AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Trade: ಲಕ್ನೋ ತೊರೆದು ಮುಂಬೈ ಸೇರಿದ ಶಾರ್ದೂಲ್ ಠಾಕೂರ್; ಎಷ್ಟು ಮೊತ್ತಕ್ಕೆ ಗೊತ್ತಾ?

Shardul Thakur Traded to Mumbai Indians: ಅನುಭವಿ ಆಟಗಾರ ಶಾರ್ದೂಲ್ ಠಾಕೂರ್ ಮುಂಬರುವ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ಜೈಂಟ್ಸ್‌ನಿಂದ ಮುಂಬೈ ಇಂಡಿಯನ್ಸ್‌ಗೆ ₹2 ಕೋಟಿ ನಗದು ಒಪ್ಪಂದದಲ್ಲಿ ಸೇರಿಕೊಂಡಿದ್ದಾರೆ. ಇದು ಶಾರ್ದೂಲ್ ಅವರ ಮೂರನೇ ಐಪಿಎಲ್ ಟ್ರೇಡ್ ಆಗಿದ್ದು, ಹಿಂದೆ ನೆಟ್ಸ್ ಬೌಲರ್ ಆಗಿ ಮುಂಬೈ ಜೊತೆಗಿನ ನಂಟು ಹೊಂದಿದ್ದರು. ಅವರ ಈ ಸೇರ್ಪಡೆ ಮುಂಬೈ ತಂಡಕ್ಕೆ ಬಲ ತುಂಬಲಿದೆ.

ಪೃಥ್ವಿಶಂಕರ
|

Updated on: Nov 13, 2025 | 6:32 PM

Share
2025 ರ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ಜೈಂಟ್ ತಂಡದ ಪರ ಆಡಿದ್ದ ಟೀಂ ಇಂಡಿಯಾದ ಅನುಭವಿ ಬೌಲರ್ ಶಾರ್ದೂಲ್ ಠಾಕೂರ್ ಮುಂಬರುವ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಪರ ಆಡಲು ಸಜ್ಜಾಗಿದ್ದಾರೆ. ಶಾರ್ದೂಲ್ ಅವರನ್ನು ಟ್ರೇಡಿಂಗ್ ವಿಂಡೋದಡಿಯಲ್ಲಿ ಮುಂಬೈ ಫ್ರಾಂಚೈಸಿ ಹಣ ನೀಡಿ ಖರೀದಿಸಿದೆ.

2025 ರ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ಜೈಂಟ್ ತಂಡದ ಪರ ಆಡಿದ್ದ ಟೀಂ ಇಂಡಿಯಾದ ಅನುಭವಿ ಬೌಲರ್ ಶಾರ್ದೂಲ್ ಠಾಕೂರ್ ಮುಂಬರುವ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಪರ ಆಡಲು ಸಜ್ಜಾಗಿದ್ದಾರೆ. ಶಾರ್ದೂಲ್ ಅವರನ್ನು ಟ್ರೇಡಿಂಗ್ ವಿಂಡೋದಡಿಯಲ್ಲಿ ಮುಂಬೈ ಫ್ರಾಂಚೈಸಿ ಹಣ ನೀಡಿ ಖರೀದಿಸಿದೆ.

1 / 5
ಮೇಲೆ ಹೇಳಿದಂತೆ ಮುಂಬೈ, ಶಾರ್ದೂಲ್ ಠಾಕೂರ್ ಅವರನ್ನು ನಗದು ಒಪ್ಪಂದದ ಮೂಲಕ ಖರೀದಿಸಿದೆ. ಇದರರ್ಥ ಎರಡೂ ತಂಡಗಳ ನಡುವೆ ಯಾವುದೇ ಆಟಗಾರರ ವಿನಿಮಯ ನಡೆದಿಲ್ಲ, ಬದಲಿಗೆ ಶಾರ್ದೂಲ್ ಅವರನ್ನು 2 ಕೋಟಿ ರೂ. ನಗದು ಮೊತ್ತಕ್ಕೆ ಖರೀದಿಸಿದೆ. ಲಕ್ನೋ ಸೂಪರ್ ಜೈಂಟ್ಸ್ ಕಳೆದ ವರ್ಷ ಶಾರ್ದೂಲ್ ಠಾಕೂರ್ ಅವರನ್ನು 2 ಕೋಟಿ ನೀಡಿ ಬದಲಿ ಆಟಗಾರನಾಗಿ ಖರೀದಿಸಿತ್ತು.

ಮೇಲೆ ಹೇಳಿದಂತೆ ಮುಂಬೈ, ಶಾರ್ದೂಲ್ ಠಾಕೂರ್ ಅವರನ್ನು ನಗದು ಒಪ್ಪಂದದ ಮೂಲಕ ಖರೀದಿಸಿದೆ. ಇದರರ್ಥ ಎರಡೂ ತಂಡಗಳ ನಡುವೆ ಯಾವುದೇ ಆಟಗಾರರ ವಿನಿಮಯ ನಡೆದಿಲ್ಲ, ಬದಲಿಗೆ ಶಾರ್ದೂಲ್ ಅವರನ್ನು 2 ಕೋಟಿ ರೂ. ನಗದು ಮೊತ್ತಕ್ಕೆ ಖರೀದಿಸಿದೆ. ಲಕ್ನೋ ಸೂಪರ್ ಜೈಂಟ್ಸ್ ಕಳೆದ ವರ್ಷ ಶಾರ್ದೂಲ್ ಠಾಕೂರ್ ಅವರನ್ನು 2 ಕೋಟಿ ನೀಡಿ ಬದಲಿ ಆಟಗಾರನಾಗಿ ಖರೀದಿಸಿತ್ತು.

2 / 5
ಐಪಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ‘ಎರಡು ಫ್ರಾಂಚೈಸಿಗಳ ನಡುವಿನ ಒಪ್ಪಂದದ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಮುಂಬೈ ಇಂಡಿಯನ್ಸ್ ಪರ ಆಡಲು ಸಜ್ಜಾಗಿದ್ದಾರೆ. ಶಾರ್ದೂಲ್ ಅವರನ್ನು 2 ಕೋಟಿ ಮೊತ್ತಕ್ಕೆ ಮುಂಬೈ ಇಂಡಿಯನ್ಸ್‌ಗೆ ವಿನಿಮಯ ಮಾಡಿಕೊಳ್ಳಲಾಗಿದೆ’ ಎಂದು ಹೇಳಿದೆ.

ಐಪಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ‘ಎರಡು ಫ್ರಾಂಚೈಸಿಗಳ ನಡುವಿನ ಒಪ್ಪಂದದ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಮುಂಬೈ ಇಂಡಿಯನ್ಸ್ ಪರ ಆಡಲು ಸಜ್ಜಾಗಿದ್ದಾರೆ. ಶಾರ್ದೂಲ್ ಅವರನ್ನು 2 ಕೋಟಿ ಮೊತ್ತಕ್ಕೆ ಮುಂಬೈ ಇಂಡಿಯನ್ಸ್‌ಗೆ ವಿನಿಮಯ ಮಾಡಿಕೊಳ್ಳಲಾಗಿದೆ’ ಎಂದು ಹೇಳಿದೆ.

3 / 5
ಐಪಿಎಲ್ ಇತಿಹಾಸದಲ್ಲಿ ಶಾರ್ದೂಲ್ ಠಾಕೂರ್ ಅವರನ್ನು ಮೂರನೇ ಬಾರಿಗೆ ವಿನಿಮಯ ಮಾಡಿಕೊಳ್ಳಲಾಗಿದೆ ಎಂಬುದು ಗಮನಿಸಬೇಕಾದ ಸಂಗತಿ. ಇದಕ್ಕೂ ಮೊದಲು, 2017 ರಲ್ಲಿ, ರೈಸಿಂಗ್ ಪುಣೆ ಸೂಪರ್‌ಜೈಂಟ್ ಅವರನ್ನು ಕಿಂಗ್ಸ್ ಇಲೆವೆನ್ ಪಂಜಾಬ್ (ಈಗ ಪಂಜಾಬ್ ಕಿಂಗ್ಸ್) ನಿಂದ ಖರೀದಿಸಿತ್ತು. ನಂತರ, 2023 ರ ಸೀಸನ್‌ಗೆ ಮುಂಚಿತವಾಗಿ, ಕೋಲ್ಕತ್ತಾ ನೈಟ್ ರೈಡರ್ಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ನಿಂದ ಖರೀದಿಸಿತ್ತು. ಈ ಎರಡೂ ಒಪ್ಪಂದಗಳು ಸಂಪೂರ್ಣ ನಗದು ವ್ಯವಹಾರಗಳಾಗಿದ್ದವು.

ಐಪಿಎಲ್ ಇತಿಹಾಸದಲ್ಲಿ ಶಾರ್ದೂಲ್ ಠಾಕೂರ್ ಅವರನ್ನು ಮೂರನೇ ಬಾರಿಗೆ ವಿನಿಮಯ ಮಾಡಿಕೊಳ್ಳಲಾಗಿದೆ ಎಂಬುದು ಗಮನಿಸಬೇಕಾದ ಸಂಗತಿ. ಇದಕ್ಕೂ ಮೊದಲು, 2017 ರಲ್ಲಿ, ರೈಸಿಂಗ್ ಪುಣೆ ಸೂಪರ್‌ಜೈಂಟ್ ಅವರನ್ನು ಕಿಂಗ್ಸ್ ಇಲೆವೆನ್ ಪಂಜಾಬ್ (ಈಗ ಪಂಜಾಬ್ ಕಿಂಗ್ಸ್) ನಿಂದ ಖರೀದಿಸಿತ್ತು. ನಂತರ, 2023 ರ ಸೀಸನ್‌ಗೆ ಮುಂಚಿತವಾಗಿ, ಕೋಲ್ಕತ್ತಾ ನೈಟ್ ರೈಡರ್ಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ನಿಂದ ಖರೀದಿಸಿತ್ತು. ಈ ಎರಡೂ ಒಪ್ಪಂದಗಳು ಸಂಪೂರ್ಣ ನಗದು ವ್ಯವಹಾರಗಳಾಗಿದ್ದವು.

4 / 5
ಇದೀಗ ಮುಂಬೈ ಇಂಡಿಯನ್ಸ್‌ಗೆ ಸೇರುವುದು ಠಾಕೂರ್‌ಗೆ ಒಂದು ಹೊಸ ತಂಡವಾಗಿದೆ. ಅವರು 2010-12 ರವರೆಗೆ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ನೆಟ್ಸ್ ಬೌಲರ್ ಆಗಿದ್ದರು. ಶಾರ್ದೂಲ್ ಠಾಕೂರ್ ಇದುವರೆಗೆ ಐಪಿಎಲ್‌ನಲ್ಲಿ 105 ಪಂದ್ಯಗಳನ್ನು ಆಡಿದ್ದು, 9.40 ರ ಎಕಾನಮಿ ದರದಲ್ಲಿ 107 ವಿಕೆಟ್‌ಗಳನ್ನು ಪಡೆದಿದ್ದಾರೆ.

ಇದೀಗ ಮುಂಬೈ ಇಂಡಿಯನ್ಸ್‌ಗೆ ಸೇರುವುದು ಠಾಕೂರ್‌ಗೆ ಒಂದು ಹೊಸ ತಂಡವಾಗಿದೆ. ಅವರು 2010-12 ರವರೆಗೆ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ನೆಟ್ಸ್ ಬೌಲರ್ ಆಗಿದ್ದರು. ಶಾರ್ದೂಲ್ ಠಾಕೂರ್ ಇದುವರೆಗೆ ಐಪಿಎಲ್‌ನಲ್ಲಿ 105 ಪಂದ್ಯಗಳನ್ನು ಆಡಿದ್ದು, 9.40 ರ ಎಕಾನಮಿ ದರದಲ್ಲಿ 107 ವಿಕೆಟ್‌ಗಳನ್ನು ಪಡೆದಿದ್ದಾರೆ.

5 / 5
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು