AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ನಾಯಕತ್ವದಿಂದ ಸಂಜು ಸ್ಯಾಮ್ಸನ್ ಔಟ್: ಇಬ್ಬರ ನಡುವೆ ಪೈಪೋಟಿ

Rajasthan Royals: ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಯನ್ನು ರಾಹುಲ್ ದ್ರಾವಿಡ್ ತ್ಯಜಿಸಿದ್ದಾರೆ. ಅತ್ತ ಪ್ರಸ್ತುತ ತಂಡದ ನಾಯಕ ಸಂಜು ಸ್ಯಾಮ್ಸನ್ ಕೂಡ ಆರ್​ಆರ್ ತಂಡವನ್ನು ತೊರೆಯಲು ತುದಿಗಾಲಲ್ಲಿ ನಿಂತಿದ್ದಾರೆ. ಹೀಗಾಗಿ ಐಪಿಎಲ್ 2026 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಬಹುತೇಕ ಖಚಿತ ಎನ್ನಬಹುದು.

ಝಾಹಿರ್ ಯೂಸುಫ್
|

Updated on: Sep 06, 2025 | 9:04 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಆದರೆ ಅವರು ಮುಂದಿನ ಸೀಸನ್​ನಲ್ಲಿ ಆರ್​ಆರ್ ತಂಡದ ನಾಯಕರಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬ ಸುದ್ದಿಯೊಂದು ಹೊರಬಿದ್ದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಆದರೆ ಅವರು ಮುಂದಿನ ಸೀಸನ್​ನಲ್ಲಿ ಆರ್​ಆರ್ ತಂಡದ ನಾಯಕರಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬ ಸುದ್ದಿಯೊಂದು ಹೊರಬಿದ್ದಿದೆ.

1 / 5
ಕೆಲ ದಿನಗಳ ಹಿಂದೆಯಷ್ಟೇ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕತ್ವಕ್ಕಾಗಿ ಸಂಜು ಸ್ಯಾಮ್ಸನ್, ರಿಯಾನ್ ಪರಾಗ್ ಹಾಗೂ ಯಶಸ್ವಿ ಜೈಸ್ವಾಲ್ ನಡುವೆ ಪೈಪೋಟಿ ಇದೆ ಎಂದು ವರದಿಯಾಗಿತ್ತು. ಇದೀಗ ಪ್ರಸ್ತುತ ತಂಡದ ನಾಯಕ ಸ್ಯಾಮ್ಸನ್ ಅವರನ್ನು ಕ್ಯಾಪ್ಟನ್ ಪಟ್ಟದಿಂದ ಕೆಳಗಿಳಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕತ್ವಕ್ಕಾಗಿ ಸಂಜು ಸ್ಯಾಮ್ಸನ್, ರಿಯಾನ್ ಪರಾಗ್ ಹಾಗೂ ಯಶಸ್ವಿ ಜೈಸ್ವಾಲ್ ನಡುವೆ ಪೈಪೋಟಿ ಇದೆ ಎಂದು ವರದಿಯಾಗಿತ್ತು. ಇದೀಗ ಪ್ರಸ್ತುತ ತಂಡದ ನಾಯಕ ಸ್ಯಾಮ್ಸನ್ ಅವರನ್ನು ಕ್ಯಾಪ್ಟನ್ ಪಟ್ಟದಿಂದ ಕೆಳಗಿಳಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

2 / 5
ಒಂದು ವೇಳೆ ಸಂಜು ಸ್ಯಾಮ್ಸನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದರೆ ಅವರು ರಾಜಸ್ಥಾನ್ ರಾಯಲ್ಸ್ ತಂಡದೊಂದಿಗೆ ಮುಂದುವರೆಯುವ ಸಾಧ್ಯತೆಯಿಲ್ಲ. ಏಕೆಂದರೆ ಸ್ಯಾಮ್ಸನ್ ಅವರ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​ ಫ್ರಾಂಚೈಸಿಗಳು ಆಸಕ್ತಿ ಹೊಂದಿವೆ. ಹೀಗಾಗಿ ಆರ್​ಆರ್​ ತಂಡದ ನಾಯಕತ್ವ ಕೈ ತಪ್ಪಿದರೆ ಸ್ಯಾಮ್ಸನ್ ಹರಾಜಿನಲ್ಲಿ ಅದೃಷ್ಟ ಪರೀಕ್ಷಿಸುವ ಸಾಧ್ಯತೆ ಹೆಚ್ಚಿದೆ. 

ಒಂದು ವೇಳೆ ಸಂಜು ಸ್ಯಾಮ್ಸನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದರೆ ಅವರು ರಾಜಸ್ಥಾನ್ ರಾಯಲ್ಸ್ ತಂಡದೊಂದಿಗೆ ಮುಂದುವರೆಯುವ ಸಾಧ್ಯತೆಯಿಲ್ಲ. ಏಕೆಂದರೆ ಸ್ಯಾಮ್ಸನ್ ಅವರ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​ ಫ್ರಾಂಚೈಸಿಗಳು ಆಸಕ್ತಿ ಹೊಂದಿವೆ. ಹೀಗಾಗಿ ಆರ್​ಆರ್​ ತಂಡದ ನಾಯಕತ್ವ ಕೈ ತಪ್ಪಿದರೆ ಸ್ಯಾಮ್ಸನ್ ಹರಾಜಿನಲ್ಲಿ ಅದೃಷ್ಟ ಪರೀಕ್ಷಿಸುವ ಸಾಧ್ಯತೆ ಹೆಚ್ಚಿದೆ. 

3 / 5
ಅತ್ತ ಸಂಜು ಸ್ಯಾಮ್ಸನ್ ಅವರಿಂದ ತೆರವಾಗಲಿರುವ ನಾಯಕನ ಸ್ಥಾನಕ್ಕೆ ಈಗಾಗಲೇ ರಿಯಾನ್ ಪರಾಗ್ ಹಾಗೂ ಯಶಸ್ವಿ ಜೈಸ್ವಾಲ್ ನಡುವೆ ಪೈಪೋಟಿ ಏರ್ಪಟ್ಟಿದೆ ಎಂದು ವರದಿಯಾಗಿದೆ. ಆರ್​ಆರ್​ ಫ್ರಾಂಚೈಸಿಯ ಒಂದು ಗುಂಪು ರಿಯಾನ್ ಪರಾಗ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನನ್ನಾಗಿ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ. 

ಅತ್ತ ಸಂಜು ಸ್ಯಾಮ್ಸನ್ ಅವರಿಂದ ತೆರವಾಗಲಿರುವ ನಾಯಕನ ಸ್ಥಾನಕ್ಕೆ ಈಗಾಗಲೇ ರಿಯಾನ್ ಪರಾಗ್ ಹಾಗೂ ಯಶಸ್ವಿ ಜೈಸ್ವಾಲ್ ನಡುವೆ ಪೈಪೋಟಿ ಏರ್ಪಟ್ಟಿದೆ ಎಂದು ವರದಿಯಾಗಿದೆ. ಆರ್​ಆರ್​ ಫ್ರಾಂಚೈಸಿಯ ಒಂದು ಗುಂಪು ರಿಯಾನ್ ಪರಾಗ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನನ್ನಾಗಿ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ. 

4 / 5
ಆದರೆ ಇನ್ನೊಂದೆಡೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ಮತ್ತೊಂದು ಗುಂಪು ಯಶಸ್ವಿ ಜೈಸ್ವಾಲ್ ಅವರಿಗೆ ನಾಯಕತ್ವ ನೀಡಬೇಕೆಂಬ ವಾದ ಮುಂಡಿದುತ್ತಿದ್ದಾರೆ. ಜೈಸ್ವಾಲ್ ಕಳೆದ ಕೆಲ ವರ್ಷಗಳಿಂದ ರಾಜಸ್ಥಾನ್ ರಾಯಲ್ಸ್ ತಂಡದ ಭಾಗವಾಗಿದ್ದಾರೆ. ಅಲ್ಲದೆ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಭವಿಷ್ಯ ದೃಷ್ಟಿಯಿಂದ ಜೈಸ್ವಾಲ್​ಗೆ ಕ್ಯಾಪ್ಟನ್ ಪಟ್ಟ ನೀಡುವುದು ಉತ್ತಮ ಎಂದು ಅಭಿಪ್ರಾಯಪಡುತ್ತಿದ್ದಾರೆ. ಹೀಗಾಗಿ ರಿಯಾನ್ ಪರಾಗ್ ಅಥವಾ ಯಶಸ್ವಿ ಜೈಸ್ವಾಲ್​ಗೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕತ್ವ ಒಲಿಯುವುದು ಖಚಿತ ಎನ್ನಬಹುದು.

ಆದರೆ ಇನ್ನೊಂದೆಡೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ಮತ್ತೊಂದು ಗುಂಪು ಯಶಸ್ವಿ ಜೈಸ್ವಾಲ್ ಅವರಿಗೆ ನಾಯಕತ್ವ ನೀಡಬೇಕೆಂಬ ವಾದ ಮುಂಡಿದುತ್ತಿದ್ದಾರೆ. ಜೈಸ್ವಾಲ್ ಕಳೆದ ಕೆಲ ವರ್ಷಗಳಿಂದ ರಾಜಸ್ಥಾನ್ ರಾಯಲ್ಸ್ ತಂಡದ ಭಾಗವಾಗಿದ್ದಾರೆ. ಅಲ್ಲದೆ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಭವಿಷ್ಯ ದೃಷ್ಟಿಯಿಂದ ಜೈಸ್ವಾಲ್​ಗೆ ಕ್ಯಾಪ್ಟನ್ ಪಟ್ಟ ನೀಡುವುದು ಉತ್ತಮ ಎಂದು ಅಭಿಪ್ರಾಯಪಡುತ್ತಿದ್ದಾರೆ. ಹೀಗಾಗಿ ರಿಯಾನ್ ಪರಾಗ್ ಅಥವಾ ಯಶಸ್ವಿ ಜೈಸ್ವಾಲ್​ಗೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕತ್ವ ಒಲಿಯುವುದು ಖಚಿತ ಎನ್ನಬಹುದು.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!