IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!

Updated on: Jan 22, 2026 | 8:31 AM

IPL 2026 RCB: ಐಪಿಎಲ್ 2025ರ ಬಳಿಕ ನಡೆದ ಆರ್​ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿತ್ತು. ಈ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ದುರ್ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳ ಆಯೋಜನೆಗೆ ನಿಷೇಧ ಹೇರಿದ್ದರು. ಇದೀಗ ನಿಷೇಧ ತೆರವುಗೊಳಿಸಿದರೂ ಆರ್​ಸಿಬಿ ಬೆಂಗಳೂರಿನಲ್ಲಿ ಪಂದ್ಯವಾಡಲು ಹಿಂಜರಿಯುತ್ತಿದೆ.

1 / 6
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಲ್ಲಿ ಕಣಕ್ಕಿಳಿಯಲಿದೆ ಎಂಬುದೇ ಪ್ರಶ್ನೆ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿಷೇಧ ತೆರವಾದರೂ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಮನಸ್ಸು ಮಾಡುತ್ತಿಲ್ಲ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಲ್ಲಿ ಕಣಕ್ಕಿಳಿಯಲಿದೆ ಎಂಬುದೇ ಪ್ರಶ್ನೆ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿಷೇಧ ತೆರವಾದರೂ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಮನಸ್ಸು ಮಾಡುತ್ತಿಲ್ಲ.

2 / 6
ಇದರ ಬೆನ್ನಲ್ಲೇ ಇದಕ್ಕೇನು ಕಾರಣ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ರಾಜ್ಯ ಸರ್ಕಾರ ಮುಂದಿಟ್ಟಿರುವ ಕೆಲ ಷರತ್ತುಗಳು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯವಾಡಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಇಲ್ಲಿ ನೀಡಲಾದ ಕೆಲ ಷರತ್ತುಗಳೇ ಆರ್​ಸಿಬಿ ಪಾಲಿಗೆ ತೊಡಕಾಗಿ ಪರಿಣಮಿಸಿದೆ.

ಇದರ ಬೆನ್ನಲ್ಲೇ ಇದಕ್ಕೇನು ಕಾರಣ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ರಾಜ್ಯ ಸರ್ಕಾರ ಮುಂದಿಟ್ಟಿರುವ ಕೆಲ ಷರತ್ತುಗಳು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯವಾಡಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಇಲ್ಲಿ ನೀಡಲಾದ ಕೆಲ ಷರತ್ತುಗಳೇ ಆರ್​ಸಿಬಿ ಪಾಲಿಗೆ ತೊಡಕಾಗಿ ಪರಿಣಮಿಸಿದೆ.

3 / 6
ಬೆಂಗಳೂರಿನಲ್ಲಿ ಪಂದ್ಯವಾಡಲು ಅನುಮತಿ ನೀಡಿರುವ ಕರ್ನಾಟಕ ಸರ್ಕಾರ, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕೆಂದು ತಿಳಿಸಿದೆ. ಇದರ ಜೊತೆಗೆ ಯಾವುದೇ ದುರ್ಘಟನೆಗಳು ನಡೆದರೂ ಅದಕ್ಕೆಲ್ಲಾ ನೀವೇ ಜವಾಬ್ದಾರರು ಎಂಬುದನ್ನು ಒತ್ತಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪಂದ್ಯವಾಡಲು ಅನುಮತಿ ನೀಡಿರುವ ಕರ್ನಾಟಕ ಸರ್ಕಾರ, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕೆಂದು ತಿಳಿಸಿದೆ. ಇದರ ಜೊತೆಗೆ ಯಾವುದೇ ದುರ್ಘಟನೆಗಳು ನಡೆದರೂ ಅದಕ್ಕೆಲ್ಲಾ ನೀವೇ ಜವಾಬ್ದಾರರು ಎಂಬುದನ್ನು ಒತ್ತಿ ಹೇಳಿದ್ದಾರೆ.

4 / 6
ಅಂದರೆ ಪಂದ್ಯದ ದಿನದಂದು ಸ್ಟೇಡಿಯಂನ ಸುತ್ತ ಮುತ್ತಲಿನ ರಸ್ತೆಗಳಲ್ಲಿ ಏನಾದರೂ ಸಂಭವಿಸಿದರೂ ಆರ್​ಸಿಬಿ ಫ್ರಾಂಚೈಸಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ಇದೇ ಕಾರಣಕ್ಕೆ ಆರ್‌ಸಿಬಿ ಮಾಲೀಕರು ಬೆಂಗಳೂರಿನಲ್ಲಿ ಪಂದ್ಯ ಆಯೋಜಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಅಂದರೆ ಪಂದ್ಯದ ದಿನದಂದು ಸ್ಟೇಡಿಯಂನ ಸುತ್ತ ಮುತ್ತಲಿನ ರಸ್ತೆಗಳಲ್ಲಿ ಏನಾದರೂ ಸಂಭವಿಸಿದರೂ ಆರ್​ಸಿಬಿ ಫ್ರಾಂಚೈಸಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ಇದೇ ಕಾರಣಕ್ಕೆ ಆರ್‌ಸಿಬಿ ಮಾಲೀಕರು ಬೆಂಗಳೂರಿನಲ್ಲಿ ಪಂದ್ಯ ಆಯೋಜಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

5 / 6
ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಕಡೆಯಿಂದ ಅಂತಿಮ ನಿರ್ಧಾರ ಬಂದಿಲ್ಲ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೋಮ್ ಗ್ರೌಂಡ್ ಯಾವುದೆಂದು ತಿಳಿಸಲು ಜನವರಿ 27 ರವರೆಗೆ ಗಡುವು ನೀಡಲಾಗಿದೆ. ಹೀಗಾಗಿ ಮಂಗಳವಾರದೊಳಗೆ ಆರ್​ಸಿಬಿ ಎಲ್ಲಿ ಕಣಕ್ಕಿಳಿಯಲಿದೆ ಎಂಬುದು ನಿರ್ಧಾರವಾಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದ್ದಾರೆ. 

ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಕಡೆಯಿಂದ ಅಂತಿಮ ನಿರ್ಧಾರ ಬಂದಿಲ್ಲ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೋಮ್ ಗ್ರೌಂಡ್ ಯಾವುದೆಂದು ತಿಳಿಸಲು ಜನವರಿ 27 ರವರೆಗೆ ಗಡುವು ನೀಡಲಾಗಿದೆ. ಹೀಗಾಗಿ ಮಂಗಳವಾರದೊಳಗೆ ಆರ್​ಸಿಬಿ ಎಲ್ಲಿ ಕಣಕ್ಕಿಳಿಯಲಿದೆ ಎಂಬುದು ನಿರ್ಧಾರವಾಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದ್ದಾರೆ. 

6 / 6
ಅದರಂತೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿಯೇ ಕಣಕ್ಕಿಳಿಯಲಿದೆಯಾ ಅಥವಾ ಬೇರೆ ಮೈದಾನವನ್ನು ಹೋಮ್ ಗ್ರೌಂಡ್ ಆಗಿ ಆಯ್ಕೆ ಮಾಡಿಕೊಳ್ಳಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ಅದರಂತೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿಯೇ ಕಣಕ್ಕಿಳಿಯಲಿದೆಯಾ ಅಥವಾ ಬೇರೆ ಮೈದಾನವನ್ನು ಹೋಮ್ ಗ್ರೌಂಡ್ ಆಗಿ ಆಯ್ಕೆ ಮಾಡಿಕೊಳ್ಳಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

Loading...
Unable to load recommendations.
Follow Us