AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL​ 2026 ಆರಂಭಕ್ಕೂ ಮುನ್ನವೇ RCBಗೆ ಆಘಾತ ನೀಡಿದ ಮುಂಬೈ ಇಂಡಿಯನ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳನ್ನು ಆಯೋಜಿಸಲು ಅವಕಾಶ ನೀಡಬೇಕೆಂದು ಕೆಎಸ್​ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದಾಗ್ಯೂ ಆರ್​ಸಿಬಿ ಪರ್ಯಾಯ ಸ್ಟೇಡಿಯಂನತ್ತ ಮುಖ ಮಾಡಲು ಮುಂದಾಗಿದೆ.

ಝಾಹಿರ್ ಯೂಸುಫ್
|

Updated on: Feb 11, 2026 | 2:17 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲು ಇನ್ನೂ ಕೆಲ ದಿನಗಳವರೆಗೆ ಕಾಯಬೇಕಾಗಿ ಬರಬಹುದು. ಏಕೆಂದರೆ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಿಂದ ಹೊರ ನಡೆಯಲು ತೆರೆಮರೆಯ ಪ್ರಯತ್ನ ಮುಂದುವರೆಸಿದ್ದಾರೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲು ಇನ್ನೂ ಕೆಲ ದಿನಗಳವರೆಗೆ ಕಾಯಬೇಕಾಗಿ ಬರಬಹುದು. ಏಕೆಂದರೆ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಿಂದ ಹೊರ ನಡೆಯಲು ತೆರೆಮರೆಯ ಪ್ರಯತ್ನ ಮುಂದುವರೆಸಿದ್ದಾರೆ.

1 / 5
ಅದರಂತೆ ಐಪಿಎಲ್ 2026ರ ಸೀಸನ್‌ಗಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತನ್ನ ತವರು ಮೈದಾನವಾಗಿ ಬಳಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲ್ಯಾನ್ ರೂಪಿಸಿತ್ತು. ಆದರೆ ಆರ್​ಸಿಬಿಯ ಈ ಮನವಿಯನ್ನು ಮುಂಬೈ ಇಂಡಿಯನ್ಸ್ ತಿರಸ್ಕರಿಸಿದೆ ಎಂದು ವರದಿಯಾಗಿದೆ.

ಅದರಂತೆ ಐಪಿಎಲ್ 2026ರ ಸೀಸನ್‌ಗಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತನ್ನ ತವರು ಮೈದಾನವಾಗಿ ಬಳಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲ್ಯಾನ್ ರೂಪಿಸಿತ್ತು. ಆದರೆ ಆರ್​ಸಿಬಿಯ ಈ ಮನವಿಯನ್ನು ಮುಂಬೈ ಇಂಡಿಯನ್ಸ್ ತಿರಸ್ಕರಿಸಿದೆ ಎಂದು ವರದಿಯಾಗಿದೆ.

2 / 5
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ವರ್ಷ ನಡೆದ ದುರದೃಷ್ಟಕರ ಕಾಲ್ತುಳಿತದ ಘಟನೆಯ ನಂತರ ಉಂಟಾದ ಸುರಕ್ಷತಾ ನಿರ್ಬಂಧಗಳಿಂದಾಗಿ ಆರ್‌ಸಿಬಿ ಪರ್ಯಾಯ ಮೈದಾನವನ್ನು ಹುಡುಕುತ್ತಿದೆ. ಹೀಗಾಗಿ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತವರು ಮೈದಾನವನ್ನಾಗಿ ಆಯ್ಕೆ ಮಾಡಲು ಬಯಸಿತ್ತು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ವರ್ಷ ನಡೆದ ದುರದೃಷ್ಟಕರ ಕಾಲ್ತುಳಿತದ ಘಟನೆಯ ನಂತರ ಉಂಟಾದ ಸುರಕ್ಷತಾ ನಿರ್ಬಂಧಗಳಿಂದಾಗಿ ಆರ್‌ಸಿಬಿ ಪರ್ಯಾಯ ಮೈದಾನವನ್ನು ಹುಡುಕುತ್ತಿದೆ. ಹೀಗಾಗಿ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತವರು ಮೈದಾನವನ್ನಾಗಿ ಆಯ್ಕೆ ಮಾಡಲು ಬಯಸಿತ್ತು.

3 / 5
ಆದರೆ ಡಿವೈ ಪಾಟೀಲ್ ಸ್ಟೇಡಿಯಂ ಮುಂಬೈ ಇಂಡಿಯನ್ಸ್‌ನ ಕಾರ್ಯಕ್ಷೇತ್ರಕ್ಕೆ ಹತ್ತಿರವಿರುವುದರಿಂದ, ಆರ್‌ಸಿಬಿ ಇಲ್ಲಿ ಪಂದ್ಯಗಳನ್ನು ಆಯೋಜಿಸಲು MI ತಂಡದ 'ನಿರಾಕ್ಷೇಪಣಾ ಪತ್ರ' (NOC) ಅಗತ್ಯವಿತ್ತು. ಮುಂಬೈ ಇಂಡಿಯನ್ಸ್ ಆಡಳಿತ ಮಂಡಳಿಯು ತನ್ನ ತವರು ಪ್ರದೇಶದ ಘನತೆಯನ್ನು ಕಾಪಾಡುವ ಉದ್ದೇಶದಿಂದ ಈ ಅನುಮತಿಯನ್ನು ನಿರಾಕರಿಸಿದೆ.

ಆದರೆ ಡಿವೈ ಪಾಟೀಲ್ ಸ್ಟೇಡಿಯಂ ಮುಂಬೈ ಇಂಡಿಯನ್ಸ್‌ನ ಕಾರ್ಯಕ್ಷೇತ್ರಕ್ಕೆ ಹತ್ತಿರವಿರುವುದರಿಂದ, ಆರ್‌ಸಿಬಿ ಇಲ್ಲಿ ಪಂದ್ಯಗಳನ್ನು ಆಯೋಜಿಸಲು MI ತಂಡದ 'ನಿರಾಕ್ಷೇಪಣಾ ಪತ್ರ' (NOC) ಅಗತ್ಯವಿತ್ತು. ಮುಂಬೈ ಇಂಡಿಯನ್ಸ್ ಆಡಳಿತ ಮಂಡಳಿಯು ತನ್ನ ತವರು ಪ್ರದೇಶದ ಘನತೆಯನ್ನು ಕಾಪಾಡುವ ಉದ್ದೇಶದಿಂದ ಈ ಅನುಮತಿಯನ್ನು ನಿರಾಕರಿಸಿದೆ.

4 / 5
ಮುಂಬೈ ಇಂಡಿಯನ್ಸ್​ ಆಡಳಿತ ಮಂಡಳಿಯ ಅನುಮತಿ ನಿರಾಕರಣೆಯ ಕಾರಣ, ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ಆರ್​ಸಿಬಿ ತನ್ನ ತವರು ಮೈದಾನವನ್ನಾಗಿ ಆಯ್ಕೆ ಮಾಡಲಾಗುವುದಿಲ್ಲ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮತ್ತೊಂದು ಪರ್ಯಾಯ ಸ್ಟೇಡಿಯಂನತ್ತ ಮುಖ ಮಾಡಬೇಕಿದೆ. ಇಲ್ಲಾ, ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಬೇಕಾಗುತ್ತದೆ.

ಮುಂಬೈ ಇಂಡಿಯನ್ಸ್​ ಆಡಳಿತ ಮಂಡಳಿಯ ಅನುಮತಿ ನಿರಾಕರಣೆಯ ಕಾರಣ, ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ಆರ್​ಸಿಬಿ ತನ್ನ ತವರು ಮೈದಾನವನ್ನಾಗಿ ಆಯ್ಕೆ ಮಾಡಲಾಗುವುದಿಲ್ಲ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮತ್ತೊಂದು ಪರ್ಯಾಯ ಸ್ಟೇಡಿಯಂನತ್ತ ಮುಖ ಮಾಡಬೇಕಿದೆ. ಇಲ್ಲಾ, ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಬೇಕಾಗುತ್ತದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ