AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಕಠಿಣ ನಿಯಮ ಜಾರಿಗೂ ಮುನ್ನ RCB ತಂಡ ಮಾರಾಟ?

Royal Challengers Bengaluru (RCB): ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ ಒಂದು ವಾರದಿಂದ ಸದಾ ಸುದ್ದಿಯಲ್ಲಿದೆ. ಇದಕ್ಕೆ ಒಂದು ಕಾರಣ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದ ಪ್ರಕರಣ. ಇದರ ನಡುವೆ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿರುವ ವಿಚಾರವೊಂದು ಬಹಿರಂಗವಾಗಿದೆ.

ಝಾಹಿರ್ ಯೂಸುಫ್
|

Updated on:Jun 10, 2025 | 2:16 PM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL) ಕಠಿಣ ನಿಯಮವೊಂದು ಜಾರಿಯಾಗುವ ಸಾಧ್ಯತೆಯಿದೆ. ಈ ನಿಯಮ ಜಾರಿಯಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಅದಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಸಮಾಲೋಚಿಸಿದೆ ಎಂದು ವರದಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL) ಕಠಿಣ ನಿಯಮವೊಂದು ಜಾರಿಯಾಗುವ ಸಾಧ್ಯತೆಯಿದೆ. ಈ ನಿಯಮ ಜಾರಿಯಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಅದಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಸಮಾಲೋಚಿಸಿದೆ ಎಂದು ವರದಿಯಾಗಿದೆ.

1 / 5
ಅಷ್ಟಕ್ಕೂ ಐಪಿಎಲ್​ನಲ್ಲಿ ಜಾರಿಯಾಗಲಿರುವ ಹೊಸ ನಿಯಮವೆಂದರೆ... ತಂಬಾಕು ಮತ್ತು ಆಲ್ಕೋಹಾಲ್ ಬ್ರ್ಯಾಂಡ್​​ಗಳ ಜಾಹೀರಾತು ನಿಷೇಧ. ಅಂದರೆ ಟೂರ್ನಿಯಲ್ಲಿ ತಂಬಾಕು ಮತ್ತು ಮದ್ಯ ಜಾಹೀರಾತಿನ ಪ್ರಚಾರ ನಿಷೇಧಿಸಲು ಆರೋಗ್ಯ ಸಚಿವಾಲಯ ಚಿಂತಿಸುತ್ತಿದೆ. ಈ ನಿಯಮ ಜಾರಿಯಾದರೆ ಆರ್​ಸಿಬಿ ತಂಡಕ್ಕೆ ಸಮಸ್ಯೆ ಎದುರಾಗಲಿದೆ.

ಅಷ್ಟಕ್ಕೂ ಐಪಿಎಲ್​ನಲ್ಲಿ ಜಾರಿಯಾಗಲಿರುವ ಹೊಸ ನಿಯಮವೆಂದರೆ... ತಂಬಾಕು ಮತ್ತು ಆಲ್ಕೋಹಾಲ್ ಬ್ರ್ಯಾಂಡ್​​ಗಳ ಜಾಹೀರಾತು ನಿಷೇಧ. ಅಂದರೆ ಟೂರ್ನಿಯಲ್ಲಿ ತಂಬಾಕು ಮತ್ತು ಮದ್ಯ ಜಾಹೀರಾತಿನ ಪ್ರಚಾರ ನಿಷೇಧಿಸಲು ಆರೋಗ್ಯ ಸಚಿವಾಲಯ ಚಿಂತಿಸುತ್ತಿದೆ. ಈ ನಿಯಮ ಜಾರಿಯಾದರೆ ಆರ್​ಸಿಬಿ ತಂಡಕ್ಕೆ ಸಮಸ್ಯೆ ಎದುರಾಗಲಿದೆ.

2 / 5
ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇತ್ತ ಐಪಿಎಲ್​ನಲ್ಲಿ ಅನಾರೋಗ್ಯಕರ ವಸ್ತುಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಪ್ರಚಾರ ಮಾಡದಂತಹ ನಿಯಮವನ್ನು ಜಾರಿಗೆ ತರುವ ಬಗ್ಗೆ ಚಿಂತಿಸಲಾಗಿದೆ.

ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇತ್ತ ಐಪಿಎಲ್​ನಲ್ಲಿ ಅನಾರೋಗ್ಯಕರ ವಸ್ತುಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಪ್ರಚಾರ ಮಾಡದಂತಹ ನಿಯಮವನ್ನು ಜಾರಿಗೆ ತರುವ ಬಗ್ಗೆ ಚಿಂತಿಸಲಾಗಿದೆ.

3 / 5
ಈ ನಿಯಮ ಜಾರಿಯಾದರೆ, ಆರ್​ಸಿಬಿ ಫ್ರಾಂಚೈಸಿಯು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಆರ್​ಸಿಬಿ ಫ್ರಾಂಚೈಸಿಯ ಮಾಲೀಕತ್ವ ಹೊಂದಿರುವುದು ಆಲ್ಕೋಹಾಲ್ ಕಂಪೆನಿಯ ಒಡೆತನದಲ್ಲಿ. ಇದೇ ಕಾರಣದಿಂದಾಗಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ತನ್ನ ಷೇರು ಮಾರಾಟ ಮಾಡಲು ಅಥವಾ ಸಂಪೂರ್ಣ ಫ್ರಾಂಚೈಸಿಯನ್ನು ಸೇಲ್ ಮಾಡಲು ಚರ್ಚಿಸಿದೆ ಎಂದು ವರದಿಯಾಗಿದೆ.

ಈ ನಿಯಮ ಜಾರಿಯಾದರೆ, ಆರ್​ಸಿಬಿ ಫ್ರಾಂಚೈಸಿಯು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಆರ್​ಸಿಬಿ ಫ್ರಾಂಚೈಸಿಯ ಮಾಲೀಕತ್ವ ಹೊಂದಿರುವುದು ಆಲ್ಕೋಹಾಲ್ ಕಂಪೆನಿಯ ಒಡೆತನದಲ್ಲಿ. ಇದೇ ಕಾರಣದಿಂದಾಗಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ತನ್ನ ಷೇರು ಮಾರಾಟ ಮಾಡಲು ಅಥವಾ ಸಂಪೂರ್ಣ ಫ್ರಾಂಚೈಸಿಯನ್ನು ಸೇಲ್ ಮಾಡಲು ಚರ್ಚಿಸಿದೆ ಎಂದು ವರದಿಯಾಗಿದೆ.

4 / 5
ಪ್ರಸ್ತುತ ವರದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್. ಅಂದರೆ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 17 ಸಾವಿರ ಕೋಟಿ ರೂ. ಈ ಮೊತ್ತಕ್ಕೆ ಆರ್​ಸಿಬಿ ತಂಡವನ್ನು ಖರೀದಿಸಲು ಯಾರಾದರೂ ಮುಂದಾದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ಮಾಲೀಕರ ಪಾಲಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಪ್ರಸ್ತುತ ವರದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್. ಅಂದರೆ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 17 ಸಾವಿರ ಕೋಟಿ ರೂ. ಈ ಮೊತ್ತಕ್ಕೆ ಆರ್​ಸಿಬಿ ತಂಡವನ್ನು ಖರೀದಿಸಲು ಯಾರಾದರೂ ಮುಂದಾದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ಮಾಲೀಕರ ಪಾಲಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

5 / 5

Published On - 1:54 pm, Tue, 10 June 25

Follow us
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ