AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಇಬ್ಬರನ್ನು ನೀಡಿ ಸಂಜು ಸ್ಯಾಮ್ಸನ್​ನ ಪಡೆಯಲಿರುವ CSK

IPL 2026 Sanju Samson: ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ತನ್ನ ಸ್ಟಾರ್ ಆಟಗಾರ ರವೀಂದ್ರ ಜಡೇಜಾ ಅವರನ್ನು ಟ್ರೇಡ್ ಮಾಡಲು ಮುಂದಾಗಿದೆ. ಅದು ಸಹ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮನ್ಸ್​ಗಾಗಿ. ಅಂದರೆ ಜಡೇಜಾ ಅವರನ್ನು ಆರ್​ಆರ್ ತಂಡಕ್ಕೆ ನೀಡಿ ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಸಿಎಸ್​ಕೆ ಮುಂದಾಗಿದೆ.

ಝಾಹಿರ್ ಯೂಸುಫ್
|

Updated on:Nov 10, 2025 | 8:24 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ 2026ರ ಮಿನಿ ಹರಾಜಿಗೂ ಮುನ್ನ ಸ್ವಾಪ್ ಡೀಲ್ ಕುದುರಿಸಿಕೊಳ್ಳಲು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಸಜ್ಜಾಗಿದೆ. ಅದು ಸಹ ಸಂಜು ಸ್ಯಾಮ್ಸನ್ ಅವರ ಟ್ರೇಡಿಂಗ್​​ಗಾಗಿ ಎಂಬುದು ವಿಶೇಷ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ 2026ರ ಮಿನಿ ಹರಾಜಿಗೂ ಮುನ್ನ ಸ್ವಾಪ್ ಡೀಲ್ ಕುದುರಿಸಿಕೊಳ್ಳಲು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಸಜ್ಜಾಗಿದೆ. ಅದು ಸಹ ಸಂಜು ಸ್ಯಾಮ್ಸನ್ ಅವರ ಟ್ರೇಡಿಂಗ್​​ಗಾಗಿ ಎಂಬುದು ವಿಶೇಷ.

1 / 5
ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಇಬ್ಬರು ಆಟಗಾರರನ್ನು ನೀಡಲು ನಿರ್ಧರಿಸಿದೆ. ಈ ಸ್ವಾಪ್ ಡೀಲ್​ಗೆ ಆರ್​ಆರ್ ಕಡೆಯಿಂದ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೀಗಾಗಿ ಈ ಡೀಲ್ ಕುದುರಿಕೊಳ್ಳಲಿದೆ ಎಂದು ವರದಿಯಾಗಿದೆ.

ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಇಬ್ಬರು ಆಟಗಾರರನ್ನು ನೀಡಲು ನಿರ್ಧರಿಸಿದೆ. ಈ ಸ್ವಾಪ್ ಡೀಲ್​ಗೆ ಆರ್​ಆರ್ ಕಡೆಯಿಂದ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೀಗಾಗಿ ಈ ಡೀಲ್ ಕುದುರಿಕೊಳ್ಳಲಿದೆ ಎಂದು ವರದಿಯಾಗಿದೆ.

2 / 5
ಪ್ರಸ್ತುತ ಮಾಹಿತಿ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್​ಗಾಗಿ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ಬಿಟ್ಟು ಕೊಡಲು ನಿರ್ಧರಿಸಿದ್ದಾರೆ. ಅತ್ತ ರಾಜಸ್ಥಾನ್ ರಾಯಲ್ಸ್ ರವೀಂದ್ರ ಜಡೇಜಾ ಜೊತೆ ಡೆವಾಲ್ಡ್ ಬ್ರೆವಿಸ್ ಅವರನ್ನು ನೀಡುವಂತೆ ಕೋರಿಕೊಂಡಿತ್ತು.

ಪ್ರಸ್ತುತ ಮಾಹಿತಿ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್​ಗಾಗಿ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ಬಿಟ್ಟು ಕೊಡಲು ನಿರ್ಧರಿಸಿದ್ದಾರೆ. ಅತ್ತ ರಾಜಸ್ಥಾನ್ ರಾಯಲ್ಸ್ ರವೀಂದ್ರ ಜಡೇಜಾ ಜೊತೆ ಡೆವಾಲ್ಡ್ ಬ್ರೆವಿಸ್ ಅವರನ್ನು ನೀಡುವಂತೆ ಕೋರಿಕೊಂಡಿತ್ತು.

3 / 5
ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿಯು ತನ್ನ ನಿಲುವನ್ನು ಬದಲಿಸಿಲ್ಲ. ಬದಲಾಗಿ ಬ್ರೆವಿಸ್ ಸ್ಥಾನದಲ್ಲಿ ಇಂಗ್ಲೆಂಡ್ ಆಲ್​ರೌಂಡರ್ ಸ್ಯಾಮ್ ಕರನ್ ಅವರನ್ನು ಬಿಟ್ಟು ಕೊಡುವುದಾಗಿ ತಿಳಿಸಿದೆ. ಈ ಸ್ವಾಪ್ ಡೀಲ್​ ಅನ್ನು ರಾಜಸ್ಥಾನ್ ರಾಯಲ್ಸ್ ಒಪ್ಪಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು, ಅದರಂತೆ ಶೀಘ್ರದಲ್ಲೇ ಆಟಗಾರರ ಬದಲಾವಣೆಯಾಗುವ ಸಾಧ್ಯತೆಯಿದೆ.

ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿಯು ತನ್ನ ನಿಲುವನ್ನು ಬದಲಿಸಿಲ್ಲ. ಬದಲಾಗಿ ಬ್ರೆವಿಸ್ ಸ್ಥಾನದಲ್ಲಿ ಇಂಗ್ಲೆಂಡ್ ಆಲ್​ರೌಂಡರ್ ಸ್ಯಾಮ್ ಕರನ್ ಅವರನ್ನು ಬಿಟ್ಟು ಕೊಡುವುದಾಗಿ ತಿಳಿಸಿದೆ. ಈ ಸ್ವಾಪ್ ಡೀಲ್​ ಅನ್ನು ರಾಜಸ್ಥಾನ್ ರಾಯಲ್ಸ್ ಒಪ್ಪಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು, ಅದರಂತೆ ಶೀಘ್ರದಲ್ಲೇ ಆಟಗಾರರ ಬದಲಾವಣೆಯಾಗುವ ಸಾಧ್ಯತೆಯಿದೆ.

4 / 5
ಐಪಿಎಲ್ ಟ್ರೇಡ್ ನಿಯಮಗಳ ಪ್ರಕಾರ, ಈ ಸ್ವಾಪ್ ಡೀಲ್​ಗಳಿಗೆ ಆಟಗಾರರ ಒಪ್ಪಿಗೆ ಕೂಡ ಮುಖ್ಯ. ಇದೀಗ ಸಿಎಸ್​ಕೆ ಫ್ರಾಂಚೈಸಿ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಕಡೆಯಿಂದ ಸ್ವಾಪ್ ಡೀಲ್ ಒಪ್ಪಂದದ ಲಿಖಿತ ಒಪ್ಪಿಗೆಯನ್ನು ಎದುರು ನೋಡುತ್ತಿದೆ. ಇಬ್ಬರ ಕಡೆಯಿಂದ ಒಪ್ಪಿಗೆ ಬಂದರೆ ಜಡೇಜಾ ಹಾಗೂ ಕರನ್ ಅವರನ್ನು ನೀಡಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲಿದೆ.

ಐಪಿಎಲ್ ಟ್ರೇಡ್ ನಿಯಮಗಳ ಪ್ರಕಾರ, ಈ ಸ್ವಾಪ್ ಡೀಲ್​ಗಳಿಗೆ ಆಟಗಾರರ ಒಪ್ಪಿಗೆ ಕೂಡ ಮುಖ್ಯ. ಇದೀಗ ಸಿಎಸ್​ಕೆ ಫ್ರಾಂಚೈಸಿ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಕಡೆಯಿಂದ ಸ್ವಾಪ್ ಡೀಲ್ ಒಪ್ಪಂದದ ಲಿಖಿತ ಒಪ್ಪಿಗೆಯನ್ನು ಎದುರು ನೋಡುತ್ತಿದೆ. ಇಬ್ಬರ ಕಡೆಯಿಂದ ಒಪ್ಪಿಗೆ ಬಂದರೆ ಜಡೇಜಾ ಹಾಗೂ ಕರನ್ ಅವರನ್ನು ನೀಡಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲಿದೆ.

5 / 5

Published On - 8:23 am, Mon, 10 November 25

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ