IPL 2026: ಕೊನೆಗೂ RCB ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್

Updated on: Dec 14, 2025 | 10:09 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳನ್ನು ಆಯೋಜಿಸಲು ಅವಕಾಶ ನೀಡಬೇಕೆಂದು ಕೆಎಸ್​ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಇತ್ತೀಗಷ್ಟೇ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿರುವ ಸರ್ಕಾರ, ಬೆಂಗಳೂರಿನಲ್ಲಿ ಪಂದ್ಯವನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.

1 / 6
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನೂ ತಿಂಗಳುಗಳು ಮಾತ್ರ ಬಾಕಿಯಿವೆ. ಅದಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂ ಮೇಲಿನ ನಿಷೇಧವನ್ನು ತೆರವುಗೊಳಿಸುವಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಯಶಸ್ವಿಯಾಗಿದೆ. ಇದರೊಂದಿಗೆ ಆರ್​ಸಿಬಿ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿರುವುದು ಕೂಡ ಖಚಿತವಾಗಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನೂ ತಿಂಗಳುಗಳು ಮಾತ್ರ ಬಾಕಿಯಿವೆ. ಅದಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂ ಮೇಲಿನ ನಿಷೇಧವನ್ನು ತೆರವುಗೊಳಿಸುವಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಯಶಸ್ವಿಯಾಗಿದೆ. ಇದರೊಂದಿಗೆ ಆರ್​ಸಿಬಿ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿರುವುದು ಕೂಡ ಖಚಿತವಾಗಿದೆ.

2 / 6
ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯವಾಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೀಗಾಗಿ ಶೀಘ್ರದಲ್ಲೇ ಬೆಂಗಳೂರು ಮೈದಾನದಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್ ಮರಳಲಿದೆ. ಅಲ್ಲದೆ ಮಾರ್ಚ್​​ನಿಂದ ಶುರುವಾಗಲಿರುವ ಐಪಿಎಲ್​ ಪಂದ್ಯಗಳು ಕೂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯವಾಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೀಗಾಗಿ ಶೀಘ್ರದಲ್ಲೇ ಬೆಂಗಳೂರು ಮೈದಾನದಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್ ಮರಳಲಿದೆ. ಅಲ್ಲದೆ ಮಾರ್ಚ್​​ನಿಂದ ಶುರುವಾಗಲಿರುವ ಐಪಿಎಲ್​ ಪಂದ್ಯಗಳು ಕೂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

3 / 6
ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಸಾವನ್ನಪ್ಪಿದ್ದರು. ಅಲ್ಲದೆ ಹಲವಾರು ಮಂದಿ ಗಾಯಗೊಂಡಿದ್ದರು. ಈ ಅಹಿತಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ, ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.

ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಸಾವನ್ನಪ್ಪಿದ್ದರು. ಅಲ್ಲದೆ ಹಲವಾರು ಮಂದಿ ಗಾಯಗೊಂಡಿದ್ದರು. ಈ ಅಹಿತಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ, ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.

4 / 6
ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಲೋಪದೋಷಗಳು ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಈ ದುರಂತದ ಬಳಿಕ ಬಿಸಿಸಿಐ ಬೆಂಗಳೂರಿನಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿರಲಿಲ್ಲ. ಅಲ್ಲದೆ ಜಾನ್ ಮೈಕಲ್ ಡಿ ಕುನ್ಹಾ ನೇತೃತ್ವದ ಆಯೋಗವು ಚಿನ್ನಸ್ವಾಮಿ ಸ್ಟೇಡಿಯಂ ಪಂದ್ಯಗಳ ಆಯೋಜನೆಗೆ ಕೆಲ ಸಲಹೆಗಳನ್ನು ಶಿಫಾರಸ್ಸು ಮಾಡಿದ್ದರು.

ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಲೋಪದೋಷಗಳು ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಈ ದುರಂತದ ಬಳಿಕ ಬಿಸಿಸಿಐ ಬೆಂಗಳೂರಿನಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿರಲಿಲ್ಲ. ಅಲ್ಲದೆ ಜಾನ್ ಮೈಕಲ್ ಡಿ ಕುನ್ಹಾ ನೇತೃತ್ವದ ಆಯೋಗವು ಚಿನ್ನಸ್ವಾಮಿ ಸ್ಟೇಡಿಯಂ ಪಂದ್ಯಗಳ ಆಯೋಜನೆಗೆ ಕೆಲ ಸಲಹೆಗಳನ್ನು ಶಿಫಾರಸ್ಸು ಮಾಡಿದ್ದರು.

5 / 6
ಇದೀಗ ಕೆಎಸ್​ಸಿಎಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಟೀಮ್ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ನೇತೃತ್ವದ ಸಮಿತಿಯು, ಸರ್ಕಾರ ಸೂಚಿಸಿದ ಸಲಹೆಗಳನ್ನು ಪಾಲಿಸಲು ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದಿಂದಲೂ ಚಿನ್ನಸ್ವಾಮಿ ಸ್ಟೇಡಿಯಂಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಇದೀಗ ಕೆಎಸ್​ಸಿಎಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಟೀಮ್ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ನೇತೃತ್ವದ ಸಮಿತಿಯು, ಸರ್ಕಾರ ಸೂಚಿಸಿದ ಸಲಹೆಗಳನ್ನು ಪಾಲಿಸಲು ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದಿಂದಲೂ ಚಿನ್ನಸ್ವಾಮಿ ಸ್ಟೇಡಿಯಂಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

6 / 6
ಅದರಂತೆ ಶೀಘ್ರದಲ್ಲೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್ ಮರಳಲಿದೆ. ಅದರಲ್ಲೂ ಮುಂಬರುವ ವಿಜಯ ಹಝಾರೆ ಟೂರ್ನಿಯ ಕೆಲ ಪಂದ್ಯಗಳನ್ನು ಆಯೋಜಿಸಲು ಕೆಎಸ್​ಸಿಎ ಉತ್ಸುಕವಾಗಿದೆ. ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂಗೆ ಕ್ರಿಕೆಟ್ ಮರಳಿ ತರಲು ಸಿದ್ಧತೆಗಳನ್ನು ಶುರು ಮಾಡಿದ್ದಾರೆ. ಇದರೊಂದಿಗೆ ಮುಂಬರುವ ಐಪಿಎಲ್ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದು ಸಹ ಖಚಿತವಾಗಿದೆ.

ಅದರಂತೆ ಶೀಘ್ರದಲ್ಲೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್ ಮರಳಲಿದೆ. ಅದರಲ್ಲೂ ಮುಂಬರುವ ವಿಜಯ ಹಝಾರೆ ಟೂರ್ನಿಯ ಕೆಲ ಪಂದ್ಯಗಳನ್ನು ಆಯೋಜಿಸಲು ಕೆಎಸ್​ಸಿಎ ಉತ್ಸುಕವಾಗಿದೆ. ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂಗೆ ಕ್ರಿಕೆಟ್ ಮರಳಿ ತರಲು ಸಿದ್ಧತೆಗಳನ್ನು ಶುರು ಮಾಡಿದ್ದಾರೆ. ಇದರೊಂದಿಗೆ ಮುಂಬರುವ ಐಪಿಎಲ್ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದು ಸಹ ಖಚಿತವಾಗಿದೆ.

Published On - 10:08 am, Sun, 14 December 25