AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB: ಪವರ್‌ಪ್ಲೇನಲ್ಲಿ ರನ್ ಬಂದರೂ ಪ್ರಮುಖ 5 ವಿಕೆಟ್ ಕಳೆದುಕೊಂಡ ಆರ್​​ಸಿಬಿ

IPL 2026: ಐಪಿಎಲ್ 2026 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪವರ್‌ಪ್ಲೇನಲ್ಲಿ ಆರಂಭಿಕ ಆಘಾತ ಎದುರಿಸಿತು. ಗುವಾಹಟಿಯ ಬರ್ಸಪರದಲ್ಲಿ ನಡೆದ ಮಳೆಪೀಡಿತ ಪಂದ್ಯದಲ್ಲಿ ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು 61 ರನ್ ಗಳಿಸಿತು. ಅರ್ಚರ್ ಮತ್ತು ಬಿಷ್ಣೋಯ್ ಬೌಲಿಂಗ್ ದಾಳಿಗೆ ಆರ್​ಸಿಬಿ ಬ್ಯಾಟ್ಸ್‌ಮನ್‌ಗಳು ಪರದಾಡಿದರು, ಇದು ತಂಡದ ಸ್ಕೋರ್‌ಗೆ ಹಿನ್ನಡೆ ನೀಡಿತು.

ಪೃಥ್ವಿಶಂಕರ
|

Updated on: Apr 10, 2026 | 9:27 PM

Share
2026 ರ ಐಪಿಎಲ್‌ನಲ್ಲಿ ತವರಿನಿಂದ ಹೊರಕ್ಕೆ ಮೊದಲ ಪಂದ್ಯವನ್ನಾಡಿದ ಆರ್​​ಸಿಬಿ, ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಿತ್ತು. ಮಳೆ ಪೀಡಿತ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪವರ್‌ಪ್ಲೇನಲ್ಲಿ ಅಂದರೆ ಮೊದಲ 6 ಓವರ್​ಗಳಲ್ಲಿ 60 ರನ್ ಕಲೆಹಾಕಿತ್ತಾದರೂ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತು.

2026 ರ ಐಪಿಎಲ್‌ನಲ್ಲಿ ತವರಿನಿಂದ ಹೊರಕ್ಕೆ ಮೊದಲ ಪಂದ್ಯವನ್ನಾಡಿದ ಆರ್​​ಸಿಬಿ, ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಿತ್ತು. ಮಳೆ ಪೀಡಿತ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪವರ್‌ಪ್ಲೇನಲ್ಲಿ ಅಂದರೆ ಮೊದಲ 6 ಓವರ್​ಗಳಲ್ಲಿ 60 ರನ್ ಕಲೆಹಾಕಿತ್ತಾದರೂ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತು.

1 / 5
ಎಂದಿನಂತೆ ಆರ್​ಸಿಬಿ ಪರ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದರು. ಇತ್ತ ರಾಜಸ್ಥಾನ್ ಪರ ಬೌಲಿಂಗ್ ಆರಂಭಿಸಿದ ಚೋಫ್ರಾ ಆರ್ಚರ್ ಮೊದಲ ಎಸೆತದಲ್ಲೇ ಫಿಲ್ ಸಾಲ್ಟ್ ಅವರ ವಿಕೆಟ್ ಪಡೆದರು. ಆರ್ಚರ್ ಎಸೆದ ಬೌನ್ಸರ್​ಗೆ ಸಾಲ್ಟ್ ಬಳಿ ಉತ್ತರವಿರಲಿಲ್ಲ. ಹೀಗಾಗಿ ಸಾಲ್ಟ್ ಕೀಪರ್ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು.

ಎಂದಿನಂತೆ ಆರ್​ಸಿಬಿ ಪರ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದರು. ಇತ್ತ ರಾಜಸ್ಥಾನ್ ಪರ ಬೌಲಿಂಗ್ ಆರಂಭಿಸಿದ ಚೋಫ್ರಾ ಆರ್ಚರ್ ಮೊದಲ ಎಸೆತದಲ್ಲೇ ಫಿಲ್ ಸಾಲ್ಟ್ ಅವರ ವಿಕೆಟ್ ಪಡೆದರು. ಆರ್ಚರ್ ಎಸೆದ ಬೌನ್ಸರ್​ಗೆ ಸಾಲ್ಟ್ ಬಳಿ ಉತ್ತರವಿರಲಿಲ್ಲ. ಹೀಗಾಗಿ ಸಾಲ್ಟ್ ಕೀಪರ್ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು.

2 / 5
ಸಾಲ್ಟ್ ವಿಕೆಟ್ ಬಳಿಕ ಬಂದ ದೇವದತ್ ಪಡಿಕ್ಕಲ್ ಎಂದಿನಂತೆ ಕೊಹ್ಲಿ ಜೊತೆಗೂಡಿ ಉತ್ತಮ ಜೊತೆಯಾಟ ಕಟ್ಟುತ್ತಿದ್ದರು. ಹೀಗಾಗಿ ಮೊದಲ ಓವರ್​ನಲ್ಲಿ ವಿಕೆಟ್ ಬಿದ್ದರೂ ಈ ಜೋಡಿ 2 ಓವರ್​ಗಳ ಅಂತ್ಯಕ್ಕೆ 32 ರನ್ ಕಲೆಹಾಕಿತ್ತು. ಆರ್ಚರ್ ಎಸೆದ 3ನೇ ಓವರ್​ನಲ್ಲೂ 13 ರನ್ ಬಂದಿತ್ತಾದರೂ, ಕೊನೆಯ ಎಸೆತದಲ್ಲಿ ಪಡಿಕ್ಕಲ್ ವಿಕೆಟ್ ಉರುಳಿತು.

ಸಾಲ್ಟ್ ವಿಕೆಟ್ ಬಳಿಕ ಬಂದ ದೇವದತ್ ಪಡಿಕ್ಕಲ್ ಎಂದಿನಂತೆ ಕೊಹ್ಲಿ ಜೊತೆಗೂಡಿ ಉತ್ತಮ ಜೊತೆಯಾಟ ಕಟ್ಟುತ್ತಿದ್ದರು. ಹೀಗಾಗಿ ಮೊದಲ ಓವರ್​ನಲ್ಲಿ ವಿಕೆಟ್ ಬಿದ್ದರೂ ಈ ಜೋಡಿ 2 ಓವರ್​ಗಳ ಅಂತ್ಯಕ್ಕೆ 32 ರನ್ ಕಲೆಹಾಕಿತ್ತು. ಆರ್ಚರ್ ಎಸೆದ 3ನೇ ಓವರ್​ನಲ್ಲೂ 13 ರನ್ ಬಂದಿತ್ತಾದರೂ, ಕೊನೆಯ ಎಸೆತದಲ್ಲಿ ಪಡಿಕ್ಕಲ್ ವಿಕೆಟ್ ಉರುಳಿತು.

3 / 5
ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ಪಡಿಕ್ಕಲ್ ಈ ಪಂದ್ಯದಲ್ಲಿ 14 ರನ್ ಬಾರಿಸಿ ಔಟಾದರು. ಆರಂಭಿಕ ಎರಡು ವಿಕೆಟ್ ಪತನದ ಬಳಿಕ ಕೊಹ್ಲಿ ಮೇಲೆ ಹೆಚ್ಚಿನ ಜವಾಬ್ದಾರಿ ಬಿದ್ದಿತ್ತು. ಅದರಂತೆ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 32 ರನ್ ಕಲೆಹಾಕಿದರು. ಆದರೆ ಬಿಷ್ಣೋಯಿ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆದರು.

ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ಪಡಿಕ್ಕಲ್ ಈ ಪಂದ್ಯದಲ್ಲಿ 14 ರನ್ ಬಾರಿಸಿ ಔಟಾದರು. ಆರಂಭಿಕ ಎರಡು ವಿಕೆಟ್ ಪತನದ ಬಳಿಕ ಕೊಹ್ಲಿ ಮೇಲೆ ಹೆಚ್ಚಿನ ಜವಾಬ್ದಾರಿ ಬಿದ್ದಿತ್ತು. ಅದರಂತೆ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 32 ರನ್ ಕಲೆಹಾಕಿದರು. ಆದರೆ ಬಿಷ್ಣೋಯಿ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆದರು.

4 / 5
ಹೀಗಾಗಿ ಆರ್​ಸಿಬಿ ಪವರ್ ಪ್ಲೇ ಅಂತ್ಯಕ್ಕೆ 61 ರನ್ ಕಲೆಹಾಕಿತ್ತಾದರೂ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ಕೊಹ್ಲಿ ವಿಕೆಟ್ ಬಿದ್ದ ಬಳಿಕ ಬ್ಯಾಟಿಂಗ್​ನಲ್ಲಿ ಬಡ್ತಿ ಪಡೆದು ಬಂದಿದ್ದ ಕೃನಾಲ್ ಪಾಂಡ್ಯ ಹೆಚ್ಚು ಪರಿಣಾಮಕಾರಿಯಾಗದೆ ಕೇವಲ 1 ರನ್​ಗೆ ಪೆವಿಲಿಯನ್ ಸೇರಿಕೊಂಡರು. ಜಿತೇಶ್ ಶರ್ಮಾ ಕೂಡ ಹೆಚ್ಚು ಹೊತ್ತು ನಿಲ್ಲದೆ ಕೇವಲ 5 ರನ್​ಗಳಿಗೆ ವಿಕೆಟ್ ಒಪ್ಪಿಸಿದರು.

ಹೀಗಾಗಿ ಆರ್​ಸಿಬಿ ಪವರ್ ಪ್ಲೇ ಅಂತ್ಯಕ್ಕೆ 61 ರನ್ ಕಲೆಹಾಕಿತ್ತಾದರೂ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ಕೊಹ್ಲಿ ವಿಕೆಟ್ ಬಿದ್ದ ಬಳಿಕ ಬ್ಯಾಟಿಂಗ್​ನಲ್ಲಿ ಬಡ್ತಿ ಪಡೆದು ಬಂದಿದ್ದ ಕೃನಾಲ್ ಪಾಂಡ್ಯ ಹೆಚ್ಚು ಪರಿಣಾಮಕಾರಿಯಾಗದೆ ಕೇವಲ 1 ರನ್​ಗೆ ಪೆವಿಲಿಯನ್ ಸೇರಿಕೊಂಡರು. ಜಿತೇಶ್ ಶರ್ಮಾ ಕೂಡ ಹೆಚ್ಚು ಹೊತ್ತು ನಿಲ್ಲದೆ ಕೇವಲ 5 ರನ್​ಗಳಿಗೆ ವಿಕೆಟ್ ಒಪ್ಪಿಸಿದರು.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ