AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಒಂದು ತಂಡ ಗೆದ್ದರೆ 4 ತಂಡಗಳು ಐಪಿಎಲ್​ನಿಂದ ಔಟ್..!

IPL 2026 playoffs scenario: ಐಪಿಎಲ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್ ಆಡುವುದು ಖಚಿತವಾಗಿದೆ. ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇದಾಗ್ಯೂ ಒಂದು ಸ್ಥಾನಕ್ಕಾಗಿ 5 ತಂಡಗಳ ಪೈಪೋಟಿ ಮುಂದುವರೆದಿದೆ.

ಝಾಹಿರ್ ಯೂಸುಫ್
|

Updated on:May 20, 2026 | 8:52 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ರೇಸ್ ಇದೀಗ ರೋಚಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್‌ಗೆ ಲಗ್ಗೆ ಇಟ್ಟಿದ್ದರೆ, ಕೊನೆಯ ಒಂದು ಸ್ಥಾನಕ್ಕಾಗಿ ಬರೋಬ್ಬರಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಾಗ್ಯೂ ಮೇ 24 ರಂದು ನಡೆಯಲಿರುವ ಪಂದ್ಯದ ಫಲಿತಾಂಶ 4 ತಂಡಗಳ ಭವಿಷ್ಯ ನಿರ್ಧರಿಸಲಿದೆ.  (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ರೇಸ್ ಇದೀಗ ರೋಚಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್‌ಗೆ ಲಗ್ಗೆ ಇಟ್ಟಿದ್ದರೆ, ಕೊನೆಯ ಒಂದು ಸ್ಥಾನಕ್ಕಾಗಿ ಬರೋಬ್ಬರಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಾಗ್ಯೂ ಮೇ 24 ರಂದು ನಡೆಯಲಿರುವ ಪಂದ್ಯದ ಫಲಿತಾಂಶ 4 ತಂಡಗಳ ಭವಿಷ್ಯ ನಿರ್ಧರಿಸಲಿದೆ.  (PC: IPL)

1 / 5
ಮೇ 24 ರಂದು ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಸಾಧಿಸಿದರೆ ಒಟ್ಟು 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೇರಲಿದೆ. ಏಕೆಂದರೆ ಪ್ಲೇಆಫ್ ರೇಸ್​ನಲ್ಲಿರುವ ಉಳಿದ ಯಾವುದೇ ತಂಡಗಳಿಗೆ 16 ಅಂಕಗಳನ್ನು ಗಳಿಸಲು ಅವಕಾಶವಿಲ್ಲ. (PC: IPL)

ಮೇ 24 ರಂದು ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಸಾಧಿಸಿದರೆ ಒಟ್ಟು 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೇರಲಿದೆ. ಏಕೆಂದರೆ ಪ್ಲೇಆಫ್ ರೇಸ್​ನಲ್ಲಿರುವ ಉಳಿದ ಯಾವುದೇ ತಂಡಗಳಿಗೆ 16 ಅಂಕಗಳನ್ನು ಗಳಿಸಲು ಅವಕಾಶವಿಲ್ಲ. (PC: IPL)

2 / 5
ಪಂಜಾಬ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್​ ಮುಂದಿನ ಪಂದ್ಯಗಳನ್ನು ಗೆದ್ದರೆ ಒಟ್ಟು 15 ಅಂಕಗಳನ್ನು ಮಾತ್ರ ಪಡೆಯಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು​ ಕೊನೆಯ ಮ್ಯಾಚ್​ನಲ್ಲಿ ಜಯಿಸಿದರೆ ಒಟ್ಟು ಪಾಯಿಂಟ್ಸ್​ 14 ಕ್ಕೇರಲಿದೆ. (PC: IPL)

ಪಂಜಾಬ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್​ ಮುಂದಿನ ಪಂದ್ಯಗಳನ್ನು ಗೆದ್ದರೆ ಒಟ್ಟು 15 ಅಂಕಗಳನ್ನು ಮಾತ್ರ ಪಡೆಯಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು​ ಕೊನೆಯ ಮ್ಯಾಚ್​ನಲ್ಲಿ ಜಯಿಸಿದರೆ ಒಟ್ಟು ಪಾಯಿಂಟ್ಸ್​ 14 ಕ್ಕೇರಲಿದೆ. (PC: IPL)

3 / 5
ಆದರೆ ಈಗಾಗಲೇ 14 ಅಂಕಗಳನ್ನು ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡವು ಮೇ 24 ರಂದು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದರೆ ಒಟ್ಟು ಅಂಕಗಳು 16 ಕ್ಕೇರಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. (PC: IPL)

ಆದರೆ ಈಗಾಗಲೇ 14 ಅಂಕಗಳನ್ನು ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡವು ಮೇ 24 ರಂದು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದರೆ ಒಟ್ಟು ಅಂಕಗಳು 16 ಕ್ಕೇರಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. (PC: IPL)

4 / 5
ಹೀಗೆ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿದರೆ, ಪ್ಲೇಆಫ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳನ್ನು ಎದುರಿಸಲಿದೆ. ಅಂದರೆ ಈ ಮೂರು ತಂಡಗಳು ಈಗಾಗಲೇ ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಇವರಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ಆಡುವವರು ಯಾರು? ಎಲಿಮಿನೇಟರ್​ನಲ್ಲಿ ಕಣಕ್ಕಿಳಿಯುವವರು ಯಾರು ಎಂಬುದು ಮುಂದಿನ ಪಂದ್ಯಗಳ ಮೂಲಕ ನಿರ್ಧಾರವಾಗಲಿದೆ. (PC: IPL)

ಹೀಗೆ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿದರೆ, ಪ್ಲೇಆಫ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳನ್ನು ಎದುರಿಸಲಿದೆ. ಅಂದರೆ ಈ ಮೂರು ತಂಡಗಳು ಈಗಾಗಲೇ ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಇವರಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ಆಡುವವರು ಯಾರು? ಎಲಿಮಿನೇಟರ್​ನಲ್ಲಿ ಕಣಕ್ಕಿಳಿಯುವವರು ಯಾರು ಎಂಬುದು ಮುಂದಿನ ಪಂದ್ಯಗಳ ಮೂಲಕ ನಿರ್ಧಾರವಾಗಲಿದೆ. (PC: IPL)

5 / 5

Published On - 8:52 am, Wed, 20 May 26

Follow Us
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ತಂದೆ ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ಸಚಿವ ಯತೀಂದ್ರ
ತಂದೆ ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ಸಚಿವ ಯತೀಂದ್ರ
ನಕಲಿ ಔಷಧಿ: ಅಜರ್ ಬೈಜಾನ್​ನಿಂದ ಕಿಂಗ್ ಪಿನ್ ಪ್ರಶಾಂತ್ ಕರೆತರಲು SIT ತಯಾರಿ
ನಕಲಿ ಔಷಧಿ: ಅಜರ್ ಬೈಜಾನ್​ನಿಂದ ಕಿಂಗ್ ಪಿನ್ ಪ್ರಶಾಂತ್ ಕರೆತರಲು SIT ತಯಾರಿ