AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ರವೀಂದ್ರ ಜಡೇಜಾ, ಕರನ್, ಸಂಜು ಸ್ಯಾಮ್ಸನ್ ಟ್ರೇಡಿಂಗ್​ಗೆ ದೊಡ್ಡ ತೊಡಕು..!

IPL 2026: ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ವಿದೇಶಿ ಆಟಗಾರರಾಗಿ ಲುವಾನ್-ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಫಝಲ್​ಹಕ್ ಫಾರೂಖಿ, ಜೋಫ್ರಾ ಆರ್ಚರ್, ಕ್ವೇನಾ ಮಫಾಕ, ಮಹೀಶ್ ತೀಕ್ಷಣ, ನಾಂಡ್ರೆ ಬರ್ಗರ್ ಇದ್ದಾರೆ. ಅಂದರೆ ಆರ್​ಆರ್ ತಂಡದಲ್ಲಿ ವಿದೇಶಿ ಆಟಗಾರರ ಕೋಟ ಸಂಪೂರ್ಣ ಭರ್ತಿಯಾಗಿದೆ. ಇದುವೇ ಈಗ ಟ್ರೇಡಿಂಗ್ ಪ್ರಕ್ರಿಯೆಗೆ ಸಮಸ್ಯೆಯಾಗಿ ಪರಿಣಮಿಸಿದೆ.

ಝಾಹಿರ್ ಯೂಸುಫ್
|

Updated on:Nov 12, 2025 | 8:25 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ಸ್ಟಾರ್ ಆಟಗಾರರನ್ನು ಟ್ರೇಡ್ ಮಾಡಿಕೊಳ್ಳಲು ಮುಂದಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಜಸ್ಥಾನ್ ರಾಯಲ್ಸ್ (RR) ಫ್ರಾಂಚೈಸಿಗಳಿಗೆ ಇದೀಗ ಸಮಸ್ಯೆಯೊಂದು ಎದುರಾಗಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ಸ್ಟಾರ್ ಆಟಗಾರರನ್ನು ಟ್ರೇಡ್ ಮಾಡಿಕೊಳ್ಳಲು ಮುಂದಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಜಸ್ಥಾನ್ ರಾಯಲ್ಸ್ (RR) ಫ್ರಾಂಚೈಸಿಗಳಿಗೆ ಇದೀಗ ಸಮಸ್ಯೆಯೊಂದು ಎದುರಾಗಿದೆ.

1 / 6
ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ನೀಡಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲು ಮುಂದಾಗಿದೆ. ಅಲ್ಲದೆ ಈ ಸ್ವಾಪ್ ಡೀಲ್ ಪ್ರಕ್ರಿಯೆಗೆ ಅಧಿಕೃತ ಚಾಲನೆಯನ್ನು ಸಹ ನೀಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ನೀಡಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲು ಮುಂದಾಗಿದೆ. ಅಲ್ಲದೆ ಈ ಸ್ವಾಪ್ ಡೀಲ್ ಪ್ರಕ್ರಿಯೆಗೆ ಅಧಿಕೃತ ಚಾಲನೆಯನ್ನು ಸಹ ನೀಡಿದ್ದಾರೆ.

2 / 6
ಆದರೆ ಅತ್ತ ಕಡೆಯಿಂದ ಸಂಜು ಸ್ಯಾಮ್ಸನ್ ಅವರನ್ನು ನೀಡಲು ಮುಂದಾಗಿರುವ ರಾಜಸ್ಥಾನ್ ರಾಯಲ್ಸ್ ತಂಡದ ವಿದೇಶಿ ಕೋಟಾ ಭರ್ತಿಯಾಗಿರುವುದೇ ಈಗ ಸಮಸ್ಯೆ. ಅಂದರೆ ಸ್ಯಾಮ್ಸನ್ ಅವರನ್ನು ನೀಡಿ ಆರ್​ಆರ್​ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ತನ್ನ ತಂಡಕ್ಕೆ ಸೇರ್ಪಡೆಗೊಳಿಸಲು ಮುಂದಾಗಿತ್ತು. 

ಆದರೆ ಅತ್ತ ಕಡೆಯಿಂದ ಸಂಜು ಸ್ಯಾಮ್ಸನ್ ಅವರನ್ನು ನೀಡಲು ಮುಂದಾಗಿರುವ ರಾಜಸ್ಥಾನ್ ರಾಯಲ್ಸ್ ತಂಡದ ವಿದೇಶಿ ಕೋಟಾ ಭರ್ತಿಯಾಗಿರುವುದೇ ಈಗ ಸಮಸ್ಯೆ. ಅಂದರೆ ಸ್ಯಾಮ್ಸನ್ ಅವರನ್ನು ನೀಡಿ ಆರ್​ಆರ್​ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ತನ್ನ ತಂಡಕ್ಕೆ ಸೇರ್ಪಡೆಗೊಳಿಸಲು ಮುಂದಾಗಿತ್ತು. 

3 / 6
ಈ ಸೇರ್ಪಡೆಗೆ ವಿದೇಶಿ ಆಟಗಾರರ ನಿಯಮ ಅಡ್ಡಿಯಾಗಿದೆ.  ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 8 ವಿದೇಶಿ ಆಟಗಾರರಿಗೆ ಮಾತ್ರ ಅವಕಾಶವಿದೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಈಗಾಗಲೇ 8 ವಿದೇಶಿ ಆಟಗಾರರು ಇದ್ದಾರೆ. ಹೀಗಾಗಿ ಸ್ಯಾಮ್ ಕರನ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸುವಂತಿಲ್ಲ.

ಈ ಸೇರ್ಪಡೆಗೆ ವಿದೇಶಿ ಆಟಗಾರರ ನಿಯಮ ಅಡ್ಡಿಯಾಗಿದೆ.  ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 8 ವಿದೇಶಿ ಆಟಗಾರರಿಗೆ ಮಾತ್ರ ಅವಕಾಶವಿದೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಈಗಾಗಲೇ 8 ವಿದೇಶಿ ಆಟಗಾರರು ಇದ್ದಾರೆ. ಹೀಗಾಗಿ ಸ್ಯಾಮ್ ಕರನ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸುವಂತಿಲ್ಲ.

4 / 6
ಅಂದರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ತನ್ನ ತಂಡದಲ್ಲಿರುವ ವಿದೇಶಿ ಆಟಗಾರನೊಬ್ಬನ್ನು ಬಿಡುಗಡೆ ಮಾಡಿದರೆ ಮಾತ್ರ ಸ್ಯಾಮ್ ಕರನ್ ಅವರನ್ನು ತನ್ನ ತಂಡಕ್ಕೆ ಸೇರ್ಪಡೆಗೊಳಿಸಬಹುದು. ಇತ್ತ ಐಪಿಎಲ್ ಹರಾಜಿಗೂ ಮುನ್ನ ರಿಟೈನ್  ಹಾಗೂ ರಿಲೀಸ್ ಪಟ್ಟಿ ಸಲ್ಲಿಸಲು ನವೆಂಬರ್ 15 ರವರೆಗೆ ಕಾಯಲೇಬೇಕು.

ಅಂದರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ತನ್ನ ತಂಡದಲ್ಲಿರುವ ವಿದೇಶಿ ಆಟಗಾರನೊಬ್ಬನ್ನು ಬಿಡುಗಡೆ ಮಾಡಿದರೆ ಮಾತ್ರ ಸ್ಯಾಮ್ ಕರನ್ ಅವರನ್ನು ತನ್ನ ತಂಡಕ್ಕೆ ಸೇರ್ಪಡೆಗೊಳಿಸಬಹುದು. ಇತ್ತ ಐಪಿಎಲ್ ಹರಾಜಿಗೂ ಮುನ್ನ ರಿಟೈನ್  ಹಾಗೂ ರಿಲೀಸ್ ಪಟ್ಟಿ ಸಲ್ಲಿಸಲು ನವೆಂಬರ್ 15 ರವರೆಗೆ ಕಾಯಲೇಬೇಕು.

5 / 6
ಹೀಗಾಗಿ ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಸ್ಯಾಮ್ ಕರನ್ ಡೀಲ್ ಮತ್ತಷ್ಟು ವಿಳಂಬವಾಗಲಿದೆ. ಅಂದರೆ ನವೆಂಬರ್ 15 ರಂದು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಅಧಿಕೃತವಾಗಿ ವಿದೇಶಿ ಆಟಗಾರನೊಬ್ಬನನ್ನು ತಂಡದಿಂದ ಬಿಡುಗಡೆಗೊಳಿಸಿದರೆ ಮಾತ್ರ ಸಿಎಸ್​ಕೆ ಹಾಗೂ ಆರ್​ಆರ್ ನಡುವಣ ಸ್ವಾಪ್ ಡೀಲ್ ಅಧಿಕೃತವಾಗಲಿದೆ. ಅಲ್ಲಿಯವರೆಗೆ ಉಭಯ ಫ್ರಾಂಚೈಸಿಗಳು ಕಾಯಲೇಬೇಕು.

ಹೀಗಾಗಿ ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಸ್ಯಾಮ್ ಕರನ್ ಡೀಲ್ ಮತ್ತಷ್ಟು ವಿಳಂಬವಾಗಲಿದೆ. ಅಂದರೆ ನವೆಂಬರ್ 15 ರಂದು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಅಧಿಕೃತವಾಗಿ ವಿದೇಶಿ ಆಟಗಾರನೊಬ್ಬನನ್ನು ತಂಡದಿಂದ ಬಿಡುಗಡೆಗೊಳಿಸಿದರೆ ಮಾತ್ರ ಸಿಎಸ್​ಕೆ ಹಾಗೂ ಆರ್​ಆರ್ ನಡುವಣ ಸ್ವಾಪ್ ಡೀಲ್ ಅಧಿಕೃತವಾಗಲಿದೆ. ಅಲ್ಲಿಯವರೆಗೆ ಉಭಯ ಫ್ರಾಂಚೈಸಿಗಳು ಕಾಯಲೇಬೇಕು.

6 / 6

Published On - 8:24 am, Wed, 12 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ