AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

IPL 2026 RCB vs SRH: ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 200 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಎಸ್​ಆರ್​ಹೆಚ್​ 55 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 23, 2026 | 7:36 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ಸನ್​ರೈರ್ಸ್​ ಹೈದರಾಬಾದ್ (SRH)​ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ.  ಈ ಸೋಲಿನೊಂದಿಗೆ ಅತ್ಯಂತ ಹೀನಾಯ ದಾಖಲೆಯೊಂದನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ಸನ್​ರೈರ್ಸ್​ ಹೈದರಾಬಾದ್ (SRH)​ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ.  ಈ ಸೋಲಿನೊಂದಿಗೆ ಅತ್ಯಂತ ಹೀನಾಯ ದಾಖಲೆಯೊಂದನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

1 / 6
ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಬೃಹತ್ ಮೊತ್ತದೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್​ಗಳಿಸಿದ ವಿಶೇಷ ದಾಖಲೆ ಬರೆಯಿತು. (PC: IPL)

ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಬೃಹತ್ ಮೊತ್ತದೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್​ಗಳಿಸಿದ ವಿಶೇಷ ದಾಖಲೆ ಬರೆಯಿತು. (PC: IPL)

2 / 6
ಅಂದರೆ ಐಪಿಎಲ್ ಇತಿಹಾಸದಲ್ಲಿ ಯಾವುದೇ ತಂಡ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್​ ನೀಡಿರಲಿಲ್ಲ. ಆದರೆ ಆರ್​​ಸಿಬಿ ಬೌಲರ್​ಗಳು ಎಸ್​ಆರ್​ಹೆಚ್ ವಿರುದ್ಧ ದಂಡಿಸಿಕೊಳ್ಳುವ ಮೂಲಕ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಅಂದರೆ ಐಪಿಎಲ್ ಇತಿಹಾಸದಲ್ಲಿ ಯಾವುದೇ ತಂಡ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್​ ನೀಡಿರಲಿಲ್ಲ. ಆದರೆ ಆರ್​​ಸಿಬಿ ಬೌಲರ್​ಗಳು ಎಸ್​ಆರ್​ಹೆಚ್ ವಿರುದ್ಧ ದಂಡಿಸಿಕೊಳ್ಳುವ ಮೂಲಕ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

3 / 6
ಈ ಮೊದಲು 2024 ರಲ್ಲಿ  ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ನೆರವಿನಿಂದ SRH ತಂಡ ಐಪಿಎಲ್ ಇತಿಹಾಸದ ಸಾರ್ವಕಾಲಿಕ ಗರಿಷ್ಠ ಮೊತ್ತವಾದ 287 ರನ್ ಸಿಡಿಸಿತ್ತು. ಇದೀಗ ಮತ್ತೊಮ್ಮೆ ಆರ್​ಸಿಬಿ ವಿರುದ್ಧ ಅಬ್ಬರಿಸುವ ಸನ್​ರೈಸರ್ಸ್ ಹೈದರಾಬಾದ್ 255 ರನ್​ ಚಚ್ಚಿದ್ದಾರೆ. (PC: IPL)

ಈ ಮೊದಲು 2024 ರಲ್ಲಿ  ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ನೆರವಿನಿಂದ SRH ತಂಡ ಐಪಿಎಲ್ ಇತಿಹಾಸದ ಸಾರ್ವಕಾಲಿಕ ಗರಿಷ್ಠ ಮೊತ್ತವಾದ 287 ರನ್ ಸಿಡಿಸಿತ್ತು. ಇದೀಗ ಮತ್ತೊಮ್ಮೆ ಆರ್​ಸಿಬಿ ವಿರುದ್ಧ ಅಬ್ಬರಿಸುವ ಸನ್​ರೈಸರ್ಸ್ ಹೈದರಾಬಾದ್ 255 ರನ್​ ಚಚ್ಚಿದ್ದಾರೆ. (PC: IPL)

4 / 6
ಈ ಸ್ಕೋರ್​ಗಳೊಂದಿಗೆ ಐಪಿಎಲ್​ನಲ್ಲಿ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್ ನೀಡಿದ ಹೀನಾಯ ದಾಖಲೆಯನ್ನು ಆರ್​ಸಿಬಿ ತನ್ನಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಮೂರು ಬಾರಿ 250+ ಸ್ಕೋರ್ ಹೊಡೆಸಿಕೊಂಡ ಅನಗತ್ಯ ದಾಖಲೆ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕಾಣಿಸಿಕೊಂಡಿದೆ. (PC: IPL)

ಈ ಸ್ಕೋರ್​ಗಳೊಂದಿಗೆ ಐಪಿಎಲ್​ನಲ್ಲಿ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್ ನೀಡಿದ ಹೀನಾಯ ದಾಖಲೆಯನ್ನು ಆರ್​ಸಿಬಿ ತನ್ನಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಮೂರು ಬಾರಿ 250+ ಸ್ಕೋರ್ ಹೊಡೆಸಿಕೊಂಡ ಅನಗತ್ಯ ದಾಖಲೆ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕಾಣಿಸಿಕೊಂಡಿದೆ. (PC: IPL)

5 / 6
ಒಟ್ಟಾರೆಯಾಗಿ ಹೇಳುವುದಾದರೆ ಐಪಿಎಲ್​ನ ಬಲಿಷ್ಠ ಬೌಲಿಂಗ್ ಪಡೆಯನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸನ್​ರೈಸರ್ಸ್ ಹೈದರಾಬಾದ್ ಬ್ಯಾಟರ್​ಗಳು ಮತ್ತೊಮ್ಮೆ ಧೂಳೀಪಟ ಮಾಡಿದ್ದಾರೆ. ಈ ಮೂಲಕ ಮೊದಲ ಸೋಲಿನ ಸೇಡನ್ನು 55 ರನ್​ಗಳ ಭರ್ಜರಿ ಜಯದೊಂದಿಗೆ ತೀರಿಸಿಕೊಂಡಿದ್ದಾರೆ. (PC: IPL)

ಒಟ್ಟಾರೆಯಾಗಿ ಹೇಳುವುದಾದರೆ ಐಪಿಎಲ್​ನ ಬಲಿಷ್ಠ ಬೌಲಿಂಗ್ ಪಡೆಯನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸನ್​ರೈಸರ್ಸ್ ಹೈದರಾಬಾದ್ ಬ್ಯಾಟರ್​ಗಳು ಮತ್ತೊಮ್ಮೆ ಧೂಳೀಪಟ ಮಾಡಿದ್ದಾರೆ. ಈ ಮೂಲಕ ಮೊದಲ ಸೋಲಿನ ಸೇಡನ್ನು 55 ರನ್​ಗಳ ಭರ್ಜರಿ ಜಯದೊಂದಿಗೆ ತೀರಿಸಿಕೊಂಡಿದ್ದಾರೆ. (PC: IPL)

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!