಿಸಲಿದೆ.  (PC: IPL)

1 / 5
ಮೇ 24 ರಂದು ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಸಾಧಿಸಿದರೆ ಒಟ್ಟು 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೇರಲಿದೆ. ಏಕೆಂದರೆ ಪ್ಲೇಆಫ್ ರೇಸ್​ನಲ್ಲಿರುವ ಉಳಿದ ಯಾವುದೇ ತಂಡಗಳಿಗೆ 16 ಅಂಕಗಳನ್ನು ಗಳಿಸಲು ಅವಕಾಶವಿಲ್ಲ. (PC: IPL)

ಮೇ 24 ರಂದು ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಸಾಧಿಸಿದರೆ ಒಟ್ಟು 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೇರಲಿದೆ. ಏಕೆಂದರೆ ಪ್ಲೇಆಫ್ ರೇಸ್​ನಲ್ಲಿರುವ ಉಳಿದ ಯಾವುದೇ ತಂಡಗಳಿಗೆ 16 ಅಂಕಗಳನ್ನು ಗಳಿಸಲು ಅವಕಾಶವಿಲ್ಲ. (PC: IPL)

2 / 5
ಪಂಜಾಬ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್​ ಮುಂದಿನ ಪಂದ್ಯಗಳನ್ನು ಗೆದ್ದರೆ ಒಟ್ಟು 15 ಅಂಕಗಳನ್ನು ಮಾತ್ರ ಪಡೆಯಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು​ ಕೊನೆಯ ಮ್ಯಾಚ್​ನಲ್ಲಿ ಜಯಿಸಿದರೆ ಒಟ್ಟು ಪಾಯಿಂಟ್ಸ್​ 14 ಕ್ಕೇರಲಿದೆ. (PC: IPL)

ಪಂಜಾಬ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್​ ಮುಂದಿನ ಪಂದ್ಯಗಳನ್ನು ಗೆದ್ದರೆ ಒಟ್ಟು 15 ಅಂಕಗಳನ್ನು ಮಾತ್ರ ಪಡೆಯಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು​ ಕೊನೆಯ ಮ್ಯಾಚ್​ನಲ್ಲಿ ಜಯಿಸಿದರೆ ಒಟ್ಟು ಪಾಯಿಂಟ್ಸ್​ 14 ಕ್ಕೇರಲಿದೆ. (PC: IPL)

3 / 5
ಆದರೆ ಈಗಾಗಲೇ 14 ಅಂಕಗಳನ್ನು ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡವು ಮೇ 24 ರಂದು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದರೆ ಒಟ್ಟು ಅಂಕಗಳು 16 ಕ್ಕೇರಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. (PC: IPL)

ಆದರೆ ಈಗಾಗಲೇ 14 ಅಂಕಗಳನ್ನು ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡವು ಮೇ 24 ರಂದು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದರೆ ಒಟ್ಟು ಅಂಕಗಳು 16 ಕ್ಕೇರಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. (PC: IPL)

4 / 5
ಹೀಗೆ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿದರೆ, ಪ್ಲೇಆಫ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳನ್ನು ಎದುರಿಸಲಿದೆ. ಅಂದರೆ ಈ ಮೂರು ತಂಡಗಳು ಈಗಾಗಲೇ ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಇವರಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ಆಡುವವರು ಯಾರು? ಎಲಿಮಿನೇಟರ್​ನಲ್ಲಿ ಕಣಕ್ಕಿಳಿಯುವವರು ಯಾರು ಎಂಬುದು ಮುಂದಿನ ಪಂದ್ಯಗಳ ಮೂಲಕ ನಿರ್ಧಾರವಾಗಲಿದೆ. (PC: IPL)

ಹೀಗೆ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿದರೆ, ಪ್ಲೇಆಫ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳನ್ನು ಎದುರಿಸಲಿದೆ. ಅಂದರೆ ಈ ಮೂರು ತಂಡಗಳು ಈಗಾಗಲೇ ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಇವರಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ಆಡುವವರು ಯಾರು? ಎಲಿಮಿನೇಟರ್​ನಲ್ಲಿ ಕಣಕ್ಕಿಳಿಯುವವರು ಯಾರು ಎಂಬುದು ಮುಂದಿನ ಪಂದ್ಯಗಳ ಮೂಲಕ ನಿರ್ಧಾರವಾಗಲಿದೆ. (PC: IPL)

5 / 5

Published On - 8:52 am, Wed, 20 May 26

Follow Us
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ
ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು