AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್ ನಿಯಮ… RCB ಈ ಇಬ್ಬರನ್ನು ಬಿಡುಗಡೆ ಮಾಡಲೇಬೇಕು!

IPL 2026: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ 22 ಆಟಗಾರರು ಕಾಣಿಸಿಕೊಂಡಿದ್ದರು. ಈ 22 ಆಟಗಾರರಲ್ಲಿ ಬಹುತೇಕ ಪ್ಲೇಯರ್ಸ್ ಮುಂದಿನ ಸೀಸನ್​ನಲ್ಲೂ ಮುಂದುವರೆಯುವ ಸಾಧ್ಯತೆಯಿದೆ. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಕಣಕ್ಕಿಳಿದ ಬಹುತೇಕ ಆಟಗಾರರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಐಪಿಎಲ್ 2026 ರ ಮಿನಿ ಹರಾಜಿಗೂ ಮುನ್ನ ಆರ್​ಸಿಬಿ ಕೆಲವೇ ಕೆಲವು ಆಟಗಾರರನ್ನು ಮಾತ್ರ ರಿಲೀಸ್ ಮಾಡಲಿದೆ.

ಝಾಹಿರ್ ಯೂಸುಫ್
|

Updated on: Aug 26, 2025 | 8:30 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ (IPL 2025) ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂದಿನ ಸೀಸನ್​ಗೂ ಮುನ್ನ ಬಹುತೇಕ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳುವುದು ಖಚಿತ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇಬ್ಬರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ (IPL 2025) ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂದಿನ ಸೀಸನ್​ಗೂ ಮುನ್ನ ಬಹುತೇಕ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳುವುದು ಖಚಿತ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇಬ್ಬರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

1 / 5
ಐಪಿಎಲ್ ನಿಯಮದ ಪ್ರಕಾರ, ಬದಲಿ ಆಟಗಾರನಾಗಿ ಬಂದ ಪ್ಲೇಯರ್ಸ್​ನನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳಬಹುದು. ಆದರೆ ತಾತ್ಕಾಲಿಕ ಬದಲಿಯಾಗಿ ಆಯ್ಕೆಯಾದ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾವಿರುವುದಿಲ್ಲ.

ಐಪಿಎಲ್ ನಿಯಮದ ಪ್ರಕಾರ, ಬದಲಿ ಆಟಗಾರನಾಗಿ ಬಂದ ಪ್ಲೇಯರ್ಸ್​ನನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳಬಹುದು. ಆದರೆ ತಾತ್ಕಾಲಿಕ ಬದಲಿಯಾಗಿ ಆಯ್ಕೆಯಾದ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾವಿರುವುದಿಲ್ಲ.

2 / 5
ಆರ್​ಸಿಬಿ ತಂಡಕ್ಕೆ ತಾತ್ಕಾಲಿಕ ಬದಲಿಯಾಗಿ ಇಬ್ಬರು ಆಟಗಾರರು ಎಂಟ್ರಿ ಕೊಟ್ಟಿದ್ದರು. ಭಾರತ-ಪಾಕ್ ಯುದ್ಧ ಭೀತಿ ಹಿನ್ನಲೆ ಐಪಿಎಲ್ 2025 ಅನ್ನು ಕೆಲ ವಾರ ಮುಂದೂಡಲಾಗಿತ್ತು. ಹೀಗಾಗಿ ಅಂತಿಮ ಪಂದ್ಯಗಳಿಗೆ ಜೇಕಬ್ ಬೆಥೆಲ್ ಹಾಗೂ ಲುಂಗಿ ಎನ್​ಗಿಡಿ ಅಲಭ್ಯರಾಗಿದ್ದರು.  ಇದೇ ವೇಳೆ ಆರ್​ಸಿಬಿ ಇಬ್ಬರನ್ನು ತಾತ್ಕಾಲಿಕ ಬದಲಿಯಾಗಿ ಆಯ್ಕೆ ಮಾಡಿಕೊಂಡಿದ್ದರು. ಅವರೆಂದರೆ...

ಆರ್​ಸಿಬಿ ತಂಡಕ್ಕೆ ತಾತ್ಕಾಲಿಕ ಬದಲಿಯಾಗಿ ಇಬ್ಬರು ಆಟಗಾರರು ಎಂಟ್ರಿ ಕೊಟ್ಟಿದ್ದರು. ಭಾರತ-ಪಾಕ್ ಯುದ್ಧ ಭೀತಿ ಹಿನ್ನಲೆ ಐಪಿಎಲ್ 2025 ಅನ್ನು ಕೆಲ ವಾರ ಮುಂದೂಡಲಾಗಿತ್ತು. ಹೀಗಾಗಿ ಅಂತಿಮ ಪಂದ್ಯಗಳಿಗೆ ಜೇಕಬ್ ಬೆಥೆಲ್ ಹಾಗೂ ಲುಂಗಿ ಎನ್​ಗಿಡಿ ಅಲಭ್ಯರಾಗಿದ್ದರು.  ಇದೇ ವೇಳೆ ಆರ್​ಸಿಬಿ ಇಬ್ಬರನ್ನು ತಾತ್ಕಾಲಿಕ ಬದಲಿಯಾಗಿ ಆಯ್ಕೆ ಮಾಡಿಕೊಂಡಿದ್ದರು. ಅವರೆಂದರೆ...

3 / 5
ಬ್ಲೆಸಿಂಗ್ ಮುಝರಬಾನಿ: ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಆರ್​ಸಿಬಿಯ ಕೊನೆಯ ಎರಡು ಪಂದ್ಯಗಳ ವೇಳೆ ತಂಡದಲ್ಲಿ ಕಾಣಿಸಿಕೊಂಡಿದ್ದರು. ಲುಂಗಿ ಎನ್​ಗಿಡಿ ಅವರ ಬದಲಿಗೆ ಆಯ್ಕೆಯಾಗಿದ್ದ ಬ್ಲೆಸಿಂಗ್ ಮುಝರಬಾನಿಯನ್ನು ಮುಂದಿನ ಸೀಸನ್​ಗಾಗಿ ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಮುಝರಬಾನಿ ಆರ್​ಸಿಬಿ ತಾತ್ಕಾಲಿಕ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದರು.

ಬ್ಲೆಸಿಂಗ್ ಮುಝರಬಾನಿ: ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಆರ್​ಸಿಬಿಯ ಕೊನೆಯ ಎರಡು ಪಂದ್ಯಗಳ ವೇಳೆ ತಂಡದಲ್ಲಿ ಕಾಣಿಸಿಕೊಂಡಿದ್ದರು. ಲುಂಗಿ ಎನ್​ಗಿಡಿ ಅವರ ಬದಲಿಗೆ ಆಯ್ಕೆಯಾಗಿದ್ದ ಬ್ಲೆಸಿಂಗ್ ಮುಝರಬಾನಿಯನ್ನು ಮುಂದಿನ ಸೀಸನ್​ಗಾಗಿ ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಮುಝರಬಾನಿ ಆರ್​ಸಿಬಿ ತಾತ್ಕಾಲಿಕ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದರು.

4 / 5
ಟಿಮ್ ಸೈಫರ್ಟ್​: ಜೇಕಬ್ ಬೆಥೆಲ್ ತವರಿಗೆ ಹಿಂತಿರುಗಿದ ಕಾರಣ ಆರ್​ಸಿಬಿ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಟಿಮ್ ಸೈಫರ್ಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿತ್ತು. ಆದರೆ ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆಯಾಗಿರುವ ಸೈಫರ್ಟ್ ಅವರನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ರಿಟೈನ್ ಮಾಡಿಕೊಳ್ಳುವಂತಿಲ್ಲ.  ಹೀಗಾಗಿ ಈ ಇಬ್ಬರು ಆಟಗಾರರು ಆರ್​ಸಿಬಿ ತಂಡದ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆಯುವುದಿಲ್ಲ.

ಟಿಮ್ ಸೈಫರ್ಟ್​: ಜೇಕಬ್ ಬೆಥೆಲ್ ತವರಿಗೆ ಹಿಂತಿರುಗಿದ ಕಾರಣ ಆರ್​ಸಿಬಿ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಟಿಮ್ ಸೈಫರ್ಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿತ್ತು. ಆದರೆ ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆಯಾಗಿರುವ ಸೈಫರ್ಟ್ ಅವರನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ರಿಟೈನ್ ಮಾಡಿಕೊಳ್ಳುವಂತಿಲ್ಲ.  ಹೀಗಾಗಿ ಈ ಇಬ್ಬರು ಆಟಗಾರರು ಆರ್​ಸಿಬಿ ತಂಡದ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆಯುವುದಿಲ್ಲ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್