AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಆಟಗಾರ ಗಾಯಾಳು…  ಪ್ಲೇಆಫ್​ ಪಂದ್ಯಕ್ಕೆ ಅಲಭ್ಯ!

IPL 2026 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಯುವ ಆಟಗಾರ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: May 23, 2026 | 2:22 PM

Share
IPL 2026: ಐಪಿಎಲ್ 2026ರ ಪ್ಲೇ-ಆಫ್ಸ್ ಸನಿಹದಲ್ಲಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಣ್ಣ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಆರಂಭಿಕ ದಾಂಡಿಗ ಗಾಯಕ್ಕೆ ತುತ್ತಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. (PC: IPL)

IPL 2026: ಐಪಿಎಲ್ 2026ರ ಪ್ಲೇ-ಆಫ್ಸ್ ಸನಿಹದಲ್ಲಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಣ್ಣ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಆರಂಭಿಕ ದಾಂಡಿಗ ಗಾಯಕ್ಕೆ ತುತ್ತಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. (PC: IPL)

1 / 5
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಎಡಗೈ ದಾಂಡಿಗ ಜೇಕಬ್ ಬೆಥೆಲ್ ಅವರ ಬೆರಳಿಗೆ ಗಾಯವಾಗಿದೆ. ಈ ಗಾಯದ ಕಾರಣ ಅವರು ಅವರು ಮೇ 22 ರಂದು ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. (PC: IPL)

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಎಡಗೈ ದಾಂಡಿಗ ಜೇಕಬ್ ಬೆಥೆಲ್ ಅವರ ಬೆರಳಿಗೆ ಗಾಯವಾಗಿದೆ. ಈ ಗಾಯದ ಕಾರಣ ಅವರು ಅವರು ಮೇ 22 ರಂದು ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. (PC: IPL)

2 / 5
ಇದೀಗ ಈ ಗಾಯದ ಕುರಿತಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಜೇಕಬ್ ಬೆಥೆಲ್ ಕಡೆಯಿಂದ ಮಾಹಿತಿ ಕೇಳಿದ್ದಾರೆ. ಅಲ್ಲದೆ ಗಾಯವು ಗಂಭೀರವಾಗಿದ್ದರೆ ಇಂಗ್ಲೆಂಡ್​ಗೆ ಮರಳುವಂತೆ ಸೂಚಿಸಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಬೆಥೆಲ್ ಅಲಭ್ಯರಾಗುವುದು ಬಹುತೇಕ ಖಚಿತ. (PC: IPL)

ಇದೀಗ ಈ ಗಾಯದ ಕುರಿತಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಜೇಕಬ್ ಬೆಥೆಲ್ ಕಡೆಯಿಂದ ಮಾಹಿತಿ ಕೇಳಿದ್ದಾರೆ. ಅಲ್ಲದೆ ಗಾಯವು ಗಂಭೀರವಾಗಿದ್ದರೆ ಇಂಗ್ಲೆಂಡ್​ಗೆ ಮರಳುವಂತೆ ಸೂಚಿಸಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಬೆಥೆಲ್ ಅಲಭ್ಯರಾಗುವುದು ಬಹುತೇಕ ಖಚಿತ. (PC: IPL)

3 / 5
 ಇತ್ತ ಜೇಕಬ್ ಬೆಥೆಲ್ ಅನುಪಸ್ಥಿತಿಯಲ್ಲಿ ಎಸ್​ಆರ್​ಹೆಚ್ ವಿರುದ್ಧ ವೆಂಕಟೇಶ್ ಅಯ್ಯರ್ ಆರಂಭಿಕನಾಗಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರು ಪ್ಲೇಆಫ್ ಪಂದ್ಯಗಳಲ್ಲಿ ಓಪನರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇಲ್ಲ. ಏಕೆಂದರೆ ಮುಂದಿನ ಪಂದ್ಯಗಳಲ್ಲಿ ಫಿಲ್ ಸಾಲ್ಟ್ ಕಣಕ್ಕಿಳಿಯುವ ಸಾಧ್ಯತೆಯಿದೆ. (PC: IPL)

 ಇತ್ತ ಜೇಕಬ್ ಬೆಥೆಲ್ ಅನುಪಸ್ಥಿತಿಯಲ್ಲಿ ಎಸ್​ಆರ್​ಹೆಚ್ ವಿರುದ್ಧ ವೆಂಕಟೇಶ್ ಅಯ್ಯರ್ ಆರಂಭಿಕನಾಗಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರು ಪ್ಲೇಆಫ್ ಪಂದ್ಯಗಳಲ್ಲಿ ಓಪನರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇಲ್ಲ. ಏಕೆಂದರೆ ಮುಂದಿನ ಪಂದ್ಯಗಳಲ್ಲಿ ಫಿಲ್ ಸಾಲ್ಟ್ ಕಣಕ್ಕಿಳಿಯುವ ಸಾಧ್ಯತೆಯಿದೆ. (PC: IPL)

4 / 5
ಸದ್ಯ ಲೀಗ್ ಪಂದ್ಯಗಳನ್ನು ಮುಗಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ಹಂತದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಮೇ 26 ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ನೇರವಾಗಿ ಫೈನಲ್​ಗೇರಬಹುದು. ಅದರಂತೆ ಕ್ವಾಲಿಫೈಯರ್-1 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಆರ್​ಸಿಬಿ ನೇರವಾಗಿ ಫೈನಲ್​ಗೆ ಎಂಟ್ರ ಕೊಡಲಿದೆಯಾ ಕಾದು ನೋಡಬೇಕಿದೆ. (PC: IPL)

ಸದ್ಯ ಲೀಗ್ ಪಂದ್ಯಗಳನ್ನು ಮುಗಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ಹಂತದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಮೇ 26 ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ನೇರವಾಗಿ ಫೈನಲ್​ಗೇರಬಹುದು. ಅದರಂತೆ ಕ್ವಾಲಿಫೈಯರ್-1 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಆರ್​ಸಿಬಿ ನೇರವಾಗಿ ಫೈನಲ್​ಗೆ ಎಂಟ್ರ ಕೊಡಲಿದೆಯಾ ಕಾದು ನೋಡಬೇಕಿದೆ. (PC: IPL)

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ