IPL​ 2026 ಆರಂಭಕ್ಕೂ ಮುನ್ನವೇ RCBಗೆ ಆಘಾತ ನೀಡಿದ ಮುಂಬೈ ಇಂಡಿಯನ್ಸ್

Updated on: Feb 11, 2026 | 2:17 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳನ್ನು ಆಯೋಜಿಸಲು ಅವಕಾಶ ನೀಡಬೇಕೆಂದು ಕೆಎಸ್​ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದಾಗ್ಯೂ ಆರ್​ಸಿಬಿ ಪರ್ಯಾಯ ಸ್ಟೇಡಿಯಂನತ್ತ ಮುಖ ಮಾಡಲು ಮುಂದಾಗಿದೆ.

1 / 5
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲು ಇನ್ನೂ ಕೆಲ ದಿನಗಳವರೆಗೆ ಕಾಯಬೇಕಾಗಿ ಬರಬಹುದು. ಏಕೆಂದರೆ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಿಂದ ಹೊರ ನಡೆಯಲು ತೆರೆಮರೆಯ ಪ್ರಯತ್ನ ಮುಂದುವರೆಸಿದ್ದಾರೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲು ಇನ್ನೂ ಕೆಲ ದಿನಗಳವರೆಗೆ ಕಾಯಬೇಕಾಗಿ ಬರಬಹುದು. ಏಕೆಂದರೆ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಿಂದ ಹೊರ ನಡೆಯಲು ತೆರೆಮರೆಯ ಪ್ರಯತ್ನ ಮುಂದುವರೆಸಿದ್ದಾರೆ.

2 / 5
ಅದರಂತೆ ಐಪಿಎಲ್ 2026ರ ಸೀಸನ್‌ಗಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತನ್ನ ತವರು ಮೈದಾನವಾಗಿ ಬಳಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲ್ಯಾನ್ ರೂಪಿಸಿತ್ತು. ಆದರೆ ಆರ್​ಸಿಬಿಯ ಈ ಮನವಿಯನ್ನು ಮುಂಬೈ ಇಂಡಿಯನ್ಸ್ ತಿರಸ್ಕರಿಸಿದೆ ಎಂದು ವರದಿಯಾಗಿದೆ.

ಅದರಂತೆ ಐಪಿಎಲ್ 2026ರ ಸೀಸನ್‌ಗಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತನ್ನ ತವರು ಮೈದಾನವಾಗಿ ಬಳಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲ್ಯಾನ್ ರೂಪಿಸಿತ್ತು. ಆದರೆ ಆರ್​ಸಿಬಿಯ ಈ ಮನವಿಯನ್ನು ಮುಂಬೈ ಇಂಡಿಯನ್ಸ್ ತಿರಸ್ಕರಿಸಿದೆ ಎಂದು ವರದಿಯಾಗಿದೆ.

3 / 5
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ವರ್ಷ ನಡೆದ ದುರದೃಷ್ಟಕರ ಕಾಲ್ತುಳಿತದ ಘಟನೆಯ ನಂತರ ಉಂಟಾದ ಸುರಕ್ಷತಾ ನಿರ್ಬಂಧಗಳಿಂದಾಗಿ ಆರ್‌ಸಿಬಿ ಪರ್ಯಾಯ ಮೈದಾನವನ್ನು ಹುಡುಕುತ್ತಿದೆ. ಹೀಗಾಗಿ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತವರು ಮೈದಾನವನ್ನಾಗಿ ಆಯ್ಕೆ ಮಾಡಲು ಬಯಸಿತ್ತು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ವರ್ಷ ನಡೆದ ದುರದೃಷ್ಟಕರ ಕಾಲ್ತುಳಿತದ ಘಟನೆಯ ನಂತರ ಉಂಟಾದ ಸುರಕ್ಷತಾ ನಿರ್ಬಂಧಗಳಿಂದಾಗಿ ಆರ್‌ಸಿಬಿ ಪರ್ಯಾಯ ಮೈದಾನವನ್ನು ಹುಡುಕುತ್ತಿದೆ. ಹೀಗಾಗಿ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತವರು ಮೈದಾನವನ್ನಾಗಿ ಆಯ್ಕೆ ಮಾಡಲು ಬಯಸಿತ್ತು.

4 / 5
ಆದರೆ ಡಿವೈ ಪಾಟೀಲ್ ಸ್ಟೇಡಿಯಂ ಮುಂಬೈ ಇಂಡಿಯನ್ಸ್‌ನ ಕಾರ್ಯಕ್ಷೇತ್ರಕ್ಕೆ ಹತ್ತಿರವಿರುವುದರಿಂದ, ಆರ್‌ಸಿಬಿ ಇಲ್ಲಿ ಪಂದ್ಯಗಳನ್ನು ಆಯೋಜಿಸಲು MI ತಂಡದ 'ನಿರಾಕ್ಷೇಪಣಾ ಪತ್ರ' (NOC) ಅಗತ್ಯವಿತ್ತು. ಮುಂಬೈ ಇಂಡಿಯನ್ಸ್ ಆಡಳಿತ ಮಂಡಳಿಯು ತನ್ನ ತವರು ಪ್ರದೇಶದ ಘನತೆಯನ್ನು ಕಾಪಾಡುವ ಉದ್ದೇಶದಿಂದ ಈ ಅನುಮತಿಯನ್ನು ನಿರಾಕರಿಸಿದೆ.

ಆದರೆ ಡಿವೈ ಪಾಟೀಲ್ ಸ್ಟೇಡಿಯಂ ಮುಂಬೈ ಇಂಡಿಯನ್ಸ್‌ನ ಕಾರ್ಯಕ್ಷೇತ್ರಕ್ಕೆ ಹತ್ತಿರವಿರುವುದರಿಂದ, ಆರ್‌ಸಿಬಿ ಇಲ್ಲಿ ಪಂದ್ಯಗಳನ್ನು ಆಯೋಜಿಸಲು MI ತಂಡದ 'ನಿರಾಕ್ಷೇಪಣಾ ಪತ್ರ' (NOC) ಅಗತ್ಯವಿತ್ತು. ಮುಂಬೈ ಇಂಡಿಯನ್ಸ್ ಆಡಳಿತ ಮಂಡಳಿಯು ತನ್ನ ತವರು ಪ್ರದೇಶದ ಘನತೆಯನ್ನು ಕಾಪಾಡುವ ಉದ್ದೇಶದಿಂದ ಈ ಅನುಮತಿಯನ್ನು ನಿರಾಕರಿಸಿದೆ.

5 / 5
ಮುಂಬೈ ಇಂಡಿಯನ್ಸ್​ ಆಡಳಿತ ಮಂಡಳಿಯ ಅನುಮತಿ ನಿರಾಕರಣೆಯ ಕಾರಣ, ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ಆರ್​ಸಿಬಿ ತನ್ನ ತವರು ಮೈದಾನವನ್ನಾಗಿ ಆಯ್ಕೆ ಮಾಡಲಾಗುವುದಿಲ್ಲ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮತ್ತೊಂದು ಪರ್ಯಾಯ ಸ್ಟೇಡಿಯಂನತ್ತ ಮುಖ ಮಾಡಬೇಕಿದೆ. ಇಲ್ಲಾ, ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಬೇಕಾಗುತ್ತದೆ.

ಮುಂಬೈ ಇಂಡಿಯನ್ಸ್​ ಆಡಳಿತ ಮಂಡಳಿಯ ಅನುಮತಿ ನಿರಾಕರಣೆಯ ಕಾರಣ, ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ಆರ್​ಸಿಬಿ ತನ್ನ ತವರು ಮೈದಾನವನ್ನಾಗಿ ಆಯ್ಕೆ ಮಾಡಲಾಗುವುದಿಲ್ಲ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮತ್ತೊಂದು ಪರ್ಯಾಯ ಸ್ಟೇಡಿಯಂನತ್ತ ಮುಖ ಮಾಡಬೇಕಿದೆ. ಇಲ್ಲಾ, ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಬೇಕಾಗುತ್ತದೆ.