AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಸಿಎಸ್​ಕೆ ಅಲ್ಲ.. ಈ ತಂಡಕ್ಕೆ ಸಂಜು ಸ್ಯಾಮ್ಸನ್ ಟ್ರೇಡ್?

Sanju Samson: ಐಪಿಎಲ್ 2026 ಕ್ಕಾಗಿ ಸಿದ್ಧತೆಗಳು ಶುರುವಾಗಿವೆ. ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡದಿಂದ ಹೊರಬಂದು ಡೆಲ್ಲಿ ಕ್ಯಾಪಿಟಲ್ಸ್ ಸೇರುವ ಕುರಿತು ಚರ್ಚೆ ನಡೆಯುತ್ತಿದೆ. ಮಿನಿ ಹರಾಜಿಗೂ ಮುನ್ನ ಟ್ರೇಡಿಂಗ್ ವಿಂಡೋ ಮೂಲಕ ಈ ವರ್ಗಾವಣೆ ಸಾಧ್ಯತೆ ಇದೆ. ಡೆಲ್ಲಿ ಕ್ಯಾಪಿಟಲ್ಸ್ ಸಂಜುಗಾಗಿ ಆಸಕ್ತಿ ತೋರಿಸಿದ್ದು, ಐಪಿಎಲ್ ಟ್ರೇಡ್ ವಿಂಡೋ ನಿಯಮಗಳ ಬಗ್ಗೆಯೂ ಲೇಖನದಲ್ಲಿ ವಿವರಿಸಲಾಗಿದೆ.

ಪೃಥ್ವಿಶಂಕರ
|

Updated on: Oct 15, 2025 | 9:19 PM

Share
2026 ರ ಐಪಿಎಲ್​ಗೆ ಈಗಿನಿಂದಲೇ ತಯಾರಿ ಶುರುವಾಗಿದೆ. ವರದಿಯ ಪ್ರಕಾರ ಡಿಸೆಂಬರ್ 15 ರೊಳಗೆ ಮಿನಿ ಹರಾಜು ಕೂಡ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ತಮ್ಮ ತಮ್ಮ ತಂಡಗಳಲ್ಲಿ ಯಾರನ್ನು ಉಳಿಸಿಕೊಳ್ಳಬೇಕು? ಯಾರನ್ನು ತಂಡದಿಂದ ಕೈಬಿಡಬೇಕು ಎಂಬ ಸಿದ್ಧತೆಯಲ್ಲಿ ತೊಡಗಿವೆ. ಹಾಗೆಯೇ ಮಿನಿ ಹರಾಜಿಗೂ ಮುನ್ನ ಟ್ರೇಡಿಂಗ್ ಮೂಲಕ ಯಾರನ್ನು ಖರೀದಿಸಬಹುದು ಎಂಬುದನ್ನು ಯೋಚಿಸುತ್ತಿವೆ.

2026 ರ ಐಪಿಎಲ್​ಗೆ ಈಗಿನಿಂದಲೇ ತಯಾರಿ ಶುರುವಾಗಿದೆ. ವರದಿಯ ಪ್ರಕಾರ ಡಿಸೆಂಬರ್ 15 ರೊಳಗೆ ಮಿನಿ ಹರಾಜು ಕೂಡ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ತಮ್ಮ ತಮ್ಮ ತಂಡಗಳಲ್ಲಿ ಯಾರನ್ನು ಉಳಿಸಿಕೊಳ್ಳಬೇಕು? ಯಾರನ್ನು ತಂಡದಿಂದ ಕೈಬಿಡಬೇಕು ಎಂಬ ಸಿದ್ಧತೆಯಲ್ಲಿ ತೊಡಗಿವೆ. ಹಾಗೆಯೇ ಮಿನಿ ಹರಾಜಿಗೂ ಮುನ್ನ ಟ್ರೇಡಿಂಗ್ ಮೂಲಕ ಯಾರನ್ನು ಖರೀದಿಸಬಹುದು ಎಂಬುದನ್ನು ಯೋಚಿಸುತ್ತಿವೆ.

1 / 5
ಇದೆಲ್ಲದರ ನಡುವೆ ಸಂಜು ಸ್ಯಾಮ್ಸನ್ ಯಾವ ತಂಡ ಸೇರುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ತೊರೆಯುವುದಕ್ಕೆ ಮುಂದಾಗಿರುವ ಸಂಜುಗಾಗಿ ಹಲವು ಫ್ರಾಂಚೈಸಿಗಳು ಕಾದುಕುಳಿತಿವೆ. ಆದಾಗ್ಯೂ ಅವರನ್ನು ಮಿನಿ ಹರಾಜಿನಲ್ಲಿ ಖರೀದಿಸಲಾಗುತ್ತದೋ ಅಥವಾ ಟ್ರೇಡಿಂಗ್ ಮೂಲಕ ತಂಡಕ್ಕೆ ಸೇರಿಸಿಕೊಳ್ಳಲಾಗುತ್ತದೋ ಎಂಬುದಕ್ಕೆ ಇದುವರೆಗೂ ಉತ್ತರ ಸಿಕ್ಕಿಲ್ಲ.

ಇದೆಲ್ಲದರ ನಡುವೆ ಸಂಜು ಸ್ಯಾಮ್ಸನ್ ಯಾವ ತಂಡ ಸೇರುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ತೊರೆಯುವುದಕ್ಕೆ ಮುಂದಾಗಿರುವ ಸಂಜುಗಾಗಿ ಹಲವು ಫ್ರಾಂಚೈಸಿಗಳು ಕಾದುಕುಳಿತಿವೆ. ಆದಾಗ್ಯೂ ಅವರನ್ನು ಮಿನಿ ಹರಾಜಿನಲ್ಲಿ ಖರೀದಿಸಲಾಗುತ್ತದೋ ಅಥವಾ ಟ್ರೇಡಿಂಗ್ ಮೂಲಕ ತಂಡಕ್ಕೆ ಸೇರಿಸಿಕೊಳ್ಳಲಾಗುತ್ತದೋ ಎಂಬುದಕ್ಕೆ ಇದುವರೆಗೂ ಉತ್ತರ ಸಿಕ್ಕಿಲ್ಲ.

2 / 5
ಹೀಗಿರುವಾಗ ಸಂಜು ಸ್ಯಾಮ್ಸನ್​ಗೆ ಸಂಬಂಧಿಸಿದಂತೆ ಮತ್ತೊಂದು ಸುದ್ದಿ ಹರಿದಾಡುತ್ತಿದ್ದು, ಈ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಟ್ರೇಡಿಂಗ್ ಮೂಲಕ ಸೇರಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಈ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಸಂಜುರನ್ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ ಎನ್ನಲಾಗುತ್ತಿತ್ತು.

ಹೀಗಿರುವಾಗ ಸಂಜು ಸ್ಯಾಮ್ಸನ್​ಗೆ ಸಂಬಂಧಿಸಿದಂತೆ ಮತ್ತೊಂದು ಸುದ್ದಿ ಹರಿದಾಡುತ್ತಿದ್ದು, ಈ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಟ್ರೇಡಿಂಗ್ ಮೂಲಕ ಸೇರಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಈ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಸಂಜುರನ್ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ ಎನ್ನಲಾಗುತ್ತಿತ್ತು.

3 / 5
ಆದರೀಗ ಮಾಧ್ಯಮ ವರದಿಗಳ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ ಟ್ರೇಡ್ ವಿಂಡೋ ಅಡಿಯಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಸ್ವಾಧೀನಪಡಿಸಿಕೊಳ್ಳಲು ಆಸಕ್ತಿ ಹೊಂದಿದೆ. ಆದಾಗ್ಯೂ, ಈ ಒಪ್ಪಂದಕ್ಕೆ ಯಾವ ಆಟಗಾರನನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ ಎಂಬ ಪ್ರಶ್ನೆ ಉಳಿದಿದೆ. ಇದುವರೆಗೂ ಈ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲವಾದರೂ ಈ ಮಾಹಿತಿ ನಿಜವಾದರೆ, ಸಂಜು ಮುಂದಿನ ಆವೃತ್ತಿಯಲ್ಲಿ ಡೆಲ್ಲಿ ತಂಡದ ಪರ ಬ್ಯಾಟ್ ಬೀಸಲಿದ್ದಾರೆ.

ಆದರೀಗ ಮಾಧ್ಯಮ ವರದಿಗಳ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ ಟ್ರೇಡ್ ವಿಂಡೋ ಅಡಿಯಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಸ್ವಾಧೀನಪಡಿಸಿಕೊಳ್ಳಲು ಆಸಕ್ತಿ ಹೊಂದಿದೆ. ಆದಾಗ್ಯೂ, ಈ ಒಪ್ಪಂದಕ್ಕೆ ಯಾವ ಆಟಗಾರನನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ ಎಂಬ ಪ್ರಶ್ನೆ ಉಳಿದಿದೆ. ಇದುವರೆಗೂ ಈ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲವಾದರೂ ಈ ಮಾಹಿತಿ ನಿಜವಾದರೆ, ಸಂಜು ಮುಂದಿನ ಆವೃತ್ತಿಯಲ್ಲಿ ಡೆಲ್ಲಿ ತಂಡದ ಪರ ಬ್ಯಾಟ್ ಬೀಸಲಿದ್ದಾರೆ.

4 / 5
ಐಪಿಎಲ್ ಟ್ರೇಡ್ ವಿಂಡೋ ಎಂಬುದು ತಂಡಗಳು ಹರಾಜಿನ ಮೊದಲು ಅಥವಾ ನಂತರ ಆಟಗಾರರನ್ನು ವಿನಿಮಯ ಮಾಡಿಕೊಳ್ಳಲು ಅನುಮತಿಸುವ ನಿಯಮವಾಗಿದೆ. ಪ್ರಸ್ತುತ, ಐಪಿಎಲ್ 2026 ಕ್ಕೆ ಟ್ರೇಡ್ ವಿಂಡೋ ತೆರೆದಿದೆ. ಐಪಿಎಲ್ ಸೀಸನ್ ಮುಗಿದ ಒಂದು ತಿಂಗಳ ನಂತರ ಟ್ರೇಡ್ ವಿಂಡೋ ತೆರೆಯುತ್ತದೆ ಮತ್ತು ಹರಾಜಿನ ಒಂದು ವಾರಕ್ಕೆ ಮೊದಲು ಮುಚ್ಚಲಿದೆ. ಈ ವಿಂಡೋದ ಅಡಿಯಲ್ಲಿ, ಫ್ರಾಂಚೈಸಿಗಳು ತಮ್ಮ ಆಟಗಾರರನ್ನು ವಿನಿಮಯ ಮಾಡಿಕೊಳ್ಳಬಹುದು ಅಥವಾ ಹಣ ನೀಡಿ ಖರೀದಿಸಬಹುದಾಗಿದೆ.

ಐಪಿಎಲ್ ಟ್ರೇಡ್ ವಿಂಡೋ ಎಂಬುದು ತಂಡಗಳು ಹರಾಜಿನ ಮೊದಲು ಅಥವಾ ನಂತರ ಆಟಗಾರರನ್ನು ವಿನಿಮಯ ಮಾಡಿಕೊಳ್ಳಲು ಅನುಮತಿಸುವ ನಿಯಮವಾಗಿದೆ. ಪ್ರಸ್ತುತ, ಐಪಿಎಲ್ 2026 ಕ್ಕೆ ಟ್ರೇಡ್ ವಿಂಡೋ ತೆರೆದಿದೆ. ಐಪಿಎಲ್ ಸೀಸನ್ ಮುಗಿದ ಒಂದು ತಿಂಗಳ ನಂತರ ಟ್ರೇಡ್ ವಿಂಡೋ ತೆರೆಯುತ್ತದೆ ಮತ್ತು ಹರಾಜಿನ ಒಂದು ವಾರಕ್ಕೆ ಮೊದಲು ಮುಚ್ಚಲಿದೆ. ಈ ವಿಂಡೋದ ಅಡಿಯಲ್ಲಿ, ಫ್ರಾಂಚೈಸಿಗಳು ತಮ್ಮ ಆಟಗಾರರನ್ನು ವಿನಿಮಯ ಮಾಡಿಕೊಳ್ಳಬಹುದು ಅಥವಾ ಹಣ ನೀಡಿ ಖರೀದಿಸಬಹುದಾಗಿದೆ.

5 / 5
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು