AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ತಂಡದಿಂದ 6 ಆಟಗಾರರಿಗೆ ಗೇಟ್ ಪಾಸ್ ಖಚಿತ

IPL 2026: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ 22 ಆಟಗಾರರು ಕಾಣಿಸಿಕೊಂಡಿದ್ದರು. ಈ 22 ಆಟಗಾರರಲ್ಲಿ 16 ಪ್ಲೇಯರ್ಸ್ ಮುಂದಿನ ಸೀಸನ್​ನಲ್ಲೂ ಮುಂದುವರೆಯುವ ಸಾಧ್ಯತೆಯಿದೆ. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಕಣಕ್ಕಿಳಿದ ಬಹುತೇಕ ಆಟಗಾರರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಐಪಿಎಲ್ 2026 ರ ಮಿನಿ ಹರಾಜಿಗೂ ಮುನ್ನ ಆರ್​ಸಿಬಿ ಕೆಲವೇ ಕೆಲವು ಆಟಗಾರರನ್ನು ಮಾತ್ರ ರಿಲೀಸ್ ಮಾಡಲಿದೆ.

ಝಾಹಿರ್ ಯೂಸುಫ್
|

Updated on: Jun 10, 2025 | 8:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ (IPL 2025) ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂದಿನ ಸೀಸನ್​ಗೂ ಮುನ್ನ ಕೆಲ ಆಟಗಾರರನ್ನು ಕೈ ಬಿಡುವುದು ಖಚಿತ. ಅದರಂತೆ ಆರ್​ಸಿಬಿ ಫ್ರಾಂಚೈಸಿ ಮಿನಿ ಹರಾಜಿಗೂ ಮುನ್ನ ರಿಲೀಸ್ ಮಾಡುವ ಆಟಗಾರರು ಯಾರೆಂದು ನೋಡುವುದಾದರೆ...

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ (IPL 2025) ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂದಿನ ಸೀಸನ್​ಗೂ ಮುನ್ನ ಕೆಲ ಆಟಗಾರರನ್ನು ಕೈ ಬಿಡುವುದು ಖಚಿತ. ಅದರಂತೆ ಆರ್​ಸಿಬಿ ಫ್ರಾಂಚೈಸಿ ಮಿನಿ ಹರಾಜಿಗೂ ಮುನ್ನ ರಿಲೀಸ್ ಮಾಡುವ ಆಟಗಾರರು ಯಾರೆಂದು ನೋಡುವುದಾದರೆ...

1 / 8
ಲಿಯಾಮ್ ಲಿವಿಂಗ್​ಸ್ಟೋನ್: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಲ್​ರೌಂಡರ್ ಆಗಿ ಕಾಣಿಸಿಕೊಂಡ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಮುಂದಿನ ಸೀಸನ್​ಗೆ ತಂಡದಲ್ಲಿ ಉಳಿಸಿಕೊಳ್ಳುವುದು ಡೌಟ್. ಏಕೆಂಧರೆ 10 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಲಿವಿಂಗ್​ಸ್ಟೋನ್ ಈ ಬಾರಿ ಕಲೆಹಾಕಿರುವುದು ಕೇವಲ 54 ರನ್​ಗಳು ಮಾತ್ರ. ಹಾಗೆಯೇ 5 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಕಬಳಿಸಿದ್ದು 2 ವಿಕೆಟ್ ಮಾತ್ರ. ಹೀಗಾಗಿ ಲಿವಿಂಗ್​ಸ್ಟೋನ್​ಗೆ ತಂಡದಿಂದ ಗೇಟ್ ಪಾಸ್ ಸಿಗೋದು ಖಚಿತ ಎನ್ನಬಹುದು.

ಲಿಯಾಮ್ ಲಿವಿಂಗ್​ಸ್ಟೋನ್: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಲ್​ರೌಂಡರ್ ಆಗಿ ಕಾಣಿಸಿಕೊಂಡ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಮುಂದಿನ ಸೀಸನ್​ಗೆ ತಂಡದಲ್ಲಿ ಉಳಿಸಿಕೊಳ್ಳುವುದು ಡೌಟ್. ಏಕೆಂಧರೆ 10 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಲಿವಿಂಗ್​ಸ್ಟೋನ್ ಈ ಬಾರಿ ಕಲೆಹಾಕಿರುವುದು ಕೇವಲ 54 ರನ್​ಗಳು ಮಾತ್ರ. ಹಾಗೆಯೇ 5 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಕಬಳಿಸಿದ್ದು 2 ವಿಕೆಟ್ ಮಾತ್ರ. ಹೀಗಾಗಿ ಲಿವಿಂಗ್​ಸ್ಟೋನ್​ಗೆ ತಂಡದಿಂದ ಗೇಟ್ ಪಾಸ್ ಸಿಗೋದು ಖಚಿತ ಎನ್ನಬಹುದು.

2 / 8
ರಾಸಿಖ್ ಸಲಾಂ ದಾರ್: ಜಮ್ಮು ಕಾಶ್ಮೀರ ಯುವ ವೇಗಿ ರಾಸಿಖ್ ಸಲಾಂ ದಾರ್ ಅವರನ್ನು ಆರ್​ಸಿಬಿ ಫ್ರಾಂಚೈಸಿ 6 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಈ ಬಾರಿ ಕಣಕ್ಕಿಳಿದ 2 ಪಂದ್ಯಗಳಲ್ಲಿ ರಾಸಿಖ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅಲ್ಲದೆ ಕೇವಲ 1 ವಿಕೆಟ್ ಮಾತ್ರ ಕಬಳಿಸಿದ್ದಾರೆ. ಅತ್ತ ಮಿನಿ ಹರಾಜಿಗೆ ಪರ್ಸ್ ಮೊತ್ತ ಹೆಚ್ಚಿಸಲು ರಾಸಿಖ್ ಅವರನ್ನು ಸಹ ಆರ್​ಸಿಬಿ ಕೈ ಬಿಡಲಿದೆ ಎನ್ನಬಹುದು.

ರಾಸಿಖ್ ಸಲಾಂ ದಾರ್: ಜಮ್ಮು ಕಾಶ್ಮೀರ ಯುವ ವೇಗಿ ರಾಸಿಖ್ ಸಲಾಂ ದಾರ್ ಅವರನ್ನು ಆರ್​ಸಿಬಿ ಫ್ರಾಂಚೈಸಿ 6 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಈ ಬಾರಿ ಕಣಕ್ಕಿಳಿದ 2 ಪಂದ್ಯಗಳಲ್ಲಿ ರಾಸಿಖ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅಲ್ಲದೆ ಕೇವಲ 1 ವಿಕೆಟ್ ಮಾತ್ರ ಕಬಳಿಸಿದ್ದಾರೆ. ಅತ್ತ ಮಿನಿ ಹರಾಜಿಗೆ ಪರ್ಸ್ ಮೊತ್ತ ಹೆಚ್ಚಿಸಲು ರಾಸಿಖ್ ಅವರನ್ನು ಸಹ ಆರ್​ಸಿಬಿ ಕೈ ಬಿಡಲಿದೆ ಎನ್ನಬಹುದು.

3 / 8
ಅಭಿನಂದನ್ ಸಿಂಗ್: ಈ ಬಾರಿಯ ಐಪಿಎಲ್​ನಲ್ಲಿ ಅಭಿನಂದನ್ ಸಿಂಗ್ ಆರ್​ಸಿಬಿ ಪರ ಒಂದೇ ಒಂದು ಪಂದ್ಯವಾಡಿಲ್ಲ. ಅದರಲ್ಲೂ ಇಂಪ್ಯಾಕ್ಟ್ ಸಬ್ ಪಟ್ಟಿಯಲ್ಲೂ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಮುಂಬರುವ ಸೀಸನ್​ಗಾಗಿ ಅಭಿನಂದನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ.

ಅಭಿನಂದನ್ ಸಿಂಗ್: ಈ ಬಾರಿಯ ಐಪಿಎಲ್​ನಲ್ಲಿ ಅಭಿನಂದನ್ ಸಿಂಗ್ ಆರ್​ಸಿಬಿ ಪರ ಒಂದೇ ಒಂದು ಪಂದ್ಯವಾಡಿಲ್ಲ. ಅದರಲ್ಲೂ ಇಂಪ್ಯಾಕ್ಟ್ ಸಬ್ ಪಟ್ಟಿಯಲ್ಲೂ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಮುಂಬರುವ ಸೀಸನ್​ಗಾಗಿ ಅಭಿನಂದನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ.

4 / 8
ಮೋಹಿತ್ ರಾಥಿ: ಆರ್​ಸಿಬಿ ತಂಡದಲ್ಲಿರುವ ಯುವ ಆಲ್​ರೌಂಡರ್ ಮೋಹಿತ್ ರಾಥಿ ಕೂಡ ಈ ಬಾರಿ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅತ್ತ ಇಂಪ್ಯಾಕ್ಟ್ ಸಬ್ ಪಟ್ಟಿಯಲ್ಲೂ ಮೋಹಿತ್​ಗೆ ಸ್ಥಾನ ಲಭಿಸಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಅವರನ್ನು ಸಹ ತಂಡದಿಂದ ಕೈ ಬಿಡಲಿದ್ದಾರೆ.

ಮೋಹಿತ್ ರಾಥಿ: ಆರ್​ಸಿಬಿ ತಂಡದಲ್ಲಿರುವ ಯುವ ಆಲ್​ರೌಂಡರ್ ಮೋಹಿತ್ ರಾಥಿ ಕೂಡ ಈ ಬಾರಿ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅತ್ತ ಇಂಪ್ಯಾಕ್ಟ್ ಸಬ್ ಪಟ್ಟಿಯಲ್ಲೂ ಮೋಹಿತ್​ಗೆ ಸ್ಥಾನ ಲಭಿಸಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಅವರನ್ನು ಸಹ ತಂಡದಿಂದ ಕೈ ಬಿಡಲಿದ್ದಾರೆ.

5 / 8
ಬ್ಲೆಸಿಂಗ್ ಮುಝರಬಾನಿ: ಐಪಿಎಲ್​ನ ಕೊನೆಯ ಎರಡು ಪಂದ್ಯಗಳ ವೇಳೆ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿಯನ್ನು ಸಹ ಕೈ ಬಿಡಲಿದ್ದಾರೆ. ಏಕೆಂದರೆ ಮುಝರಬಾನಿ ಅವರನ್ನು ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆಯಾದ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳುವಂತಿಲ್ಲ.

ಬ್ಲೆಸಿಂಗ್ ಮುಝರಬಾನಿ: ಐಪಿಎಲ್​ನ ಕೊನೆಯ ಎರಡು ಪಂದ್ಯಗಳ ವೇಳೆ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿಯನ್ನು ಸಹ ಕೈ ಬಿಡಲಿದ್ದಾರೆ. ಏಕೆಂದರೆ ಮುಝರಬಾನಿ ಅವರನ್ನು ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆಯಾದ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳುವಂತಿಲ್ಲ.

6 / 8
ಟಿಮ್ ಸೈಫರ್ಟ್​: ಜೇಕಬ್ ಬೆಥೆಲ್ ತವರಿಗೆ ಹಿಂತಿರುಗಿದ ಕಾರಣ ಆರ್​ಸಿಬಿ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಟಿಮ್ ಸೈಫರ್ಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿತ್ತು. ಆದರೆ ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆಯಾಗಿರುವ ಸೈಫರ್ಟ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವಂತಿಲ್ಲ.

ಟಿಮ್ ಸೈಫರ್ಟ್​: ಜೇಕಬ್ ಬೆಥೆಲ್ ತವರಿಗೆ ಹಿಂತಿರುಗಿದ ಕಾರಣ ಆರ್​ಸಿಬಿ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಟಿಮ್ ಸೈಫರ್ಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿತ್ತು. ಆದರೆ ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆಯಾಗಿರುವ ಸೈಫರ್ಟ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವಂತಿಲ್ಲ.

7 / 8
ಈ 6 ಆಟಗಾರರನ್ನು ಕೈ ಬಿಟ್ಟು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬಹುತೇಕ ಆಟಗಾರರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಉಳಿದೆಲ್ಲಾ ಆಟಗಾರರು ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು, ಹೀಗಾಗಿ ಚಾಂಪಿಯನ್ ಪಡೆಯನ್ನು ಮುಂದಿನ ಸೀಸನ್​ಗೂ ಮುಂದುವರೆಸುವ ಸಾಧ್ಯತೆಯಿದೆ.

ಈ 6 ಆಟಗಾರರನ್ನು ಕೈ ಬಿಟ್ಟು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬಹುತೇಕ ಆಟಗಾರರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಉಳಿದೆಲ್ಲಾ ಆಟಗಾರರು ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು, ಹೀಗಾಗಿ ಚಾಂಪಿಯನ್ ಪಡೆಯನ್ನು ಮುಂದಿನ ಸೀಸನ್​ಗೂ ಮುಂದುವರೆಸುವ ಸಾಧ್ಯತೆಯಿದೆ.

8 / 8
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!