AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಕಠಿಣ ನಿಯಮ ಜಾರಿಗೂ ಮುನ್ನ RCB ತಂಡ ಮಾರಾಟ?

Royal Challengers Bengaluru (RCB): ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ ಒಂದು ವಾರದಿಂದ ಸದಾ ಸುದ್ದಿಯಲ್ಲಿದೆ. ಇದಕ್ಕೆ ಒಂದು ಕಾರಣ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದ ಪ್ರಕರಣ. ಇದರ ನಡುವೆ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿರುವ ವಿಚಾರವೊಂದು ಬಹಿರಂಗವಾಗಿದೆ.

ಝಾಹಿರ್ ಯೂಸುಫ್
|

Updated on:Jun 10, 2025 | 2:16 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL) ಕಠಿಣ ನಿಯಮವೊಂದು ಜಾರಿಯಾಗುವ ಸಾಧ್ಯತೆಯಿದೆ. ಈ ನಿಯಮ ಜಾರಿಯಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಅದಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಸಮಾಲೋಚಿಸಿದೆ ಎಂದು ವರದಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL) ಕಠಿಣ ನಿಯಮವೊಂದು ಜಾರಿಯಾಗುವ ಸಾಧ್ಯತೆಯಿದೆ. ಈ ನಿಯಮ ಜಾರಿಯಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಅದಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಸಮಾಲೋಚಿಸಿದೆ ಎಂದು ವರದಿಯಾಗಿದೆ.

1 / 5
ಅಷ್ಟಕ್ಕೂ ಐಪಿಎಲ್​ನಲ್ಲಿ ಜಾರಿಯಾಗಲಿರುವ ಹೊಸ ನಿಯಮವೆಂದರೆ... ತಂಬಾಕು ಮತ್ತು ಆಲ್ಕೋಹಾಲ್ ಬ್ರ್ಯಾಂಡ್​​ಗಳ ಜಾಹೀರಾತು ನಿಷೇಧ. ಅಂದರೆ ಟೂರ್ನಿಯಲ್ಲಿ ತಂಬಾಕು ಮತ್ತು ಮದ್ಯ ಜಾಹೀರಾತಿನ ಪ್ರಚಾರ ನಿಷೇಧಿಸಲು ಆರೋಗ್ಯ ಸಚಿವಾಲಯ ಚಿಂತಿಸುತ್ತಿದೆ. ಈ ನಿಯಮ ಜಾರಿಯಾದರೆ ಆರ್​ಸಿಬಿ ತಂಡಕ್ಕೆ ಸಮಸ್ಯೆ ಎದುರಾಗಲಿದೆ.

ಅಷ್ಟಕ್ಕೂ ಐಪಿಎಲ್​ನಲ್ಲಿ ಜಾರಿಯಾಗಲಿರುವ ಹೊಸ ನಿಯಮವೆಂದರೆ... ತಂಬಾಕು ಮತ್ತು ಆಲ್ಕೋಹಾಲ್ ಬ್ರ್ಯಾಂಡ್​​ಗಳ ಜಾಹೀರಾತು ನಿಷೇಧ. ಅಂದರೆ ಟೂರ್ನಿಯಲ್ಲಿ ತಂಬಾಕು ಮತ್ತು ಮದ್ಯ ಜಾಹೀರಾತಿನ ಪ್ರಚಾರ ನಿಷೇಧಿಸಲು ಆರೋಗ್ಯ ಸಚಿವಾಲಯ ಚಿಂತಿಸುತ್ತಿದೆ. ಈ ನಿಯಮ ಜಾರಿಯಾದರೆ ಆರ್​ಸಿಬಿ ತಂಡಕ್ಕೆ ಸಮಸ್ಯೆ ಎದುರಾಗಲಿದೆ.

2 / 5
ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇತ್ತ ಐಪಿಎಲ್​ನಲ್ಲಿ ಅನಾರೋಗ್ಯಕರ ವಸ್ತುಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಪ್ರಚಾರ ಮಾಡದಂತಹ ನಿಯಮವನ್ನು ಜಾರಿಗೆ ತರುವ ಬಗ್ಗೆ ಚಿಂತಿಸಲಾಗಿದೆ.

ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇತ್ತ ಐಪಿಎಲ್​ನಲ್ಲಿ ಅನಾರೋಗ್ಯಕರ ವಸ್ತುಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಪ್ರಚಾರ ಮಾಡದಂತಹ ನಿಯಮವನ್ನು ಜಾರಿಗೆ ತರುವ ಬಗ್ಗೆ ಚಿಂತಿಸಲಾಗಿದೆ.

3 / 5
ಈ ನಿಯಮ ಜಾರಿಯಾದರೆ, ಆರ್​ಸಿಬಿ ಫ್ರಾಂಚೈಸಿಯು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಆರ್​ಸಿಬಿ ಫ್ರಾಂಚೈಸಿಯ ಮಾಲೀಕತ್ವ ಹೊಂದಿರುವುದು ಆಲ್ಕೋಹಾಲ್ ಕಂಪೆನಿಯ ಒಡೆತನದಲ್ಲಿ. ಇದೇ ಕಾರಣದಿಂದಾಗಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ತನ್ನ ಷೇರು ಮಾರಾಟ ಮಾಡಲು ಅಥವಾ ಸಂಪೂರ್ಣ ಫ್ರಾಂಚೈಸಿಯನ್ನು ಸೇಲ್ ಮಾಡಲು ಚರ್ಚಿಸಿದೆ ಎಂದು ವರದಿಯಾಗಿದೆ.

ಈ ನಿಯಮ ಜಾರಿಯಾದರೆ, ಆರ್​ಸಿಬಿ ಫ್ರಾಂಚೈಸಿಯು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಆರ್​ಸಿಬಿ ಫ್ರಾಂಚೈಸಿಯ ಮಾಲೀಕತ್ವ ಹೊಂದಿರುವುದು ಆಲ್ಕೋಹಾಲ್ ಕಂಪೆನಿಯ ಒಡೆತನದಲ್ಲಿ. ಇದೇ ಕಾರಣದಿಂದಾಗಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ತನ್ನ ಷೇರು ಮಾರಾಟ ಮಾಡಲು ಅಥವಾ ಸಂಪೂರ್ಣ ಫ್ರಾಂಚೈಸಿಯನ್ನು ಸೇಲ್ ಮಾಡಲು ಚರ್ಚಿಸಿದೆ ಎಂದು ವರದಿಯಾಗಿದೆ.

4 / 5
ಪ್ರಸ್ತುತ ವರದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್. ಅಂದರೆ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 17 ಸಾವಿರ ಕೋಟಿ ರೂ. ಈ ಮೊತ್ತಕ್ಕೆ ಆರ್​ಸಿಬಿ ತಂಡವನ್ನು ಖರೀದಿಸಲು ಯಾರಾದರೂ ಮುಂದಾದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ಮಾಲೀಕರ ಪಾಲಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಪ್ರಸ್ತುತ ವರದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್. ಅಂದರೆ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 17 ಸಾವಿರ ಕೋಟಿ ರೂ. ಈ ಮೊತ್ತಕ್ಕೆ ಆರ್​ಸಿಬಿ ತಂಡವನ್ನು ಖರೀದಿಸಲು ಯಾರಾದರೂ ಮುಂದಾದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ಮಾಲೀಕರ ಪಾಲಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

5 / 5

Published On - 1:54 pm, Tue, 10 June 25

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ