AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಕಠಿಣ ನಿಯಮ ಜಾರಿಗೂ ಮುನ್ನ RCB ತಂಡ ಮಾರಾಟ?

Royal Challengers Bengaluru (RCB): ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ ಒಂದು ವಾರದಿಂದ ಸದಾ ಸುದ್ದಿಯಲ್ಲಿದೆ. ಇದಕ್ಕೆ ಒಂದು ಕಾರಣ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದ ಪ್ರಕರಣ. ಇದರ ನಡುವೆ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿರುವ ವಿಚಾರವೊಂದು ಬಹಿರಂಗವಾಗಿದೆ.

ಝಾಹಿರ್ ಯೂಸುಫ್
|

Updated on:Jun 10, 2025 | 2:16 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL) ಕಠಿಣ ನಿಯಮವೊಂದು ಜಾರಿಯಾಗುವ ಸಾಧ್ಯತೆಯಿದೆ. ಈ ನಿಯಮ ಜಾರಿಯಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಅದಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಸಮಾಲೋಚಿಸಿದೆ ಎಂದು ವರದಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL) ಕಠಿಣ ನಿಯಮವೊಂದು ಜಾರಿಯಾಗುವ ಸಾಧ್ಯತೆಯಿದೆ. ಈ ನಿಯಮ ಜಾರಿಯಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಅದಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಸಮಾಲೋಚಿಸಿದೆ ಎಂದು ವರದಿಯಾಗಿದೆ.

1 / 5
ಅಷ್ಟಕ್ಕೂ ಐಪಿಎಲ್​ನಲ್ಲಿ ಜಾರಿಯಾಗಲಿರುವ ಹೊಸ ನಿಯಮವೆಂದರೆ... ತಂಬಾಕು ಮತ್ತು ಆಲ್ಕೋಹಾಲ್ ಬ್ರ್ಯಾಂಡ್​​ಗಳ ಜಾಹೀರಾತು ನಿಷೇಧ. ಅಂದರೆ ಟೂರ್ನಿಯಲ್ಲಿ ತಂಬಾಕು ಮತ್ತು ಮದ್ಯ ಜಾಹೀರಾತಿನ ಪ್ರಚಾರ ನಿಷೇಧಿಸಲು ಆರೋಗ್ಯ ಸಚಿವಾಲಯ ಚಿಂತಿಸುತ್ತಿದೆ. ಈ ನಿಯಮ ಜಾರಿಯಾದರೆ ಆರ್​ಸಿಬಿ ತಂಡಕ್ಕೆ ಸಮಸ್ಯೆ ಎದುರಾಗಲಿದೆ.

ಅಷ್ಟಕ್ಕೂ ಐಪಿಎಲ್​ನಲ್ಲಿ ಜಾರಿಯಾಗಲಿರುವ ಹೊಸ ನಿಯಮವೆಂದರೆ... ತಂಬಾಕು ಮತ್ತು ಆಲ್ಕೋಹಾಲ್ ಬ್ರ್ಯಾಂಡ್​​ಗಳ ಜಾಹೀರಾತು ನಿಷೇಧ. ಅಂದರೆ ಟೂರ್ನಿಯಲ್ಲಿ ತಂಬಾಕು ಮತ್ತು ಮದ್ಯ ಜಾಹೀರಾತಿನ ಪ್ರಚಾರ ನಿಷೇಧಿಸಲು ಆರೋಗ್ಯ ಸಚಿವಾಲಯ ಚಿಂತಿಸುತ್ತಿದೆ. ಈ ನಿಯಮ ಜಾರಿಯಾದರೆ ಆರ್​ಸಿಬಿ ತಂಡಕ್ಕೆ ಸಮಸ್ಯೆ ಎದುರಾಗಲಿದೆ.

2 / 5
ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇತ್ತ ಐಪಿಎಲ್​ನಲ್ಲಿ ಅನಾರೋಗ್ಯಕರ ವಸ್ತುಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಪ್ರಚಾರ ಮಾಡದಂತಹ ನಿಯಮವನ್ನು ಜಾರಿಗೆ ತರುವ ಬಗ್ಗೆ ಚಿಂತಿಸಲಾಗಿದೆ.

ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇತ್ತ ಐಪಿಎಲ್​ನಲ್ಲಿ ಅನಾರೋಗ್ಯಕರ ವಸ್ತುಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಪ್ರಚಾರ ಮಾಡದಂತಹ ನಿಯಮವನ್ನು ಜಾರಿಗೆ ತರುವ ಬಗ್ಗೆ ಚಿಂತಿಸಲಾಗಿದೆ.

3 / 5
ಈ ನಿಯಮ ಜಾರಿಯಾದರೆ, ಆರ್​ಸಿಬಿ ಫ್ರಾಂಚೈಸಿಯು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಆರ್​ಸಿಬಿ ಫ್ರಾಂಚೈಸಿಯ ಮಾಲೀಕತ್ವ ಹೊಂದಿರುವುದು ಆಲ್ಕೋಹಾಲ್ ಕಂಪೆನಿಯ ಒಡೆತನದಲ್ಲಿ. ಇದೇ ಕಾರಣದಿಂದಾಗಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ತನ್ನ ಷೇರು ಮಾರಾಟ ಮಾಡಲು ಅಥವಾ ಸಂಪೂರ್ಣ ಫ್ರಾಂಚೈಸಿಯನ್ನು ಸೇಲ್ ಮಾಡಲು ಚರ್ಚಿಸಿದೆ ಎಂದು ವರದಿಯಾಗಿದೆ.

ಈ ನಿಯಮ ಜಾರಿಯಾದರೆ, ಆರ್​ಸಿಬಿ ಫ್ರಾಂಚೈಸಿಯು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಆರ್​ಸಿಬಿ ಫ್ರಾಂಚೈಸಿಯ ಮಾಲೀಕತ್ವ ಹೊಂದಿರುವುದು ಆಲ್ಕೋಹಾಲ್ ಕಂಪೆನಿಯ ಒಡೆತನದಲ್ಲಿ. ಇದೇ ಕಾರಣದಿಂದಾಗಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ತನ್ನ ಷೇರು ಮಾರಾಟ ಮಾಡಲು ಅಥವಾ ಸಂಪೂರ್ಣ ಫ್ರಾಂಚೈಸಿಯನ್ನು ಸೇಲ್ ಮಾಡಲು ಚರ್ಚಿಸಿದೆ ಎಂದು ವರದಿಯಾಗಿದೆ.

4 / 5
ಪ್ರಸ್ತುತ ವರದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್. ಅಂದರೆ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 17 ಸಾವಿರ ಕೋಟಿ ರೂ. ಈ ಮೊತ್ತಕ್ಕೆ ಆರ್​ಸಿಬಿ ತಂಡವನ್ನು ಖರೀದಿಸಲು ಯಾರಾದರೂ ಮುಂದಾದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ಮಾಲೀಕರ ಪಾಲಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಪ್ರಸ್ತುತ ವರದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್. ಅಂದರೆ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 17 ಸಾವಿರ ಕೋಟಿ ರೂ. ಈ ಮೊತ್ತಕ್ಕೆ ಆರ್​ಸಿಬಿ ತಂಡವನ್ನು ಖರೀದಿಸಲು ಯಾರಾದರೂ ಮುಂದಾದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ಮಾಲೀಕರ ಪಾಲಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

5 / 5

Published On - 1:54 pm, Tue, 10 June 25

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್