AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ರವೀಂದ್ರ ಜಡೇಜಾ, ಕರನ್, ಸಂಜು ಸ್ಯಾಮ್ಸನ್ ಟ್ರೇಡಿಂಗ್​ಗೆ ದೊಡ್ಡ ತೊಡಕು..!

IPL 2026: ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ವಿದೇಶಿ ಆಟಗಾರರಾಗಿ ಲುವಾನ್-ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಫಝಲ್​ಹಕ್ ಫಾರೂಖಿ, ಜೋಫ್ರಾ ಆರ್ಚರ್, ಕ್ವೇನಾ ಮಫಾಕ, ಮಹೀಶ್ ತೀಕ್ಷಣ, ನಾಂಡ್ರೆ ಬರ್ಗರ್ ಇದ್ದಾರೆ. ಅಂದರೆ ಆರ್​ಆರ್ ತಂಡದಲ್ಲಿ ವಿದೇಶಿ ಆಟಗಾರರ ಕೋಟ ಸಂಪೂರ್ಣ ಭರ್ತಿಯಾಗಿದೆ. ಇದುವೇ ಈಗ ಟ್ರೇಡಿಂಗ್ ಪ್ರಕ್ರಿಯೆಗೆ ಸಮಸ್ಯೆಯಾಗಿ ಪರಿಣಮಿಸಿದೆ.

ಝಾಹಿರ್ ಯೂಸುಫ್
|

Updated on:Nov 12, 2025 | 8:25 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ಸ್ಟಾರ್ ಆಟಗಾರರನ್ನು ಟ್ರೇಡ್ ಮಾಡಿಕೊಳ್ಳಲು ಮುಂದಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಜಸ್ಥಾನ್ ರಾಯಲ್ಸ್ (RR) ಫ್ರಾಂಚೈಸಿಗಳಿಗೆ ಇದೀಗ ಸಮಸ್ಯೆಯೊಂದು ಎದುರಾಗಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ಸ್ಟಾರ್ ಆಟಗಾರರನ್ನು ಟ್ರೇಡ್ ಮಾಡಿಕೊಳ್ಳಲು ಮುಂದಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಜಸ್ಥಾನ್ ರಾಯಲ್ಸ್ (RR) ಫ್ರಾಂಚೈಸಿಗಳಿಗೆ ಇದೀಗ ಸಮಸ್ಯೆಯೊಂದು ಎದುರಾಗಿದೆ.

1 / 6
ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ನೀಡಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲು ಮುಂದಾಗಿದೆ. ಅಲ್ಲದೆ ಈ ಸ್ವಾಪ್ ಡೀಲ್ ಪ್ರಕ್ರಿಯೆಗೆ ಅಧಿಕೃತ ಚಾಲನೆಯನ್ನು ಸಹ ನೀಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ನೀಡಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲು ಮುಂದಾಗಿದೆ. ಅಲ್ಲದೆ ಈ ಸ್ವಾಪ್ ಡೀಲ್ ಪ್ರಕ್ರಿಯೆಗೆ ಅಧಿಕೃತ ಚಾಲನೆಯನ್ನು ಸಹ ನೀಡಿದ್ದಾರೆ.

2 / 6
ಆದರೆ ಅತ್ತ ಕಡೆಯಿಂದ ಸಂಜು ಸ್ಯಾಮ್ಸನ್ ಅವರನ್ನು ನೀಡಲು ಮುಂದಾಗಿರುವ ರಾಜಸ್ಥಾನ್ ರಾಯಲ್ಸ್ ತಂಡದ ವಿದೇಶಿ ಕೋಟಾ ಭರ್ತಿಯಾಗಿರುವುದೇ ಈಗ ಸಮಸ್ಯೆ. ಅಂದರೆ ಸ್ಯಾಮ್ಸನ್ ಅವರನ್ನು ನೀಡಿ ಆರ್​ಆರ್​ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ತನ್ನ ತಂಡಕ್ಕೆ ಸೇರ್ಪಡೆಗೊಳಿಸಲು ಮುಂದಾಗಿತ್ತು. 

ಆದರೆ ಅತ್ತ ಕಡೆಯಿಂದ ಸಂಜು ಸ್ಯಾಮ್ಸನ್ ಅವರನ್ನು ನೀಡಲು ಮುಂದಾಗಿರುವ ರಾಜಸ್ಥಾನ್ ರಾಯಲ್ಸ್ ತಂಡದ ವಿದೇಶಿ ಕೋಟಾ ಭರ್ತಿಯಾಗಿರುವುದೇ ಈಗ ಸಮಸ್ಯೆ. ಅಂದರೆ ಸ್ಯಾಮ್ಸನ್ ಅವರನ್ನು ನೀಡಿ ಆರ್​ಆರ್​ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ತನ್ನ ತಂಡಕ್ಕೆ ಸೇರ್ಪಡೆಗೊಳಿಸಲು ಮುಂದಾಗಿತ್ತು. 

3 / 6
ಈ ಸೇರ್ಪಡೆಗೆ ವಿದೇಶಿ ಆಟಗಾರರ ನಿಯಮ ಅಡ್ಡಿಯಾಗಿದೆ.  ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 8 ವಿದೇಶಿ ಆಟಗಾರರಿಗೆ ಮಾತ್ರ ಅವಕಾಶವಿದೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಈಗಾಗಲೇ 8 ವಿದೇಶಿ ಆಟಗಾರರು ಇದ್ದಾರೆ. ಹೀಗಾಗಿ ಸ್ಯಾಮ್ ಕರನ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸುವಂತಿಲ್ಲ.

ಈ ಸೇರ್ಪಡೆಗೆ ವಿದೇಶಿ ಆಟಗಾರರ ನಿಯಮ ಅಡ್ಡಿಯಾಗಿದೆ.  ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 8 ವಿದೇಶಿ ಆಟಗಾರರಿಗೆ ಮಾತ್ರ ಅವಕಾಶವಿದೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಈಗಾಗಲೇ 8 ವಿದೇಶಿ ಆಟಗಾರರು ಇದ್ದಾರೆ. ಹೀಗಾಗಿ ಸ್ಯಾಮ್ ಕರನ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸುವಂತಿಲ್ಲ.

4 / 6
ಅಂದರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ತನ್ನ ತಂಡದಲ್ಲಿರುವ ವಿದೇಶಿ ಆಟಗಾರನೊಬ್ಬನ್ನು ಬಿಡುಗಡೆ ಮಾಡಿದರೆ ಮಾತ್ರ ಸ್ಯಾಮ್ ಕರನ್ ಅವರನ್ನು ತನ್ನ ತಂಡಕ್ಕೆ ಸೇರ್ಪಡೆಗೊಳಿಸಬಹುದು. ಇತ್ತ ಐಪಿಎಲ್ ಹರಾಜಿಗೂ ಮುನ್ನ ರಿಟೈನ್  ಹಾಗೂ ರಿಲೀಸ್ ಪಟ್ಟಿ ಸಲ್ಲಿಸಲು ನವೆಂಬರ್ 15 ರವರೆಗೆ ಕಾಯಲೇಬೇಕು.

ಅಂದರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ತನ್ನ ತಂಡದಲ್ಲಿರುವ ವಿದೇಶಿ ಆಟಗಾರನೊಬ್ಬನ್ನು ಬಿಡುಗಡೆ ಮಾಡಿದರೆ ಮಾತ್ರ ಸ್ಯಾಮ್ ಕರನ್ ಅವರನ್ನು ತನ್ನ ತಂಡಕ್ಕೆ ಸೇರ್ಪಡೆಗೊಳಿಸಬಹುದು. ಇತ್ತ ಐಪಿಎಲ್ ಹರಾಜಿಗೂ ಮುನ್ನ ರಿಟೈನ್  ಹಾಗೂ ರಿಲೀಸ್ ಪಟ್ಟಿ ಸಲ್ಲಿಸಲು ನವೆಂಬರ್ 15 ರವರೆಗೆ ಕಾಯಲೇಬೇಕು.

5 / 6
ಹೀಗಾಗಿ ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಸ್ಯಾಮ್ ಕರನ್ ಡೀಲ್ ಮತ್ತಷ್ಟು ವಿಳಂಬವಾಗಲಿದೆ. ಅಂದರೆ ನವೆಂಬರ್ 15 ರಂದು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಅಧಿಕೃತವಾಗಿ ವಿದೇಶಿ ಆಟಗಾರನೊಬ್ಬನನ್ನು ತಂಡದಿಂದ ಬಿಡುಗಡೆಗೊಳಿಸಿದರೆ ಮಾತ್ರ ಸಿಎಸ್​ಕೆ ಹಾಗೂ ಆರ್​ಆರ್ ನಡುವಣ ಸ್ವಾಪ್ ಡೀಲ್ ಅಧಿಕೃತವಾಗಲಿದೆ. ಅಲ್ಲಿಯವರೆಗೆ ಉಭಯ ಫ್ರಾಂಚೈಸಿಗಳು ಕಾಯಲೇಬೇಕು.

ಹೀಗಾಗಿ ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಸ್ಯಾಮ್ ಕರನ್ ಡೀಲ್ ಮತ್ತಷ್ಟು ವಿಳಂಬವಾಗಲಿದೆ. ಅಂದರೆ ನವೆಂಬರ್ 15 ರಂದು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಅಧಿಕೃತವಾಗಿ ವಿದೇಶಿ ಆಟಗಾರನೊಬ್ಬನನ್ನು ತಂಡದಿಂದ ಬಿಡುಗಡೆಗೊಳಿಸಿದರೆ ಮಾತ್ರ ಸಿಎಸ್​ಕೆ ಹಾಗೂ ಆರ್​ಆರ್ ನಡುವಣ ಸ್ವಾಪ್ ಡೀಲ್ ಅಧಿಕೃತವಾಗಲಿದೆ. ಅಲ್ಲಿಯವರೆಗೆ ಉಭಯ ಫ್ರಾಂಚೈಸಿಗಳು ಕಾಯಲೇಬೇಕು.

6 / 6

Published On - 8:24 am, Wed, 12 November 25

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ